Connect with us

ರಾಜಕೀಯ

ರಾಜ್ಯಸಭಾ ಚುನಾವಣೆ; ಎಲ್ಲಾ ಆರು ಅಭ್ಯರ್ಥಿಗಳ ನಾಮಪತ್ರ ಕ್ರಮ ಬದ್ಧ : ಚುನಾವಣಾಧಿಕಾರಿ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗಾಗಿ ಒಟ್ಟು 6 ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಬಿಜೆಪಿಯಿಂದ ಹಾಲಿ ಸಚಿವೆ ನಿರ್ಮಲಾ ಸೀತಾರಾಮನ್, ಚಿತ್ರನಟ ಜಗ್ಗೇಶ್, ಲೆಹರ್‌ಸಿಂಗ್ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿ ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಕುಪೇಂದ್ರ ರೆಡ್ಡಿ ಉಮೇದುವಾರಿಕೆ ಸಲ್ಲಿಸಿದ್ದರು.

ಕಾಂಗ್ರೆಸ್ ಸೋಮವಾರದಂದು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಉಮೇದುವಾರಿಕೆ ಹಿಂಪಡೆಯಲು ಜೂನ್ 3 ಕೊನೆಯ ದಿನಾಂಕವಾಗಿದೆ.

ಜೂನ್ 10ರಂದು ಬೆಳಗ್ಗೆ 9 ರಿಂದ 4ಗಂಟೆವರೆಗೆ ಮತದಾನ ನಡೆಯಲಿದ್ದು, 5 ಗಂಟೆ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯ ವಿಧಾನಸಭೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷದಿಂದ 130ಕಾಂಗ್ರೆಸ್ 69, ಜೆಡಿಎಸ್ 32, ಮೂವರು ಪಕ್ಷೇತರರು ಹಾಗೂ ಸಭಾಧ್ಯಕ್ಷರು ಒಂದು ಮತದಾನದ ಅರ್ಹತೆ ಹೊಂದಿರುವ ಸದಸ್ಯರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ

Published

on

  • ಗಿರೀಶ್ ಕುಮಾರ್ ಗೌಡ,ಬಳ್ಳಾರಿ

ಸುದ್ದಿದಿನಡೆಸ್ಕ್:ಗೇಟ್ ಗೆ ಡಿಕ್ಕಿ ಹೊಡೆದು ಟನ್ ಗಟ್ಟಲೇ ಹೆಚ್ಚಿನ ಕಬ್ಬಿಣ ಬಿಸಾಕಿ ಓಡಿ ಹೋಗಿದ್ದಾರೆ ಪ್ರಭಾವಿ ರಾಜಕೀಯ ನಾಯಕನ ಹಿಂಬಾಲಕರು ಎನ್ನುವ ಮಾಹಿತಿ ಲಭ್ಯವಾಗಿದೆ.

ಬಳ್ಳಾರಿ ಜಿಲ್ಲೆಯ ಬಳ್ಳಾರಿ ತಾಲೂಕಿನ ಡಿಸಿ ನಗರದ ಹತ್ತಿರ ತುಂಗಭದ್ರಾ ಬೋರ್ಡ್ ಗೆ ಸಂಭಂದಿಸಿದ ಸೇತುವೆ ನಿರ್ಮಾಣ ಮಾಡಲು ಕಬ್ಬಿಣ ಹಾಕಿದ್ದರೆ ಅದನ್ನು ರಾತ್ರೋರಾತ್ರಿ ಕಳ್ಳತನ ಮಾಡಿದ ದುರ್ಘಟನ ನಡೆದಿತ್ತು. ಆದರೆ ಭಾನುವಾರ ಬೆಳಿಗ್ಗೆಯಿಂದ ಸಂಜೆವರೆಗೆ ಠಾಣೆಯ ಮುಂದೆ ಅಧಿಕಾರಿಗಳು ಕೇಸ್ ಮಾಡಲು ಸಿದ್ದರಾಗಿದ್ದರು, ಆದರೆ ಈ ಕಬ್ಬಿಣವನ್ನು ಪ್ರಭಾವಿ ರಾಜಕೀಯ ಹಿಂಬಾಲಕರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ವಿಚಾರ ಸುದ್ದಿಯಾಗುತ್ತೇ ರಾತ್ರೋರಾತ್ರಿ ಕಳ್ಳತನ ಮಾಡಿದ ವ್ಯಕ್ತಿ ವಾಟರ್ ಹೌಸ್ ನಲ್ಲಿ ಹಾಕಿ ಓಡಿ
ಹೋಗಿದ್ದಾರೆ.

