ರಾಜಕೀಯ
ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಡುವುದಿಲ್ಲ : ಸಚಿವ ರಾಜಶೇಖರ ಪಾಟೀಲ
ಸುದ್ದಿದಿನ, ಕಲಬುರಗಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಡುವುದಿಲ್ಲ. ಅವರು ನನ್ನ ಆತ್ಮೀಯ ಸ್ನೇಹಿತರು. ಅವರು ಪಕ್ಷ ಬಿಡುವುದಿಲ್ಲ ಎನ್ನುವ ವಿಶ್ವಾಸ ಇದೆ. ಅದಾಗಿಯೂ ಏನಾಗುತ್ತೆ ಅನ್ನೋದು ಕಾದು ನೋಡೋಣ ಎಂದು ಕಲಬುರಗಿಯಲ್ಲಿ ಮುಜರಾಯಿ ಮತ್ತು ಗಣಿ ಭೂ ವಿಜ್ಞಾನ ಇಲಾಖೆ ಸಚಿವ ರಾಜಶೇಖರ ಪಾಟೀಲ ಹೇಳಿದರು.
ನಂತರ ಮಾತನಾಡಿದ ಅವರು ಸಚಿವರಾಗುವ ಆಸೆ ಎಲ್ಲರಿಗೂ ಇರುವುದು ಸಹಜ. ಈ ಬಗ್ಗೆ ಪಕ್ಷದ ನಾಯಕರು ಮಾತನಾಡಿದ್ದಾರೆ.ಸರ್ಕಾರ ರಚನೆ ಆದಾಗಿನಿಂದ ಇವತ್ತು ಬೀಳುತ್ತೆ, ನಾಳೆ ಬೀಳುತ್ತೆ ಎನ್ನುತ್ತಲೇ ಇದ್ದಾರೆ. ಇದರಿಂದ ಸರ್ಕಾರದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದರು.
ಮರಳು ಮಾಫಿಯಾ ತಡೆಯಲು ಹೋ ದ ಗ್ರಾಮ ಲೆಕ್ಕಿಗನ ಹತ್ಯೆ ಪ್ರಕರಣ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401