ದಿನದ ಸುದ್ದಿ

ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ

Published

on

  • ಮತ್ತೆ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟ: ಬಟ್ಟಲು ಕಣ್ಣಿನ ಚೆಲುವೆ
  • ಮ್ಯಾಂಚೆಸ್ಟರ್‌ ಬೆಡಗಿ ಸಿಕ್ತು ಬಿಗ್‌ ಆಫರ್‌

ವಿಶೇಷ ವರದಿ :ಈಶ್ವರ್‌ ಸಿರಿಗೇರಿ

ಸುದ್ದಿದಿನ ಡೆಸ್ಕ್ : ಮಾತೃ ಆಸೆ ಕೊನೆಗೂ ನನಸು ಮಾಡಿದ ಮ್ಯಾಂಚೆಸ್ಟರ್‌ ಹುಡುಗಿ ಈ ಸಿನಿ ಪಯಣವೇ ಒಂದು ರೀತಿಯ ನಿಂತ ನೀರಲ್ಲ ಎಂಬ ಸಾಕ್ಷಿಗೆ ಮೆಚ್ಚುಗೆ ಪಾತ್ರರಾದ ಬಿಂದುಶ್ರೀ ಅವರು ನೋಡಿದ ಕೂಡಲೇ ಪ್ರಸಿದ್ಧಿ ಎಂಬ ಮಾತು ಸುಳ್ಳಲ್ಲ. ಕಲರ್‌ ಫುಲ್‌ ಪಯಣದಲ್ಲಿ ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಯಶಸ್ಸಿಯಾಗಿ ತಮ್ಮ ಪಾತ್ರವನ್ನು ನಿಭಾಯಿಸಿದ ಈ ಬಟ್ಟಲು ಕಣ್ಣಿನ ಚೆಲುವೆ ಮ್ಯಾಂಚೆಸ್ಟರ್‌ ಸ್ಟಾರ್‌ ಬೆಡಗಿಯಾಗಿ ತಮ್ಮದೇ ಆದ ನೆಲೆಗೆ ಸಾಕ್ಷಿಯಾಗಿದ್ದಾರೆ. ಅದು ಏನೇ ಆಗಲಿ ಬಾಲ್ಯದಲ್ಲಿ ಸಿಕ್ಕ ಹಲವಾರು ಅವಕಾಶಗಳನ್ನು ಬಹಳ ಅದ್ಭತವಾಗಿ ಕಲರ್‌ ಫುಲ್‌ ಪ್ರತಿಭೆಗೆ ಅದರಲ್ಲೂ ಕನ್ನಡದಲ್ಲಿ ಮಿಚ್ಚಿದ್ದು ಕನ್ನಡಿಗರ ಹೆಮ್ಮೆ.

ಪ್ಯಾಶನ್ ನಿಂದ ನಟನಾ ವೃತ್ತಿಗೆ ಪಯಣ

ಪಕ್ಕ ಹಳಿ ಸೊಗಡಿನ ಚಿತ್ರಕ್ಕೆ ಸಿಕ್ತು ಇಷ್ಟು ದಿನಗಳ ನಂತರ ಅದ್ಭತ ಆಫರ್‌ಗಳು, ಈ ಸಾಲುಗಳ ಯಶಸ್ಸು ಬೆನ್ನಿಗೆ ಇದ್ದರು ಸಹ ಒಳ್ಳೆಯ ಚಿತ್ರಕಥೆಗೆ ಏಳಿ ಮಾಡಿಸಿದ ಈ ಸ್ಪೂರಧ್ರೂಪಿ ಚೆಲುವೆ. ಇನ್ನೂ ಅನೇಕ ಪ್ರತಿಭೆಗಳು ಕನ್ನಡದಲ್ಲಿ ಬಂದು ಹೋಗಿದ್ದು ಇತಿಹಾಸವೇ ಆದರೂ ಈ ಸಾಲಿಗೆ ಬಿಂದುಶ್ರೀ ಎಂಬ ನವ ಕಲರ್‌ ಫುಲ್‌ಗೆ ಹಾಗೂ ಹೊಸ ರೀತಿಯ ಪಾತ್ರಗಳನ್ನು ಎದುರು ನೋಡುತ್ತಿದ್ದಾರೆ. ಅಷ್ಟೇ ಅಲ್ಲ, ಒಳ್ಳೆಯ ಪಾತ್ರ, ನಿರ್ಮಾಣ ಸಂಸ್ಥೆಯಲ್ಲಿ ಅವಕಾಶ ಸಿಕ್ಕರೆ ಕೆಲಸ ಮಾಡಲು ತುದಿಗಾಲ ಮೇಲೆ ವೇಟಿಂಗ್‌ ಅಂತ ಹೇಳಬಹುದು.

