ದಿನದ ಸುದ್ದಿ
ಪಡಿತರ ಚೀಟಿದಾರರು ಕೂಡಲೇ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸಿಕೊಳ್ಳಿ
ಸುದ್ದಿದಿನ,ದಾವಣಗೆರೆ : ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ಕೂಡಲೇ ಭೇಟಿ ನೀಡಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಾದ್ಯಂತ ಪಡಿತರ ಚೀಟಿದಾರರ ಸೌಲಭ್ಯಕ್ಕಾಗಿ ಸರ್ಕಾರವು ಇ-ಕೆವೈಸಿ(ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್) ಎಂಬ ಯೋಜನೆಯನ್ನು ಜಾರಿಗೊಳಿಸಿದ್ದು, ಅದರಂತೆ ಈಗಾಗಲೇ ಕೆಲವು ಪಡಿತರ ಚೀಟಿದಾರರರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಕಾರ್ಯವನ್ನು ಪೂರ್ಣಗೊಳಿಸಿರುತ್ತಾರೆ.
ಇದನ್ನೂ ಓದಿ | ತಾಂಡಾ ರೋಜ್ಗಾರ್ ಮಿತ್ರ : ಅರ್ಜಿ ಆಹ್ವಾನ
ಸರ್ಕಾರವು ಪುನಃ ಈ ಯೋಜನೆಗೆ ಚಾಲನೆ ನೀಡಿರುವುದರಿಂದ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಕೂಡಲೇ ಭೇಟಿ ನೀಡಿ (ಪ್ರತಿ ಮಾಹೆಯ 1ನೇ ತಾರೀಖಿನಿಂದ 10ನೇ ತಾರೀಖಿನೊಳಗೆ ಮತ್ತು 25ನೇ ತಾರೀಖಿನಿಂದ 30ನೇ ತಾರೀಖೀನೊಳಗಾಗಿ) ತಮ್ಮ ಇ-ಕೆವೈಸಿ ಆಧಾರ್ ಬಯೋದೃಢೀಕರಣ ಕಾರ್ಯವನ್ನು ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243