ದಿನದ ಸುದ್ದಿ

ಸಂತೆಕಲ್ಲೂರು | ಶ್ರೀ ಪೂಜ್ಯ ಮಹಾಂತ ಶಿವಾಚಾರ್ಯ 33ನೇ ಪುಣ್ಯ ಸ್ಮರಣೆ ; ಮಹಾ ರುದ್ರಭಿಷೇಕ ಅಯ್ಯಾಚಾರ ಕಾರ್ಯಕ್ರಮ

Published

on

ಸುದ್ದಿದಿನ,ಮಸ್ಕಿ:ಇಂದು ತಾಲೂಕಿನ ಸುಕ್ಷೇತ್ರ ಸಂತೆಕಲ್ಲೂರಿನಲ್ಲಿ ಪೂಜ್ಯ ಶ್ರೀ ಮಹಾಂತ ಶಿವಾಚಾರ್ಯರು ಮಹಾ ಸ್ವಾಮಿಗಳ 33ನೆಯ ಪುಣ್ಯ ಸ್ಮರಣೆ ಹಾಗೂ ಜಂಗಮ ಸಮಾಜದ ಓಟುಗಳಿಗೆ ಅಯ್ಯಾಚಾರ ಕಾರ್ಯಕ್ರಮ.

ಶ್ರೀಗಳ ಕತೃ ಗದ್ದಿಗೆ ಮಹಾ ರುದ್ರಭಿಷೇಕ ವಿಶೇಷ ಪೂಜೆ ಹಾಗೂ ವಿಶೇಷ ಕಾರ್ಯಕ್ರಮಗಳು ಹಿರೇಮಠದಲ್ಲಿ ಜರುಗುವವು ಈ ಕಾರ್ಯಕ್ರಮಕ್ಕೆ ಜಂಗಮ ಸಮಾಜದ ಬಂಧುಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಿಷ್ಯಂದರು ಶ್ರೀಗಳ ಪೂಜ್ಯಶ್ರೀ ಮಹಾಂತ ಶಿವಾಚಾರ್ಯರು ದೇವರು ಮಹಾಂತನ ಮಠ ಸಂತೆಕಲ್ಲೂರಿನಲ್ಲಿ ಬೆಳಗ್ಗೆ ವಿಶೇಷ ಪೂಜಾ ಕಾರ್ಯಕ್ರಮಗಳೊಂದಿಗೆ ವಿವಿಧ ಮಠಾಧೀಶರು ಪೂಜ್ಯರು ಹಾಗೂ ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಶ್ರೀ ಶರಣ ಬಸವರಾಜ್ ಸ್ವಾಮಿ ಹಿರೇಮಠ ಕಾರಲ್ಕುಂಟೆ ಲಿಂಗಸೂರ್ ಅವರು ಶರಣರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೀವು ಬನ್ನಿ ಬರುವರನ್ನು ಕರೆತನ್ನಿ ಶ್ರೀಗಳ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version