ಮ್ಯಾಂಚೆಸ್ಟರ್‌ ಬೆಡಗಿಗೆ ಸಿನಿ ಲೋಕದಲ್ಲಿ ಸಂಸ್ಕೃತಿಯೇ ಬಿಂಬ

ಬಿಂದುಶ್ರೀ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ ಹುಡುಗಿ. ಸಿನಿಮಾರಂಗ ಹೊಸದೇನಲ್ಲ. ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದವರು. “ಶ್ರೀರಸ್ತು ಶುಭಮಸ್ತು”, ”ಶಿವಪ್ಪ ನಾಯಕ”,”ಪ್ರೀತ್ಸೋದ್‌ ತಪ್ಪಾ” ಸೇರಿದಂತೆ ಅನೇಕ ರೀತಿಯ ಸುಮಾರು ಮೂವತ್ತು ಸಿನೆಮಾಗಳಲ್ಲಿ ಹೆಚ್ಚಾಗಿ ನಟಿಸಿದ್ದು ಸುಳ್ಳಲ್ಲ. ಬೆಳ್ಳಿತೆರೆಯ ಜತೆಗೆ ಕಿರುತೆರೆಯಲ್ಲೂ ಇವರ ಪಯಣ ಅದ್ಭತ ಅಂತ ಹೇಳಬಹುದು. ಇನ್ನೋಂದು ವಿಚಾರ “ಕಾವ್ಯಾಂಜಲಿ”, “ಗೌತಮಿ” ಮೆಗಾ ಧಾರಾವಾಹಿಗಳಲ್ಲೂ ಬಣ ಹಚ್ಚಿದ್ದಾರೆ. ಬಣದ ಜತೆಗೆ ಅಧ್ಯಯನ ಕೂಡ ಮುಖ್ಯ ಎಂಬ ಕಾರಣಕ್ಕೆ ನಟನೆಯನ್ನು ಮೊಟಕುಗೊಳಿಸಿ, ಓದಿನತ್ತ ಗಮನಹರಿಸಿದ್ದರು ಬಿಂದುಶ್ರೀ. ಇನ್ನು, ಇವರ ತಂದೆ ಸಿವಿಲ್‌ ಎಂಜಿನಿಯರ್.‌ ಅವರ ತಂದೆ ಮಾತಿನ ಪ್ರಕಾರ, ಪದವಿ ಪಡೆದರು. ಅದರಲ್ಲೂ ಅವರದು ಪದವಿಯಲ್ಲಿ ಹದಿನಾರನೇ ರ‍್ಯಾಂಕ್ ಎಂಬುದು ವಿಶೇಷ.