ಮಹಾದೇವತತಾನ ಮಠದ ಎದುರುಗಡೆ ಇರುವ ವಾಟರ್ ಹೌಸ್ ನಲ್ಲಿ ರಾತ್ರಿ 1 ಗಂಟೆ 22 ನಿಮಿಷಕ್ಕೆ ಒಂದು ಲಾರಿ ಮತ್ತು ಕ್ರೇನ್ ಉಪಯೋಗಿ ಕೊಂಡು 10 ರಿಂದ 15 ನಿಮಿಷದ ಒಳಗೆ ಉಳಿಸಿ ಪರಾಯಿಯಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯ ಸಿಬ್ಬಂದಿಗಳು ತಿಳಿಸಿದ್ದಾರೆ.

ಇನ್ನು ಈ ಕಬ್ಬಿಣ ಹಾಕಲು ಬಂದವರಲ್ಲಿ ಈ ವ್ಯಕ್ತಿಗಳು ಮೈಮೇಲೆ ದಪ್ಪ ದಪ್ಪ ಬಂಗಾರದ ಆಭರಣಗಳನ್ನು ಹಾಕಿಕೊಂಡು ಕಾರುಗಳಲ್ಲಿ ಬಂದಿದ್ದಾರೆ. ಅಧಿಕಾರಿಗಳು ಹೇಳಿದ್ದಾರೆ ಯಾವ ಅಧಿಕಾರಿ ? ಎನ್ನುವ ಮಾಹಿತಿಯನ್ನು ಇಲ್ಲಿಯ ಸಿಬ್ಬಂದಿಗೆ ನೀಡದೇ ಕಾಲು ಕಿತ್ತಿದ್ದಾರೆ. ಈ ಲಾರಿ ಹಾಗೂ ಕ್ರೇನ್ ಬಂದಿರುವುದು ಮಹಾದೇವ ತಾತನ ಮಠದ ಹೊರಗಡೆ ಇರುವ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಅದರಲ್ಲಿ ತುಂಗಭದ್ರಾ ಬೋರ್ಡ್ ನಲ್ಲಿ ಕಳ್ಳತನ ಮಾಡಿದ ಕಬ್ಬಿಣವನ್ನು ಭಯದ ವಾತಾವರಣದಲ್ಲಿ ವಾಟರ್ ಬೋಸ್ಟ್ ನಲ್ಲಿ ಹಾಕು ಓಡಿಹೋಗಿದ್ದಾರೆ.

ವಾಟರ್ ಬೂಸ್ಟ್ ನ ಗೇಟ್ ಗೆ ಡಿಕ್ಕಿ ಹೊಡೆದು ಗೇಟ್ ಮುರಿದು ಮೂರು ತಾಸುಗಳಲ್ಲಿ ಇಳಿಸಬೇಕಾದ ಕಬ್ಬಿಣ ಬರಿ 10 ರಿಂದ 15 ನಿಮಿಷದಲ್ಲಿ ಬಿಸಾಕಿ ಓಡಿಹೋಗಿದ್ದಾರೆ. ಇನ್ನು ತುಂಗಭದ್ರಾ ಬೋರ್ಡ್ ಸಿಬ್ಬಂದಿಗೆ ಕೇಳಿದ್ರೇ ಇಲ್ಲ ನನಗೆ ಏನು ? ಗೊತ್ತಿಲ್ಲ ನಮ್ಮ ಅಧಿಕಾರಿ ಕೆಂಚಪ್ಪ ಕಬ್ಬಿಣ ಕಳ್ಳತನ ಅವರಿಗೆ ಗೊತ್ತಿದೆ ಎನ್ನುವ ಮಾಹಿತಿ ನೀಡಿದರು. ಆದರೆ ಕಬ್ಬಿಣಕ್ಕೆ ತುಂಗಭದ್ರಾ ಬೋರ್ಡ್ ಎನ್ನುವ ಬರಹವನ್ನು ಹಳದಿ ಬಣ್ಣದಿಂದ ಬರದ ವ್ಯಕ್ತಿ ನಾನು ಎಂದರು.

