Connect with us

ದಿನದ ಸುದ್ದಿ

ಪೂನಾ ಒಪ್ಪಂದಕ್ಕೆ 92 ವರ್ಷ

Published

on

  • ಮಲ್ಕುಂಡಿ ಮಹದೇವ ಸ್ವಾಮಿ

ಅಂಬೇಡ್ಕರ್ ಜೀ ನಮ್ಮ ತಂದೆ ‘ಮುಳುಗುತ್ತಿದ್ದಾರೆ’ ಅವರ ಪ್ರಾಣ ಉಳಿಸಿ” ದೇವದಾಸ್ ಗಾಂಧಿ.

“ನನ್ನನ್ನು ಗಲ್ಲಿಗೇರಿಸಿದರೂ ನಂಬಿದ ಜನರ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ” ಡಾ. ಅಂಬೇಡ್ಕರ್.

ಅಂದು ಅಕೋಲದಲ್ಲಿ ಗಾಂಧಿಜೀ ತಂಗಿದ್ದರು. ಅಲ್ಲಿಗೆ ಕೆಲವು ಅಂಬೇಡ್ಕರ್ ಅನುಯಾಯಿಗಳು ಬಂದು ಗಾಂಧಿಯವರನ್ನು ಭೇಟಿಯಾಗಿ, ಕೆಲವು ಪ್ರಶ್ನೆಗಳನ್ನು ಕೇಳಿದರು. “ಗಾಂಧೀಜಿಯವರೇ, ಕೆಲವರು ತಿಲಕರನ್ನು ದೇವರೆಂದು ಪೂಜಿಸುವಂತೆ, ಅಂಬೇಡ್ಕರರನ್ನು ದೇವರೆಂದು ಪೂಜಿಸಬಹುದೇ….? ಗಾಂಧೀಜಿಯವರು ಉತ್ತರಿಸುತ್ತಾ, ಪೂಜಿಸಬಹುದು. ಪೂಜಿಸುವವರಿಗೆ ಈ ಹಕ್ಕಿದೆ. ಅಂಬೇಡ್ಕರರನ್ನು ನಾನು ಮೆಚ್ಚುತ್ತೇನೆ. ನಾನು ಅವರ ದೃಷ್ಟಿಕೋನಗಳಿಂದ ಭಿನ್ನವಾಗಿದ್ದೇನೆ ಆದರೆ ಅವರು ಧೈರ್ಯಶಾಲಿ ಎಂದು ಒಪ್ಪಿಕೊಳ್ಳುತ್ತೇನೆ. ಧೈರ್ಯಶಾಲಿ ಪುರುಷ ಕೂಡ ತಪ್ಪು ಮಾಡುತ್ತಾನೆ. ನಾನು ನನ್ನನ್ನು ಧೈರ್ಯಶಾಲಿ ಎಂದು ಸ್ವತಹ ನಿರ್ಧರಿಸಿಕೊಳ್ಳುತ್ತೇನೆ ಮತ್ತು ನಾನು ಅನೇಕ ತಪ್ಪುಗಳನ್ನು ಮಾಡಿದ್ದೇನೆ ಎಂದು ಒಪ್ಪಿಕೊಳ್ಳುತ್ತೇನೆ” ಎಂದರು.

ತಿಲಕರನ್ನು ದೇವರೆಂದು ಭಾವಿಸಿದ್ದ ಗಾಂಧೀಜಿಗೆ ಪ್ರಶ್ನಿಸಿದ ಅಂಬೇಡ್ಕರ್ ಅನುಯಾಯಿಗಳು ಪೂನಾ ಒಪಂದದಿಂದಾದ ಅನ್ಯಾಯದ ಸಿಟ್ಟನ್ನು ತೋಡಿಕೊಂಡರು. ಮತ್ತು ಈ ಒಪ್ಪಂದ ಇನ್ನು ಮುಂದಿನ ಪೀಳಿಗೆಯೂ ಪ್ರಶ್ನಿಸುವ ಅಧಿಕಾರವನ್ನು ಶಾಶ್ವತವಾಗಿ ಕಿತ್ತುಕೊಂಡಿತು ಎಂಬ ಮತ್ತೊಂದು ಸಿಟ್ಟುಕೂಡ ಅಲ್ಲಡಗಿತ್ತು. ನೀವು ಪ್ರಶ್ನಿಸುವವರಾಗಿದ್ದರೇ ಈ ಪ್ರಸಂಗದ ವಿಶ್ಲೇಷಣೆಯನ್ನು ನಿಮಗೇ ಬಿಡುತ್ತೇನೆ.