ಬಣ್ಣಕ್ಕೂಸೈ, ಟೆಕ್ಕಿಗೂ ಸೈ

ಬೆಂಗಳೂರು ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಬಿಂದುಶ್ರೀ ಟೆಕ್ಕಿಯಾಗಿ ಮೂರು ವರ್ಷಗಳ ಸೇವೆ ಮಾಡಿದ್ದಾರೆ ಹಾಗೂ ಇವರ ತಾಯಿ ಶಾಸ್ತ್ರೀಯ ಸಂಗೀತ ಹಿನ್ನಲೆಯ ಅವರು. ಅವರ ಆಸೆಯಂತೆ ತಂದೆಯ ಮನವೊಲಿಸಿ, ಪುನಃ ನಟನೆಗೆ ರೆಡಿಯಾಗಿದ್ದಾರೆ. ಈ ಕುರಿತು ಸ್ವತಃ ಬಿಂದುಶ್ರೀ ಹೇಳುವುದಿಷ್ಟು, “ನನಗೆ ನಟನೆ ಮೇಲೆ ಆಸಕ್ತಿ ಇದೆ. ಹಾಗಂತ ಸಿಕ್ಕ ಸಿಕ್ಕ ಪಾತ್ರಗಳನ್ನೆಲ್ಲಾ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅಪರೂಪ ಎಂಬಂತಹ, ಚಾಲೆಂಜಿಂಗ್‌ ಇರುವ, ನಮ್ಮ ಸಂಸ್ಕ್ರತಿ ಬಿಂಬಿಸುವಂತಹ ಪಾತ್ರಗಳು ಬಂದರೆ ನಾನು ನಟನೆ ಮಾಡಲು ಇಷ್ಟಪಡ್ತೀನಿ. ಯಾವುದೇ ದೊಡ್ಡ ಬ್ಯಾನರ್ ಇದ್ದರೂ, ಸರಿ, ನನಗೆ ಒಪ್ಪುವ ಮಾತ್ರ ಸೈ ಎನ್ನುವುದು. ಬೇರೆ ರೀತಿಯ ಕಥೆಗೆ ಪಾತ್ರ ಮಾಡಲಾರೆ” ಎಂಬುದು ಬಿಂದುಶ್ರೀ ಅವರ ಅಭಿಪ್ರಾಯ.

ಮಹಿಷಾಸುರ ಸಿನೆಮಾವೇ ಮತ್ತೆ ಕಲರ್‌ ಫುಲ್‌ ಆಗಲು ಕಾರಣ

ಇತ್ತೀಚೆಗೆ ತೆರೆಕಂಡ ಬಹಳ ಪೌರಾಣಿಕ ಸಿನಿಮಾವಾದ ಬಿಂದುಶ್ರೀ ಅವರ ಬಾಲ್ಯದಲ್ಲಿ 30 ಕ್ಕೂ ಹೆಚ್ಚು ಚಲನಚಿತ್ರಗಳು ಮತ್ತು ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದು, ಜತೆಯಲ್ಲಿ ಅದರಲ್ಲೂ ಪ್ರಮುಖ ಹಳ್ಳಿ ಹುಡುಗಿಯಾಗಿ ಮಹಿಷಾಸುರ ಚಿತ್ರದಲ್ಲಿ ನಟಿಸಿದ್ದಾರೆ.

ಎಕ್ಸ್‌ ಲೆಂಟ್‌ ಆಗಿ ನಟನೆ ಮಾಡಿದ್ದಾರೆ ಇವರ ವಿಶೇಷ. ಇವರ ಎರಡನೇ ಚಿತ್ರ “ಲಡ್ಡು” ಸಿನಿಮಾ ಕೂಡ ಇಂದು ರಾಜ್ಯಾದ್ಯಾತ ಬಿಡುಗಡೆಯಾಗಲಿದೆ ಎಂಬುದು ಬಿಂದುಶ್ರೀ ಅವರ ಅಭಿಪ್ರಾಯ. ಇನ್ನೂ ಸದ್ಯದಲ್ಲೇ “ಮಿ. ಅಂಡ್ ಮಿಸಸ್ ಜಾನು” ಚಿತ್ರದಲ್ಲೂ ಬಿಂದುಶ್ರೀ ನಟಿಸುತ್ತಿದ್ದಾರೆ. ಸದ್ಯಕ್ಕೆ ಪ್ರಸ್ತುತವಾಗಿ ಬಿಂದುಶ್ರೀ ಮೂರು ಕಥೆ ಗಳನ್ನು ರೆಡಿ ಅಂಥ ಹೇಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version