ದಿನದ ಸುದ್ದಿ
ರೇಪಿಸ್ಟ್ ಸ್ವಾಮೀಜಿ ಮಠಕ್ಕೆ ಆಪ್ತೆ ಜತೆ ಬಂದಿದ್ರಾ ಮಾಜಿ ಸಿಎಂ?

ಸುದ್ದಿದಿನ ಡೆಸ್ಕ್: ಅತ್ಯಾಚಾರ ಆರೋಪ ಎದುರಿಸುತ್ತಿರುವ ಪಾಂಡವಪುರದ ಚಂದ್ರೆ ಗ್ರಾಮದ ಸಮೀಪವಿರುವ ಶ್ರೀ ಕ್ಷೇತ್ರ ಮಹಾಕಾಳಿ ಚಕ್ರೇಶ್ವರಿ ತ್ರಿಧಾಮ ಮಠದ ವಿದ್ಯಾಹಂಸ ಭಾರತೀ ಸ್ವಾಮೀಜಿ ಈಗ ಮಾತನಾಡುವರ ಬಾಯಲ್ಲಿ ಆಹಾರ ವಾಗಿದ್ದಾರೆ.
ಒಂದು ಪ್ರಭಾವಿ ಸಮುದಾಯಕ್ಕೆ ಸೇರಿದ ಕಾರಣ ಈ ಸುದ್ದಿ ಬಹುತೇಕ ಪತ್ರಿಕೆಗಳು ಹಾಗೂ ಮಾಧ್ಯಮಗಳಲ್ಲಿ ವರದಿಯಾಗುತ್ತಿಲ್ಲ.
ಚಂದ್ರೆ ಗ್ರಾಮದ ಸುಮರು 50 ಎಕರೆ ಪ್ರದೇಶದಲ್ಲಿ ಮಠ ಕಟ್ಟಿಕೊಂಡು ತನ್ನದೇ ಸಾಮ್ರಾಜ್ಯ ನಡೆಸುತ್ತಿರುವ ಈ ಸ್ವಾಮೀಜಿ ಸನ್ನಿಧಾನಕ್ಕೆ ಮಾಜಿ ಮುಖ್ಯಮಂತ್ರಿಯೊಬ್ಬರು ಹಾಗೂ ಅವರಿಗೆ ಆಪ್ತರಾಗಿದ್ದ ಸಂಸದೆಯೊಬ್ಬರು ತಡರಾತ್ರಿಯಲ್ಲಿ ಭೇಟಿ ನೀಡುತ್ತಿದ್ದರು ಎಂದು ಊರಿನವರು ಹೇಳುತ್ತಿದ್ದಾರೆ. ಧಾರಾವಾಹಿ ನಟಿಯರು, ಸಿನಿಮಾ ನಟಿಯರು, ಪತ್ರಕರ್ತರೂ ಕೂಡ ಭೇಟಿ ನೀಡುತ್ತಲೇ ಇರುತ್ತಾರೆ. ಮಾಧ್ಯಮಗಳು ಹಾಗೂ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಮಠಕ್ಕೆ ನಾಯಿಗಳೇ ಕಾವಲುಗಾರರು ಎಂದು ಚಂದ್ರ ಗ್ರಾಮದ ಜನ ಹೇಳುತ್ತಾರೆ.
ಮೈಸೂರಿನ ಪತ್ರಕರ್ತ ರಾಜೇಶ್ ಬೋರೆ ಎಂಬುವರೇ ತಮ್ಮ ಪತ್ನಿ ಮೇಲೆ ಸ್ವಾಮೀಜಿ ಅತ್ಯಾಚಾರ ಎಸಗಲು ಕುಮ್ಮಕ್ಕು ನೀಡಿದರು ಎಂದು ತಿಳಿದುಬಂದಿದೆ. ಇಷ್ಟೆಲ್ಲ ತನ್ನ ಕಣ್ಮುಂದೆಯೇ ನಡೆಯುತ್ತಿದ್ದರೂ, ಸುಮ್ಮನಿದ್ದ ಬೋರೆ ಈ ಸ್ವಾಮೀಜಿಯ ಪರಮ ಭಕ್ತ. ತನಗಿದ್ದ ವೈವಾಹಿಕ ಸಮಸ್ಯೆ ಹಾಗೂ ಹಣಕಾಸಿನ ತೊಂದರೆ ಸ್ವಾಮೀಜಿ ಪೂಜೆಯಿಂದ ಸರಿಹೋಗುತ್ತದೆ ಎಂದು ಈತ ನಂಬಿದ್ದನಂತೆ.