ರಾಮ್ಸೆ ಮೆಕ್ ಡೊನಾಲ್ಡ್ ರವರಿಗೆ ಆಗಸ್ಟ್ 18 ಗಾಂಧಿಜೀ ಪತ್ರ ಬರೆದು ಬ್ರಿಟಿಷ್ ರ ಕೋಮುವಾರು ತೀರ್ಪನ್ನು ಕಟುವಾಗಿ ಟೀಕಿಸಿದ್ದರು. ಮತ್ತು ತಮ್ಮ ಅಸಮ್ಮತಿಯನ್ನು ತೋರಿದರು. ಸೆಪ್ಟೆಂಬರ್ 9 ಬ್ರಿಟಿಷರು ಗಾಂಧೀಜಿ ಯವರ ನಿರ್ಧಾರವನ್ನು ನಿರಾಕರಿಸಿದ ಕಾರಣ. ಆ ಸೋಮವಾರ ಎಲ್ಲಾ ನಾಯಕರು ಜಮಾಯಿಸಿ ಅಂಬೇಡ್ಕರರನ್ನು ಕೇಳಿದಾಗ: ” ಗಾಂಧೀಜಿ ಅವರಿಗಾಗಿ ಇಂತಹ ಮಹಾತ್ಯಾಗ ಮಾಡಲಾರೆ ” ಎಂದರು. ಮರುದಿನ ಮಹಾತ್ಮಗಾಂಧಿಜೀಯವರು ಆ ಮಾವಿನ ತೋಪಿನಲ್ಲಿ ಉಪವಾಸಕ್ಕೆ ಕುಳಿತರು.

ಉಪವಾಸದ 3 ದಿನಗಳ ನಂತರ ಅಂಬೇಡ್ಕರ್ ಅವರಿಗೆ ಎಲ್ಲಾ ಕಡೆಯಿಂದ ಬೆದರಿಕೆ ಕರೆಗಳು ಬರಲು ಆರಂಭಿಸಿದವು. ಕೆಲವು ಗೂಂಡಾಗಳು ನೇರವಾಗಿ ಅಂಬೇಡ್ಕರರನ್ನು ಪ್ರಶ್ನಿಸಿದ್ದರು. ಬಹುತೇಕ ಎಲ್ಲ ಪತ್ರಿಕೆಗಳು ಗಾಂಧಿಯವರನ್ನು ಬೆಂಬಲಿಸುತ್ತಿವೆ ಮತ್ತು ಅಂಬೇಡ್ಕರರನ್ನು ವಿರೋಧಿಸುತ್ತಿವೆ. ಅವರ ರಕ್ತದ ಒತ್ತಡ ಹೆಚ್ಚುತ್ತಿದೆ.

ಉದ್ರಿಕ್ತತೆ ಹೆಚ್ಚಾಯಿತು, ಅಂಬೇಡ್ಕರ್ ಖಳನಾಯಕ, ದೇಶದ್ರೋಹಿ, ಭಾರತವನ್ನು ಛಿದ್ರಗೊಳಿಸಲು ಬಯಸಿದ ವ್ಯಕ್ತಿ, ಗಾಂಧಿಯನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದ ವ್ಯಕ್ತಿ. ಟ್ಯಾಗೋರ್, ನೆಹರು ಮತ್ತು ಸಿ. ರಾಜಗೋಪಾಲಾಚಾರಿ ಸೇರಿದಂತೆ ಗರಂ ದಾಲ್ (ಉಗ್ರಗಾಮಿಗಳು) ಹಾಗೂ ನರಮ್ ದಾಲ್ (ಮಿತವಾದಿಗಳು) ರಾಜಕೀಯ ಭಾರೀ ತೂಕ ಗಾಂಧಿಯ ಕಡೆ ತೂಗಿತು. ಆದರೂ ಅಂಬೇಡ್ಕರ್ ರದು ಅದೇಮಾತು.

