Connect with us

ದಿನದ ಸುದ್ದಿ

ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ

Published

on

  • ಮತ್ತೆ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟ: ಬಟ್ಟಲು ಕಣ್ಣಿನ ಚೆಲುವೆ
  • ಮ್ಯಾಂಚೆಸ್ಟರ್‌ ಬೆಡಗಿ ಸಿಕ್ತು ಬಿಗ್‌ ಆಫರ್‌

ವಿಶೇಷ ವರದಿ :ಈಶ್ವರ್‌ ಸಿರಿಗೇರಿ

ಸುದ್ದಿದಿನ ಡೆಸ್ಕ್ : ಮಾತೃ ಆಸೆ ಕೊನೆಗೂ ನನಸು ಮಾಡಿದ ಮ್ಯಾಂಚೆಸ್ಟರ್‌ ಹುಡುಗಿ ಈ ಸಿನಿ ಪಯಣವೇ ಒಂದು ರೀತಿಯ ನಿಂತ ನೀರಲ್ಲ ಎಂಬ ಸಾಕ್ಷಿಗೆ ಮೆಚ್ಚುಗೆ ಪಾತ್ರರಾದ ಬಿಂದುಶ್ರೀ ಅವರು ನೋಡಿದ ಕೂಡಲೇ ಪ್ರಸಿದ್ಧಿ ಎಂಬ ಮಾತು ಸುಳ್ಳಲ್ಲ. ಕಲರ್‌ ಫುಲ್‌ ಪಯಣದಲ್ಲಿ ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಯಶಸ್ಸಿಯಾಗಿ ತಮ್ಮ ಪಾತ್ರವನ್ನು ನಿಭಾಯಿಸಿದ ಈ ಬಟ್ಟಲು ಕಣ್ಣಿನ ಚೆಲುವೆ ಮ್ಯಾಂಚೆಸ್ಟರ್‌ ಸ್ಟಾರ್‌ ಬೆಡಗಿಯಾಗಿ ತಮ್ಮದೇ ಆದ ನೆಲೆಗೆ ಸಾಕ್ಷಿಯಾಗಿದ್ದಾರೆ. ಅದು ಏನೇ ಆಗಲಿ ಬಾಲ್ಯದಲ್ಲಿ ಸಿಕ್ಕ ಹಲವಾರು ಅವಕಾಶಗಳನ್ನು ಬಹಳ ಅದ್ಭತವಾಗಿ ಕಲರ್‌ ಫುಲ್‌ ಪ್ರತಿಭೆಗೆ ಅದರಲ್ಲೂ ಕನ್ನಡದಲ್ಲಿ ಮಿಚ್ಚಿದ್ದು ಕನ್ನಡಿಗರ ಹೆಮ್ಮೆ.

ಪ್ಯಾಶನ್ ನಿಂದ ನಟನಾ ವೃತ್ತಿಗೆ ಪಯಣ

ಪಕ್ಕ ಹಳಿ ಸೊಗಡಿನ ಚಿತ್ರಕ್ಕೆ ಸಿಕ್ತು ಇಷ್ಟು ದಿನಗಳ ನಂತರ ಅದ್ಭತ ಆಫರ್‌ಗಳು, ಈ ಸಾಲುಗಳ ಯಶಸ್ಸು ಬೆನ್ನಿಗೆ ಇದ್ದರು ಸಹ ಒಳ್ಳೆಯ ಚಿತ್ರಕಥೆಗೆ ಏಳಿ ಮಾಡಿಸಿದ ಈ ಸ್ಪೂರಧ್ರೂಪಿ ಚೆಲುವೆ. ಇನ್ನೂ ಅನೇಕ ಪ್ರತಿಭೆಗಳು ಕನ್ನಡದಲ್ಲಿ ಬಂದು ಹೋಗಿದ್ದು ಇತಿಹಾಸವೇ ಆದರೂ ಈ ಸಾಲಿಗೆ ಬಿಂದುಶ್ರೀ ಎಂಬ ನವ ಕಲರ್‌ ಫುಲ್‌ಗೆ ಹಾಗೂ ಹೊಸ ರೀತಿಯ ಪಾತ್ರಗಳನ್ನು ಎದುರು ನೋಡುತ್ತಿದ್ದಾರೆ. ಅಷ್ಟೇ ಅಲ್ಲ, ಒಳ್ಳೆಯ ಪಾತ್ರ, ನಿರ್ಮಾಣ ಸಂಸ್ಥೆಯಲ್ಲಿ ಅವಕಾಶ ಸಿಕ್ಕರೆ ಕೆಲಸ ಮಾಡಲು ತುದಿಗಾಲ ಮೇಲೆ ವೇಟಿಂಗ್‌ ಅಂತ ಹೇಳಬಹುದು.