ಅಂದಹಾಗೆ ವಿದ್ಯಾಹಂಸ ಸ್ವಾಮೀಜಿಯ ಮೂಲ ಹೆಸರು ರಘುರಾಂ ಭಟ್. ಚಿತ್ರದುರ್ಗದ ರಂಗಯ್ಯನ ಬಾಗಿಲು ಬಳಿ ಇರುವ ವಾಸವಿ ಶಾಲೆ ಹತ್ತಿರ ಮನೆ. ಅಪ್ಪ ಪೊಲೀಸ್. ಕುಡಿತದ ದಾಸನಾಗಿದ್ದ ಅಪ್ಪ ತೀರಿಹೋದ ನಂತರ ದೊಡ್ಡಣ್ಣನಿಗೆ ಕೆಲಸ ಸಿಕ್ಕಿತು. ಎರಡನೇಯವ ರಘುರಾಂ ಆಧ್ಯಾತ್ಮದ ದಾರಿ ಹಿಡಿದು ಉಡುಪಿಯ ಪಾಲುಮಾರು ಮಠ ಸೇರಿದ. ಅಲ್ಲಿಂದ ಹೊರಬಂದು ತಾನೇ ಒಂದು ಮಠ ಸ್ಥಾಪಿಸುವ ನಿರ್ಧಾರಕ್ಕೆ ಬಂದ. ಮೈಸೂರಿನಲ್ಲಿ ಒಂದು ಹುಡುಗಿಯನ್ನು ಮದುವೆಯಾಗಿ ಇಬ್ಬರು ಮಕ್ಕಳನ್ನೂ ಹೊಂದಿರುವ ಈತ, ಆಕೆಯಿಂದ ವಿಚ್ಛೇದನ ಪಡೆದು ಪ್ರಭಾವಿಗಳ ನೆರವಿನಿಂದ ಪಾಂಡವಪುರದ ಚಂದ್ರೆ ಗ್ರಾಮದ ಬಳಿ ಮಠ ಕಟ್ಟಿದ ಎಂದು ತಿಳಿದುಬಂದಿದೆ.
ಹೊಡೆದಿದ್ದರು
ಚಿತ್ರದುರ್ಗದಲ್ಲಿರುವಾಗಲೇ ಈತ ಪೂಜೆ ಹೆಸರಿನಲ್ಲಿ ಅರ್ಧ ರಾತ್ರಿಯಲ್ಲಿ ಭಕ್ತರ ಮನೆ ಬಾಗಿಲು ತಟ್ಟುತ್ತಿದ್ದ. ಹೀಗೆ ಭಕ್ತರೊಬ್ಬರ ಮನೆ ಬಾಗಿಲು ತಟ್ಟಿ ಅವರ ಕೈ ಹಿಡಿದು ಎಳೆದ ಕಾರಣ ಆತನಿಗೆ ಹೊಡೆದು ಹೊರಕಳಿಸಲಾಗಿತ್ತು ಎನ್ನಲಾಗಿದೆ.
ಕೈ ನಾಯಕನ ಪತ್ನಿ ಜತೆ ಅಸಭ್ಯ ವರ್ತನೆ
ಮೈಸೂರಿನಲ್ಲಿ ಚಾರ್ತುರ್ಮಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿ ಕಾಂಗ್ರೆಸ್ ನಾಯಕರೊಬ್ಬರ ಮನೆಯಲ್ಲಿ ಪೂಜೆ ಮಾಡುವ ನೆಪದಲ್ಲಿ ಅವರ ಪತ್ನಿ ಜತೆ ಅನುಚಿತವಾಗಿ ವರ್ತಿಸಿದ್ದ ಎನ್ನಲಾಗಿದೆ. ನನ್ನನ್ನು ತಬ್ಬಿಕೊಂಡರೆ ನಿನಗೆ ಶಕ್ತಿ ಬರುತ್ತದೆ ಎಂದು ಹೇಳಿದ್ದ ಸ್ವಾಮೀಜಿಗೆ ಬೈದು ಹೊರಗೆ ಕಳುಹಿಸಿದ್ದರು ಎನ್ನಲಾಗಿದೆ.
