Connect with us

ದಿನದ ಸುದ್ದಿ

ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರಿಗೆ ಗಾಂಧಿ ಸೇವಾ ಪ್ರಶಸ್ತಿ; ಸಿಎಂ ಕುಮಾರಸ್ವಾಮಿ ಪ್ರಕಟ

Published

on

ಸುದ್ದಿದಿನ ದಾವಣಗೆರೆ: 2018ನೇ ಸಾಲಿನ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿಗೆ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು ಆಯ್ಕೆ ಮಾಡಲಾಗಿದೆ. ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಪ್ರಸನ್ನ ಅವರನ್ನು ಆಯ್ಕೆ ಮಾಡಿದೆ. ಈ ಪ್ರಶಸ್ತಿ 5 ಲಕ್ಷ ರೂ. ಬಹುಮಾನ ಒಳಗೊಂಡಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ತಿಳಿಸಿದರು.

ಅಕ್ಟೋಬರ್ ೨ರಂದು ನಡೆಯುವ ಗಾಂಧೀ ಜಯಂತಿ ದಿನದಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈವರೆಗೆ ಈ ಪ್ರಶಸ್ತಿಗೆ ಹಿರಿಯ ಗಾಂಧೀವಾದಿಗಳಾದ ಎಸ್.ಎನ್. ಸುಬ್ಬರಾವ್, ಹೋ. ಶ್ರೀನಿವಾಸಯ್ಯ, ಚನ್ನಮ್ಮ ಹಳ್ಳಿಕೇರಿ ಹಾಗೂ ಎಚ್.ಎಸ್. ದೊರೆಸ್ವಾಮಿ ಅವರು ಆಯ್ಕೆಯಾಗಿದ್ದರು.

ದಿನದ ಸುದ್ದಿ

ಸೋಶಿಯಲ್ ಮೀಡಿಯಾ ಪೋಸ್ಟ್‌ಗೆ ಕೇಸ್‌, ಉಡುಪಿಯಿಂದ ವ್ಯಕ್ತಿಯನ್ನು ಠಾಣೆಗೆ ಕರೆತಂದ ಕ್ರಮಕ್ಕೆ ಹೈಕೋರ್ಟ್‌ ಗರಂ

Published

on

Kunal Kamra Show Row: ‘ವೈಟ್‌ಫೀಲ್ಡ್‌ ಅಲ್ಲ, ಡಾರ್ಕ್‌ಫೀಲ್ಡ್‌ ಮಾಡಿ’! ಪೊಲೀಸರಿಗೆ ಹೈಕೋರ್ಟ್‌ ಫುಲ್ ಕ್ಲಾಸ್

ಸುದ್ದಿದಿನ,ಬೆಂಗಳೂರು: ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಕಾರ್ಯಕ್ರಮ ರದ್ದಾದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯನ್ನು ವಿಚಾರಣೆ ಹೆಸರಿನಲ್ಲಿ ಠಾಣೆಗೆ ಕರೆತಂದ ವೈಟ್‌ಫೀಲ್ಡ್ ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣ ರದ್ದು ಕೋರಿ ಮೋಹನ್‌ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೊಲೀಸ್ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದೆ.

http://Visit : www.suddidina.com

ನ್ಯಾಯಾಲಯದ ಮುಂದೆ ಡಿಸಿಪಿ ಸೈದುಲು ಅಡಾವತ್‌, ಎಸಿಪಿ ರೀನಾ ಸುವರ್ಣ ಹಾಗೂ ತನಿಖಾಧಿಕಾರಿ ಹಾಜರಾಗಿದ್ದರು. ಈ ವೇಳೆ ಪೊಲೀಸ್ ಠಾಣೆಯ ಕಾರ್ಯವೈಖರಿ, ಬಂಧನದ ಕ್ರಮ ಮತ್ತು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ ನ್ಯಾಯಪೀಠ ಹಲವು ಪ್ರಶ್ನೆಗಳನ್ನು ಕೇಳಿತು.