“ನಾನು ನನ್ನ ಆದ್ಯ ಕರ್ತವ್ಯಕ್ಕೆ ದ್ರೋಹ ಬಗೆಯಲಾರೆ ಮತ್ತು ನನ್ನನ್ನು ಗಲ್ಲಿಗೇರಿಸಿದರೂ ನಂಬಿದ ಜನರ ನ್ಯಾಯಯುತ ಮತ್ತು ನ್ಯಾಯ ಸಮ್ಮತವಾದ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ” ಎಂಬದು. ಅಂಬೇಡ್ಕರ್‌ ರವರ ಈ ಕಾಠಿಣ್ಯ, ಗಾಂಧಿಯವರ ಸ್ವಯಂ ಪ್ರೇರಿತ ಹಠ. ಭಾರತವನ್ನು ಅಂದು ನಿತ್ರಾಣಗೊಳಿಸಿತ್ತು.

ಮಹಾದೇವ ದೇಸಾಯಿ ಹೇಳುವಂತೆ ಸೆಪ್ಟಂಬರ್ 22 ಮಧ್ಯಾಹ್ನ ಅಂಬೇಡ್ಕರ್ ಗಾಂಧಿಯಜೀಯವರನ್ನು ಭೇಟಿಯಾಗಿ, “ನಾನು ನನ್ನ ಸಮುದಾಯಕ್ಕೆ ರಾಜಕೀಯ ಅಧಿಕಾರವನ್ನು ಬಯಸುತ್ತೇನೆ ಅದು ನಮ್ಮ ಉಳಿವಿಗೆ ಅನಿವಾರ್ಯವಾಗಿದೆ” ಉಪವಾಸವನ್ನು ಕೈ ಬಿಡಿ” ಎಂದರು. ಚರ್ಚೆ ಕಗ್ಗಂಟಾಗಿ ಸೆಪ್ಟೆಂಬರ್ 23 ಕ್ಕೆ ಮಾತುಕತೆ ಮುಂದುವರಿಯಿತು. ಮತ್ತೇ 24 ಕ್ಕೆ. ಅಂದು ಸಂಜೆ 5 ಗಂಟೆಗೆ 23 ಜನರು ಒಪ್ಪಂದಕ್ಕೆ ಸಹಿ ಹಾಕಿದ್ದರು. ಈ ವಿಶ್ವಾಸ ಅರ್ಹತೆಗಾಗಿ ರಾಜಾಜಿ ತಮ್ಮ ಒಂದು “ಫೌಂಟೆನ್ ಪೆನ್ನ” ನ್ನು ಅಂಬೇಡ್ಕರ್ ಅವರ ಜತೆ ವಿನಿಮಯ ಮಾಡಿಕೊಂಡಿದ್ದರು. ಇದು ಹೊರಗಿನ ಮರ್ಮಾಘಾತ. ಈ ಒಳಗಿನ ಮರ್ಮಾಘಾತದಬಗ್ಗೆ ಹೇಳಲೇ ಬೇಕು.

ಈ ದಕ್ಷಿಣ ಭಾರತದ ಅಸ್ಪೃಶ್ಯ ರಾಜಕಾರಣಿ
“ಎ ಸಿ ರಾಜನ್” ಅವರು ಅಂಬೇಡ್ಕರ್ ಅವರು ದುಂಡುಮೇಜಿನ ಸಭೆಯಲ್ಲಿ ಚರ್ಚಿಸಲು ಅಸ್ಪೃಶ್ಯರ ಪ್ರತಿನಿಧಿ ಎನ್ನುವುದನ್ನು ನಿರಾಕರಿಸಿದ್ದರು. ಮತ್ತು ಬಾಪೂ ರವರ ಕಡೆ ಕೈ ಎತ್ತಿದ್ದರು. ಪೂನಾ ಒಪ್ಪಂದದ ಬಿಕ್ಕಟ್ಟಿನ ಸಮಯದಲ್ಲಿ ಅಂಬೇಡ್ಕರವರನ್ನು ಪ್ರತ್ಯೇಕೀಕರಿಸಿ ಚರ್ಚೆಮಾಡಲು ಸಿದ್ಧಗೊಂಡಿದ್ದರು.

