ದಿನದ ಸುದ್ದಿ
ರೇಪಿಸ್ಟ್ ಸ್ವಾಮೀಜಿ ಮಠಕ್ಕೆ ಆಪ್ತೆ ಜತೆ ಬಂದಿದ್ರಾ ಮಾಜಿ ಸಿಎಂ?
ಸುದ್ದಿದಿನ ಡೆಸ್ಕ್: ಅತ್ಯಾಚಾರ ಆರೋಪ ಎದುರಿಸುತ್ತಿರುವ ಪಾಂಡವಪುರದ ಚಂದ್ರೆ ಗ್ರಾಮದ ಸಮೀಪವಿರುವ ಶ್ರೀ ಕ್ಷೇತ್ರ ಮಹಾಕಾಳಿ ಚಕ್ರೇಶ್ವರಿ ತ್ರಿಧಾಮ ಮಠದ ವಿದ್ಯಾಹಂಸ ಭಾರತೀ ಸ್ವಾಮೀಜಿ ಈಗ ಮಾತನಾಡುವರ ಬಾಯಲ್ಲಿ ಆಹಾರ ವಾಗಿದ್ದಾರೆ.
ಒಂದು ಪ್ರಭಾವಿ ಸಮುದಾಯಕ್ಕೆ ಸೇರಿದ ಕಾರಣ ಈ ಸುದ್ದಿ ಬಹುತೇಕ ಪತ್ರಿಕೆಗಳು ಹಾಗೂ ಮಾಧ್ಯಮಗಳಲ್ಲಿ ವರದಿಯಾಗುತ್ತಿಲ್ಲ.
ಚಂದ್ರೆ ಗ್ರಾಮದ ಸುಮರು 50 ಎಕರೆ ಪ್ರದೇಶದಲ್ಲಿ ಮಠ ಕಟ್ಟಿಕೊಂಡು ತನ್ನದೇ ಸಾಮ್ರಾಜ್ಯ ನಡೆಸುತ್ತಿರುವ ಈ ಸ್ವಾಮೀಜಿ ಸನ್ನಿಧಾನಕ್ಕೆ ಮಾಜಿ ಮುಖ್ಯಮಂತ್ರಿಯೊಬ್ಬರು ಹಾಗೂ ಅವರಿಗೆ ಆಪ್ತರಾಗಿದ್ದ ಸಂಸದೆಯೊಬ್ಬರು ತಡರಾತ್ರಿಯಲ್ಲಿ ಭೇಟಿ ನೀಡುತ್ತಿದ್ದರು ಎಂದು ಊರಿನವರು ಹೇಳುತ್ತಿದ್ದಾರೆ. ಧಾರಾವಾಹಿ ನಟಿಯರು, ಸಿನಿಮಾ ನಟಿಯರು, ಪತ್ರಕರ್ತರೂ ಕೂಡ ಭೇಟಿ ನೀಡುತ್ತಲೇ ಇರುತ್ತಾರೆ. ಮಾಧ್ಯಮಗಳು ಹಾಗೂ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಮಠಕ್ಕೆ ನಾಯಿಗಳೇ ಕಾವಲುಗಾರರು ಎಂದು ಚಂದ್ರ ಗ್ರಾಮದ ಜನ ಹೇಳುತ್ತಾರೆ.
ಮೈಸೂರಿನ ಪತ್ರಕರ್ತ ರಾಜೇಶ್ ಬೋರೆ ಎಂಬುವರೇ ತಮ್ಮ ಪತ್ನಿ ಮೇಲೆ ಸ್ವಾಮೀಜಿ ಅತ್ಯಾಚಾರ ಎಸಗಲು ಕುಮ್ಮಕ್ಕು ನೀಡಿದರು ಎಂದು ತಿಳಿದುಬಂದಿದೆ. ಇಷ್ಟೆಲ್ಲ ತನ್ನ ಕಣ್ಮುಂದೆಯೇ ನಡೆಯುತ್ತಿದ್ದರೂ, ಸುಮ್ಮನಿದ್ದ ಬೋರೆ ಈ ಸ್ವಾಮೀಜಿಯ ಪರಮ ಭಕ್ತ. ತನಗಿದ್ದ ವೈವಾಹಿಕ ಸಮಸ್ಯೆ ಹಾಗೂ ಹಣಕಾಸಿನ ತೊಂದರೆ ಸ್ವಾಮೀಜಿ ಪೂಜೆಯಿಂದ ಸರಿಹೋಗುತ್ತದೆ ಎಂದು ಈತ ನಂಬಿದ್ದನಂತೆ.
ಅಂದಹಾಗೆ ವಿದ್ಯಾಹಂಸ ಸ್ವಾಮೀಜಿಯ ಮೂಲ ಹೆಸರು ರಘುರಾಂ ಭಟ್. ಚಿತ್ರದುರ್ಗದ ರಂಗಯ್ಯನ ಬಾಗಿಲು ಬಳಿ ಇರುವ ವಾಸವಿ ಶಾಲೆ ಹತ್ತಿರ ಮನೆ. ಅಪ್ಪ ಪೊಲೀಸ್. ಕುಡಿತದ ದಾಸನಾಗಿದ್ದ ಅಪ್ಪ ತೀರಿಹೋದ ನಂತರ ದೊಡ್ಡಣ್ಣನಿಗೆ ಕೆಲಸ ಸಿಕ್ಕಿತು. ಎರಡನೇಯವ ರಘುರಾಂ ಆಧ್ಯಾತ್ಮದ ದಾರಿ ಹಿಡಿದು ಉಡುಪಿಯ ಪಾಲುಮಾರು ಮಠ ಸೇರಿದ. ಅಲ್ಲಿಂದ ಹೊರಬಂದು ತಾನೇ ಒಂದು ಮಠ ಸ್ಥಾಪಿಸುವ ನಿರ್ಧಾರಕ್ಕೆ ಬಂದ. ಮೈಸೂರಿನಲ್ಲಿ ಒಂದು ಹುಡುಗಿಯನ್ನು ಮದುವೆಯಾಗಿ ಇಬ್ಬರು ಮಕ್ಕಳನ್ನೂ ಹೊಂದಿರುವ ಈತ, ಆಕೆಯಿಂದ ವಿಚ್ಛೇದನ ಪಡೆದು ಪ್ರಭಾವಿಗಳ ನೆರವಿನಿಂದ ಪಾಂಡವಪುರದ ಚಂದ್ರೆ ಗ್ರಾಮದ ಬಳಿ ಮಠ ಕಟ್ಟಿದ ಎಂದು ತಿಳಿದುಬಂದಿದೆ.
ಹೊಡೆದಿದ್ದರು
ಚಿತ್ರದುರ್ಗದಲ್ಲಿರುವಾಗಲೇ ಈತ ಪೂಜೆ ಹೆಸರಿನಲ್ಲಿ ಅರ್ಧ ರಾತ್ರಿಯಲ್ಲಿ ಭಕ್ತರ ಮನೆ ಬಾಗಿಲು ತಟ್ಟುತ್ತಿದ್ದ. ಹೀಗೆ ಭಕ್ತರೊಬ್ಬರ ಮನೆ ಬಾಗಿಲು ತಟ್ಟಿ ಅವರ ಕೈ ಹಿಡಿದು ಎಳೆದ ಕಾರಣ ಆತನಿಗೆ ಹೊಡೆದು ಹೊರಕಳಿಸಲಾಗಿತ್ತು ಎನ್ನಲಾಗಿದೆ.
ಕೈ ನಾಯಕನ ಪತ್ನಿ ಜತೆ ಅಸಭ್ಯ ವರ್ತನೆ
ಮೈಸೂರಿನಲ್ಲಿ ಚಾರ್ತುರ್ಮಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿ ಕಾಂಗ್ರೆಸ್ ನಾಯಕರೊಬ್ಬರ ಮನೆಯಲ್ಲಿ ಪೂಜೆ ಮಾಡುವ ನೆಪದಲ್ಲಿ ಅವರ ಪತ್ನಿ ಜತೆ ಅನುಚಿತವಾಗಿ ವರ್ತಿಸಿದ್ದ ಎನ್ನಲಾಗಿದೆ. ನನ್ನನ್ನು ತಬ್ಬಿಕೊಂಡರೆ ನಿನಗೆ ಶಕ್ತಿ ಬರುತ್ತದೆ ಎಂದು ಹೇಳಿದ್ದ ಸ್ವಾಮೀಜಿಗೆ ಬೈದು ಹೊರಗೆ ಕಳುಹಿಸಿದ್ದರು ಎನ್ನಲಾಗಿದೆ.
ಬೇಕಾದಾಗ ಲಿಂಗ ಬದಲಾಯಿಸುತ್ತಾನಂತೆ
ವಿದ್ಯಾಹಂಸ ಸ್ವಾಮೀಜಿ ತನಗೆ ಬೇಕಾದಾಗ ಲಿಂಗ ಬದಲಾಯಿಸಿ ಗಂಡು/ಹೆಣ್ಣಿನ ಅವತಾರ ತಾಳುತ್ತಾನಂತೆ. ಹೆಣ್ಣಾದಾಗ ಆತನ ದೇಹದ ಆಕಾರಗಳೂ ಬದಲಾಗುತ್ತವೆಯಂತೆ. ಅಲ್ಲದೇ ಹೆಣ್ಣನಂತೆ ನಡೆಯುವುದು, ಮಾತನಾಡುವುದನ್ನೂ ಮಾಡುತ್ತಾನಂತೆ. ಹಾಗಾಗಿ ಅರ್ಧ ನಾರೀಶ್ವರ ರೂಪ ಸ್ವಾಮೀಜಿ ಎಂದೂ ಇವನನ್ನು ಕರೆಯುತ್ತಾರೆ.
ಶಾಸಕ ರಾಮ್ದಾಸ್ಗೂ ನಂಬಿಕೆ ದ್ರೋಹ
ಈ ಸ್ವಾಮೀಜಿಯಲ್ಲಿ ದೈವಿಕ ಶಕ್ತಿ ಇದೆ ಎಂದು ನಂಬಿ ಶಾಸಕ ರಾಮದಾಸ್, ಜಿಲ್ಲಾ ಬ್ರಾಹ್ಮಣರ ಸಂಘದ ಅಧ್ಯಕ್ಷ ಡಿಟಿ ಪ್ರಕಾಶ್ ಸೇರಿದಂತೆ ಹಲವರು ಮೈಸೂರಿನಲ್ಲಿ ಚಾತುರ್ಮಾಸ ಪೂಜೆ ನಡೆಸಲು ಆಹ್ವಾನಿಸಿದ್ದರು. ಈಗ ಅತ್ಯಾಚಾರದ ವಿಷಯದಲ್ಲಿ ಸಿಕ್ಕು ಅವರೆಲ್ಲರ ನಂಬಿಕೆಗೂ ಸ್ವಾಮೀಜಿ ದ್ರೋಹ ಬಗೆದಿದ್ದಾರೆ.
ಬಟ್ಟೆ ಬಿಚ್ಚಿ ಬೆಂಕಿಗೆ ಹಾಕಿದ್ದ
ಪತ್ರಕರ್ತ ಬೋರೆ ಮನೆಗೆ ತಡರಾತ್ರಿ ಬಂದ ಸ್ವಾಮೀಜಿ ಬಾಗಿಲು ತಟ್ಟಿದ್ದಾನೆ. ಪತಿ ಬಂದಿರಬೇಕು ಎಂದು ಬಾಗಿಲು ತೆಗೆದಾಗ ಕಂಡಿದ್ದು ಸ್ವಾಮೀಜಿ ಹಾಗೂ ಅವನ ಪಟಾಲಂ.
ಸ್ವಾಮೀಜಿಗೆ ಸಹಕರಿಸುವಂತೆ ಪತಿ ಹೇಳಿದ್ದರಿಂದ ಜತೆಗಿದ್ದ ಅವರ ಪತ್ನಿಯನ್ನು ತಬ್ಬಿಕೊಳ್ಳಲು ಸ್ವಾಮೀಜಿ ಯತ್ನಿಸಿದ. ಬಿಡಿಸಿಕೊಂಡಾಗ ಕೋಪಗೊಂಡ ಸ್ವಾಮೀಜಿ ಆಕೆಯ ಬಟ್ಟೆ ಬಿಚ್ಚಿ ಬೆಂಕಿಗೆ ಹಾಕಿದ್ದ. ಚಾಕು ತೋರಿಸಿ ಕೊಲ್ಲುವುದಾಗಿಯೂ ಹೆದರಿಸಿದ. ದರದರನೆ ಕಾರಿನೊಳಗೆ ಎಳೆದುಕೊಂಡು ತನ್ನ ತೊಡೆ ಮೇಲೆ ಕುಳಿತುಕೊಳ್ಳುವಂತೆ ಹೇಳಿದ. ಅದಕ್ಕೆ ಒಪ್ಪದಿದ್ದಾಗ ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಎಂದು ಸಂತ್ರಸ್ತ ಮಹಿಳೆಯು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದಿನದ ಸುದ್ದಿ
ಆಯುರ್ವೇದ ಆರೋಗ್ಯಕರ ಜೀವನ ಶೈಲಿ
ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.
ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.
ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.
ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.
ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್ನ ಜಾಮ್ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


