ದಿನದ ಸುದ್ದಿ
ಎಟಿಎಂನಲ್ಲಿ ಇಲಿಗಳು ಕಚ್ಚಿ ಚೂರು ಚೂರು ಮಾಡಿದ್ದು 12.38 ಲಕ್ಷರೂ..!
ಸುದ್ದಿದಿನ, ಅಸ್ಸಾಂ (ಪಿಟಿಐ) : ಎಟಿಎಂ ನಲ್ಲಿ ಇಲಿಗಳು ಕಚ್ಚಿ ಚೂರು ಚೂರು ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಕೆಲವು ದಿನಗಳ ಹಿಂದೆ ವೈರಲ್ ಆಗಿದ್ದವು. ಬೆಂಗಳೂರಿನ ಮತ್ತಿಕೆರೆಯ ಎಟಿಎಂನಲ್ಲಿ ನೋಟುಗಳು ಚೂರುಚೂರು ಆಗಿರುವುದಾಗಿ ನೆಟ್ಟಿಗರು ತಮಾಷೆಯಾಡಿದ್ದರು.
ಆದರೆ ಇಲಿಗಳು ಚೂರು ಚೂರಾಗಿ ಮಾಡಿರುವ ನೋಟುಗಳು ಗಹವಾಟಿಯ ತಿನ್ಸುಕಿಯಾದ ಎಟಿಟಂ ನಲ್ಲಿ. ಬರೋಬ್ಬರಿ 12.38ಲಕ್ಷ ಮೌಲ್ಯದ ನೋಟುಗಳು ಇಲಿಗಳದಾಳಿಗೆ ಚೂರುಚೂರಾಗಿವೆ.
ಎಟಿಎಂ ನಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದರಿಂದ ಮೂರುವಾರ ಎಟಿಎಂ ಕಾರ್ಯನಿರ್ವಹಿಸುತ್ತಿರಲಿಲ್ಲ. ಈ ಎಟಿಎಂಅನ್ನು ಸರಿಮಾಡಲು ಕಳೆದ ಗುರುವಾರ ತಂತ್ರಜ್ಞರು ಬಂದಾಗ ಅವರಿಗೆ ಅಚ್ಚರಿ ಉಂಟಾಗಿತ್ತು. 2000 -500 ರ ನೋಟುಗಳು ಚೂರು ಚೂರಾಗಿ ಬಿದ್ದಿದ್ದವು. ಆದರೆ, ಇನ್ನುಳಿದ 17.10 ಲಕ್ಷಕ್ಕೆ ಯಾವುದೇ ಹಾನಿಯಾಗಿರಲಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದಾಗ ಬೇರೆ ಯಾವುದೇ ರೀತಿಯ ದುಷ್ಕೃತ್ಯ ಕಂಡು ಬಂದಿಲ್ಲದ ಕಾರಣ,ಇಲಿಗಳೇ ಈ ಕೃತ್ಯಎಸಗಿರುವುದಾಗಿ
ಧೃಢಪಡಿಸಿಕೊಂಡಿದ್ದಾರೆ.
ಭಾರತೀಯ ಸ್ಟೇಟ್ ಬ್ಯಾಂಕ್ ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಆದೇಶಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಎಸ್ ಬಿ ಐ ಹಾಗೂ ಇತರರು ಟ್ವೀಟ್ ಮಾಡಿದ್ದಾರೆ.
Technicians who arrived to fix a malfunctioning #ATM in #India got a shock when they opened it up.
Money worth more than 1.2m rupees had been shredded and the culprits are rats who entered through a hole for wiring pic.twitter.com/PCTnMpBxzC— Noorani Tejani (@NooraniTejani) June 20, 2018
Really Size doesn’t matter!! What a rat this is! Rat-bitten bank notes worth Rs 12 lakh 38 thousand. Torn notes and dead rat found inside ATM in Tinsukia Assam. Rat found dead before little one could bite remaining Rs 17 lakh 10 thousand. pic.twitter.com/3Omns7gAZH
— Nandan Pratim Sharma Bordoloi 🇮🇳 (@NANDANPRATIM) June 18, 2018
Yes! The rat did a fine job of making a very expensive nest worth 12 lakhs pic.twitter.com/SglTeV1Xum
— Karma Paljor (@Karma_Paljor) June 18, 2018
This wouldn’t have happened if they used the new revolutionary computer $crypto currency money #blockchain #bitcoin 😎😎 take that atheists (wubalubadubdub): Rats chew up cash worth $18,000 in an Indian ATM https://t.co/vqFbrEFVLV
— çrÿptø✟®ā℗ (@CryptoTrap) June 19, 2018
Make sure to not rely on ATMS when travelling 😆 #atm #india #rat #travel #money https://t.co/8E7ut5Wn6S
— Female Abroad (@female_abroad) June 20, 2018
Imagine you stored close to $20,000 of your money in an atm or a safe and RATS ate it. I’d boycott Ratatouille for the rest of my life. There’d also never be another Stuart Little just sayin https://t.co/fiQ1Ql5Crh
— Thomas Shelby (@XDannyxxBoyX) June 19, 2018
ಸುದ್ದಿದಿನ.ಕಾಂ|ವಾಟ್ಸಾಪ್|9986715410

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್
ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ
ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಿಶಿಷ್ಟ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಮನೆಮಾತಾಗಿದ್ದಾರೆ.