ಭರತ್ ರೆಡ್ಡಿ ಆಪ್ತ ಸಿಂಧನೂರಿನ ಶಶಿ

ಕಾಂಗ್ರೇಸ್ ಮುಖಂಡ ಶಶಿ ಎನ್ನುವ ವ್ಯಕ್ತಿ ಕಾಂಗ್ರೆಸ್ ಪಕ್ಷದ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗ ಎನ್ನುವ ಅಂಶ ದೊರೆತಿದೆ. ಇನ್ನು ಈ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸರ್ಕಾರ ನೀಡುವ ಅನ್ನ ಭಾಗ್ಯದ ಸಾರ್ವಜನಿಕರಿಗೆ ಉಚಿತವಾಗಿ ನೀಡಿದರೇ, ಶಶಿ ಎನ್ನುವ ಕಾಂಗ್ರೇಸ್ ಮುಖಂಡ ಶಶಿ ಅಕ್ಕಿ ದಂದೆಯಲ್ಲಿ ನಿಂತು ಶಾಸಕ ಹೆಸರು ಹೇಳಿಕೊಂಡು ಹಗಲು ದರೋಡೆ ಮಾಡುತ್ತಿದ್ದಾನೆ.

ಪೊಲೀಸ್ ಇಲಾಖೆ ಮತ್ತು ಆಹಾರ ಇಲಾಖೆ ಏಕೆ ? ಮೌನರಾಗಿದ್ದಾರೆ ಅವರಿಗೆ ಶಾಸಕರ ಒತ್ತಡ ಇದೆಯೇ ?
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸಹಾಯಕ ‘ಲಕ್ಷ್ಮೀ ನಾರಾಯಣ ಶಾಸ್ತ್ರಿ’ ಸಹ ಈ ಕಬ್ಬಿಣ ಕಳ್ಳತನ ವ್ಯವಹಾರದಲ್ಲಿ ಭಾಗಿಯಾಗಿ ಶಶಿ ಎನ್ನುವ ಮುಖಂಡನಿಗೆ ಸಹಕಾರ ನೀಡುತ್ತಿದ್ದಾನೆ. ರಾತ್ರೋರಾತ್ರಿ ಕಬ್ಬಿಣವನ್ನು ಬಿಸಾಡಲು ಸಹ ಸಹಕಾರ ನೀಡಿದ್ದಾನೆ. ಇನ್ನು ಈ ವಿಚಾರವಾಗಿ ‘ಸುದ್ದಿದಿನ’ ವೆಬ್ ನಲ್ಲಿ ವಿಶೇಷ ವರದಿಗಾರರು ದೂರವಾಣಿ ಮೂಲಕ ಕರೆ ಮಾಡಿದ್ರೇ ಅವರು ಸ್ವೀಕರಿಸಲಿಲ್ಲ.

