ದಿನದ ಸುದ್ದಿ
ಕೊಡಗು ಮಹಾಮಳೆ | ವಿಪತ್ತು ನಿರ್ವಹಣಾ ಕೇಂದ್ರಗಳ ಕಂಪ್ಲೀಟ್ ಡೀಟೇಲ್ಸ್
![](https://suddidina.com/wp-content/uploads/2018/08/Kodagu-suddidina899.jpg)
ಸುದ್ದಿದಿನ ಡೆಸ್ಕ್ |ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬೀಳುತ್ತಿರುವ ಭಾರೀ ಗಾಳಿ ಮಳೆಯಿಂದ ಜಿಲ್ಲೆಯ ಅನೇಕ ಭಾಗಗಳಲ್ಲಿ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಅನೇಕ ಸಂತ್ರಸ್ಥರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಪಾಯದಲ್ಲಿ ಸಿಲುಕಿದ್ದು, ತುರ್ತು ರಕ್ಷಣಾ ಕಾರ್ಯ ಕೈಗೊಳ್ಳಲು ದೂರವಾಣಿ ಮುಖಾಂತರ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ತಾಲ್ಲೂಕು ಕಚೇರಿ, ಪೊಲೀಸ್ ಕಚೇರಿಯಲ್ಲಿ ಸ್ಥಾಪಿಸಲಾಗಿರುವ 24*7 ವಿಪತ್ತು ನಿಯಂತ್ರಣಾ ಕೊಠಡಿಗೆ ವಿನಂತಿಸುತ್ತಿದ್ದಾರೆ.
ಜಿಲ್ಲಾಡಳಿತವು ಅಪಾಯದಲ್ಲಿ ಸಿಲುಕಿರುವ ಸಂತ್ರಸ್ಥರ ನೆರವಿಗೆ ಸ್ಪಂದಿಸಲು ಸಕಲ ಪರಿಹಾರ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು. ಜಿಲ್ಲಾ ಕಚೇರಿ, ಪೊಲೀಸ್ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಸಹಾಯವಾಣಿಯು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಿರುತ್ತದೆ. ಹಾಗೂ ಸ್ವೀಕೃತವಾಗುವ ಎಲ್ಲಾ ಕರೆಗಳಿಗೆ ಸ್ಪಂದಿಸಿ, ಶೀಘ್ರ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಾದ್ಯಂತ ಈವರೆವಿಗೆ ಒಟ್ಟು 2569 ಸಂತ್ರಸ್ಥರನ್ನು ರಕ್ಷಿಸಿದ್ದು, ಸುರಕ್ಷಿತ ಸ್ಥಳ/ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಜಿಲ್ಲೆಯಾದ್ಯಂತ ಒಟ್ಟು 31 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕೇಂದ್ರದಲ್ಲಿ ಸಂತ್ರಸ್ಥರಿಗೆ ಊಟೋಪಚಾರ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ, ಹಾಸಿಗೆ ಮತ್ತು ಹೊದಿಕೆ ಮುಂತಾದ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಸಚಿವ ಮಹೇಶ್ ತಿಳಿಸಿದರು.
ಮಡಿಕೇರಿ ತಾಲ್ಲೂಕಿನ ಕೊಟ್ಟಮುಡಿ, ಗಾಳಿಬೀಡು, ಕರ್ಣಂಗೇರಿ, ಮಕ್ಕಂದೂರು, ಜೋಡುಪಾಲ, ಕಾಟಕೇರಿ, ಹೊದವಾಡ, ಐಕೊಳ, ಮಡಿಕೇರಿ ನಗರ-2 ಪುನರ್ವಸತಿ ಕೇಂದ್ರದಲ್ಲಿ 550 ಸಂತ್ರಸ್ಥರು. ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ, ಕಾಂಡನಕೊಲ್ಲಿ, ಮಂಜುನಾಥ ಕಲ್ಯಾಣ, ಮದರಸಾ, ಸೇಂಟ್ ಮೇರೀಸ್ ಸ್ಕೂಲ್, ರಾಮಮಂದಿರ, ಪನ್ಯ ಎಸ್ಟೇಟ್ ಸುಂಟಿಕೊಪ್ಪ, ಬೆಟ್ಟದಕಾಡು, ಗುಡ್ಡೆಹೊಸೂರು, ಮದಲಾಪುರ, ಹಾರಂಗಿ, ದಂಡಿನಪೇಟೆ, ಕೊಡವ ಸಮಾಜ, ಗಂಧದಕೋಟೆ, ಶಾಂತಳ್ಳಿ, ಸೋಮವಾರಪೇಟೆ ಪುನರ್ವಸತಿ ಕೇಂದ್ರದಲ್ಲಿ 2233 ಸಂತ್ರಸ್ಥರು.
ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು-3, ಅಮ್ಮತ್ತಿ-1, ವಿರಾಜಪೇಟೆ-1, ಪುನರ್ವಸತಿ ಕೇಂದ್ರದಲ್ಲಿ 376 ಸಂತ್ರಸ್ಥರು. ಜಲ್ಲೆಯ ಒಟ್ಟು 31 ಪುನರ್ವಸತಿ ಕೇಂದ್ರದಲ್ಲಿ 3159 ಸಂತ್ರಸ್ಥರಿಗೆ ಆಶ್ರಯವನ್ನು ಕಲ್ಪಿಸಲಾಗಿದೆ. ಪುನರ್ವಸತಿ ಕೇಂದ್ರದಲ್ಲಿ ಸಂತ್ರಸ್ಥರಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಪ್ರತಿ ಕೇಂದ್ರಕ್ಕೆ ತಲಾ ಇಬ್ಬರಂತೆ ಅಧಿಕಾರಿ/ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ರಕ್ಷಣಾ ಪರಿಹಾರ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್), ನಾಗರಿಕ ರಕ್ಷಣಾ ಪಡೆ (ಸಿವಿಲ್ ಡಿಫೆನ್ಸ್ ಫೋರ್ಸ್-ಕ್ಯೂ.ಆರ್.ಟಿ), ಭಾರತೀಯ ಸೇನೆಯ ಒಂದು ತುಕಡಿಯ 167 ಜನರು ತಲಾ 10 ಸದಸ್ಯರಂತೆ 16 ತಂಡಗಳಾಗಿ ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದೊಂದಿಗೆ ತುರ್ತು ಪರಿಸ್ಥಿತಿ ಇರುವ ಪ್ರದೇಶಗಳಾದ ಕಾಟಕೇರಿ, ಜೋಡುಪಾಲ, ಕಾಲೂರು, ಮುಕ್ಕೋಡ್ಲು, ಮಕ್ಕಂದೂರು, ಹೆಮ್ಮೆತ್ತಾಳು, ಮೇಘತ್ತಾಳು, ದೇವಸ್ತೂರು, ದೇವಮಾನಿ, ಹಟ್ಟಿಹೊಳೆ ಪ್ರದೇಶಗಳಲ್ಲಿ ಸಂತ್ರಸ್ಥರ ರಕ್ಷಣೆ ಮತ್ತು ಸ್ಥಳಾಂತರಕ್ಕೆ ಕಾರ್ಯನಿರ್ವಹಿಸುತ್ತಿವೆ ಎಂದು ಸಾ.ರಾ.ಮಹೇಶ್ ಅವರು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯ ಹಲವು ಭಾಗಗಳು ಮಳೆಯಿಂದ ಜಲಾವೃತಗೊಂಡಿದ್ದು, ಭಾರಿ ಭೂ ಕುಸಿತದಿಂದ ಅಪಾಯದಂಚಿನಲ್ಲಿ ಸಂತ್ರಸ್ಥರು ಸಿಲುಕಿದ್ದು, ಇವರುಗಳನ್ನು ರಕ್ಷಿಸಲು ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ವಾಯು ಮಾರ್ಗದ ಮುಖಾಂತರ ರಕ್ಷಣಾ ಕಾರ್ಯ ನಡೆಸಲು ಪ್ರಯತ್ನಿಸಲಾಗಿ, ಪ್ರತಿಕೂಲ ಹವಾಮಾನದಿಂದ ಹೆಲಿಕಾಪ್ಟರ್ ಮೂಲಕ ಈ ಕಾರ್ಯ ನಡೆಸಲು ಸಾಧ್ಯವಾಗಿರುವುದಿಲ್ಲ. ಮಡಿಕೇರಿ ತಾಲ್ಲೂಕಿನ ಸಂಪಾಜೆ ಹೋಬಳಿಯ ಜೋಡುಪಾಲ ಗ್ರಾಮದಲ್ಲಿ ಅಪಾಯದ ಪರಿಸ್ಥಿತಿಗೆ ಸಿಲುಕಿದ್ದ 140 ಸಂತ್ರಸ್ಥರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಹಾಯದಿಂದ ರಕ್ಷಿಸಿ, ಸುರಕ್ಷಿತ ಸ್ಥಳವಾದ ಸಂಪಾಜೆಯ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಸುಂಟಿಕೊಪ್ಪ ಹೋಬಳಿಯ ನಂದಿಮೊಟ್ಟೆಯಲ್ಲಿ ಅಪಾಯದ ಪರಿಸ್ಥಿತಿಗೆ ಸಿಲುಕಿದ್ದ ಇಬ್ಬರು ಗರ್ಭಿಣಿಯರನ್ನು ಒಳಗೊಂಡ ಒಟ್ಟು 30 ಮಂದಿ ಸಂತ್ರಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇವರಲ್ಲಿ 4 ಮಂದಿ ಗಾಯಾಳುಗಳಿರುವ ಬಗ್ಗೆ ವರದಿ ಸ್ವೀಕೃತವಾಗಿರುತ್ತದೆ. ಹಟ್ಟಿಹೊಳೆಯಿಂದ 10 ಕಿ.ಮೀ ಅಂತರದಲ್ಲಿರುವ ಸೂರ್ಯಕಿರಣ ಎಸ್ಟೇಟ್ನಲ್ಲಿ ಸಿಲುಕಿದ್ದ 12 ಮಹಿಳೆಯರು ಮತ್ತು 3 ಮಕ್ಕಳನ್ನು ಒಳಗೊಂಡಂತೆ ಒಟ್ಟು 37 ಮಂದಿಯನ್ನು ಭಾರತೀಯ ಸೇನೆ ಹಾಗೂ ತುರ್ತು ರಕ್ಷಣಾ ತಂಡದ ಸಹಾಯದಿಂದ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಭಾರತೀಯ ಸೇನಾ ತುಕಡಿ ಮತ್ತು ಕ್ಯೂ.ಆರ್.ಟಿ ತಂಡಗಳು ಮುಕ್ಕೋಡ್ಲುವಿನ ಸಂತ್ರಸ್ಥರೊಂದಿಗೆ ಸಂಪರ್ಕ ಸಾಧಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸಚಿವರು ಹೇಳಿದರು.
ಅಲ್ಲದೆ ಮಡಿಕೇರಿ ತಾಲ್ಲೂಕಿನ ಹೆಮ್ಮತ್ತಾಳು ಮತ್ತು ಮಕ್ಕಂದೂರು ಗ್ರಾಮದಲ್ಲಿ 130, ಕಾಲೂರು ಮತ್ತು ಗಾಳಿಬೀಡುವಿನಲ್ಲಿ 200, ಕಟ್ಟೆಮಾಡು ಮತ್ತು ಪರಂಬು ಪೈಸಾರಿ (ಮರಗೋಡು) ಯಲ್ಲಿ 60 ಕುಟುಂಬಗಳು, 2ನೇ ಮೊಣ್ಣಂಗೇರಿ-20, ಜೋಡುಪಾಲದಲ್ಲಿ 130 ಸಂತ್ರಸ್ಥರನ್ನು ಭಾರತೀಯ ಸೇನೆ, ಎಸ್.ಡಿ.ಆರ್.ಎಫ್ ಮತ್ತು ನಾಗರೀಕ ರಕ್ಷಣಾ ಪಡೆಗಳ ಜಂಟಿ ಕಾರ್ಯಾಚರಣೆಯಿಂದ ರಕ್ಷಿಸಲಾಗಿದೆ. ದಿನಾಂಕ:16-08-2018 ಹಾಗೂ 17-08-2018 ರಂದು ಜಿಲ್ಲೆಯಲ್ಲಿ ಬಿದ್ದ ಧಾರಾಕಾರ ಮಳೆಯಿಂದಾಗಿ ಒಟ್ಟು 05 ಜನರು ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನಿಡಿದರು.
ಕಂದಾಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿ ಕೈಗೊಳ್ಳಬೇಕಾದ ತುರ್ತು ರಕ್ಷಣಾ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ದೇಶನ ನೀಡಿದ್ದು, ಜಿಲ್ಲೆಯ ಒಟ್ಟು 07 ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ ಹಾಗೂ ತುರ್ತು ಕಾರ್ಯಾಚರಣೆ ಮತ್ತು ಪುನರ್ವಸತಿ ಕೇಂದ್ರಗಳಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿರುತ್ತಾರೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಜಿಲ್ಲಾಡಳಿತದಿಂದ ಕೈಗೊಂಡಿದೆ ಎಂದು ಸಚಿವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!