‘ವೈಟ್‌ಫೀಲ್ಡ್‌ ಠಾಣೆ ಡಾರ್ಕ್‌ಫೀಲ್ಡ್‌ ಆಗಲಿ’

ವೈಟ್‌ಫೀಲ್ಡ್‌ ಠಾಣೆಯಲ್ಲಿ ವಿದ್ಯುತ್ ಹಾಗೂ ಸಿಸಿಟಿವಿ ವ್ಯವಸ್ಥೆ ಕುರಿತ ವಿಚಾರವನ್ನೂ ನ್ಯಾಯಪೀಠ ಪ್ರಸ್ತಾಪಿಸಿತು. ಠಾಣೆಯ ಚಟುವಟಿಕೆಗಳೇ ಅಂಧಕಾರದಲ್ಲಿವೆ ಎಂದು ವ್ಯಂಗ್ಯವಾಡಿದ ನ್ಯಾಯಮೂರ್ತಿಗಳು, ‘ವೈಟ್‌ಫೀಲ್ಡ್‌ ಠಾಣೆಯನ್ನು ಡಾರ್ಕ್‌ಫೀಲ್ಡ್‌ ಠಾಣೆಯನ್ನಾಗಿ ಬದಲಾಯಿಸಿಕೊಳ್ಳಿ’ ಎಂದು ಕಿಡಿಕಾರಿದರು.

ಉಡುಪಿಗೆ ತೆರಳಿ ಮೋಹನ್‌ಗೌಡರನ್ನು ವಶಕ್ಕೆ ಪಡೆದಿದ್ದೇಕೆ, ಬೆಳಗಿನ ಜಾವ 2 ಗಂಟೆಗೆ ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಂಡಿದ್ದೇಕೆ ಎಂಬುದರ ಕುರಿತು ಅಧಿಕಾರಿಗಳಿಂದ ನ್ಯಾಯಪೀಠ ವಿವರಣೆ ಕೇಳಿತು.

ಡಿಸಿಪಿ ಪರವಾಗಿ, ಮೋಹನ್‌ಗೌಡ ಹಲವು ಟ್ವೀಟ್‌ಗಳನ್ನು ಮಾಡಿದ್ದರು. ಅವರನ್ನು ಬಂಧಿಸಿರಲಿಲ್ಲ, ಫೋನ್‌ ಮಾಡಿದರೂ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಅವರು ಕಾರಿನಲ್ಲಿ ಬಂದಿದ್ದರು. ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದು ಉತ್ತರಿಸಲಾಯಿತು.

‘ಯೂನಿಫಾರ್ಮ್ ಇದ್ದರೆ ಏನು ಬೇಕಾದರೂ ಮಾಡಬಹುದೇ?’

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಮಾತ್ರಕ್ಕೆ ಪೊಲೀಸರು ಮನಬಂದಂತೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು. ಯೂನಿಫಾರ್ಮ್‌ ಧರಿಸಿರುವ ಕಾರಣಕ್ಕೆ ನಾಗರಿಕರ ಸ್ವಾತಂತ್ರ್ಯ ಕಸಿಯಲು ಸಾಧ್ಯವಿಲ್ಲ ಎಂದು ಕೋರ್ಟ್‌ ಎಚ್ಚರಿಸಿತು.

ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಕುರಿತು ಕ್ರಮ ಕೈಗೊಳ್ಳುವಾಗ ಸುಪ್ರೀಂಕೋರ್ಟ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪೊಲೀಸರು ತಮ್ಮನ್ನು ತಾವೇ ಕಾನೂನು ಎಂದು ಭಾವಿಸಬಾರದು. ಬಂಧನದ ಅಧಿಕಾರವನ್ನು ವಿವೇಚನೆಯಿಲ್ಲದೆ ಬಳಸಬಾರದು ಎಂದು ನ್ಯಾಯಪೀಠ ತಿಳಿಸಿತು.

ಪೊಲೀಸ್ ಠಾಣೆಗಳಲ್ಲಿ CCTV ಆಡಿಟ್‌ಗೆ ಸೂಚನೆ

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ವ್ಯವಸ್ಥೆ ಮತ್ತು ಯುಪಿಎಸ್‌ ಬ್ಯಾಕಪ್‌ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಲು ರಾಜ್ಯಮಟ್ಟದ ಆಡಿಟ್‌ ನಡೆಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಅಧಿಕಾರ ದುರುಪಯೋಗ ಅಥವಾ ನ್ಯಾಯಾಲಯದ ಆದೇಶ ಉಲ್ಲಂಘನೆ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ ನಡೆಸಬೇಕು. ಪೊಲೀಸ್ ಠಾಣೆಗಳಲ್ಲಿ ಸುಪ್ರೀಂಕೋರ್ಟ್‌ ತೀರ್ಪುಗಳ ಕುರಿತು ಅರಿವು ಮೂಡಿಸಬೇಕು ಎಂದು ಸೂಚಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಸೆಪ್ಟೆಂಬರ್‌ 25ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ

