ರಾಜಕೀಯ
ಹಾರು ತಿಹುದು ಏರು ತಿಹುದು ನೋಡು ಬಂಡಾಯದ ಬಾವುಟ
ಸುದ್ದಿದಿನವಿಶೇಷ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆ ಪ್ರಮುಖವಾದ ಜಿಲ್ಲೆ. ಇಲ್ಲಿನ ಜಿದ್ದಾ ಜಿದ್ದಿನ ಚುನಾವಣೆ ಈ ಬಾರಿ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿಯವರೆಗು ಜಿಲ್ಲೆಯ 8ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 116 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಲ ಪಾಳೆಯಕ್ಕೆ ತೆಂಗಿನಕಾಯಿ ಸೆಡ್ಡು ಹೊಡೆದು ನಿಂತಿತ್ತು. ಆದರೆ ಈ ಬಾರಿಯು ಕೂಡ ಬಿಜೆಪಿ ಟಿಕೇಟ್ ವಂಚಿತ ಅಭ್ಯರ್ಥಿಗಳು ಪತ್ಯೇಕವಾಗಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.ಕಳೆದ ಬಾರಿ ಕೆಜೆಪಿಯ ಹೊಡೆತ ದಿಂದ ತನ್ನ ಅಸ್ತಿತ್ವವನ್ನು ಕಳೆದಕೊಂಡ ಬಿಜೆಪಿ ಈ ಬಾರಿ ಜಿಲ್ಲೆಯಲ್ಲಿ ಕಮಲ ಅರಳಿಸಲು ಸಜ್ಜಾಗಿತ್ತು, ಆದರೆ, ಒಂದೆ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಪಟ್ಟಿ ಜೋರಾಗಿದ್ದ ಹಿನ್ನಲೆಯಲ್ಲಿ, ಟಿಕೇಟ್ ಕೈ ತಪ್ಪಿದವರು, ಬಂಡಾಯದ ಬಾವುಟವನ್ನು ಹಾರಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರ ಪ್ರಮುಖ ಕ್ಷೇತ್ರವಾಗಿದೆ. ಆದರೆ ಮಾಯಕೊಂಡ ಕ್ಷೇತ್ರದಲ್ಲಿ ಈ ಬಾರಿ ಮಾಯದಾಟ ಶುರುವಾಗಿದೆ.ಕಮಲದ ಮಾಜಿ ಶಾಸಕ ಬಸವರಾಜ್ ನಾಯ್ಕ ಕೂಡ ಶತಾಯಗತಾಯ ಬಿಜೆಪಿಯಿಂದ ನಿಲ್ಲಲು ಯತ್ನಿಸಿದರು ಆದರೆ ಕೊನೆ ಗಳಿಗೆಯಲ್ಲಿ ಪ್ರೊ.ಲಿಂಗಪ್ಪನವರ ಹೆಸರು ಅಂತಿಮವಾದ ಬಳಿಕ, ಜೆಡಿಯು ಸೇರಿ ಕಮಲಕ್ಕೆ ಬಾಣ ಬಿಟ್ಟಿದ್ದಾರೆ. ಈ ನಡೆಯು ಕೂಡ ಒಂದು ಕಡೆ ಕಮಲಕ್ಕೆ ಮುಳ್ಳಾಗುವುದರಲ್ಲಿ ಸಂಶಯವಿಲ್ಲ .ಇನ್ನು ಇದೇ ಕ್ಷೇತ್ರದ ಮತ್ತೊಬ್ಬ ಪ್ರಮುಖರಲ್ಲಿ ಎಚ್.ಆನಂದಪ್ಪ ಕೂಡ ಟಿಕೇಟ್ ಪಡೆಯಲು ಪ್ರಯತ್ನ ಮಾಡಿದರು. ಆದರೆ ಅಧಿಕೃತವಾಗಿ ಲಿಂಗಪ್ಪನವರಿಗೆ ಘೋಷಣೆ ಯಾದ ಬಳಿಕ ಆನಂದಪ್ಪ ನವರು ಬಂಡಾಯದ ಕಹಳೆ ಮೊಳಗಿಸಿದ್ದಾರೆ.ಇನ್ನು ಒಂದೇ ಕ್ಷೇತ್ರದಲ್ಲಿ , ಒಂದೇ ಪಕ್ಷದ ವಿರುದ್ಧ ಇಬ್ಬರು ಅಭ್ಯರ್ಥಿಗಳು ಬಂಡಾಯ ಸಿಡಿಸಿದ್ದಾರೆ.ಇದರಿಂದಾಗಿ ಈ ಬಾರಿ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇಬ್ಬರ ಜಗಳದಿಂದ ಮೂರನೆ ಅವರಿಗೆ ಲಾಭವಾಗುಬಂತೆ ಇಲ್ಲಿನ ಜೆಡಿಎಸ್ ಅಭ್ಯರ್ಥಿ ಗೆ ವರ ವಾಗುವುದೆ ಕಾದು ನೋಡಬೇಕಿದೆ.