“ಪಲ್ ವಂಕರ್ ಬಾಲೂ” ದೇಶದ ಮೊದಲ ದಲಿತ ಕ್ರಿಕೆಟಿಗ ಕೂಡ ಅಂಬೇಡ್ಕರವರಿಗೆ 24ವರ್ಷ ದೊಡ್ಡವರಾಗಿದ್ದು ಅಂಬೇಡ್ಕರರ ಸ್ನೇಹ ಜೀವಿಯಾಗಿದ್ದರು. ಆದರೆ ಈ ಸಂದರ್ಭದಲ್ಲಿ ಗಾಂಧೀಜಿಯವರ ಪಾಳಯದಲ್ಲಿ ಪಳಗಿದರು. ಅವರು ಗಾಂಧಿಜೀಯವರ ಅನುಯಾಯಿಗಳಾಗಿ, ಅಂಬೇಡ್ಕರವರ ನಿಲುವುಗಳನ್ನು ಹೆಜ್ಜೆಹೆಜ್ಜೆಗೂ ನಿರಾಕರಿಸಿದರು. ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ ಮತಾಂತರ ವಾಗುವ ವಿಚಾರದಲ್ಲಿಯೂ ಕಠೋರ ವಿರೋಧವನ್ನು ವ್ಯಕ್ತಪಡಿಸಿದ್ದರು. ಮುಂದೆ ಅಂಬೇಡ್ಕರ್ ಅವರ ವಿರುದ್ಧ ಚುನಾವಣೆಗೆ ನಿಂತು ಸೋತದ್ದು ಬೇರೆ ವಿಚಾರ ಆದರೆ ಇಲ್ಲಿ ನಾವು ಅರ್ಥಮಾಡಿಕೊಳ್ಳಬೇಕಾದದ್ದು ಒಂದು ಐತಿಹಾಸಿಕ ಹೋರಾಟದಲ್ಲಿ ಅಂಬೇಡ್ಕರ್ ಅವರ ನಿಲುವು ಮತ್ತು ಕಾಠಿಣ್ಯಗಳನ್ನು.

ಗಾಂಧೀಜಿಯವರ ಪ್ರಕಾರ ಪ್ರತ್ಯೇಕ ಮತದಾನ ಪದ್ಧತಿ ಸಮಸ್ಯೆಯನ್ನು ಉತ್ತಮಕ್ಕಿಂತ ಕೆಟ್ಟದ್ದಾಗಿಸುತ್ತದೆ. ಇದು ಪ್ರತಿ ಹಳ್ಳಿಯಲ್ಲಿ ವಿಭಜನೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಸ್ಥಳಿಯ ಸಂಘರ್ಷಕ್ಕೆ ಕಾರಣವಾಗುತ್ತಿದೆ.ಎಂಬುದು.

1931 ಅ 14 ಅಂಬೇಡ್ಕರವರು ಗಾಂಧಿಯವರನ್ನು ಮೊಟ್ಟ ಮೊದಲನೆ ಬಾರಿಗೆ ಭೇಟಿಯಾಗಿ ಪ್ರತ್ಯೇಕ ಮತದಾನದ ಹಕ್ಕುಗಳ ಬಗ್ಗೆ ಚರ್ಚಿಸಿದ್ದರು. ನಂತರ ಗಾಂಧೀಜಿ ನವೆಂಬರ್ 13 ತಮ್ಮ ಭಾಷಣದಲ್ಲಿ ನಾನು ಪ್ರತ್ತೇಕ ಪ್ರಾತಿನಿಧ್ಯವನ್ನು ವಿರೋಧಿಸುವ ಏಕೈಕ ವ್ಯಕ್ತಿಯಾಗಿದ್ದೇನೆ ಎಂದು ಒಂದು ವರ್ಷದ ಹಿಂದೆಯೇ ಹೇಳಿದ್ದರು. ಈ ಉಪವಾಸ ಒಂದು ವರ್ಷ ಪೂರ್ವ ನಿಯೋಜಿತ ಕಾರ್ಯಕ್ರಮ ದಂತೆ ಕಾಣುತ್ತದೆ ಅಲ್ಲವೆ? ಇದು ಹಠಾತ್ತಾಗಿ ಆಗಿಂದಾಗೆ ಸೃಷ್ಟಿಯಾದ ಯೋಜನೆ ಅಲ್ಲ.