ಕುನಾಲ್‌ ಕಾಮ್ರಾ ಶೋ ವಿರೋಧಿಸಿ ದೂರುಗಳು ಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಈ ಬೆಳವಣಿಗೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಮೋಹನ್‌ಗೌಡ ವಿರುದ್ಧ ವೈಟ್‌ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಉಡುಪಿಯಿಂದ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದ ಕ್ರಮ ಪ್ರಶ್ನಿಸಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು.

Continue Reading

ದಿನದ ಸುದ್ದಿ

ಗೃಹಲಕ್ಷ್ಮೀ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಅರ್ಹ ಫಲಾನುಭವಿಗಳ ಖಚಿತತೆಗೆ ಮನೆ-ಮನೆ ಪರಿಶೀಲನೆ

Published

on

Gruha Lakshmi Scheme: ಗೃಹಲಕ್ಷ್ಮೀ ಫಲಾನುಭವಿಗಳಿಗೆ ಬಯೋಮೆಟ್ರಿಕ್‌, ಫೇಸ್‌ ವೆರಿಫಿಕೇಷನ್ ಕಡ್ಡಾಯ; ಮನೆ-ಮನೆ ಸಮೀಕ್ಷೆಗೆ ಸರ್ಕಾರದ ಆದೇಶ!

ಸುದ್ದಿದಿನ,ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಯಲ್ಲಿ ಸರ್ಕಾರ ಮಹತ್ವದ ಪರಿಶೀಲನಾ ಕ್ರಮಕ್ಕೆ ಮುಂದಾಗಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಪ್ರಯೋಜನ ತಲುಪಬೇಕು ಎಂಬ ಉದ್ದೇಶದಿಂದ, ಎಲ್ಲಾ ಫಲಾನುಭವಿಗಳ ಬಯೋಮೆಟ್ರಿಕ್‌ ಮತ್ತು ಮುಖಚಹರೆ ದೃಢೀಕರಣವನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಪ್ರಕ್ರಿಯೆಯನ್ನು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ (ಇಡಿಸಿಎಸ್‌) ನಿರ್ದೇಶನಾಲಯ ಅಭಿವೃದ್ಧಿಪಡಿಸಿರುವ ಮೊಬೈಲ್‌ ಆ್ಯಪ್‌ ಮೂಲಕ ಕೈಗೊಳ್ಳಲಾಗುತ್ತದೆ.

http://Visit : www.suddidina.com

ಮನೆ-ಮನೆ ಸಮೀಕ್ಷೆಯ ಜತೆಗೆ ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌ ಮತ್ತು ಬಾಪೂಜಿ ಸೇವಾ ಕೇಂದ್ರಗಳ ಮೂಲಕವೂ ಪರಿಶೀಲನಾ ಪ್ರಕ್ರಿಯೆ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಸರ್ಕಾರ ನಿಗದಿಪಡಿಸಿರುವ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP) ಪ್ರಕಾರವೇ ಫಲಾನುಭವಿಗಳ ಮರುಪರಿಶೀಲನೆ ನಡೆಯಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಒಂದು ತಿಂಗಳಲ್ಲಿ ಕ್ಷೇತ್ರ ಪರಿಶೀಲನೆ ಪೂರ್ಣಗೊಳಿಸಲು ಸೂಚನೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಗತ್ಯ ಮಾದರಿ ನಮೂನೆಗಳನ್ನು ಸಿದ್ಧಪಡಿಸಲಿದೆ. ಮಾಸ್ಟರ್‌ ತರಬೇತುದಾರರ ಮೂಲಕ ಕ್ಷೇತ್ರ ಗಣತಿದಾರರಿಗೆ ತರಬೇತಿ ನೀಡಲಾಗುತ್ತದೆ. ಆಗಸ್ಟ್‌ 30ರಿಂದ ಒಂದು ತಿಂಗಳೊಳಗೆ ಕ್ಷೇತ್ರ ಪರಿಶೀಲನಾ ಕಾರ್ಯವನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಸಮಿತಿಗಳು ಮತ್ತು ಸ್ಥಳೀಯ ಮಟ್ಟದ ಸಮಿತಿಗಳು ನಿಗದಿತ ಅವಧಿಯಲ್ಲಿ ಪರಿಶೀಲನೆ ಪೂರ್ಣಗೊಳಿಸಬೇಕು. ನಗರ ಪ್ರದೇಶಗಳಲ್ಲಿ ಕಂದಾಯ ನಿರೀಕ್ಷಕರು, ಬಿಲ್‌ ಕಲೆಕ್ಟರ್‌ಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಗಣತಿದಾರರನ್ನಾಗಿ ಬಳಸಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಲಾಗುತ್ತದೆ.