ಇನ್ನು ಜಿಲ್ಲೆಯ ಪ್ರಮುಖ ಕ್ಷೇತ್ರವಾದ ಹರಪನಹಳ್ಳಿ ಯಲ್ಲು ಬಿಜೆಪಿಯ ಬಂಡಾಯದ ಹಾರಟ ಕಡಿಮೆಯಿಲ್ಲ. ಯಡಿಯೂರಪ್ಪ ಮತ್ತು ಶ್ರೀರಾಮುಲು ಆಪ್ತರಾಗಿದ್ದ ಎನ್ .ಕೊಟ್ರೇಶ್ ಬಿಜೆಪಿಯ ಅಭ್ಯರ್ಥಿ ಯಾಗುವುದು ಕಚಿತವೆಂದಿತ್ತು ಆದರೆ ಕೊನೆ ಕ್ಷಣದಲ್ಲಿ ಕರುಣಾಕರ ರೆಡ್ಡಿಗೆ ಟಿಕೇಟ್ ಘೋಷಣೆ ಮಾಡಿದರು. ಇದರಿಂದಾಗಿ ನನಗೆ ಯಡಿಯೂರಪ್ಪ, ರಾಮುಲು ಮೋಸ ಮಾಡಿದರು ಎಂದು ಕಮಲ ಬಿಟ್ಟು ತೆನೆ ಹೊತ್ತುಕೊಂಡಿದ್ದಾರೆ. ಕಡೆಯ ಕ್ಷಣದಲ್ಲಿ ಜೆಡಿಎಸ್ ಸೇರಿದ ಕೊಟ್ರೇಶ್ ಬಿಜೆಪಿಯ ವಿರುದ್ದ ನೇರವಾಗಿ ಬಂಡಾಯದ ಬಿಸಿ ಅಲೆಯನ್ನು ನಿರ್ಮಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಕೂಡ ಬಂಡಾಯದ ಹೊಗೆ ಕಾಣಿಸುತ್ತಿದೆ.
ಬಿ ಫಾರಂ ಸಿಗುವುದಕ್ಕೂ ಮುಂಚೆಯೇ ಬಿಜೆಪಿಯ ಅಭ್ಯರ್ಥಿ ಎಂದು ಯಶವಂತರಾವ್ ಜಾಧವ್ ನಾಮಪತ್ರ ಸಲ್ಲಿಸಿದ್ದರು. ಕೊನೆ ಗಳಿಗೆಯಲ್ಲಿ ಕಮಲದ ಅಧಿಕೃತ ಅಭ್ಯರ್ಥಿ ಯಾಗಿಯೇ ಘೊಷಿತಗೊಂಡರು. ಇನ್ನು ಇದೆ ಕ್ಷೇತ್ರದಿಂದಲೆ ಎಚ್. ಎಸ್. ನಾಗರಾಜು ಕೂಡ ಕಮಲ ಪಾಳಯದಲ್ಲಿ ಟಿಕೇಟ್ ಆಕಾಂಕ್ಷಿಯಾಗಿದ್ದರು ಆದರೆ ಯಶವಂತರಾವ್ ಜಾದವ್ ಗೆ ಟಿಕೇಟ್ ನೀಡಿದ ಪರಿಣಾಮ ಪ್ರತ್ಯೇಕವಾಗಿ ಕಮಲಕ್ಕೆ ಬಂಡಾಯದ ಅಭ್ಯರ್ಥಿ ಯಾಗಿ ಕಣಕ್ಕಿಳಿದ್ದಿದ್ದಾರೆ. ಒಟ್ಟಾರೆಯಾಗಿ ಜಾತಿ ಸಮೀಕರಣ ಸೇರಿದಂತೆ ನಾನಾ ಕಾರಣಗಳಿಂದಾಗಿ ಬಿಜೆಪಿಗೆ ಬಂಡಾಯದ ಕಾವು ಜೋರಾಗಿಯೆ ತಟ್ಟಲಿದೆ . ಕಳೆದ ಬಾರಿ ತನ್ನ ಗರ್ಭದಲ್ಲಿಯೇ ಹುಟ್ಟಿದ ಕೆಜೆಪಿಯಿಂದ ಗಟ್ಟಿ ತೆಂಗಿನಕಾಯಿಯಿಂದ ತನ್ನ ನೆಲೆಯನ್ನೆ ಕಳೆದುಕೊಂಡಿತು. ಈ ಬಾರಿಯ ಬಂಡಾಯದ ಅಲೆಯಿಂದ ಬಿಜೆಪಿ ಚೇತರಿಸಿಕೊಳ್ಳುವುದು ಕಷ್ಟದಂತೆ ಕಾಣಿಸುತ್ತಿದೆ…
ಇನ್ನು ಬಂಡಾಯದ ಬಾವುಟ ಕೇವಲ ಕಮಲ ಪಾಳಯದಲ್ಲು ಅಲ್ಲದೆ ಕೈ ಪಾಳಯದಲ್ಲೂ ಸದ್ದು ಮಾಡುತ್ತಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಕ್ಷೇತ್ರದಲ್ಲಿ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಂದ ವರದಿಯನ್ನು ಅನುಸರಿಸಿ ಹಾಲಿ ಶಾಸಕ ರಾಜೇಶ್ ಗೆ ಟಿಕೇಟ್ ಮಿಸ್ಸಾಗಿತ್ತು. ಅಧಿಕೃತ ವಾಗಿ ಪುಷ್ಪಾ ಲಕ್ಷಣಸ್ವಾಮಿ ಎಂಬುವರಿಗೆ ಟಿಕೇಟ್ ಘೋಷಣೆ ಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಲಾಭಿ ನಡೆಸಿದ ಎಚ್. ಪಿ. ರಾಜೇಶ್ ರವರು ಕೈ ನಾಯಕರ ಜೊತೆ ಕಸರತ್ತು ನಡೆಸಿ ಕೊನೆಗೂ ಬಿ ಫಾರಂ ತರುವಲ್ಲಿ ಯಶಸ್ವಿಯಾದರು. ಆದರೆ ಕಾಂಗ್ರೆಸ್ ನ ಜಗಳೂರು ಅಭ್ಯರ್ಥಿ ಯೆಂದೇ ಪಕ್ಷದಿಂದ ಘೋಷಣೆ ಯಾದರು ಕೂಡ ಟಿಕೇಟ್ ನೀಡಲಿಲ್ಲವೆಂಬುದಾಗಿ ನೊಂದ ಪುಷ್ಪಾ ಲಕ್ಷ್ಮಣಸ್ವಾಮಿ ಕಾಂಗ್ರೆಸ್ ವಿರುದ್ಧ ಬಂಡಾಯದ ಕೈ ಬೀಸಿದ್ದಾರೆ. ಶತಾಯಗತಾಯ ಕಾಂಗ್ರೆಸ್ ನನ್ನು ಸೋಲಿಸಲೇ ಬೇಕೆಂದು ಪಣ ತೊಟ್ಟಿದ್ದಾರೆ.
