ದಿನದ ಸುದ್ದಿ

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

Published

on

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.

ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.

ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version