ಬೇಕಾದಾಗ ಲಿಂಗ ಬದಲಾಯಿಸುತ್ತಾನಂತೆ
ವಿದ್ಯಾಹಂಸ ಸ್ವಾಮೀಜಿ ತನಗೆ ಬೇಕಾದಾಗ ಲಿಂಗ ಬದಲಾಯಿಸಿ ಗಂಡು/ಹೆಣ್ಣಿನ ಅವತಾರ ತಾಳುತ್ತಾನಂತೆ. ಹೆಣ್ಣಾದಾಗ ಆತನ ದೇಹದ ಆಕಾರಗಳೂ ಬದಲಾಗುತ್ತವೆಯಂತೆ. ಅಲ್ಲದೇ ಹೆಣ್ಣನಂತೆ ನಡೆಯುವುದು, ಮಾತನಾಡುವುದನ್ನೂ ಮಾಡುತ್ತಾನಂತೆ. ಹಾಗಾಗಿ ಅರ್ಧ ನಾರೀಶ್ವರ ರೂಪ ಸ್ವಾಮೀಜಿ ಎಂದೂ ಇವನನ್ನು ಕರೆಯುತ್ತಾರೆ.
ಶಾಸಕ ರಾಮ್ದಾಸ್ಗೂ ನಂಬಿಕೆ ದ್ರೋಹ
ಈ ಸ್ವಾಮೀಜಿಯಲ್ಲಿ ದೈವಿಕ ಶಕ್ತಿ ಇದೆ ಎಂದು ನಂಬಿ ಶಾಸಕ ರಾಮದಾಸ್, ಜಿಲ್ಲಾ ಬ್ರಾಹ್ಮಣರ ಸಂಘದ ಅಧ್ಯಕ್ಷ ಡಿಟಿ ಪ್ರಕಾಶ್ ಸೇರಿದಂತೆ ಹಲವರು ಮೈಸೂರಿನಲ್ಲಿ ಚಾತುರ್ಮಾಸ ಪೂಜೆ ನಡೆಸಲು ಆಹ್ವಾನಿಸಿದ್ದರು. ಈಗ ಅತ್ಯಾಚಾರದ ವಿಷಯದಲ್ಲಿ ಸಿಕ್ಕು ಅವರೆಲ್ಲರ ನಂಬಿಕೆಗೂ ಸ್ವಾಮೀಜಿ ದ್ರೋಹ ಬಗೆದಿದ್ದಾರೆ.
ಬಟ್ಟೆ ಬಿಚ್ಚಿ ಬೆಂಕಿಗೆ ಹಾಕಿದ್ದ
ಪತ್ರಕರ್ತ ಬೋರೆ ಮನೆಗೆ ತಡರಾತ್ರಿ ಬಂದ ಸ್ವಾಮೀಜಿ ಬಾಗಿಲು ತಟ್ಟಿದ್ದಾನೆ. ಪತಿ ಬಂದಿರಬೇಕು ಎಂದು ಬಾಗಿಲು ತೆಗೆದಾಗ ಕಂಡಿದ್ದು ಸ್ವಾಮೀಜಿ ಹಾಗೂ ಅವನ ಪಟಾಲಂ.
ಸ್ವಾಮೀಜಿಗೆ ಸಹಕರಿಸುವಂತೆ ಪತಿ ಹೇಳಿದ್ದರಿಂದ ಜತೆಗಿದ್ದ ಅವರ ಪತ್ನಿಯನ್ನು ತಬ್ಬಿಕೊಳ್ಳಲು ಸ್ವಾಮೀಜಿ ಯತ್ನಿಸಿದ. ಬಿಡಿಸಿಕೊಂಡಾಗ ಕೋಪಗೊಂಡ ಸ್ವಾಮೀಜಿ ಆಕೆಯ ಬಟ್ಟೆ ಬಿಚ್ಚಿ ಬೆಂಕಿಗೆ ಹಾಕಿದ್ದ. ಚಾಕು ತೋರಿಸಿ ಕೊಲ್ಲುವುದಾಗಿಯೂ ಹೆದರಿಸಿದ. ದರದರನೆ ಕಾರಿನೊಳಗೆ ಎಳೆದುಕೊಂಡು ತನ್ನ ತೊಡೆ ಮೇಲೆ ಕುಳಿತುಕೊಳ್ಳುವಂತೆ ಹೇಳಿದ. ಅದಕ್ಕೆ ಒಪ್ಪದಿದ್ದಾಗ ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಎಂದು ಸಂತ್ರಸ್ತ ಮಹಿಳೆಯು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

- ಪುರಂದರ್ ಲೋಕಿಕೆರೆ
ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.
ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.
100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.
ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.
ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.
ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.
ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ5 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ1 day ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ4 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ18 hours ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