ಜಿಲ್ಲೆಯಲ್ಲಿ ಎಂದೂ ಇಲ್ಲದ ಇಂತಹ ಬಂಡಾಯದ ಅಲೆಗಳ ಮಧ್ಯೆ ಯಾರು ತಮ್ಮ ಪಟ ಹಾರಿಸುವರೋ , ಜಿಲ್ಲೆಯಲ್ಲಿ ಬದಲಾವಣೆ ತರುವರೋ ಕಾದು ನೋಡಬೇಕಿದೆ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401
![](https://suddidina.com/wp-content/uploads/2022/04/20210226_111406.jpg)
![](http://suddidina.com/wp-content/uploads/2018/03/suddidinalogonew.png)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ
![](https://suddidina.com/wp-content/uploads/2024/07/kargil_vijay_divas_suddidina.jpg)
ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ ವೀರ ಯೋಧರಿಗೆ ಪ್ರಧಾನಿ ಗೌರವ ಸಮರ್ಪಣೆ ಮಾಡಲಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಂಕುನ್ ಲಾ ಸುರಂಗ ಮಾರ್ಗ ಯೋಜನೆಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.
ಈ ಯೋಜನೆಯಡಿ ನಿಮು-ಪದುಮ್-ಡಾರ್ಚಾ ರಸ್ತೆಯಿಂದ ಲೇಹ್ಗೆ ಎಲ್ಲಾ ಹವಾಮಾನಗಳಲ್ಲೂ ಸಂಪರ್ಕ ಕಲ್ಪಿಸಲು ಸುಮಾರು 15 ಸಾವಿರದ 800 ಅಡಿ ಎತ್ತರದಲ್ಲಿ 4.1 ಕಿಲೋಮೀಟರ್ ಉದ್ದದ ಜೋಡಿ ಸುರಂಗ ಮಾರ್ಗವನ್ನು ನಿರ್ಮಿಸಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ವಿಶ್ವದಲ್ಲೇ ಇದು ಅತಿ ಎತ್ತರದ ಸುರಂಗ ಮಾರ್ಗವಾಗಲಿದೆ. ಸಶಸ್ತ್ರ ಪಡೆಗಳ ಸುಗಮ ಪ್ರಯಾಣಕ್ಕಷ್ಟೇ ಅಲ್ಲದೇ ಲಡಾಕ್ನಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಈ ಸುರಂಗ ಮಾರ್ಗವು ಸಹಕಾರಿಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಕೇಂದ್ರ ಬಜೆಟ್ : ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ
![](https://suddidina.com/wp-content/uploads/2024/07/union_budget_2024_suddidina.jpg)
ಸುದ್ದಿದಿನಡೆಸ್ಕ್:ಕೇಂದ್ರದ ಮುಂಗಡ ಪತ್ರ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತೆಲುಗು ದೇಶಂ ನಾಯಕ ಕೇಂದ್ರ ಸಚಿವ ಕಿಂಜರಪು ರಾಮಮೋಹನ ನಾಯ್ಡು ಹೇಳಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಬಜೆಟ್ ಎಲ್ಲರ ಕನಸಾಗಿದೆ ಎಂದು ಹೇಳಿದ್ದಾರೆ. ಈಶಾನ್ಯ ರಾಜ್ಯಗಳ ಬೆಳವಣಿಗೆಗೆ ಆಯ-ವ್ಯಯ ಪೂರಕವಾಗಿದೆ ಎಂದು ಹೇಳಿದರು.
ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಉದ್ಯೋಗ ಹೆಚ್ಚಿಸುವ ಕಾರ್ಯಕ್ರಮವನ್ನು ಹಣಕಾಸು ಸಚಿವರು ಪ್ರಕಟಿಸಿರುವುದಾಗಿ ಹೇಳಿದ್ದಾರೆ. ಜೆಡಿಯು ಮುಖಂಡ ರಾಜೀವ್ ರಂಜನ್ ಸಿಂಗ್, ಆಯ-ವ್ಯಯ ಬಿಹಾರ ಜನತೆಗೆ ಹಾಗೂ ಪ್ರವಾಸೋದ್ಯಮಕ್ಕೆ ಒತ್ತು ನೀಡಿದೆ ಎಂದರು.
ಕಾಂಗ್ರೆಸ್ ಮುಖಂಡ ಶಶಿತರೂರ್ ಪ್ರತಿಕ್ರಿಯೆಸಿ, ಉದ್ಯೋಗ ಖಾತರಿ ಯೋಜನೆಯ ರಾಜ್ಯಗಳ ತಾರತಮ್ಯವನ್ನು ನಿಭಾಯಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶಿವಸೇನಾ ನಾಯಕ ಪ್ರಿಯಾಂಕ ಚತುರ್ವೇದಿ, ಮಹಾರಾಷ್ಟ್ರ ರಾಜ್ಯಕ್ಕೆ ನಿರ್ಧಿಷ್ಟವಾದ ಯೋಜನೆಗಳನ್ನು ಪ್ರಕಟಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಡಿಎಂಕೆ ನಾಯಕ ಟಿ.ಆರ್.ಬಾಲು, ಟಿಎಂಸಿ ನಾಯಕಿ ಕಲ್ಯಾಣ ಬ್ಯಾನರ್ಜಿ ಅವರು, ಆಯ-ವ್ಯಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದ ಸಂಸದರಾದ ಬಸವರಾಜ ಬೊಮ್ಮಾಯಿ, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಜಗದೀಶ್ ಶೆಟ್ಟರ್, ಜನಪರ ಸಾಮಾನ್ಯವರ್ಗದವರ ಆಯ-ವ್ಯಯವಾಗಿದೆ ಎಂದರು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರ್ಸ್ವಾಮಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರುಗಳು ಆಯ-ವ್ಯಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಅನಿಶ್ ಶಹಾ ಪ್ರತಿಕ್ರಿಯಿಸಿ, ದೇಶದ ಬೆಳವಣಿಗೆಗೆ ಪೂರಕ ಆಯ-ವ್ಯಯ ರೈತರು, ಯುವಕರು, ಮಹಿಳೆಯರಿಗೆ ಸಹಕಾರಿ ಎಂದು ಹೇಳಿದ್ದಾರೆ.
ಶಿಕ್ಷಣ, ಆರೋಗ್ಯ, ರಕ್ಷಣಾ ಕ್ಷೇತ್ರಗಳಿಗೆ ಅನುದಾನವನ್ನು ಗಣನೀಯವಾಗಿ ಖಡಿತ ಮಾಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಹಲವು ಯೋಜನೆಗಳ ಅನುಷ್ಠಾನಕ್ಕೆ ನೆರವು ಕೋರಿದ್ದೆವು. ಮಾಹಿತಿ ತಂತ್ರಜ್ಞಾನಕ್ಕೆ ನೀಡಿದ್ದ ಅನುದಾನವನ್ನು ಕಡಿಮೆ ಮಾಡಿರುವ ಕೇಂದ್ರ ಸರ್ಕಾರ, ಪರಿಶಿಷ್ಟ ಸಮುದಾಯ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಅನುದಾನವನ್ನು ಖಡಿತ ಮಾಡಿ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮೂಲ ಸೌಕರ್ಯ ಅನ್ವೇಷಣೆ ಹಾಗೂ ಅಭಿವೃದ್ಧಿಗೆ ಆಯ-ವ್ಯಯ ಪೂರಕವಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಯ-ವ್ಯಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ದೇಶದ ಉತ್ಪಾದನೆ ಹಾಗೂ ಬೆಳವಣಿಗೆಯ ಪ್ರಮಾಣದಲ್ಲಿ ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!