ಲೈಫ್ ಸ್ಟೈಲ್
ಮಳೆಗಾಲದಲ್ಲಿ ಅರಳಿದ ಕಾಮನಬಿಲ್ಲು !

ಒಂದೆಡೆ ಕರಿ-ಬಿಳಿ ಮೋಡಗಳ ಕಣ್ಣಾಮುಚ್ಚಾಲೆ ಆಟ, ಧರೆಗಿಳಿದ ಮಳೆರಾಯನ ಸಂಭ್ರಮ ಇನ್ನೊಂದೆಡೆ. ಪ್ರತಿ ಸೀಸನ್ಗೂ ಒಂದು ವಿಶಿಷ್ಟ ಫ್ಯಾಷನ್ ಹುಡುಕುವ ಫ್ಯಾಷನ್ ಪ್ರಿಯರಿಗೆಂದೇ ಈ ಮಾನ್ಸೂನ್ ಗೆಂದೇ…”ರೈನ್ ಬೋ ಮೇಕಪ್ ಟ್ರೆಂಡ್ ” ರೆಡಿಯಾಗಿದೆ.
ಇದರಲ್ಲಿ ರೈನ್-ಬೋ ಐ ಮೇಕಪ್, ರೈನ್-ಬೋ ಐಲೈನರ್ , ರೈನ್-ಬೋ ಲಿಪ್ಸ್ಟಿಕ್,ರೈನ್-ಬೋ ನೈಲ್ ಆರ್ಟ್, ರೈನ್-ಬೋ ಹೇರ್ ಕಲರ್, ರೈನ್-ಬೋ ಐಬ್ರೋ… ಹೀಗೆ ಬೆಡಗಿನ ರಂಗಿನ ಪ್ರಪಂಚಕ್ಕೆ ಫ್ಯಾಷನ್ ಮಾಂತ್ರಿಕರು “ರೈನ್-ಬೋ ಮೋಡಿ ” ಸದ್ಯಕ್ಕೆ ಹಾಟ್ ಫೇವರಿಟ್ ಎನಿಸಿಕೊಂಡಿದೆ.
ಏನಿದು ರೈನ್-ಬೋ ಮೇಕಪ್?
ಮಳೆಯ ನಂತರ ಆಗಸದಲ್ಲಿ ಮೂಡುವ ವರ್ಣಮಯ ಕಾಮನಬಿಲ್ಲಿನ ರಂಗನ್ನು ಮೇಕಪ್ ಲೋಕ ತನ್ನದೇ ರೀತಿಯಲಿ ಬಳಸಿಕೊಂಡಿದೆ. ನೇರಳೇ, ನೀಲಿ, ಹಸಿರು, ಹಳದಿ, ಕಿತ್ತಳೆ, ಕೆಂಪು.. ಹೀಗೆ.. ಕಾಮನಬಿಲ್ಲಿನಲ್ಲಿನ ಏಳು ಬಣ್ಣಗಳ ಅತ್ಯಾಕರ್ಷಕ ಬೆಡಗಿನ ಚಿತ್ತಾರದ ಅನಾವರಣವೇ ರೈನ್-ಬೋ ಮೇಕಪ್.
ರೈನ್ ಬೋ ಐಲೈನರ್!
ಏಳು ಬಣ್ಣಗಳ ಬಹಳ ನಾಜೂಕಾಗಿ ಐ ಲೈನರ್ ನ ರೂಪದಲ್ಲಿ ಕಣ್ಣು ರೆಪ್ಪೆಯ ಮೇಲೆ ಮೂಡಿಸುವ ಕಲೆ. ಕಾಮನಬಿಲ್ಲ್ಲೇ ಕಣ್ಣ ಮೇಲೆ ಮೂಡಿದೆ ಏನೋ ಎಂಬಂತೆ ಚಿತ್ರಿಸುವ ಮಾಂತ್ರಿಕತೆ ಈ “ರೈನ್-ಬೋ ಐಲೈನರ್ ” ಗಿದೆ.
ರೈನ್-ಬೋ ಐ ಷ್ಯಾಡೋ !
ಹಲವು ವಿಶಿಷ್ಟ ವಿನ್ಯಾಸಗಳಿಗೆ , ಚಿತ್ತಾರದ ರೂಪದಲ್ಲಿ ಐ ಷ್ಯಾಡೋ ಧರಿಸುವುದು ಸದ್ಯದ ಹಾಟ್ ಟ್ರೆಂಡ್ ಆಗಿದೆ. ರೈನ್ಬೋ ಕಲರ್ಸ ಗಳ ಮೋಡಿ ಯನ್ನು ಈ ಕಲೆ ಎತ್ತಿ ಹಿಡಿದಿದೆ.