ಮ್ಯಾಂಚೆಸ್ಟರ್‌ ಬೆಡಗಿಗೆ ಸಿನಿ ಲೋಕದಲ್ಲಿ ಸಂಸ್ಕೃತಿಯೇ ಬಿಂಬ

ಬಿಂದುಶ್ರೀ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ ಹುಡುಗಿ. ಸಿನಿಮಾರಂಗ ಹೊಸದೇನಲ್ಲ. ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದವರು. “ಶ್ರೀರಸ್ತು ಶುಭಮಸ್ತು”, ”ಶಿವಪ್ಪ ನಾಯಕ”,”ಪ್ರೀತ್ಸೋದ್‌ ತಪ್ಪಾ” ಸೇರಿದಂತೆ ಅನೇಕ ರೀತಿಯ ಸುಮಾರು ಮೂವತ್ತು ಸಿನೆಮಾಗಳಲ್ಲಿ ಹೆಚ್ಚಾಗಿ ನಟಿಸಿದ್ದು ಸುಳ್ಳಲ್ಲ. ಬೆಳ್ಳಿತೆರೆಯ ಜತೆಗೆ ಕಿರುತೆರೆಯಲ್ಲೂ ಇವರ ಪಯಣ ಅದ್ಭತ ಅಂತ ಹೇಳಬಹುದು. ಇನ್ನೋಂದು ವಿಚಾರ “ಕಾವ್ಯಾಂಜಲಿ”, “ಗೌತಮಿ” ಮೆಗಾ ಧಾರಾವಾಹಿಗಳಲ್ಲೂ ಬಣ ಹಚ್ಚಿದ್ದಾರೆ. ಬಣದ ಜತೆಗೆ ಅಧ್ಯಯನ ಕೂಡ ಮುಖ್ಯ ಎಂಬ ಕಾರಣಕ್ಕೆ ನಟನೆಯನ್ನು ಮೊಟಕುಗೊಳಿಸಿ, ಓದಿನತ್ತ ಗಮನಹರಿಸಿದ್ದರು ಬಿಂದುಶ್ರೀ. ಇನ್ನು, ಇವರ ತಂದೆ ಸಿವಿಲ್‌ ಎಂಜಿನಿಯರ್.‌ ಅವರ ತಂದೆ ಮಾತಿನ ಪ್ರಕಾರ, ಪದವಿ ಪಡೆದರು. ಅದರಲ್ಲೂ ಅವರದು ಪದವಿಯಲ್ಲಿ ಹದಿನಾರನೇ ರ‍್ಯಾಂಕ್ ಎಂಬುದು ವಿಶೇಷ.

ಬಣ್ಣಕ್ಕೂಸೈ, ಟೆಕ್ಕಿಗೂ ಸೈ

ಬೆಂಗಳೂರು ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಬಿಂದುಶ್ರೀ ಟೆಕ್ಕಿಯಾಗಿ ಮೂರು ವರ್ಷಗಳ ಸೇವೆ ಮಾಡಿದ್ದಾರೆ ಹಾಗೂ ಇವರ ತಾಯಿ ಶಾಸ್ತ್ರೀಯ ಸಂಗೀತ ಹಿನ್ನಲೆಯ ಅವರು. ಅವರ ಆಸೆಯಂತೆ ತಂದೆಯ ಮನವೊಲಿಸಿ, ಪುನಃ ನಟನೆಗೆ ರೆಡಿಯಾಗಿದ್ದಾರೆ. ಈ ಕುರಿತು ಸ್ವತಃ ಬಿಂದುಶ್ರೀ ಹೇಳುವುದಿಷ್ಟು, “ನನಗೆ ನಟನೆ ಮೇಲೆ ಆಸಕ್ತಿ ಇದೆ. ಹಾಗಂತ ಸಿಕ್ಕ ಸಿಕ್ಕ ಪಾತ್ರಗಳನ್ನೆಲ್ಲಾ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅಪರೂಪ ಎಂಬಂತಹ, ಚಾಲೆಂಜಿಂಗ್‌ ಇರುವ, ನಮ್ಮ ಸಂಸ್ಕ್ರತಿ ಬಿಂಬಿಸುವಂತಹ ಪಾತ್ರಗಳು ಬಂದರೆ ನಾನು ನಟನೆ ಮಾಡಲು ಇಷ್ಟಪಡ್ತೀನಿ. ಯಾವುದೇ ದೊಡ್ಡ ಬ್ಯಾನರ್ ಇದ್ದರೂ, ಸರಿ, ನನಗೆ ಒಪ್ಪುವ ಮಾತ್ರ ಸೈ ಎನ್ನುವುದು. ಬೇರೆ ರೀತಿಯ ಕಥೆಗೆ ಪಾತ್ರ ಮಾಡಲಾರೆ” ಎಂಬುದು ಬಿಂದುಶ್ರೀ ಅವರ ಅಭಿಪ್ರಾಯ.

ಮಹಿಷಾಸುರ ಸಿನೆಮಾವೇ ಮತ್ತೆ ಕಲರ್‌ ಫುಲ್‌ ಆಗಲು ಕಾರಣ

ಇತ್ತೀಚೆಗೆ ತೆರೆಕಂಡ ಬಹಳ ಪೌರಾಣಿಕ ಸಿನಿಮಾವಾದ ಬಿಂದುಶ್ರೀ ಅವರ ಬಾಲ್ಯದಲ್ಲಿ 30 ಕ್ಕೂ ಹೆಚ್ಚು ಚಲನಚಿತ್ರಗಳು ಮತ್ತು ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದು, ಜತೆಯಲ್ಲಿ ಅದರಲ್ಲೂ ಪ್ರಮುಖ ಹಳ್ಳಿ ಹುಡುಗಿಯಾಗಿ ಮಹಿಷಾಸುರ ಚಿತ್ರದಲ್ಲಿ ನಟಿಸಿದ್ದಾರೆ.

ಎಕ್ಸ್‌ ಲೆಂಟ್‌ ಆಗಿ ನಟನೆ ಮಾಡಿದ್ದಾರೆ ಇವರ ವಿಶೇಷ. ಇವರ ಎರಡನೇ ಚಿತ್ರ “ಲಡ್ಡು” ಸಿನಿಮಾ ಕೂಡ ಇಂದು ರಾಜ್ಯಾದ್ಯಾತ ಬಿಡುಗಡೆಯಾಗಲಿದೆ ಎಂಬುದು ಬಿಂದುಶ್ರೀ ಅವರ ಅಭಿಪ್ರಾಯ. ಇನ್ನೂ ಸದ್ಯದಲ್ಲೇ “ಮಿ. ಅಂಡ್ ಮಿಸಸ್ ಜಾನು” ಚಿತ್ರದಲ್ಲೂ ಬಿಂದುಶ್ರೀ ನಟಿಸುತ್ತಿದ್ದಾರೆ. ಸದ್ಯಕ್ಕೆ ಪ್ರಸ್ತುತವಾಗಿ ಬಿಂದುಶ್ರೀ ಮೂರು ಕಥೆ ಗಳನ್ನು ರೆಡಿ ಅಂಥ ಹೇಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

Published

on

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.

ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ‌ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆ‌ಎಸ್‌ಟಿ‌ಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ.‌ ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending