ಕ್ರೀಡೆ
ಕೆಪಿಎಲ್ಗೆ ಮಳೆ ಅಡ್ಡಿ: ಹುಬ್ಬಳ್ಳಿಯಿಂದ ಪಂದ್ಯಗಳು ಮೈಸೂರಿಗೆ ಶಿಫ್ಟ್
ಸುದ್ದಿದಿನ,ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ಕರ್ನಾಟಕ ಪ್ರೀಮಿಯರ್ ಲೀಗ್ ಸೀಸನ್-7 ಟೂರ್ನಿಯ ಪಂದ್ಯಗಳನ್ನು ಮಳೆಯ ಕಾರಣ ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಭಾನುವಾರ ಮತ್ತು ಸೋಮವಾರ ಹುಬ್ಬಳ್ಳಿಯ ಕೆಎಸ್ಸಿಎ ರಾಜ್ ನಗರ ಕ್ರೀಡಾಂಗಣಗಳಲ್ಲಿ ಎರಡು ಪಂದ್ಯಗಳು ನಡೆದಿದ್ದವು. ಆದರೆ ಮಂಗಳವಾರ ಮತ್ತು ಬುಧವಾರ ಮಳೆಯ ಕಾರಣ ಪಂದ್ಯಗಳು ನಡೆಯಲಿಲ್ಲ. ಹೀಗಾಗಿ ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ಉಳಿದ ಪಂದ್ಯಗಳನ್ನು ಮೈಸೂರಿಗೆ ಶಿಫ್ಟ್ ಮಾಡಲಾಗಿದೆ. ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ ಸಿಎ) ವಕ್ತಾರ ವಿನಯ್ ಮೃತ್ಯುಂಜಯ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401