ರೈನ್-ಬೋ ಗ್ಲಿಟರ್ ಐ ಬ್ರೋ!
Vibgyor ಬಣ್ಣದ ಗ್ಲಿಟರ್ ಐ-ಷ್ಯಾಡೋ ವನ್ನು ಹುಬ್ಬಿನ ಮೇಲೆ ಬ್ರಷ್ ಮೂಲಕ ಹಚ್ಚಿಕೊಂಡು ನಿಮ್ಮ partywear ಗೆ match ಆಗುವ ರೀತಿಯಲ್ಲಿ ಸಿಂಗರಿಸಿಕೊಳ್ಳಿ. Disco party ಹಾಗೂ Ramp ಗಳಲ್ಲಿ ಈ trend ಹೆಚ್ಚಿನ ಬೇಡಿಕೆಯಲ್ಲಿದೆ.
ರೈನ್ ಬೋ ನೈಲ್ ಆರ್ಟ್
ಮಳೆಗಾಲದಲ್ಲಿ ಮೂಡುವ ಕಾಮನಬಿಲ್ಲಿನ ಏಳು ಹಣ್ಣುಗಳನ್ನು ನಿಮ್ಮ ಕೈ ಬೆರಳುಗಳ ಮೇಲೆ ನೈಲ್ ಕಿಟ್ ಬಳಸಿ artistic ಆದ ವಿನ್ಯಾಸಗಳನ್ನು ಬಿಡಿಸಲಾಗುತ್ತದೆ.
ರೈನ್ ಬೋ ಹೇರ್ ಕಲರ್
ಮಾರುಕಟ್ಟೆಗಳಲ್ಲಿ ಸಿಗುವ Rainbow colours ಗಳ Hair colours ಗಳನ್ನು ಕೂದಲಿಗೆ layers ಮಾದರಿಯಲ್ಲಿ ಹಚ್ಚಿಕೊಂಡು ಈ seasonನ trendy hot going Rainbow look ಅನ್ನು ನೀವೂ try ಮಾಡಿ.
ರೈನ್ ಬೋ ಲಿಪ್ಸ್ಟಿಕ್
Multi-coloured lipstick trend ಸದ್ಯ ಸೋಷಿಯಲ್ ನೆಟ್ ವರ್ಕ್ ಗಳಲ್ಲಿ ಬಹಳ ಸುದ್ದಿ ಮಾಡಿದೆ. RAINBOW COLOURS ಗಳ LIPSTICK ಬಳಸಿ ನಿಮ್ಮ ತುಟಿಗಳಿಗೆ ಒಂದು TRENDY LOOK TRY ಮಾಡಿ.
ರೈನ್ ಬೋ ಮೇಕಪ್ ಕಿಟ್
ಮಾರುಕಟ್ಟೆಯಲ್ಲಿ ಈ VIBRANT COLOURS MAKE UP KIT ಸಿಗುತ್ತದೆ. ಈ MONSOON SEASON ನೀವೂ ಕೂಡ ಮನೆಯಲ್ಲೇ ಒಂದು TRENDY LOOK ನ TRY ಮಾಡಿ.
RAINBOW MAKE-UP TRENDS ಸದ್ಯ FACEBOOK ಹಾಗೂ INSTAGRAM ಗಳಲ್ಲಿ ಯುವತಿಯರ ಕ್ರೇಜ್ ಹೆಚ್ಚಿಸಿದೆ.
ಸೋಷಿಯಲ್ ಮೀಡಿಯಾ ಹಂಗಾಮ
ಸೋಷಿಯಲ್ ಮೀಡಿಯಾ ದಲ್ಲಿ Fashion trends ನ ಕ್ರೇಜ್ ಹೆಚ್ಚಿದೆ. Fashion ಪ್ರಿಯರು ಹಾಗೂ Fashion ಮಾಂತ್ರಿಕರು ತಮ್ಮ ಹೊಸ ಟ್ರೆಂಡ್ಗಳನ್ನು ಜನರಿಗೆ ತಲುಪಿಸಲು ಸೋಷಿಯಲ್ ಮೀಡಿಯಾ ಮೊರೆ ಹೋಗಿದ್ದಾರೆ..
ಸದ್ಯ ಈ ಮಳೆಗಾಲಕ್ಕೆ “RAINBOW MAKE-UP TRENDS ” ಸೋಷಿಯಲ್ ಮೀಡಿಯಾ hot favourite ಎನಿಸಿಕೊಂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.
54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್ಬಾಕ್ಸ್ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್
-
ಅಂಕಣ3 days ago
ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)
-
ದಿನದ ಸುದ್ದಿ5 days ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ4 days ago
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ
-
ದಿನದ ಸುದ್ದಿ6 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ5 days ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ6 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