ಇಡೀ ಪೂನಾ ಒಪ್ಪಂದಕ್ಕೆ ಸಾಕ್ಷಿಯಾದ ಘಟನೆಗಳನ್ನಾಧರಿಸಿ ಮಹಾದೇವ ರಾನಡೆ ಹೇಳುವಂತೆ ” ಅವರಿಗೆ ಬೇಕಿರುವುದು ಯಾವುದೋ ಒಂದು ಇತ್ಯಾರ್ಥ; ಅವರು ಆದರ್ಶ ಪರಿಹಾರಕ್ಕಾಗಿ ಕಾಯಲು ಸಿದ್ಧರಿಲ್ಲ. ಗಾಂಧೀಜಿ ಯವರ ಜೀವ ಉಳಿಸುವ ಉತ್ಸಾಹದಲ್ಲಿ ಈ ಸಹಿ ಹಾಕಿದರು.

ಅಂಬೇಡ್ಕರ್ ಜೀ ನಮ್ಮ ತಂದೆ ‘ಮುಳುಗುತ್ತಿದ್ದಾರೆ’ ಅವರ ಪ್ರಾಣ ಉಳಿಸಿ” ಎಂದು ಅಂಬೇಡ್ಕರ್ ರವರ ಮುಂದೆ ಕಣ್ಣೀರುಡುತ್ತದ್ದ ದೇವದಾಸ್ ಗಾಂಧಿ ಅವರ ಮುಖದಲ್ಲಿ ಮಾತ್ರ ಮಂದಹಾಸವಿತ್ತು.

ಹೊ! ಗಾಂಧಿಯವರು ಒಪ್ಪಂದಕ್ಕೆ ಸಹಿ ಹಾಕಿದರಾ?, ಒಂದು ಅಂತಿಮ ಪದ; ಅದು ಗಾಂಧಿಯಲ್ಲ. ಅವರ ಮಗ ದೇವದಾಸ್ ಗಾಂಧಿ.

ಸುಪರ್ಣ ಗುಪ್ತಾ ‘ ಅಂಬೇಡ್ಕರ್ ರವರು ಶೋಷಿತರ ವಿಮೋಚನೆಗಾಗಿ ಹಕ್ಕು ಆಧಾರಿತ ವಿಧಾನಕ್ಕೆ ಆದ್ಯತೆ ನೀಡಿದರು. ಗಾಂಧಿಜೀಯವರು ಅಧ್ಯಾತ್ಮ ಮತ್ತು ನಂಬಿಕೆ ವಿಧಾನಕ್ಕೆ ಮಾನ್ಯತೆ ನೀಡಿದರು. ಅಂಬೇಡ್ಕರರಿಗಿಂತ ಭಿನ್ನವಾಗಿ ಶೋಷಕರ ಮನಸ್ಥಿತಿಯನ್ನು ಬದಲಾಯಿಸಿದಾಗ ಮಾತ್ರ, ಯಾವುದೇ ಶೋಷಣೆಯನ್ನು ಸರಿಪಡಿಸಬಹುದು ಎಂದು ಗಾಂಧಿಜೀ ಭಾವಿಸಿದ್ದರು’. ಎನ್ನುತ್ತಾರೆ. ಇದು ಈ ನೆಲದಲ್ಲಿ ಅಸಂಭವ. ಕಾರಣ ಇಲ್ಲಿನ ಜಾತಿ ವ್ಯವಸ್ಥೆ ಒಂದು ಮಾನಸಿಕ ಸ್ಥಿತಿಯಾಗಿದೆ. ಅದು ಸಾವಿರಾರು ವರ್ಷಗಳು ತನ್ನ ಬೇರನ್ನು ತಾನೇ, ತನ್ನ ಮೆದುಳಿಗೆ ಎಣೆದುಕೊಂಡಿದೆ. ಇದನ್ನು ನಂಬಿಕೆ ಮಾತ್ರದಿಂದಲೇ ಬಿಡಿಸುವುದು ಕಷ್ಟ.