ಮನೆ ಬಾಗಿಲಿಗೆ ಬರಲಿದೆ ಪರಿಶೀಲನಾ ತಂಡ

ಫಲಾನುಭವಿಗಳ ಮನೆಗಳಿಗೆ ಕಡ್ಡಾಯವಾಗಿ ಭೇಟಿ ನೀಡುವಂತೆ ಗ್ಯಾರಂಟಿ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿಗೆ ಸೂಚಿಸಲಾಗಿದೆ. ಫಲಾನುಭವಿ ಅಥವಾ ಕುಟುಂಬದ ಸದಸ್ಯರು ಗಣತಿ ನಮೂನೆಯನ್ನು ಭರ್ತಿ ಮಾಡಿ ಹಿಂತಿರುಗಿಸಬೇಕು. ಯಾವುದೇ ಕಾರಣಕ್ಕೂ ಮನೆ ಭೇಟಿ ತಪ್ಪಿಸಬಾರದು ಎಂದು ಆದೇಶದಲ್ಲಿ ಕಟ್ಟುನಿಟ್ಟಾಗಿ ತಿಳಿಸಲಾಗಿದೆ.

ಗಣತಿದಾರರು ಮೊಬೈಲ್‌ ಆ್ಯಪ್‌ ಮೂಲಕ ಫಲಾನುಭವಿಯ ಭಾವಚಿತ್ರ ಅಥವಾ ಮನೆಯ ಫೋಟೊ, ಜಿಪಿಎಸ್‌ ಮ್ಯಾಪಿಂಗ್‌, ಮುಖಚಹರೆ ದೃಢೀಕರಣ ಮತ್ತು ಮತದಾರರ ಗುರುತಿನ ಚೀಟಿ ವಿವರಗಳನ್ನು ಸ್ಥಳದಲ್ಲಿಯೇ ದಾಖಲಿಸಬೇಕು. ಈ ಮೂಲಕ ಫಲಾನುಭವಿಯ ಗುರುತು ಹಾಗೂ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸುವ ಉದ್ದೇಶ ಹೊಂದಲಾಗಿದೆ.

ಜಿಲ್ಲಾಧಿಕಾರಿಗಳು, ಸಿಇಒಗಳಿಗೆ ಹೊಣೆ

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಾರ್ಡ್‌ ಹಾಗೂ ಗ್ರಾಮವಾರು ಸ್ಪಷ್ಟ ನಿಯೋಜನೆಯೊಂದಿಗೆ ಗಣತಿದಾರರಿಗೆ ಲಿಖಿತ ಆದೇಶ ನೀಡಬೇಕು. ಪರಿಶೀಲನಾ ಪ್ರಕ್ರಿಯೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ಮೇಲ್ವಿಚಾರಣೆ ನಡೆಸಬೇಕಿದೆ.

ಒಟ್ಟಿನಲ್ಲಿ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಮತ್ತಷ್ಟು ನಿಖರಗೊಳಿಸಿ, ಅರ್ಹರಿಗೆ ಮಾತ್ರ ಸರ್ಕಾರದ ನೆರವು ತಲುಪಿಸುವುದು ಈ ಮರುಪರಿಶೀಲನೆಯ ಪ್ರಮುಖ ಉದ್ದೇಶವಾಗಿದೆ. ಮನೆ-ಮನೆ ಸಮೀಕ್ಷೆ ಮತ್ತು ಡಿಜಿಟಲ್‌ ದೃಢೀಕರಣದ ಬಳಿಕ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಾಗಲಿವೆಯೇ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.

Continue Reading

ದಿನದ ಸುದ್ದಿ

ಬೆಂಗಳೂರು ಮೆಟ್ರೋದಲ್ಲಿ ಸುರಕ್ಷತೆಗೆ ಹೊಸ ಕವಚ: PSD ಕಾಮಗಾರಿ ಯಾವಾಗ?

Published

on

Namma Metro PSD Delay: 3ನೇ ಹಂತದ ಕೇಂದ್ರ ಒಪ್ಪಿಗೆಗೆ ಕಾಯುವ ಬೆಂಗಳೂರು; 177 ನಿಲ್ದಾಣಗಳಲ್ಲಿ ₹1,274 ಕೋಟಿ ವೆಚ್ಚದ ಸುರಕ್ಷತಾ ಯೋಜನೆ!

ಸುದ್ದಿದಿನ,ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರೂಪಿಸಿರುವ ಪ್ಲಾಟ್‌ಫಾರ್ಮ್ ಸ್ಕ್ರೀನ್‌ ಡೋರ್‌ (PSD) ಯೋಜನೆಗೆ ಕೇಂದ್ರದ ಅನುಮೋದನೆಯ ವಿಳಂಬವೇ ದೊಡ್ಡ ಅಡ್ಡಿಯಾಗಿದೆ. ಮೆಟ್ರೋ 3ನೇ ಹಂತದ ಕೆಂಪು ಮಾರ್ಗದ ಡಿಪಿಆರ್‌ಗೆ ಕೇಂದ್ರ ಸರಕಾರದಿಂದ ಒಪ್ಪಿಗೆ ದೊರೆಯುವವರೆಗೆ PSD ಅಳವಡಿಕೆ ಕಾಮಗಾರಿ ಆರಂಭಿಸುವುದು ಕಷ್ಟವಾಗಲಿದೆ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.

ಪ್ರಸ್ತುತ ಮತ್ತು ಭವಿಷ್ಯದ ಮೆಟ್ರೋ ಯೋಜನೆಗಳನ್ನು ಪರಿಗಣಿಸಿದರೆ ಬೆಂಗಳೂರಿನಲ್ಲಿ ಒಟ್ಟು 191 ನಿಲ್ದಾಣಗಳು ನಿರ್ಮಾಣವಾಗುವ ನಿರೀಕ್ಷೆಯಿದೆ. ಈ ಪೈಕಿ 177 ನಿಲ್ದಾಣಗಳಲ್ಲಿ PSD ಅಳವಡಿಸಲು ಬಿಎಂಆರ್‌ಸಿಎಲ್‌ ಯೋಜನೆ ರೂಪಿಸಿದೆ. ಇದಕ್ಕಾಗಿ ಅಂದಾಜು ₹1,274 ಕೋಟಿ ವೆಚ್ಚವಾಗಲಿದೆ.

ಹೈಲೈಟ್ಸ್:

  • 177 ಮೆಟ್ರೋ ನಿಲ್ದಾಣಗಳಲ್ಲಿ PSD ಅಳವಡಿಕೆ ಗುರಿ
  • ಯೋಜನೆಗೆ ಅಂದಾಜು ₹1,274 ಕೋಟಿ ವೆಚ್ಚ
  • ಕೇಂದ್ರದ 3ಎ ಹಂತದ ಅನುಮೋದನೆಗೆ PSD ಯೋಜನೆ ಜೋಡಣೆ
  • ಹಾಲಿ ನಿಲ್ದಾಣಗಳಲ್ಲಿ ರಾತ್ರಿ ವೇಳೆ ತಾಂತ್ರಿಕ ಕಾಮಗಾರಿ
  • ಹೆಬ್ಬಾಳ–ಸರ್ಜಾಪುರ 3ಎ ಯೋಜನೆಯ ಪರಿಷ್ಕೃತ ವೆಚ್ಚ ₹25,999 ಕೋಟಿ

http://Visit : www.suddidina.com

₹1,274 ಕೋಟಿ ಯೋಜನೆ: ಎಲ್ಲಿ ಎಷ್ಟು ಖರ್ಚು?

PSD ಯೋಜನೆಯ ಒಟ್ಟು ವೆಚ್ಚದಲ್ಲಿ ಸಾಮಗ್ರಿ ಖರೀದಿಗೆ ಸುಮಾರು ₹747 ಕೋಟಿ, ಸಿವಿಲ್ ಕಾಮಗಾರಿಗಳಿಗೆ ₹317 ಕೋಟಿ ಹಾಗೂ ಸಿಗ್ನಲಿಂಗ್, ಟೆಲಿಕಾಂ ಮತ್ತು ವಿದ್ಯುತ್ ವ್ಯವಸ್ಥೆಗಳ ಮಾರ್ಪಾಡಿಗೆ ₹210 ಕೋಟಿ ಮೀಸಲಿಡುವ ಪ್ರಸ್ತಾವನೆ ಇದೆ.

ಆದರೆ ಈ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಪ್ರತ್ಯೇಕವಾಗಿ ಸಲ್ಲಿಸಲಾಗಿಲ್ಲ. ಹೆಬ್ಬಾಳ–ಸರ್ಜಾಪುರ 3ಎ ಹಂತದ ಡಿಪಿಆರ್‌ನ ಭಾಗವಾಗಿಯೇ ಕಳುಹಿಸಲಾಗಿದೆ. ಹೀಗಾಗಿ 3ಎ ಹಂತದ ಯೋಜನೆಗೆ ಕೇಂದ್ರದ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅನುಮೋದನೆ ದೊರೆಯುವವರೆಗೆ PSD ಯೋಜನೆಗೂ ಅಂತಿಮ ಒಪ್ಪಿಗೆ ಸಿಗುವುದಿಲ್ಲ.

ಹಾಲಿ ನಿಲ್ದಾಣಗಳಲ್ಲಿ ಕಾಮಗಾರಿ ಸವಾಲು

ಹೊಸ ನಿಲ್ದಾಣಗಳಲ್ಲಿ PSD ಅಳವಡಿಕೆ ತುಸು ಸುಲಭವಾದರೂ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳ ನಿಲ್ದಾಣಗಳಲ್ಲಿ ಕಾಮಗಾರಿ ನಡೆಸುವುದು ಸವಾಲಿನ ಕೆಲಸವಾಗಿದೆ. ತಾಂತ್ರಿಕ ಕಾಮಗಾರಿಗಳನ್ನು ಮುಖ್ಯವಾಗಿ ರಾತ್ರಿ ವೇಳೆ, ರೈಲು ಸಂಚಾರ ಸ್ಥಗಿತಗೊಂಡ ಬಳಿಕ ನಡೆಸಬೇಕಾಗುತ್ತದೆ. ಅಗತ್ಯವಿದ್ದರೆ ರೈಲುಗಳ ವೇಗ ಕಡಿಮೆ ಮಾಡುವುದು ಅಥವಾ ಸಂಚಾರವನ್ನು ತಾತ್ಕಾಲಿಕವಾಗಿ ನಿಯಂತ್ರಿಸುವ ಪರಿಸ್ಥಿತಿಯೂ ಎದುರಾಗಬಹುದು.

ಟ್ರ್ಯಾಕ್‌ಗೆ ಇಳಿಯುವ ಘಟನೆಗಳು ಆತಂಕ

ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಟ್ರ್ಯಾಕ್‌ಗೆ ಇಳಿಯುವುದನ್ನು ತಡೆಯಲು ಈಗಾಗಲೇ ಭದ್ರತಾ ಸಿಬ್ಬಂದಿ ಹಾಗೂ ಸ್ಟೀಲ್ ಗ್ರಿಲ್‌ಗಳಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಟ್ರ್ಯಾಕ್‌ಗೆ ಇಳಿಯುವ ಘಟನೆಗಳು ಸಂಪೂರ್ಣವಾಗಿ ನಿಂತಿಲ್ಲ. ಈ ಹಿನ್ನೆಲೆಯಲ್ಲಿ PSD ಅಳವಡಿಕೆ ಪ್ರಯಾಣಿಕರ ಸುರಕ್ಷತೆಗೆ ಮಹತ್ವದ ಹೆಚ್ಚುವರಿ ಕವಚವಾಗಬಹುದು.

3ಎ ಹಂತದ ಪರಿಷ್ಕೃತ ಡಿಪಿಆರ್‌

ಹೆಬ್ಬಾಳ–ಸರ್ಜಾಪುರ 37 ಕಿ.ಮೀ. ಕಾರಿಡಾರ್‌ನ ಪರಿಷ್ಕೃತ ಡಿಪಿಆರ್‌ ಕೇಂದ್ರದ ಅನುಮೋದನೆಗಾಗಿ ಕಾಯುತ್ತಿದೆ. ವೆಚ್ಚ ಪರಿಷ್ಕರಣೆಯ ಬಳಿಕ ಯೋಜನೆಯ ಅಂದಾಜು ₹28,405 ಕೋಟಿಯಿಂದ ₹25,999 ಕೋಟಿಗೆ ಇಳಿಕೆಯಾಗಿದೆ. ಕೇಂದ್ರದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯ ಒಪ್ಪಿಗೆ ದೊರೆತ ಬಳಿಕವೇ ಮುಂದಿನ ಹಂತದ ಕಾಮಗಾರಿಗಳಿಗೆ ವೇಗ ಸಿಗಲಿದೆ.

Continue Reading
Advertisement

Title

ದಿನದ ಸುದ್ದಿ2 hours ago

ಸೋಶಿಯಲ್ ಮೀಡಿಯಾ ಪೋಸ್ಟ್‌ಗೆ ಕೇಸ್‌, ಉಡುಪಿಯಿಂದ ವ್ಯಕ್ತಿಯನ್ನು ಠಾಣೆಗೆ ಕರೆತಂದ ಕ್ರಮಕ್ಕೆ ಹೈಕೋರ್ಟ್‌ ಗರಂ

ಸುದ್ದಿದಿನ,ಬೆಂಗಳೂರು: ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಕಾರ್ಯಕ್ರಮ ರದ್ದಾದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯನ್ನು ವಿಚಾರಣೆ ಹೆಸರಿನಲ್ಲಿ ಠಾಣೆಗೆ ಕರೆತಂದ ವೈಟ್‌ಫೀಲ್ಡ್ ಪೊಲೀಸರ ಕ್ರಮಕ್ಕೆ ಕರ್ನಾಟಕ...

ದಿನದ ಸುದ್ದಿ2 hours ago

ಗೃಹಲಕ್ಷ್ಮೀ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಅರ್ಹ ಫಲಾನುಭವಿಗಳ ಖಚಿತತೆಗೆ ಮನೆ-ಮನೆ ಪರಿಶೀಲನೆ

ಸುದ್ದಿದಿನ,ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಯಲ್ಲಿ ಸರ್ಕಾರ ಮಹತ್ವದ ಪರಿಶೀಲನಾ ಕ್ರಮಕ್ಕೆ ಮುಂದಾಗಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಪ್ರಯೋಜನ ತಲುಪಬೇಕು ಎಂಬ...

ದಿನದ ಸುದ್ದಿ2 hours ago

ಬೆಂಗಳೂರು ಮೆಟ್ರೋದಲ್ಲಿ ಸುರಕ್ಷತೆಗೆ ಹೊಸ ಕವಚ: PSD ಕಾಮಗಾರಿ ಯಾವಾಗ?

ಸುದ್ದಿದಿನ,ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರೂಪಿಸಿರುವ ಪ್ಲಾಟ್‌ಫಾರ್ಮ್ ಸ್ಕ್ರೀನ್‌ ಡೋರ್‌ (PSD) ಯೋಜನೆಗೆ ಕೇಂದ್ರದ ಅನುಮೋದನೆಯ ವಿಳಂಬವೇ ದೊಡ್ಡ ಅಡ್ಡಿಯಾಗಿದೆ. ಮೆಟ್ರೋ...

august-30-2026-kannada-daily-horoscope-rashi-bhavishya august-30-2026-kannada-daily-horoscope-rashi-bhavishya
ನಿತ್ಯ ಭವಿಷ್ಯ2 hours ago

ವಿಶೇಷ ರಾಶಿಫಲ: ಆಗಸ್ಟ್ 30ರ ಭಾನುವಾರ ಯಾರಿಗೆ ಅದೃಷ್ಟ? ಯಾವ ರಾಶಿಗೆ ಎಚ್ಚರಿಕೆ?

