ದಿನದ ಸುದ್ದಿ
ಸಾಮೂಹಿಕ ಅತ್ಯಚಾರಕ್ಕೆ ‘ದಲಿತ ಬಾಲಕಿ’ ಬಲಿ

ಬಾಬಸಾಹೇಬ ಅಂಬೇಡ್ಕರವರೆ ನೀವು ಬರೆದ ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ ಸಂವಿಧಾನ ಜಾರಿಯಾದ ಸಂವಿಧಾನ ದಿನಾಚರಣೆ (ಗಣರಾಜ್ಯೋತ್ಸವ) ಈ ದಿನದಂದು(24-01-2019 )ನನ್ನ ತಂಗಿ ಸಂಜನಾ ನಾಲ್ಕನೆ ಕ್ಲಾಸ್ ಹುಡುಗಿಗೆ ಸಾಮೂಹಿಕವಾಗಿ ಅತ್ಯಾಚಾರವಾಗಿ ಸಾಯುತ್ತಿರಲಿಲ್ಲವೇನೊ…? ಹೌದು ಸಂವಿಧಾನ ಜಾರಿಯಾಗಿ 60-70 ವರ್ಷ ವಾಯ್ತು ಎಂದು ಹೆಮ್ಮೆಯಿಂದ ಬೀಗುತ್ತಿರುವ ಈ ಸಂದರ್ಭದಲ್ಲಿ ಕರ್ನಾಟಕದ ವಿಜಯಪುರ ಜಿಲ್ಲೆಯ ಬಸವನ ಬಾಗೆವಾಡಿ ತಾಲ್ಲೂಕಿನ ಲಿಂಗದಹಳ್ಳಿ ಸಾ;;ಹೊವಿನಹಿಪ್ಪರಗಿ ಗ್ರಾಮದಲ್ಲಿ ದಲಿತ ಜಾತಿಗೆ ಸೇರಿದ ಆ ಕುಟುಂಬದವರಿಗೆ ಒಬ್ಬ ಮಗಳಿದ್ದಾಳೆ ಆಕೆಯ ಹೆಸರು ಕು.ಸಂಜನಾ ಅಂತ.ಆಕೆ ನಾಲ್ಕನೆ ತರಗತಿ ಓದುತ್ತಿದ್ದು ಇಡೀ ಶಾಲೆಗೆ ಓದುವುದರಲ್ಲಿ ನಂಬರ್ ಒನ್ ಆಗಿದ್ದಳು ಕ್ರೀಡೆ ಹಾಗು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಅವಳನ್ನು ಯಾರು ಮೀರಿಸುತ್ತಿರಲಿಲ್ಲ.
ಅಂದು 24/01/2019 ರಂದು ಅವಳ ಬಾಳಲ್ಲ ನಡೆಯಬಾರದ ದುರಂತವೊದು ನಡೆಯಿತು. ಮನೆಯವರು ಕೂಲಿ ಮಾಡಲಿಕ್ಕೆ ಹೋದಾಗ ಆ ಬಾಲಕಿ ಒಬ್ಬಳೆ ಮನೆಯಲ್ಲುದ್ದು ಓದುತ್ತಿದ್ದಳು (ಪಾಪ ಆ ಮುಗ್ದ ಮಗು ಅದೆಷ್ಟು ಕನಸ್ಸಿಟ್ಟುಕೊಂಡಿತ್ತು ಯಾರು ಬಲ್ಲರು)ಆದರೆ ಈ ದೇಶದ ಜಾತಿ ಮನಸ್ಥಿತಿಯ ಮನುವಾದಿ ಸಂಸ್ಕೃತಿ ಯ ದಲಿತ (ಎಳೆ ಬಾಲಕಿ) ತುಂಬಾ ಕ್ರೌರ್ಯದಿಂದ ಚಿತ್ರಹಿಂಸೆಯಿಂದ ಸಾಮೂಹಿಕ ಅತ್ಯಚಾರ ಮಾಡಿರುವುದು ಭಾರತ ತಲೆತಗ್ಗಿಸುತಾಗಿದೆ.ಆಕೆಯ ಅತ್ಯಾಚಾರದ ವಿಷಯ ತಡವಾಗಿ ಬೆಳಕಿಗೆ ಬಂದರು ಪೋಲಿಸರಿಗೆ ದೂರು ಕೊಟ್ಟರು ಪೋಲಿಸರು ತಲೆ ಕೆಡಿಸಿಕೊಳ್ಳದೆ ಇರುವುದು ಅನುಮಾನವನ್ನು ಉಂಟು ಮಾಡುತ್ತದೆ.
ಯಾವೊದೊ ಸಣ್ಣಸಣ್ಣ ವಿಷಯವನ್ನು ದೊಡ್ಡದಾಗಿ ಬಿತ್ತರಿಸುವ ಮಾಧ್ಯಮಗಳು ಕಣ್ಮುಚ್ಚಿ ಕುಳಿತಿವೆ.. ಜಾತಿವಾದ ಹಾಗು ಗಂಡುಮಕ್ಕಳಿಲ್ಲದ ಆ ದೇವದಾಸಿ ಅನಿಷ್ಟ ಪದ್ದತಿಗೆ ಬಾಲಕಿ ಬಲಿಯಾಗಿದ್ದಾಳೆ. ಮಗಳು ಕ್ರೌರ್ಯಕಾಮದ ಅತ್ಯಾಚಾರದ ಕೂಪದಿಂದ ಸತ್ತಿದ್ದಾಳೆ. ಅದೇನೆ ಇರಲಿ ಸಂಜನಳ ಸಾವಿಗೆ ನ್ಯಾಯ ಸಿಗಬೇಕು.ಆದಷ್ಷು ಬೇಗ ಆಕ್ರೋರಿಗಳಿಗೆಗಲ್ಲುಶಿಕ್ಷೆಯಾಗಬೇಕು.ಇಲ್ಲವಾದರೆ ಸಂವಿಧಾನ ಸಮರ್ಪಣಾ ದಿನೋತ್ಸವಕ್ಕೆ ಯಾವುದೆ ಅರ್ಥ ಬರುವುದಿಲ್ಲ.ಬೇಟಿಬಚಾವೋ..ಬೇಟಿ ಬಡಾವೋಗಳಂತ ಸರ್ಕಾರದ ಯೋಜನೆಗಳು ಕೇವಲ ಶೋಕಿಸಿನ ಗೊಂಬೆಯಾಗುತ್ತವೆ.
– ಹುಚ್ಚಂಗಿ ಪ್ರಸಾದ್ ಸಂತೆಬೆನ್ನೂರು
ದಾವಣಗೆರೆ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ4 days ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ4 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