ಈ ಸತ್ಯ ಗಾಂಧೀಜಿಯವರ ಅರಿವಿಗೆ ಬಂದಿದ್ದೆ ಅವರು
ಅಸ್ಪೃಶ್ಯತೆಯ ವಿರುದ್ದ 1933 ನವೆಂಬರ್ ನಿಂದ 1934 ರ ಆಗಸ್ಟ್ ವರೆಗೆ 12500 km ಭಾರತದಾದ್ಯಂತ ಪ್ರವಾಸ ಕೈಗೊಂಡಾಗ. 800000 ಗಳನ್ನು ಹರಿಜನ ನಿಧಿಗೆ ಸಂಗ್ರಹಿಸಲು ಮೇಲ್ವರ್ಗದ ಜನರ ಬಳಿ ತೆರಳಿದಾಗ. ಕೊನೆ ಕೊನೆಗೆ ಶ್ರೀರಂಗಂ ತಂಜಾವೂರಿನ ಇತರ ದೇವಾಲಯಗಳಲ್ಲಿ ಅಸ್ಪೃಶ್ಯತಾಚರಣೆಯನ್ನು ಮನಗಂಡು ತಾವೇ ದೇವಾಲಗಳಿಗೇ ಹೋಗುವುದನ್ನು ನಿಷೇಧಿಸಿಕೊಂಡಾಗ. ಹರಿಜನ ಸೇವಕ ಸಂಘ ಹರಿಜನ ಪತ್ರಿಕೆ ಇಲ್ಲಿ ಹುಟ್ಟಿಕೊಂಡವು. ಪ್ರತಿ ಹಳ್ಳಿಗಳಲ್ಲಿ ರಾಮಮಂದಿರ ಭಜನೆಗಳು ಆರಂಭವಾದವು. ಇದು
ಈಗ ಈ ಜನರ ಬದುಕಿನ ಭಾಗವಾಗಿ ಬಿಟ್ಟಿದೆ.

ಲೂಯಿ ಫಿಷರ್ “ಗಾಂಧೀಜಿಗೆ ದ್ವೇಷ, ಅಸೂಯೆ, ವಿಷ, ಅಸಮಧಾನವಿಲ್ಲ. ಅವರನ್ನು ಜೈಲಿಗೆ ಹಾಕಿದ ವೈಸ್ ರಾಯ್ ಗಳ ಜೊತೆ ಅವರು ಸ್ನೇಹಿತರಾಗಿದ್ದರು. ಅವರು ವ್ಯವಸ್ಥೆಯನ್ನು ವಿರೋಧಿಸಿದರು ಆದರೆ ವ್ಯಕ್ತಿಯನ್ನಲ್ಲಾ.
ಎಂದು ಯಾರು ಏನೇ ಹೇಳಿದರು,
ಅಂಬೇಡ್ಕರ್ ಅವರು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಗಾಂಧೀಜಿಯವರನ್ನು ನಾನು “ಮಹಾತ್ಮ” ಎಂದು ಒಪ್ಪಲಾರೆ ಎಂದರು.

ಅಂಬೇಡ್ಕರ್ ರ ಈ ನೋವಿಗೆ ಪಟೇಲರ ಈ ಮಾತನಲ್ಲಿ ಉತ್ತರ ಸಿಗಬಹುದೇನೊ ಪಟೇಲರು “ಈ ಗಾಂಧಿಜೀ ಏಕೆ ಉಪವಾಸ ಮಾಡುತ್ತಿದ್ದಾರೆ ?” ಎಂದು ಗೊಂದಲಕ್ಕೀಡಾದರು. ಎದುರಿನಲ್ಲಿದ್ದವರು “ಅಸ್ಪೃಶ್ಯರನ್ನು ಎದುರಿಸಲು ಇನ್ಯಾವುದೇ ಮಾರ್ಗಗಳಿಲ್ಲವಲ್ಲಾ ಆ ಕಾರಣಕ್ಕಿರಬಹುದೇನೊ…? ಎಂದರು.

ಕೊನೆಯದಾಗಿ ಈ ಮಾತು

ನನ್ನನ್ನು ಗಲ್ಲಿಗೇರಿಸಿದರೂ ನಂಬಿದ ಜನರ ವಿಶ್ವಾಸ ಕ್ಕೆ ದ್ರೋಹ ಮಾಡುವುದಿಲ್ಲ” ಎಂದರಲ್ಲಾ ಡಾ. ಅಂಬೇಡ್ಕರ್ ಈ ಎಳೆಯನ್ನು ಇಡಿದು ಈ ಪೀಳಿಗೆ ಯಾಕೆ ಬದುಕುವ ಪ್ರಯತ್ನ ಮಾಡುತ್ತಿಲ್ಲಾ….? (ಬರಹ-ಮಲ್ಕುಂಡಿ ಮಹದೇವ ಸ್ವಾಮಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending