ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243