ಹೌದು ಚನ್ನಗಿರಿ ತಾಲ್ಲೂಕಿನ ತ್ಯಾವಣಿಗೆ ಗ್ರಾಮದಲ್ಲಿರುವ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರದ ಚೇತನ್ ಕುಮಾರ್ ವಿಶಿಷ್ಟ ರೀತಿಯಲ್ಲಿ ತಮ್ಮ ಕಾಯಕ ವೃತ್ತಿಯನ್ನು ನಿರ್ವಹಿಸುವ ಜೊತೆಗೆ ಸಾಂಸ್ಕೃತಿಕ ರಾಯಭಾರಿಯಂತೆ ಕಾರ್ಯ ನಿರ್ವಹಿಸುತ್ತಿರುವುದು ಮನುಷ್ಯತ್ವದ ಅಚಲ ನಂಬಿಕೆಯನ್ನ ಪ್ರತಿಬಿಂಬಿಸುತ್ತದೆ.
ಇಲ್ಲಿನ ವೈವಿಧ್ಯಮಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಗೆ ಸಂಭ್ರಮ ಮತ್ತು ಸಂಸ್ಕಾರವನ್ನು ಬೆಳೆಸುತ್ತಿವೆ ಎನ್ನುವುದರಲ್ಲಿ ಎರಡು ಮಾತಿಲ್ಲ.
ಜೂನ್ 27,2022ರಲ್ಲಿ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ಶುರು ಮಾಡಿದ ಇವರು ಕೇವಲ ಕಂಪ್ಯೂಟರ್ ಕಲಿಕೆ ಮಾತ್ರವಲ್ಲದೆ ಮಕ್ಕಳಿಗೆ ಬೇರೆ ಬೇರೆಯ ವಿಷಯಗಳ ಬಗ್ಗೆ ಅರಿವು ನೀಡಬೇಕು ಎಂದು ತೀರ್ಮಾನ ಮಾಡಿ ತಮ್ಮದೇ ಶೈಲಿಯಲ್ಲಿ ವಿಭಿನ್ನ ಪ್ರಯತ್ನ ಮಾಡುತ್ತಿದ್ದಾರೆ.
ಜೀವನದ ಜಂಜಾಟದಲ್ಲಿ ಮನೆಯ ಕಷ್ಟ ಜೀವನವನ್ನ ಅರಿತ ಮಕ್ಕಳು ಗೊಂದಲಕ್ಕೆ ಈಡಾಗುತ್ತಾರೆ ಎಂಬುದನ್ನು ಮನಗಂಡ ಇವರು ಮಕ್ಕಳ ಒತ್ತಡವನ್ನು ಕಡಿಮೆ ಮಾಡಲು ಮತ್ತು ವಿದ್ಯಾರ್ಥಿಗಳಲ್ಲಿ ಹಾಸ್ಯ ಪ್ರಜ್ಞೆ ಹಾಗೂ ಅಭಿವ್ಯಕ್ತಿ ಕಲೆ ಬೆಳೆಸಲು ಈ ವಿಶಿಷ್ಟ ಕಾರ್ಯಕ್ರಮವನ್ನ ಪ್ರತಿ ಶುಕ್ರವಾರ ಹಮ್ಮಿಕೊಂಡು ಮಕ್ಕಳನ್ನ ನಕ್ಕು ನಗಿಸುವ ಮೂಲಕ ಕಲಿಕೆಗೆ ಸ್ಫೂರ್ತಿ ನೀಡುತ್ತಿದ್ದಾರೆ.