ಇನ್ನು ಗ್ಯಾಸ್ ವೆಲ್ಡರ್ ಬಶೀರ್ ನನ್ನು ನಾರಾ ಭರತ್ ರೆಡ್ಡಿ ಆಪ್ತ ಕಾಂಗ್ರೇಸ್ ಯುವ ಮುಖಂಡ ಕೊಳಗಲ್ಲು ಧರ್ಮರೆಡ್ಡಿ ಗ್ರಾಮೀಣ ಠಾಣೆಗೆ ಬಂದು ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದ್ದಾರೆ ಅವರನ್ನು ಬಿಟ್ಟು ಕಳಿಸಿ ಎನ್ನುವ ಮಾಹಿತಿಯ ಪೊಲೀಸ್ ಠಾಣೆಯ ಎಸ್.ಬಿ ( spacial Branch) ಅವರ ಮೂಲಕ ಹೋಗಿದ್ದಾರೆ. ಇನ್ನು ಪೋಲೀಸರು ಧರ್ಮರೆಡ್ಡಿ ಮತ್ತು ಬಶೀರ್ ಇಬ್ಬರು ನಿಲ್ಲಿಸಿ ಪೋಟೊ ತೆಗೆಸಿ ಪತ್ರ ಬರೆಸಿಕೊಂಡು,ಸಹಿ ಮಾಡಿಸಿ ಕಳಿಸಿದ್ದಾರೆ.

ಇನ್ನು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರ ಅವರು ತುಂಗಭದ್ರಾ ಬೋರ್ಡ್ ಅಧಿಕಾರಿ ಕೆಂಚಪ್ಪ ಹಾಗೂ ಸರ್ಕಾರಿ ಪಿಎ ಲಕ್ಷ್ಮೀ ನಾರಾಯಣಶಾಸ್ತ್ರಿ ವಿರುದ್ಧ ಯಾವ ? ರೀತಿಯ ಕ್ರಮ ತೆಗದುಕೊಳ್ಳುತ್ತಾರೋ ಕಾದು ನೋಡಬೇಕಿದೆ.

ಒಟ್ಟಾರೆಯಾಗಿ “ಸುದ್ದಿದಿನ” ವೆಬ್ ಪ್ರಕಟಿಸಿ ವರದಿಗೆ ಫಲಶೃತಿ ದೊರೆತಿದೆ. ಇನ್ನು ಈ ರಾಜಕೀಯ ವ್ಯಕ್ತಿಯ ಬೆಂಬಲಿಗರು ಯಾರು ? ಅವರ ವಿರುದ್ಧ ಕೇಸ್ ಮಾಡುತ್ತಾರೋ ಇಲ್ಲವೋ ಎನ್ನುವ ಅಂಶ ಪೊಲೀಸ್ ಇಲಾಖೆ ಉತ್ತರಿಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಕ್ಫ್ ತಿದ್ದುಪಡಿ ಕಾಯ್ದೆ- 2025 | ಇಂದು ಸುಪ್ರೀಂ ವಿಚಾರಣೆ

Published

on

ಸುದ್ದಿದಿನಡೆಸ್ಕ್:ವಕ್ಫ್ ತಿದ್ದುಪಡಿ ಕಾಯ್ದೆ- 2025 ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪಟ್ಟಿಯ ಪ್ರಕಾರ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ.ವಿಶ್ವನಾಥನ್ ಅವರೊನ್ನೊಳಗೊಂಡ ನ್ಯಾಯಪೀಠ, ಇಂದು ಈ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಿದ್ದಾರೆ ಎಂದು ಐಎಎನ್‌ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ. 1995ರ ವಕ್ಫ್ ಕಾಯ್ದೆಯಲ್ಲಿ ಇತ್ತೀಚೆಗೆ ಪರಿಚಯಿಸಲಾದ ತಿದ್ದುಪಡಿಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ಗೆ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ.