ಸುದ್ದಿದಿನ, ಬೆಂಗಳೂರು: ಶ್ರಾವಣ ಮಾಸದ ಕೃಷ್ಣ ಪಕ್ಷದ ದ್ವಿತೀಯ ಬೆಳಿಗ್ಗೆ 9:37ರವರೆಗೆ ಇದ್ದು, ನಂತರ ತೃತೀಯೆ ಆರಂಭವಾಗಲಿದೆ. ಉತ್ತರಾಭಾದ್ರಪದ ನಕ್ಷತ್ರದ ಪ್ರಭಾವದ ಬಳಿಕ ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದೆ....

ದಿನದ ಸುದ್ದಿ18 hours ago

ಬೆಂಗಳೂರು ಜಲಸಂಚಾರಕ್ಕೆ ಹೊಸ ವೇಗ: ಬಿನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ 65 ಕಿ.ಮೀ. ನೀರು ಮಾರ್ಗ!

ಸುದ್ದಿದಿನ,ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಬಂದಾಗಲೆಲ್ಲಾ ಎದುರಾಗುವ ನೀರು ನಿಲ್ಲುವಿಕೆ ಹಾಗೂ ಪ್ರವಾಹದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಾಂತ್ರಿಕ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ. ಇದರ ಭಾಗವಾಗಿ...

bengaluru-koodlugate-snn-raj-eternia-18-floor-building-demolition bengaluru-koodlugate-snn-raj-eternia-18-floor-building-demolition
ದಿನದ ಸುದ್ದಿ18 hours ago

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ...

kalaburagi-municipal-corporation-mayor-deputy-mayor-election-congress-win kalaburagi-municipal-corporation-mayor-deputy-mayor-election-congress-win
ದಿನದ ಸುದ್ದಿ18 hours ago

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್...

ravichandran-political-entry-dk-shivakumar-mlc-nomination ravichandran-political-entry-dk-shivakumar-mlc-nomination
ದಿನದ ಸುದ್ದಿ18 hours ago

ರಾಜಕೀಯಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಎಂಟ್ರಿ? ಡಿಕೆಶಿ ಭೇಟಿಯ ಹಿಂದೆ ಇದೆ ‘ಕೈ’ ಲೆಕ್ಕ!

ಸಿಎಂ ಡಿಕೆ ಶಿವಕುಮಾರ್ ಭೇಟಿ ಬಳಿಕ ಹೆಚ್ಚಿದ ಕುತೂಹಲ; ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ ಸುದ್ದಿದಿನ,ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಕ್ರೇಜಿಸ್ಟಾರ್ ರವಿಚಂದ್ರನ್...

ದಿನದ ಸುದ್ದಿ18 hours ago

ರಸ್ತೆ ನಿಯಮ ಉಲ್ಲಂಘನೆಗೆ ಬ್ರೇಕ್ ಯಾವಾಗ? 4 ವರ್ಷದಲ್ಲಿ 5.67 ಕೋಟಿ ಪ್ರಕರಣ, ₹2,361 ಕೋಟಿ ದಂಡ ಸಂಗ್ರಹ!

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಆತಂಕಕಾರಿ ಪ್ರಮಾಣದಲ್ಲಿ ದಾಖಲಾಗುತ್ತಿವೆ. ರಸ್ತೆ ಸುರಕ್ಷತೆ ಕುರಿತು ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದ್ದರೂ, ನಿಯಮ ಉಲ್ಲಂಘನೆಗೆ...

janardhana-reddy-attacks-b-nagendra-valmiki-scam-ballari-political-war janardhana-reddy-attacks-b-nagendra-valmiki-scam-ballari-political-war
ದಿನದ ಸುದ್ದಿ18 hours ago

ವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್‌ಗೆ ರಾಜೀನಾಮೆ ಸವಾಲು!

ಸುದ್ದಿದಿನ, ಬಳ್ಳಾರಿ: ಬಳ್ಳಾರಿಯಲ್ಲಿ ರಾಜಕೀಯ ವಾಕ್ಸಮರ ಮತ್ತೊಮ್ಮೆ ತೀವ್ರಗೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಮುಂದಿಟ್ಟುಕೊಂಡು ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಮಾಜಿ...

Trending