ದಿನದ ಸುದ್ದಿ

ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ : ಅನುದಾನ ಬಿಡುಗಡೆಗೆ ಆರ್. ಅಶೋಕ್ ಒತ್ತಾಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ರಾಜ್ಯದ 31 ಜಿಲ್ಲೆಗಳ, ಒಟ್ಟು 6 ಸಾವಿರದ 380 ಗ್ರಾಮಗಳಲ್ಲಿ, ಗ್ರಾಮಸ್ಥರು ಕುಡಿಯುವ ನೀರಿನ ಬವಣೆ ಎದುರಿಸುತ್ತಿದ್ದು, ಗ್ರಾಮ ಪಂಚಾಯಿತಿಗಳು, ಅನುದಾನವಿಲ್ಲದೆ, ಸೊರಗುತ್ತಿವೆ ಎಂದು, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ, ಎಕ್ಸ್ ಮಾಧ್ಯಮದಲ್ಲಿ, ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಕೂಡಲೇ, ಬರ ಪರಿಸ್ಥತಿ ಸಮೀಕ್ಷಿಸಿ, ಬರ ಪೀಡಿತ ತಾಲೂಕುಗಳನ್ನು ಘೋಷಿಸುವಂತೆ, ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ, ಎಲ್ಲ ಗ್ರಾಮ ಪಂಚಾಯಿತಿಗಳಿಗೆ, ಕೂಡಲೇ ತಲಾ 25 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿ, ಬಿರು ಬೇಸಿಗೆಯಲ್ಲಿ, ಜನತೆಗೆ ಕುಡಿಯುವ ನೀರು ಖಾತ್ರಿ ಪಡಿಸುವಂತೆ, ಒತ್ತಾಯಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version