ಆಟೋಟಗಳು
ಬೆಳೆವ ಮಕ್ಕಳು ದೇಶದ ಆಸ್ತಿ.. ಆ ಮಕ್ಕಳು ದೈಹಿಕ ಮತ್ತು ಮಾನಸಿಕ ಸದೃಢರಾಗಿರಬೇಕು ಆಗಲೇ ಕಲಿಕೆಗೆ ಸ್ಫೂರ್ತಿ ಸಿಗುತ್ತೆ ಎನ್ನುವ ಕಾರಣಕ್ಕೆ ಮಕ್ಕಳ ಜೊತೆಯಲ್ಲಿ ಮಕ್ಕಳಾಗಿ ಕೆಲವು ಆಟಗಳನ್ನ ಆಡಿಸುವ ಪರಿಪಾಠವನ್ನು ಮುಂದುವರಿಸುತ್ತ ಬಂದಿದ್ದಾರೆ.
ಒಂದು ದಿನದ ಪಿಕ್ನಿಕ್
ಸದರಿ ತರಬೇತಿ ಕೇಂದ್ರದಲ್ಲಿ ಬರುವ ವಿದ್ಯಾರ್ಥಿಗಳಿಗೆ ವರ್ಷಕ್ಕೊಮ್ಮೆ ಪ್ರವಾಸಕ್ಕೆ ಕರೆದುಕೊಂಡು ಹೋಗಿ ನಕ್ಕು ನಲಿಸಿ ಪ್ರವಾಸಿ ತಾಣಗಳ ಪರಿಚಯ ಮಾಡಿಕೊಂಡು ಬರುವ ವಾಡಿಕೆ ಮುಂದುವರೆಯುತ್ತಲೇ ಇದೆ. ಇದರ ಮೂಲಕ ವಿದ್ಯಾರ್ಥಿಗಳಲ್ಲಿ ಸ್ನೇಹಭಾವ ಮತ್ತು ಹೊರಜಗತ್ತಿನ ಅರಿವು ಮೂಡಿಸಲು ಸಹಕಾರಿಯಾಗಿದ್ದಾರೆ.
ಸಾಮೂಹಿಕ ಭೋಜನ
ಇತ್ತೀಚಿಗೆ ರಾಜಕೀಯ ವ್ಯವಸ್ಥೆಯಲ್ಲಿ ಬಡಜನರ ಮನೆಯಲ್ಲಿ ಊಟ ಮಾಡುವುದೇ ದೊಡ್ಡ ಸುದ್ದಿಯನ್ನಾಗಿ ಬಿಂಬಿಸುವ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಬಡತನ ಸಿರಿತನ ಹಾಗೂ ಜಾತಿ-ಭೇದದ ಅರಿವು ಇರದೇ ಎಲ್ಲರು ಎಲ್ಲರನ್ನು ಪ್ರೀತಿಸಬೇಕು, ಎಲ್ಲರೊಟ್ಟಿಗೆ ಸಾಮೂಹಿಕವಾಗಿ ಒಬ್ಬರ ಮನೆಯಲ್ಲಿನ ಊಟ ಮತ್ತೊಬ್ಬರು ಮಾಡುವ ಮೂಲಕ ಬೇಧ ಭಾವ ಅಳಿಸುವ ಕಾರ್ಯಕ್ಕೆ ಮುನ್ನಡಿ ಬರೆದಿದ್ದಾರೆ.
ಜನ್ಮ ದಿನಾಚರಣೆ
ಈ ತರಬೇತಿ ಕೇಂದ್ರಕ್ಕೆ ಬರುವ ಮಕ್ಕಳ ಜನ್ಮ ದಿನಾಚರಣೆ ಮಾಡಿ ಶುಭ ಹಾರೈಸಿ ಸಿಹಿ ಹಂಚಿ ಸಂಭ್ರಮ ಪಡುತ್ತಾರೆ.
ಪೂಜೆ ಪುನಸ್ಕಾರ
ಇನ್ನು ಮಕ್ಕಳಲ್ಲಿ ಸಂಪ್ರದಾಯ, ದೇಶದ ಮೇಲೆ ಅಭಿಮಾನ, ದೇವರ ಮೇಲೆ ನಂಬಿಕೆ, ಉತ್ತಮ ಕೆಲಸದ ಬಗ್ಗೆ ಸಾರ್ಥಕತೆ ಭಾವ ಬರಬೇಕು ಎಂಬ ಕಾರಣಕ್ಕೆ ಪೂಜೆ ಪುನಸ್ಕಾರ, ಮಹಾನ್ ವ್ಯಕ್ತಿಗಳ ಜಯಂತಿ ಕಾರ್ಯಕ್ರಮಗಳನ್ನು ಆಚರಿಸಿ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವುದು ಸ್ವಾಗತರ್ಹ.
ಆರೋಗ್ಯ ಶಿಬಿರ ಆಯೋಜನೆ
ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ತಮ್ಮ ತರಬೇತಿ ಕೇಂದ್ರದಿಂದ ಆರೋಗ್ಯ ಶಿಬಿರಗಳನ್ನು ಆಯೋಜಿಸುವುದು ಅತ್ಯಂತ ಮೆಚ್ಚುವಂತಹ ಕೆಲಸವಾಗಿದೆ.
ಕೌಶಲ್ಯ ಸ್ಪರ್ಧೆ
ಇನ್ನು ಪ್ರತಿವರ್ಷ ತಮ್ಮ ತರಬೇತಿ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಲ್ಲಿ ಸ್ಪರ್ಧೆ ಅರಿವು ಮೂಡಿಸುವ ಸಲುವಾಗಿ ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದ ಸ್ಪರ್ಧೆಗಳನ್ನು ನಡೆಸಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲಾಗುತ್ತದೆ. ಇದರ ಜೊತೆಗೆ ಅತ್ಯುತ್ತಮ ವಿದ್ಯಾರ್ಥಿಗಳಿಗೆ
ಬಹುಮಾನ ವಿತರಿಸುವ ಮೂಲಕ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಐವಿನ್ ತರಬೇತಿ ಕೇಂದ್ರ ಸಾಮಾಜಿಕವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ.
ಬೀಳ್ಕೊಡುಗೆ ಸಮಾರಂಭ
ಇನ್ನೂ ಕೋರ್ಸ್ ಮುಗಿಸಿ ಹೋಗುವ ವಿದ್ಯಾರ್ಥಿಗಳಿಗೆ ಗೌರವಪೂರ್ವಕವಾಗಿ ವಿದಾಯ ಹೇಳುವ ಮೂಲಕ ಗುರುವಿನ ಮತ್ತು ಸಂಸ್ಥೆಯ ಬಾಂಧವ್ಯವನ್ನು ಗಟ್ಟಿಗೊಳಿಸಲಾಗುತ್ತದೆ.
300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ
ಜೂನ್ 27, 2022ರಲ್ಲಿ ಆರಂಭವಾದ ಈ ತರಬೇತಿ ಕೇಂದ್ರದಲ್ಲಿ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಶಿಬಿರಾರ್ಥಿಗಳು ತರಬೇತಿ ಪಡೆದಿದ್ದಾರೆ. ಒಂದು ಬ್ಯಾಚ್ ಗೆ 8 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ.
ನಮಗೆ ಕಂಪ್ಯೂಟರ್ ಕಲಿಕೆಯೊಂದಿಗೆ ಉತ್ತಮ ವಿಚಾರಗಳನ್ನು ಇಲ್ಲಿ ಕಲಿಸಲಾಗುತ್ತಿದೆ. ಪ್ರತಿ ವಾರವು ಒಂದೊಂದು ವಿಭಿನ್ನ ಪ್ರಯತ್ನ ಮಾಡುವ ಮೂಲಕ ಚೇತನ್ ಸರ್ ಹೊಸ ವಿಚಾರಗಳನ್ನು ಕಲಿಸುತ್ತಾರೆ. ನಮ್ಮಲ್ಲಿರುವ ಭಯ ಹೊರಗಡೆ ತಗೆಯೋಕೆ ತುಂಬಾ ಪ್ರಯತ್ನ ಪಡ್ತಾರೆ.. ಅವರ ಆದರ್ಶ ಗುಣಗಳೇ ನಮಗೆ ನಮ್ಮ ಸಾಧನೆಯ ಮೆಟ್ಟಿಲುಗಳಾಗಬೇಕು ಅದಕ್ಕಾಗಿ ನಮ್ಮ ಪ್ರಯತ್ನ ಇದ್ದೇ ಇದೆ.
~ಶಿಬಿರಾರ್ಥಿಗಳು
ಗ್ರಾಮೀಣ ಭಾಗದ ಒಂದು ಕಂಪ್ಯೂಟರ್ ಸೆಂಟರ್ ಇಷ್ಟೊಂದು ಸೃಜನಶೀಲ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದು ಅಭಿನಂದನೀಯ. ಇದು ಮಕ್ಕಳಲ್ಲಿ ಕೇವಲ ಡಿಜಿಟಲ್ ಕೌಶಲ್ಯವನ್ನಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿಯನ್ನು ಕೂಡ ಬೆಳೆಸುತ್ತದೆ.
ತ್ಯಾವಣಿಗೆಯ ಐವಿನ್ ಕಂಪ್ಯೂಟರ್ ಸೆಂಟರ್ನ ಈ ಮಾದರಿ ಕಾರ್ಯಕ್ರಮಗಳು ಸುತ್ತಮುತ್ತಲಿನ ಹಳ್ಳಿಗಳ ವಿದ್ಯಾರ್ಥಿಗಳಿಗೆ ವರದಾನವಾಗಿದೆ.
ತ್ಯಾವಣಿಗೆ, ಅರೇಹಳ್ಳಿ -ಕದರನಹಳ್ಳಿ, ಕಬ್ಬಳ, ಕರೆಕಟ್ಟೆ, ಮತ್ತಿ, ಬೆಳಲಗೆರೆ, ಮಿಯಾಪುರ ಸೇರಿದಂತೆ ಅಕ್ಕಪಕ್ಕ ಗ್ರಾಮದ ಹಲವಾರು ಮಕ್ಕಳು ಈ ತರಬೇತಿ ಕೇಂದ್ರಕ್ಕೆ ಬಂದು ತರಬೇತಿ ಪಡೆದಿದ್ದಾರೆ.
ಸಮಾಜದಲ್ಲಿ ಆದಷ್ಟು ಒಳ್ಳೆಯ ಕೆಲಸಗಳನ್ನ ಮಾಡಿ ಮಕ್ಕಳಿಗೆ ಮಾದರಿ ಯಾಗಿರಬೇಕು. ಈ ತರಬೇತಿ ಕೇಂದ್ರ ಆರಂಭಕ್ಕೆ ತುಂಬಾ ಕಷ್ಟಪಟ್ಟಿದ್ದೇನೆ. ನಾವು ಪಟ್ಟ ಕಷ್ಟ ಮುಂದಿನ ಪೀಳಿಗೆ ಪಡಬಾರದು. ಕಲಿಕೆಗೂ ಕಷ್ಟಪಡಬೇಕಾದ ಪರಿಸ್ಥಿತಿ ಇದೆ. ಎಷ್ಟೋ ಮಕ್ಕಳಿಗೆ ನಾವು ಹೇಳಿದಷ್ಟು ಹಣ ಕೊಡೋಕೆ ಆಗಲ್ಲ ಹಾಗಂತ ಅವರನ್ನು ಕಲಿಸದೇ ಕಳಿಸಲ್ಲ.. ಹಣದಲ್ಲಿ ರಿಯಾಯ್ತಿ ನೀಡಿ ಅವರನ್ನು ಕಲಿಸೋಕೆ ಹುರಿದುಂಬಿಸುತ್ತೇವೆ ಎನ್ನುತ್ತಾರೆ ಚೇತನ್ ಕುಮಾರ್.
ಇನ್ನು ಟ್ರೈನರ್ ಗಾಯತ್ರಿ ಅವರು ಕೂಡ ಇಲ್ಲಿ ಬರುವ ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿ ಕಂಪ್ಯೂಟರ್ ಕಲಿಸುತ್ತಾರೆ. ಹಾಗೆಯೇ ಈ ಹಿಂದೆ ಇದ್ದ ವಿನುತಾ ಎಂಬ ಟ್ರೈನರ್ ಅವರ ಶ್ರಮ ತುಂಬಾ ಇದೆ ಎನ್ನುತ್ತಾರೆ ಚೇತನ್ ಕುಮಾರ್. ಒಟ್ಟಾರೆ ವಿಭಿನ್ನ ರೀತಿಯಲ್ಲಿ ಕಂಪ್ಯೂಟರ್ ಕಲಿಕೆ ಜೊತೆಗೆ ಬೇರೆ ಬೇರೆ ವಿಷಯಗಳ ಬಗ್ಗೆ ಅರಿವು ಮೂಡಿಸುವ ಇವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ.
ಸುದ್ದಿದಿನ|ವಾಟ್ಸಾಪ್|9980346243

-
ದಿನದ ಸುದ್ದಿ4 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ6 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
-
ದಿನದ ಸುದ್ದಿ5 days agoನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
-
ಅಂಕಣ2 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ4 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ6 days agoಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ


