Connect with us

ದಿನದ ಸುದ್ದಿ

ವೈದ್ಯಕೀಯ ಕ್ಷೇತ್ರದಲ್ಲಿ ರಾಜೀವ್ ಗಾಂಧೀ ವಿವಿ ಸಾಧನೆ ಅವಿಸ್ಮರಣೀಯ : ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ

Published

on

ಸುದ್ದಿದಿನ,ನವದೆಹಲಿ/ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ದೇಶದಲ್ಲೇ ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಾಧನೆ ಅವಿಸ್ಮರಣೀಯ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದರು.

ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಸ್ಥಾಪನ ದಿನಾಚರಣೆ ಮತ್ತು ರಜತ ಮಹೋತ್ಸವ ಕಾರ್ಯವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವವನ್ನೇ ಆವರಿಸಿಕೊಂಡಿರುವ ಹೆಮ್ಮಾರಿ ಕೋವಿಡ್-19 ವೈರಾಣು ನಿಯಂತ್ರಣದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಸಿದರು. RGUHS ವಿಶ್ವವಿದ್ಯಾಲಯದ ದೇಶದಲ್ಲೇ ಅತ್ಯುತ್ತಮ ಆರೋಗ್ಯ ವಿವಿಯಾಗಿದ್ದು ಗುಣಮಟ್ಟದ ಸಂಶೋಧನೆ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚು ಸಾಧನೆ ಮಾಡಿದ ವಿವಿ ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದರು.

ಕಳೆದ ಆರು ವರ್ಷಗಳಲ್ಲಿ ದೇಶದ ಆರೋಗ್ಯ ಮತ್ತು ವೈದ್ಯಕೀಯ ಸೇವೆಯಲ್ಲಿ ಅತ್ಯಂತ ಹೆಚ್ಚು ಅಭಿವೃದ್ಧಿ ಸಾಧಿಸಿದ್ದೇವೆ. ವರ್ಷಕ್ಕೆ 30 ಸಾವಿರ ಎಂಬಿಬಿಎಸ್ ಪದವಿ ಪಡೆದು ಆರೋಗ್ಯ ಸೇವೆಗೆ ವೈದ್ಯರು ಸನ್ನದ್ಧರಾಗುತ್ತಿದ್ದಾರೆ. 15 ಸಾವಿರ ಎಂಬಿಬಿಎಸ್ ಸ್ನಾತಕೋತ್ತರ ಪದವಿ ಪಡೆದ ವೈದ್ಯರ ಸೇವೆಗೆ ಸಿದ್ಧರಾಗಿ ಹೊರಬರುತ್ತಿರುವುದು ಸಣ್ಣ ವಿಷಯವಲ್ಲ. ಇದರಿಂದ ದೇಶದ ಜನರಿಗೆ ಅತ್ಯುತ್ತಮ ಗುಣಮಟ್ಟದ ಸೇವೆ ಸಿಗುತ್ತಿದೆ ಎಂದು ಪ್ರಧಾನಿ ವೈದ್ಯರ, ವೈದ್ಯಕೀಯ ಕ್ಷೇತ್ರದ ಅಭಿವೃದ್ಧಿಯನ್ನು ಕೊಂಡಾಡಿದರು.

ಇಡೀ ವಿಶ್ವವೇ ಇಂದು ಕೊರೋನಾ ಹೆಮ್ಮಾರಿಯ ವಿರುದ್ಧ ಹೋರಾಟಕ್ಕೆ ನಿಂತಿದೆ. ವಿಶ್ವ ಎರಡು ಮಹಾಯುದ್ಧಗಳ ನಂತರ ಜನರ ಬದುಕು ಮತ್ತು ಜೀವನ ಶೈಲಿ ಬದಲಾವಣೆಯನ್ನು ನಾವೆಲ್ಲರೂ ನೋಡಿದ್ದೆವು. ಈಗ ಮಹಾ ಯುದ್ಧಗಳ ನಂತರ ಕೊರೋನಾ ಎಂಬ ವೈರಾಣು ಯುದ್ಧದ ವಾತಾವರಣವನ್ನೇ ಸೃಷ್ಟಿಸಿದೆ. ನಾವು ನಮ್ಮ ಬದುಕಿನ ಹೇಗಿರಬೇಕು ಮತ್ತು ಜೀವನ ಶೈಲಿಯನ್ನು ಹೇಗೆ ಬದಲಾವಣೆ ಮಾಡಿಕೊಳ್ಳಬೇಕು ಎಂದು ತೋರಿಸಿಕೊಟ್ಟಿದೆ ಎಂದು ಹೇಳಿದರು.

ಇಂತಹ ಸಂದಿಗ್ಧ ಸಮಯದಲ್ಲಿ ವಿಶ್ವದ ಜನರು ವೈದ್ಯರು, ದಾದಿಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಅವಲಂಬಿಸಿದ್ದಾರೆ. ಕೊರೋನಾ ವಿರುದ್ಧ ಚಿಕಿತ್ಸೆ ನೀಡಲು ಮುಂದಾಗಿರುವ ವೈದ್ಯರು ಸೇರಿದಂತೆ ಇಡೀ ವೈದ್ಯಕೀಯ ಸಮುದಾಯ ಸೈನಿಕರಂತೆ ಹೋರಾಡುತ್ತಿರುವುದು ನಮ್ಮೆಲ್ಲರ ಹೆಮ್ಮೆಯ ವಿಷಯ ಎಂದು ಮೆಚ್ಚುಗೆ ಮಾತನಾಡಿದರು.

ಕೋವಿಡ್-19 ನಮಗೆ ಕಾಣದೇ ಇರುವ ಅಗೋಚರ ಶತ್ರು. ಅದರ ವಿರುದ್ಧ ಹೋರಾಡಲು ವಿಶ್ವವೇ ಒಂದಾಗುತ್ತಿದೆ. ಅಗೊಚರ ಶತ್ರು ವಿರುದ್ಧ ನಮ್ಮ ವೈದ್ಯರು ಹೋರಾಟದಲ್ಲಿ ಯಶಸ್ವಿಯಾಗುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಮೋದಿ ಭರವಸೆಯ ಮಾತುಗಳನ್ನಾಡಿದರು.

ಕೊರೋನಾ ಬರುವುದಕ್ಕೂ ಮೊದಲು ಇಡೀ ವಿಶ್ವದ ದೇಶದ ಮುಖಂಡರು ಆರ್ಥಿಕ ವ್ಯವಸ್ಥೆ ಬಗ್ಗೆ ಮಾತನಾಡುತ್ತಿದ್ದರು. ಆದರೆ ಈಗ ವಿಶ್ವದ ಎಲ್ಲಾ ನಾಯಕರು ಮಾನವೀಯ ನೆಲೆಗಟ್ಟಿನ ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿವೆ. ಕೊರೋನಾ ವಿರುದ್ಧ ಹೋರಾಡಲು ನಾಲ್ಕು ಕಂಬಗಳನ್ನು ರಚಿಸಿಕೊಳ್ಳಬೇಕು. ಮೊದಲನೆಯದಾಗಿ ರೋಗಬರುವುದಕ್ಕೂ ಜಾಗೃತಿಯಿಂದ ಇರಬೇಕು.

ಯೋಗ, ಆಯುರ್ವೇದ ಮತ್ತು ಫಿಟ್ನೆಸ್ಗೆ ಹೆಚ್ಚು ಒತ್ತುಕೊಡಬೇಕು. ಸ್ವಚ್ಛಭಾರತ ಮಿಷನ್ ಅಡಿ ರೋಗ ನಿಯಂತ್ರಣ ವಿಧಾನಕ್ಕೆ ಪ್ರಾಮುಖ್ಯತೆಯನ್ನು ಕೊಡಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗಳ ಮೂಲಕ ಅತಿ ಹೆಚ್ಚು ಆವಿಷ್ಕರ ಮಾಡಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವೈದಕೀಯ ಕಾಲೇಜುಗಳನ್ನು ಸ್ಥಾಪನೆ ಮಾಡುವ ಮೂಲಕ ಸಂಶೋನೆಗೆ ಹೆಚ್ಚು ಒತ್ತುನೀಡುತ್ತಿದ್ದೇವೆ.

ಕಳೆದ ಐದು ವರ್ಷಗಳಲ್ಲಿ 30 ಸಾವಿರ ಎಂಬಿಬಿಎಸ್ ಪದವಿ ಪಡೆದ ವೈದ್ಯರು ಮತ್ತು15 ಸಾವಿರ ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಹೊರಬರುತ್ತರುವುದು ಸ್ವಾತಂತ್ರ್ಯ ನಂತರದಲ್ಲಿ ವೈದ್ಯಕೀಯ ಕ್ಷೇತ್ರದಲ್ಲೇ ಇದು ದೊಡ್ಡ ಸಾಧನೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ತರಲು ಮೆಡಿಕಲ್ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ.

ಕಾಯ್ದೆಯ ದೂರ ದೃಷ್ಟಿಯ ಪರಿಣಾಮ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಕಾಣುತ್ತಿದ್ದೇವೆ. ಅಂತರಾಷ್ಟ್ರೀಯ ಗುಣಮಟ್ಟದ ವೈದ್ಯಕೀಯ ಸೇವೆಗಳು ಜನರಿಗೆ ದೊರೆಯಲಿವೆ. ನ್ಯೂಟ್ರಿಷಿಯನ್ ಮಿಷನ್ ಮೂಲಕ ಯುವಜನರ ಬಲಿಷ್ಠವಾದ ಆರೋಗ್ಯ ನೀಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. 2025ರ ಒಳಗೆ ಟಿಬಿ ಕಾಯಿಲೆ ಮುಕ್ತ ಭಾರತ ಗುರಿ ಹಾಕಿಕೊಂಡಿದ್ದೇವೆ. ಇಂದ್ರ ಧನುಷ್ ಯೋಜನೆ ಮೂಲಕ ಗುಣಮಟ್ಟದ ಔಷಧಿಗಳ ಸಂಶೋದನೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ.

ಟೆಲಿಮೆಡಿಸನ್ ಮೂಲಕ ಜನರಿಗೆ ಬೇಗನೇ ಔಷಧಗಳ ಸಿಗುವಂತಾಗಲು ಯೋಜನೆ ರೂಪಿಸಲಾಗಿದೆ. ಮೇಕ್ ಇನ್ ಇಂಡಿಯಾ ಯೋಜನೆ ಅಡಿ ಸ್ಥಳೀಯವಾಗಿ ವೈದ್ಯಕೀಯ ಉಪಕರಣಗಳು, ಪಿಪಿಇ ಕಿಟ್ ಉತ್ಪಾದನೆ ಗುರಿ ಹಾಕಿಕೊಂಡಿದ್ದೇವೆ. ಈಗಾಗಲೇ ಈ ಪ್ರಯತ್ನದ ಮೂಲಕ ಸ್ವಾ ಅವಲಂಬನೆ ಸಾಧಿಸಿದ್ದೇವೆ. ಒಂದು ಕೋಟಿ ಪಿಪಿಇ ಕಿಟ್ ಗಳು ಮತ್ತು ಎನ್-95 ಮಾಸ್ಕ್ ಗಳನ್ನು ಉತ್ಪಾದನೆಯಾಗಿ ಕೊರೋನಾ ವಾರಿಯರ್ಸ್ ಬಳಸುತ್ತಿರುವುದು ವೈದ್ಯಕೀಯ ಕ್ಷೇತ್ರದ ಸ್ವಾವಲಂಬನೆ ಸಾಕ್ಷಿ ಎಂದರು.

ಆರೋಗ್ಯ ಸೇತು ಆ್ಯಪ್ ತಂತ್ರಜ್ಞಾನದ ಮೂಲಕ ಜನರು ಕೊರೋನಾ ವಿರುದ್ಧ ಜಾಗೃತರಾಗುತ್ತರುವುದು ಆರೋಗ್ಯ ಕಾಳಜಿ ಮತ್ತೊಂದು ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಮಹತ್ವದ ಬದಲಾವಣೆಗೆ ಮುನ್ನುಡಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊರೋನಾ ವಾರಿಯರ್ಸ್ ಗಳಾದ ವೈದ್ಯರು, ದಾದಿಯರು ಸೇರಿದಂತೆ ಯಾರ ಮೇಲೂ ದೌರ್ಜನ್ಯ ಸಹಿಸುವುದಿಲ್ಲ. ಇವರೆಲ್ಲರಿಗೂ 50 ಲಕ್ಷದ ವರೆಗೂ ವಿಮಾ ಸೌಲಭ್ಯ ನೀಡಲಾಗಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದರು.

ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿವಿಯ 25ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೇರಿಂದಂತೆ ಅನೇಕಲ ಸಚಿವರು, ಅಧಿಕಾರಿಗಳು ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.

ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.

ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.

ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.

ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending