ದಿನದ ಸುದ್ದಿ
ಕೊಡಗು ಮಹಾಮಳೆ | ವಿಪತ್ತು ನಿರ್ವಹಣಾ ಕೇಂದ್ರಗಳ ಕಂಪ್ಲೀಟ್ ಡೀಟೇಲ್ಸ್
ಸುದ್ದಿದಿನ ಡೆಸ್ಕ್ |ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬೀಳುತ್ತಿರುವ ಭಾರೀ ಗಾಳಿ ಮಳೆಯಿಂದ ಜಿಲ್ಲೆಯ ಅನೇಕ ಭಾಗಗಳಲ್ಲಿ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಅನೇಕ ಸಂತ್ರಸ್ಥರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಪಾಯದಲ್ಲಿ ಸಿಲುಕಿದ್ದು, ತುರ್ತು ರಕ್ಷಣಾ ಕಾರ್ಯ ಕೈಗೊಳ್ಳಲು ದೂರವಾಣಿ ಮುಖಾಂತರ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ತಾಲ್ಲೂಕು ಕಚೇರಿ, ಪೊಲೀಸ್ ಕಚೇರಿಯಲ್ಲಿ ಸ್ಥಾಪಿಸಲಾಗಿರುವ 24*7 ವಿಪತ್ತು ನಿಯಂತ್ರಣಾ ಕೊಠಡಿಗೆ ವಿನಂತಿಸುತ್ತಿದ್ದಾರೆ.
ಜಿಲ್ಲಾಡಳಿತವು ಅಪಾಯದಲ್ಲಿ ಸಿಲುಕಿರುವ ಸಂತ್ರಸ್ಥರ ನೆರವಿಗೆ ಸ್ಪಂದಿಸಲು ಸಕಲ ಪರಿಹಾರ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು. ಜಿಲ್ಲಾ ಕಚೇರಿ, ಪೊಲೀಸ್ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಸಹಾಯವಾಣಿಯು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಿರುತ್ತದೆ. ಹಾಗೂ ಸ್ವೀಕೃತವಾಗುವ ಎಲ್ಲಾ ಕರೆಗಳಿಗೆ ಸ್ಪಂದಿಸಿ, ಶೀಘ್ರ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಾದ್ಯಂತ ಈವರೆವಿಗೆ ಒಟ್ಟು 2569 ಸಂತ್ರಸ್ಥರನ್ನು ರಕ್ಷಿಸಿದ್ದು, ಸುರಕ್ಷಿತ ಸ್ಥಳ/ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಜಿಲ್ಲೆಯಾದ್ಯಂತ ಒಟ್ಟು 31 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕೇಂದ್ರದಲ್ಲಿ ಸಂತ್ರಸ್ಥರಿಗೆ ಊಟೋಪಚಾರ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ, ಹಾಸಿಗೆ ಮತ್ತು ಹೊದಿಕೆ ಮುಂತಾದ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಸಚಿವ ಮಹೇಶ್ ತಿಳಿಸಿದರು.
ಮಡಿಕೇರಿ ತಾಲ್ಲೂಕಿನ ಕೊಟ್ಟಮುಡಿ, ಗಾಳಿಬೀಡು, ಕರ್ಣಂಗೇರಿ, ಮಕ್ಕಂದೂರು, ಜೋಡುಪಾಲ, ಕಾಟಕೇರಿ, ಹೊದವಾಡ, ಐಕೊಳ, ಮಡಿಕೇರಿ ನಗರ-2 ಪುನರ್ವಸತಿ ಕೇಂದ್ರದಲ್ಲಿ 550 ಸಂತ್ರಸ್ಥರು. ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ, ಕಾಂಡನಕೊಲ್ಲಿ, ಮಂಜುನಾಥ ಕಲ್ಯಾಣ, ಮದರಸಾ, ಸೇಂಟ್ ಮೇರೀಸ್ ಸ್ಕೂಲ್, ರಾಮಮಂದಿರ, ಪನ್ಯ ಎಸ್ಟೇಟ್ ಸುಂಟಿಕೊಪ್ಪ, ಬೆಟ್ಟದಕಾಡು, ಗುಡ್ಡೆಹೊಸೂರು, ಮದಲಾಪುರ, ಹಾರಂಗಿ, ದಂಡಿನಪೇಟೆ, ಕೊಡವ ಸಮಾಜ, ಗಂಧದಕೋಟೆ, ಶಾಂತಳ್ಳಿ, ಸೋಮವಾರಪೇಟೆ ಪುನರ್ವಸತಿ ಕೇಂದ್ರದಲ್ಲಿ 2233 ಸಂತ್ರಸ್ಥರು.
ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು-3, ಅಮ್ಮತ್ತಿ-1, ವಿರಾಜಪೇಟೆ-1, ಪುನರ್ವಸತಿ ಕೇಂದ್ರದಲ್ಲಿ 376 ಸಂತ್ರಸ್ಥರು. ಜಲ್ಲೆಯ ಒಟ್ಟು 31 ಪುನರ್ವಸತಿ ಕೇಂದ್ರದಲ್ಲಿ 3159 ಸಂತ್ರಸ್ಥರಿಗೆ ಆಶ್ರಯವನ್ನು ಕಲ್ಪಿಸಲಾಗಿದೆ. ಪುನರ್ವಸತಿ ಕೇಂದ್ರದಲ್ಲಿ ಸಂತ್ರಸ್ಥರಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಪ್ರತಿ ಕೇಂದ್ರಕ್ಕೆ ತಲಾ ಇಬ್ಬರಂತೆ ಅಧಿಕಾರಿ/ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ರಕ್ಷಣಾ ಪರಿಹಾರ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್), ನಾಗರಿಕ ರಕ್ಷಣಾ ಪಡೆ (ಸಿವಿಲ್ ಡಿಫೆನ್ಸ್ ಫೋರ್ಸ್-ಕ್ಯೂ.ಆರ್.ಟಿ), ಭಾರತೀಯ ಸೇನೆಯ ಒಂದು ತುಕಡಿಯ 167 ಜನರು ತಲಾ 10 ಸದಸ್ಯರಂತೆ 16 ತಂಡಗಳಾಗಿ ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದೊಂದಿಗೆ ತುರ್ತು ಪರಿಸ್ಥಿತಿ ಇರುವ ಪ್ರದೇಶಗಳಾದ ಕಾಟಕೇರಿ, ಜೋಡುಪಾಲ, ಕಾಲೂರು, ಮುಕ್ಕೋಡ್ಲು, ಮಕ್ಕಂದೂರು, ಹೆಮ್ಮೆತ್ತಾಳು, ಮೇಘತ್ತಾಳು, ದೇವಸ್ತೂರು, ದೇವಮಾನಿ, ಹಟ್ಟಿಹೊಳೆ ಪ್ರದೇಶಗಳಲ್ಲಿ ಸಂತ್ರಸ್ಥರ ರಕ್ಷಣೆ ಮತ್ತು ಸ್ಥಳಾಂತರಕ್ಕೆ ಕಾರ್ಯನಿರ್ವಹಿಸುತ್ತಿವೆ ಎಂದು ಸಾ.ರಾ.ಮಹೇಶ್ ಅವರು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯ ಹಲವು ಭಾಗಗಳು ಮಳೆಯಿಂದ ಜಲಾವೃತಗೊಂಡಿದ್ದು, ಭಾರಿ ಭೂ ಕುಸಿತದಿಂದ ಅಪಾಯದಂಚಿನಲ್ಲಿ ಸಂತ್ರಸ್ಥರು ಸಿಲುಕಿದ್ದು, ಇವರುಗಳನ್ನು ರಕ್ಷಿಸಲು ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ವಾಯು ಮಾರ್ಗದ ಮುಖಾಂತರ ರಕ್ಷಣಾ ಕಾರ್ಯ ನಡೆಸಲು ಪ್ರಯತ್ನಿಸಲಾಗಿ, ಪ್ರತಿಕೂಲ ಹವಾಮಾನದಿಂದ ಹೆಲಿಕಾಪ್ಟರ್ ಮೂಲಕ ಈ ಕಾರ್ಯ ನಡೆಸಲು ಸಾಧ್ಯವಾಗಿರುವುದಿಲ್ಲ. ಮಡಿಕೇರಿ ತಾಲ್ಲೂಕಿನ ಸಂಪಾಜೆ ಹೋಬಳಿಯ ಜೋಡುಪಾಲ ಗ್ರಾಮದಲ್ಲಿ ಅಪಾಯದ ಪರಿಸ್ಥಿತಿಗೆ ಸಿಲುಕಿದ್ದ 140 ಸಂತ್ರಸ್ಥರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಹಾಯದಿಂದ ರಕ್ಷಿಸಿ, ಸುರಕ್ಷಿತ ಸ್ಥಳವಾದ ಸಂಪಾಜೆಯ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಸುಂಟಿಕೊಪ್ಪ ಹೋಬಳಿಯ ನಂದಿಮೊಟ್ಟೆಯಲ್ಲಿ ಅಪಾಯದ ಪರಿಸ್ಥಿತಿಗೆ ಸಿಲುಕಿದ್ದ ಇಬ್ಬರು ಗರ್ಭಿಣಿಯರನ್ನು ಒಳಗೊಂಡ ಒಟ್ಟು 30 ಮಂದಿ ಸಂತ್ರಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇವರಲ್ಲಿ 4 ಮಂದಿ ಗಾಯಾಳುಗಳಿರುವ ಬಗ್ಗೆ ವರದಿ ಸ್ವೀಕೃತವಾಗಿರುತ್ತದೆ. ಹಟ್ಟಿಹೊಳೆಯಿಂದ 10 ಕಿ.