ಸಂಸತ್ತು ಜಾರಿಗೆ ತಂದ ವಕ್ಫ್ ತಿದ್ದುಪಡಿ ಕಾಯ್ದೆಯ ಕುರಿತು ಪಾಕಿಸ್ತಾನ ಮಾಡಿದ ಪ್ರೇರಿತ ಮತ್ತು ಆಧಾರರಹಿತ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ವಕ್ಫ್ ಮಸೂದೆಯ ಕುರಿತು ಪಾಕಿಸ್ತಾನ ಹೊರ ಹಾಕಿರುವ ಅಭಿಪ್ರಾಯಗಳ ಕುರಿತು ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಭಾರತದ ಆಂತರಿಕ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಯಾವುದೇ ಅರ್ಹತೆ ಇಲ್ಲ. ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಷಯದಲ್ಲಿ ಪಾಕಿಸ್ತಾನವು ಇತರರಿಗೆ ಉಪದೇಶಿಸುವ ಬದಲು ತನ್ನ ಪ್ರದೇಶದ ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸುವುದು ಉತ್ತಮ ಎಂದು ಅವರು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುಂಗಭದ್ರಾ ಬೋರ್ಡ್ ಅಧಿಕಾರಿಗಳ ಕಳ್ಳಾಟ : ಕಬ್ಬಿಣ ಕಳ್ಳತನ ಆರೋಪದಲ್ಲಿ ಕಣ್ಣಮುಚ್ಚಾಲೆ ಆಟ ; ಶಾಸಕರ ಹೆಸರು ಪ್ರಸ್ತಾಪ

Published

on

  • ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ಸುದ್ದಿದಿನ,ಬಳ್ಳಾರಿ:ಲಕ್ಷಾಂತರ ರೂಪಾಯಿ ಬೆಳೆ ಬಾಳುವ ಬ್ರಿಡ್ಜ್ ನ ಕಬ್ಬಿಣ ಕಳವು ಠಾಣೆಗೆ ದೂರು ನೀಡಲು ಬಂದ ತುಂಗಭದ್ರಾ ಬೋರ್ಡ್ ಅಧಿಕಾರಿಗಳು, ಪೊಲೀಸರ ಮೇಲೆ ಗೂಬೆ ಕೂಡಿಸಿ ಪರಾರಿಯಾಗಿರುವ ದುರ್ಘಟನೆ ಗಣಿನಾಡು ಬಳ್ಳಾರಿ ನಗರದಲ್ಲಿ ನಡೆದಿದೆ.

ಬಳ್ಳಾರಿ ನಗರದ ಬೆಳಗಲ್ ರಸ್ತೆಯ ಡಿಸಿ ನಗರ ಪಕ್ಕದಲ್ಲಿರುವ ಒಂದು ಸಾರ್ವಜನಿಕರ ಬ್ರಿಡ್ಜ್ ಅನ್ನು ಈ ಹಿಂದೆ ಪಾಲಿಕೆಯಿಂದ ಅಗಲಿಕಾರಣ ಮಾಡಲಾಗಿದೆ ಎಂದು ತಿಳಿದಬಂದಿತ್ತು. ಈ ಬ್ರಿಡ್ಜ್ ತುಂಗಭದ್ರಾ ನಾಲೆಯ ಮೇಲೆ ಹಾರಿಹೋಗುವ ಬ್ರಿಡ್ಜ್ ಕಿಲೋಮೀಟರ್ 86ನಲ್ಲಿ ಬರುತ್ತದೆ ಈ ಬ್ರಿಡ್ಜ್ ಇರುವ ಕಬ್ಬಿಣವನ್ನು ಕಾಮಗಾರಿ ಮಾಡುವ ಸಂದರ್ಭದಲ್ಲಿ ಅಂದಾಜು 25 ರಿಂದ 30 ಟನ್ ಹೊಂದಿದೆ.

