ದಿನದ ಸುದ್ದಿ
ಸಾಮೂಹಿಕ ಅತ್ಯಚಾರಕ್ಕೆ ‘ದಲಿತ ಬಾಲಕಿ’ ಬಲಿ
![](https://suddidina.com/wp-content/uploads/2019/01/Dalit-girl-suddidina54.jpg)
ಬಾಬಸಾಹೇಬ ಅಂಬೇಡ್ಕರವರೆ ನೀವು ಬರೆದ ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ ಸಂವಿಧಾನ ಜಾರಿಯಾದ ಸಂವಿಧಾನ ದಿನಾಚರಣೆ (ಗಣರಾಜ್ಯೋತ್ಸವ) ಈ ದಿನದಂದು(24-01-2019 )ನನ್ನ ತಂಗಿ ಸಂಜನಾ ನಾಲ್ಕನೆ ಕ್ಲಾಸ್ ಹುಡುಗಿಗೆ ಸಾಮೂಹಿಕವಾಗಿ ಅತ್ಯಾಚಾರವಾಗಿ ಸಾಯುತ್ತಿರಲಿಲ್ಲವೇನೊ…? ಹೌದು ಸಂವಿಧಾನ ಜಾರಿಯಾಗಿ 60-70 ವರ್ಷ ವಾಯ್ತು ಎಂದು ಹೆಮ್ಮೆಯಿಂದ ಬೀಗುತ್ತಿರುವ ಈ ಸಂದರ್ಭದಲ್ಲಿ ಕರ್ನಾಟಕದ ವಿಜಯಪುರ ಜಿಲ್ಲೆಯ ಬಸವನ ಬಾಗೆವಾಡಿ ತಾಲ್ಲೂಕಿನ ಲಿಂಗದಹಳ್ಳಿ ಸಾ;;ಹೊವಿನಹಿಪ್ಪರಗಿ ಗ್ರಾಮದಲ್ಲಿ ದಲಿತ ಜಾತಿಗೆ ಸೇರಿದ ಆ ಕುಟುಂಬದವರಿಗೆ ಒಬ್ಬ ಮಗಳಿದ್ದಾಳೆ ಆಕೆಯ ಹೆಸರು ಕು.ಸಂಜನಾ ಅಂತ.ಆಕೆ ನಾಲ್ಕನೆ ತರಗತಿ ಓದುತ್ತಿದ್ದು ಇಡೀ ಶಾಲೆಗೆ ಓದುವುದರಲ್ಲಿ ನಂಬರ್ ಒನ್ ಆಗಿದ್ದಳು ಕ್ರೀಡೆ ಹಾಗು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಅವಳನ್ನು ಯಾರು ಮೀರಿಸುತ್ತಿರಲಿಲ್ಲ.
ಅಂದು 24/01/2019 ರಂದು ಅವಳ ಬಾಳಲ್ಲ ನಡೆಯಬಾರದ ದುರಂತವೊದು ನಡೆಯಿತು. ಮನೆಯವರು ಕೂಲಿ ಮಾಡಲಿಕ್ಕೆ ಹೋದಾಗ ಆ ಬಾಲಕಿ ಒಬ್ಬಳೆ ಮನೆಯಲ್ಲುದ್ದು ಓದುತ್ತಿದ್ದಳು (ಪಾಪ ಆ ಮುಗ್ದ ಮಗು ಅದೆಷ್ಟು ಕನಸ್ಸಿಟ್ಟುಕೊಂಡಿತ್ತು ಯಾರು ಬಲ್ಲರು)ಆದರೆ ಈ ದೇಶದ ಜಾತಿ ಮನಸ್ಥಿತಿಯ ಮನುವಾದಿ ಸಂಸ್ಕೃತಿ ಯ ದಲಿತ (ಎಳೆ ಬಾಲಕಿ) ತುಂಬಾ ಕ್ರೌರ್ಯದಿಂದ ಚಿತ್ರಹಿಂಸೆಯಿಂದ ಸಾಮೂಹಿಕ ಅತ್ಯಚಾರ ಮಾಡಿರುವುದು ಭಾರತ ತಲೆತಗ್ಗಿಸುತಾಗಿದೆ.ಆಕೆಯ ಅತ್ಯಾಚಾರದ ವಿಷಯ ತಡವಾಗಿ ಬೆಳಕಿಗೆ ಬಂದರು ಪೋಲಿಸರಿಗೆ ದೂರು ಕೊಟ್ಟರು ಪೋಲಿಸರು ತಲೆ ಕೆಡಿಸಿಕೊಳ್ಳದೆ ಇರುವುದು ಅನುಮಾನವನ್ನು ಉಂಟು ಮಾಡುತ್ತದೆ.
ಯಾವೊದೊ ಸಣ್ಣಸಣ್ಣ ವಿಷಯವನ್ನು ದೊಡ್ಡದಾಗಿ ಬಿತ್ತರಿಸುವ ಮಾಧ್ಯಮಗಳು ಕಣ್ಮುಚ್ಚಿ ಕುಳಿತಿವೆ.. ಜಾತಿವಾದ ಹಾಗು ಗಂಡುಮಕ್ಕಳಿಲ್ಲದ ಆ ದೇವದಾಸಿ ಅನಿಷ್ಟ ಪದ್ದತಿಗೆ ಬಾಲಕಿ ಬಲಿಯಾಗಿದ್ದಾಳೆ. ಮಗಳು ಕ್ರೌರ್ಯಕಾಮದ ಅತ್ಯಾಚಾರದ ಕೂಪದಿಂದ ಸತ್ತಿದ್ದಾಳೆ. ಅದೇನೆ ಇರಲಿ ಸಂಜನಳ ಸಾವಿಗೆ ನ್ಯಾಯ ಸಿಗಬೇಕು.ಆದಷ್ಷು ಬೇಗ ಆಕ್ರೋರಿಗಳಿಗೆಗಲ್ಲುಶಿಕ್ಷೆಯಾಗಬೇಕು.ಇಲ್ಲವಾದರೆ ಸಂವಿಧಾನ ಸಮರ್ಪಣಾ ದಿನೋತ್ಸವಕ್ಕೆ ಯಾವುದೆ ಅರ್ಥ ಬರುವುದಿಲ್ಲ.ಬೇಟಿಬಚಾವೋ..ಬೇಟಿ ಬಡಾವೋಗಳಂತ ಸರ್ಕಾರದ ಯೋಜನೆಗಳು ಕೇವಲ ಶೋಕಿಸಿನ ಗೊಂಬೆಯಾಗುತ್ತವೆ.
– ಹುಚ್ಚಂಗಿ ಪ್ರಸಾದ್ ಸಂತೆಬೆನ್ನೂರು
ದಾವಣಗೆರೆ
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ4 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ7 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!