ಮೀ ಅಂತರದಲ್ಲಿರುವ ಸೂರ್ಯಕಿರಣ ಎಸ್ಟೇಟ್ನಲ್ಲಿ ಸಿಲುಕಿದ್ದ 12 ಮಹಿಳೆಯರು ಮತ್ತು 3 ಮಕ್ಕಳನ್ನು ಒಳಗೊಂಡಂತೆ ಒಟ್ಟು 37 ಮಂದಿಯನ್ನು ಭಾರತೀಯ ಸೇನೆ ಹಾಗೂ ತುರ್ತು ರಕ್ಷಣಾ ತಂಡದ ಸಹಾಯದಿಂದ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಭಾರತೀಯ ಸೇನಾ ತುಕಡಿ ಮತ್ತು ಕ್ಯೂ.ಆರ್.ಟಿ ತಂಡಗಳು ಮುಕ್ಕೋಡ್ಲುವಿನ ಸಂತ್ರಸ್ಥರೊಂದಿಗೆ ಸಂಪರ್ಕ ಸಾಧಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸಚಿವರು ಹೇಳಿದರು.
ಅಲ್ಲದೆ ಮಡಿಕೇರಿ ತಾಲ್ಲೂಕಿನ ಹೆಮ್ಮತ್ತಾಳು ಮತ್ತು ಮಕ್ಕಂದೂರು ಗ್ರಾಮದಲ್ಲಿ 130, ಕಾಲೂರು ಮತ್ತು ಗಾಳಿಬೀಡುವಿನಲ್ಲಿ 200, ಕಟ್ಟೆಮಾಡು ಮತ್ತು ಪರಂಬು ಪೈಸಾರಿ (ಮರಗೋಡು) ಯಲ್ಲಿ 60 ಕುಟುಂಬಗಳು, 2ನೇ ಮೊಣ್ಣಂಗೇರಿ-20, ಜೋಡುಪಾಲದಲ್ಲಿ 130 ಸಂತ್ರಸ್ಥರನ್ನು ಭಾರತೀಯ ಸೇನೆ, ಎಸ್.ಡಿ.ಆರ್.ಎಫ್ ಮತ್ತು ನಾಗರೀಕ ರಕ್ಷಣಾ ಪಡೆಗಳ ಜಂಟಿ ಕಾರ್ಯಾಚರಣೆಯಿಂದ ರಕ್ಷಿಸಲಾಗಿದೆ. ದಿನಾಂಕ:16-08-2018 ಹಾಗೂ 17-08-2018 ರಂದು ಜಿಲ್ಲೆಯಲ್ಲಿ ಬಿದ್ದ ಧಾರಾಕಾರ ಮಳೆಯಿಂದಾಗಿ ಒಟ್ಟು 05 ಜನರು ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನಿಡಿದರು.
ಕಂದಾಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿ ಕೈಗೊಳ್ಳಬೇಕಾದ ತುರ್ತು ರಕ್ಷಣಾ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ದೇಶನ ನೀಡಿದ್ದು, ಜಿಲ್ಲೆಯ ಒಟ್ಟು 07 ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ ಹಾಗೂ ತುರ್ತು ಕಾರ್ಯಾಚರಣೆ ಮತ್ತು ಪುನರ್ವಸತಿ ಕೇಂದ್ರಗಳಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿರುತ್ತಾರೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಜಿಲ್ಲಾಡಳಿತದಿಂದ ಕೈಗೊಂಡಿದೆ ಎಂದು ಸಚಿವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ4 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ4 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