ಗಡಾರಿಗಳನ್ನು ತೆಗೆದು ಸೈಡಿಗೆ ಇಡಲಾಯಿತು. ಕೆಲವು ವರ್ಷಗಳದಿಂದ ಅಲ್ಲೇ ಇದ್ದ ಕಾರಣ ಅವುಗಳನ್ನು ತುಂಗಭದ್ರ ಬೋರ್ಡ್ ನ ಅಧಿಕಾರಿಗಳಾಗಲಿ , ಗೋದಾಮಿಗೆ ಹಾಕಿಕೊಳ್ಳದೆ ಸ್ಥಳದಲ್ಲೇ ಬಿಡಲಾಗಿತ್ತು, ಬಾರಿ ದೊಡ್ಡ ಮಟ್ಟದ ಕಬ್ಬಿಣ ಆಗಿರುವ ಹಿನ್ನೆಲೆ ಅದನ್ನು ಕ್ರೇನ್ ಮತ್ತು ಲಾರಿಗಳ ಮೂಲಕ ಮಾತ್ರವೇ ತೆಗೆದುಹಾಕಲು ಸಾಧ್ಯವಾಗುತ್ತದೆ. ಏಪ್ರಿಲ್ ಹನ್ನೊಂದು ಈ ಕಬ್ಬಿಣವನ್ನು ಎರಡು ಕ್ರೆನ್ ಮೂಲಕ ಲಾರಿನಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಕಳವು ಮಾಡಿದ್ದಾರೆ ಎಂದು ಎಚ್.ಎಲ್.ಸಿ ತುಂಗಭದ್ರಾ ಬೋರ್ಡ್ ನ ಅಧಿಕಾರಿಗಳಾಗಿರುವ ಕೆಂಚಪ್ಪ, ಚೇತನ್ ಮುಂತಾದವರು ಭಾನುವಾರ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದರು.

ಹಲವಾರು ಗಂಟೆಗಳಿಂದ ಠಾಣೆಯಲ್ಲಿ ಕಾಯುತ್ತಿದ್ದೇವೆ ಪೊಲೀಸ ಅಧಿಕಾರಿಗಳು ಯಾರು ? ನಮ್ಮ ದೂರನ್ನು ತೆಗೆದುಕೊಳ್ಳುತ್ತಿಲ್ಲವೆಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನು ಚುಚ್ಚಿಕೊಂಡ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿಕೊಳ್ಳಲು ಠಾಣೆಯಿಂದ ಹೋಗಿದ್ದ ಅಧಿಕಾರಿಗಳಿಗೆ ಅನೇಕ ಬಾರಿ ಪೋನ್ ಕಾಲ್ ಗಳನ್ನು ಮಾಡಿದ್ದಾರೆ. ದೂರ ನೀಡಲು ಬರಲೇ ಇಲ್ಲದೇ ಇರೋದ್ ದುರಂತ.

ರಾಜಕೀಯ ವ್ಯಕ್ತಿ ಮಧ್ಯ ಪ್ರವೇಶ

ಒಬ್ಬ ಪ್ರಭಾವಿ ರಾಜಕಾರಣಿ ಆಪ್ತ ಎನ್ನುವ ಶಶಿ ಈ ಕಬ್ಬಿಣ ಕಳುವು ಮಾಡಿಕೊಂಡು ಹೋಗಿದ್ದಾರೆ ಎಂದು ತುಂಗಭದ್ರಾ ಬೋರ್ಡ್ ಅಧಿಕಾರಿಗಳು ಪೊಲೀಸ್ ಠಾಣೆಗೆ ದೂರ ನೀಡಲು ಬರೆದುಕೊಂಡು ಬಂದಿರುವ ಪತ್ರದಲ್ಲಿದೆ. ಈ ಕಬ್ಬಿಣವನ್ನು ಕಟ್ ಮಾಡಲು ಬಂದಿರುವ ಗ್ಯಾಸ್ ವೆಲ್ಡರ್ ಬಷೀರ್ ಅವರ ಮೇಲೆ ದೂರ ನೀಡಿದ್ದಾರೆ ಪತ್ರದಲ್ಲಿ, ಬಷೀರ್ ಅವರನ್ನು ತಂದು ಭಾನುವಾರ ಗ್ರಾಮೀಣ ಠಾಣೆಯಲ್ಲಿ ಕುಡಿಸಲಾಗಿತ್ತು. ಆದರೆ ಪೊಲೀಸರು ಏನ್ ? ಮಾಡಿದ್ದಾರೆ ಎನ್ನುವುದು. ಅಂದಾಜು ಈ ಕಬ್ಬಿಣ 8 ರಿಂದ 10 ಲಕ್ಷ ಮೌಲ್ಯವಾಗಿರುತ್ತದೆ ಎಂದು ಬೋರ್ಡ್ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಗಳು ದೂರ ನೀಡಲು ಠಾಣೆಗೆ ಬಂದಿದ್ದು ಯಾಕೆ ?

