ದಿನದ ಸುದ್ದಿ
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಯೋಜನೆಗೆ ಶೀಘ್ರ ಶಂಕುಸ್ಥಾಪನೆ : ಸಂಸದ ಜಿ.ಎಂ.ಸಿದ್ದೇಶ್ವರ್
ಸುದ್ದಿದಿನ, ದಾವಣಗೆರೆ :ದಾವಣಗೆರೆ-ಚಿತ್ರದುರ್ಗ-ತುಮಕೂರು ನಡುವೆ ನೇರ ರೈಲು ಮಾರ್ಗ ಯೋಜನೆಗೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದ್ದಾರೆ.
ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗಾಗಿ ಭೂಮಿ ಸ್ವಾದೀನ ಕಾರ್ಯ ಚುರುಕಿನಿಂದ ಸಾಗಿದೆ, ಯೋಜನೆ ಸಾಕಾರಗೊಂಡರೆ ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಿಂದ ರಾಜಧಾನಿ ಬೆಂಗಳೂರಿಗೆ ಪ್ರಯಾಣಿಸುವವರ ಸಮಯ ಮತ್ತು ಹಣ ಉಳಿತಾಯವಾಗಲಿದೆ ಎಂದು ಸಂಸದರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243