ಪೊಲೀಸರು ದೂರು ತೆಗೆದುಕೊಂಡಿಲ್ಲ ಎಂದು ಸುಳ್ಳು ಹೇಳಿಕೆ ನೀಡಿ ಪರಾರಿ ಆಗಿದ್ದು ಏಕೆ ? ಎನ್ನುವುದು ಬೋರ್ಡ್ ಅಧಿಕಾರಿಗಳ ನಡೆ ಅನುಮಾನ ಉಂಟು ಮಾಡಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಣ ಕಳುವು ಆಗಿದ್ದ ವಿಷಯ ಬೋರ್ಡ್ ನ ಕೆಂಚಪ್ಪ,ಚೇತನ್ ಇವರು ಮೇಲಿನ ಎಸ್,ಇ ಅವರಿಗೆ ಯಾವುದೇ ಮಾಹಿತಿ ನೀಡಲಿಲ್ಲ ಅನ್ನೋದು ಬೋಡ್ ಎಸ್.ಇ ಆಗಿರುವ ನಾಯಕ ಅವರು ದೂರವಾಣಿ ಮೂಲಕ ತಿಳಿಸಿದ್ದಾರೆ , ಇದರ ಪೂರ್ತಿ ಇವರುಗಳನ್ನು ಪಡೆದುಕೊಳ್ಳುತ್ತೇನೆ ಎಂದರು.

ಲಕ್ಷಾಂತರ ರೂಪಾಯಿ ಕಬ್ಬಿಣ ಕಳವು ಆಗಿದೆ ಎಂದು ಠಾಣೆ ಗೆ ಬಂದು ಡ್ರಾಮಾ ಮಾಡಿರುವ ತುಂಗಭದ್ರಾ ಬೋರ್ಡಿನ ಎಚ್,ಎಲ್, ಸಿ.ವಿಭಾಗದ ಅಧಿಕಾರಿಗಳ ಮೇಲೆ ಅನುಮಾನ ಮೂಡಿಸಿದೆ. ಇಲ್ಲವೇ ಪ್ರಭಾವಿ ರಾಜಕೀಯ ವ್ಯಕ್ತಿ ಭಯ ಬಿದ್ದು ಠಾಣೆಗೆ ದೂರು ನೀಡದೆ ಪಾರಾರಿಯಾದರೇ ಎನ್ನುವ ಅನುಮಾನ ಸಾರ್ವಜನಿಕರನ್ನು ಕಾಡುತ್ತದೆ. ಇಷ್ಟು ದೊಡ್ಡ ಮಟ್ಟದ ಕಬ್ಬಿಣ ಕಳವು ಹಿಂದೆ ಅಧಿಕಾರಿಗಳ ಪಾತ್ರ ಇರಬಹುದು ಅನ್ನುವು ಇಲ್ಲಿನ ಸ್ಥಳೀಯರ ಗುಸು, ಗುಸು ಮಾಹಿತಿ ಆಗಿದೆ.

ಕಳ್ಳರ ಜೊತೆಗೆ ಕಳ್ಳರಾದ ತುಂಗಭದ್ರಾ ಬೋರ್ಡ್ ಸರ್ಕಾರಿ ಅಧಿಕಾರಿಗಳು

ಈ ಸ್ಟೋರಿಯಲ್ಲಿ ಬೋರ್ಡ್ ಅಧಿಕಾರಿಗಳು ಮತ್ತೊಂದು ಡ್ರಾಮಾ ಸೃಷ್ಟಿಸಿ ಕಳುವಾಗಿರುವ ಕಬ್ಬಿಣ 30 ರಿಂ 40 ಟನ್ ಸೋಮವಾರ 11 ಗಂಟೆಗೆಲ್ಲ ತುಂಗಭದ್ರಾ ಬೋರ್ಡ್ ಗೋದಾಮಿಗೆ ತಂದು ಹಾಕುತ್ತಾರೆ ಎಂದು ಕಳುವು ಮಾಡಿರುವರ ಮೂಲಕ ತಿಳಿದಿದೆ ಎಂದರು.

ಹಿಂದೆ ರಾಜಕಾರಣಿಗಳ ಹಸ್ತಕ್ಷೇಪವಿದೆ ಎಂದು ಕೆಲವರ ಮುಂದೆ ದೂರವಾಣಿಗಳಲ್ಲಿ ಮಾತನಾಡಿದ್ದಾರೆ ಅಧಿಕಾರಿಗಳು ಎನ್ನುವದು ಕೂಡ ಕೇಳಿಬಂದಿದೆ. ಇದೇ ತಿಂಗಳು 11ರಂದು ಕಬ್ಬಿಣ ಕಳೆವಾಗುತ್ತದೆ 13 ರಂದು ಠಾಣೆಗೆ ದೂರು ನೀಡಲು ಬರುತ್ತಾರೆ ಅಷ್ಟರಲ್ಲಿ ಕಬ್ಬಿಣ ವಾಪಸ್ ಬರುತ್ತದೆ ಎಂದು ಅಧಿಕಾರಿಗಳು ಆಡಿರುವ ಡ್ರಾಮಾ ಮೇಲು ನೋಟಕ್ಕೆ ಕಂಡು ಬರುತ್ತದೆ, ಈ ಕಬ್ಬಿಣದಲ್ಲಿ ಅಧಿಕಾರಿಗಳಿಗೆ ಏನಾದ್ರೂ ಕೈವಾಡ ವಿತ್ತಾ ಇವರಿಗೆ ತಲುಪ ಬೇಕಾಗಿರುವ ಹಣ ತಲುಪಿಲ್ಲವೇ ಇದರಿಂದ ಠಾಣೆಗೆ ದೂರು ನೀಡಲು ಬಂದಂತೆ ಡ್ರಾಮ ಮಾಡಿ ಪೊಲೀಸ್ ರ ಇಲಾಖೆ ಮೇಲೆ ಗೂಬೆ ಕೂಡಿಸಿರುವುದು ಅಪಹಾಸ್ಯಕ್ಕೆ ಗುರಿಯಾದರು. ಇದರ ಅಸಲಿ ಕಥೆ ಏನು ಅನ್ನವುದು ಬಹಿರಂಗ ಆಗಬೇಕಾಗಿದೆ.
ಇಲ್ಲಿ ತುಂಗಭದ್ರಾ ಬೋರ್ಡ್ ಅಧಿಕಾರಿಗಳೆ ಕಳ್ಳರ ಆಟವಾಡಿದ್ದಾರೆ ಎನ್ನುವ ಅನುಮಾನ ಮೂಡಿದೆ ಎನ್ನುವುದು ಸಾರ್ವಜನಿಕರ ಪ್ರಶ್ನೆ ಆಗಿಯಾಗಿ ಉಳಿದಿದೆ.


  • ಜನರು ಕಳ್ಳತನ ಮಾಡಿದ್ರೇ, ಮತ್ತೆ ವಾಪಾಸ್ಸು ತಂದು ಕೊಡುತ್ತೇವೆ ಎಂದರೆ ಪೊಲೀಸರು ಕೇಸ್ ಮಾಡದೇ ಇರುತ್ತಿರಾ ಎನ್ನುವ ಪ್ರಶ್ನೆ ಜನ ಸಾಮಾನ್ಯರಿಗೆ ಕಾಡುತ್ತದೆ. ಇಲ್ಲಿ ಶಾಸಕರು ಅವರ ಮುಖಂಡರು ಮಧ್ಯ ಪ್ರವೇಶ ಮಾಡಿದಕ್ಕೆ ಕೇಸ್ ಮಾಡಲಿಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending