Connect with us

ರಾಜಕೀಯ

ಹಾರು ತಿಹುದು ಏರು ತಿಹುದು ನೋಡು ಬಂಡಾಯದ ಬಾವುಟ

Published

on

ಸುದ್ದಿದಿನವಿಶೇಷ: ರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆ ಪ್ರಮುಖವಾದ ಜಿಲ್ಲೆ. ಇಲ್ಲಿನ ಜಿದ್ದಾ ಜಿದ್ದಿನ ಚುನಾವಣೆ ಈ ಬಾರಿ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿಯವರೆಗು ಜಿಲ್ಲೆಯ 8ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 116 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಲ ಪಾಳೆಯಕ್ಕೆ ತೆಂಗಿನಕಾಯಿ ಸೆಡ್ಡು ಹೊಡೆದು ನಿಂತಿತ್ತು. ಆದರೆ ಈ ಬಾರಿಯು ಕೂಡ ಬಿಜೆಪಿ ಟಿಕೇಟ್ ವಂಚಿತ ಅಭ್ಯರ್ಥಿಗಳು ಪತ್ಯೇಕವಾಗಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.ಕಳೆದ ಬಾರಿ ಕೆಜೆಪಿಯ ಹೊಡೆತ ದಿಂದ ತನ್ನ ಅಸ್ತಿತ್ವವನ್ನು ಕಳೆದಕೊಂಡ ಬಿಜೆಪಿ ಈ ಬಾರಿ ಜಿಲ್ಲೆಯಲ್ಲಿ ಕಮಲ ಅರಳಿಸಲು ಸಜ್ಜಾಗಿತ್ತು, ಆದರೆ, ಒಂದೆ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಪಟ್ಟಿ ಜೋರಾಗಿದ್ದ ಹಿನ್ನಲೆಯಲ್ಲಿ, ಟಿಕೇಟ್ ಕೈ ತಪ್ಪಿದವರು, ಬಂಡಾಯದ ಬಾವುಟವನ್ನು ಹಾರಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರ ಪ್ರಮುಖ ಕ್ಷೇತ್ರವಾಗಿದೆ. ಆದರೆ ಮಾಯಕೊಂಡ ಕ್ಷೇತ್ರದಲ್ಲಿ ಈ ಬಾರಿ ಮಾಯದಾಟ ಶುರುವಾಗಿದೆ.ಕಮಲದ ಮಾಜಿ ಶಾಸಕ ಬಸವರಾಜ್ ನಾಯ್ಕ ಕೂಡ ಶತಾಯಗತಾಯ ಬಿಜೆಪಿಯಿಂದ ನಿಲ್ಲಲು ಯತ್ನಿಸಿದರು ಆದರೆ ಕೊನೆ ಗಳಿಗೆಯಲ್ಲಿ ಪ್ರೊ.ಲಿಂಗಪ್ಪನವರ ಹೆಸರು ಅಂತಿಮವಾದ ಬಳಿಕ, ಜೆಡಿಯು ಸೇರಿ ಕಮಲಕ್ಕೆ ಬಾಣ ಬಿಟ್ಟಿದ್ದಾರೆ. ಈ ನಡೆಯು ಕೂಡ ಒಂದು ಕಡೆ ಕಮಲಕ್ಕೆ ಮುಳ್ಳಾಗುವುದರಲ್ಲಿ ಸಂಶಯವಿಲ್ಲ .‌ಇನ್ನು ಇದೇ ಕ್ಷೇತ್ರದ ಮತ್ತೊಬ್ಬ ಪ್ರಮುಖರಲ್ಲಿ ಎಚ್.ಆನಂದಪ್ಪ ಕೂಡ ಟಿಕೇಟ್ ಪಡೆಯಲು ಪ್ರಯತ್ನ ಮಾಡಿದರು. ಆದರೆ ಅಧಿಕೃತವಾಗಿ ಲಿಂಗಪ್ಪನವರಿಗೆ ಘೋಷಣೆ ಯಾದ ಬಳಿಕ ಆನಂದಪ್ಪ ನವರು ಬಂಡಾಯದ ಕಹಳೆ ಮೊಳಗಿಸಿದ್ದಾರೆ.‌ಇನ್ನು ಒಂದೇ‌ ಕ್ಷೇತ್ರದಲ್ಲಿ , ಒಂದೇ ಪಕ್ಷದ ವಿರುದ್ಧ ಇಬ್ಬರು ಅಭ್ಯರ್ಥಿಗಳು ಬಂಡಾಯ ಸಿಡಿಸಿದ್ದಾರೆ.‌ಇದರಿಂದಾಗಿ ಈ ಬಾರಿ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇಬ್ಬರ ಜಗಳದಿಂದ ಮೂರನೆ ಅವರಿಗೆ ಲಾಭವಾಗುಬಂತೆ ಇಲ್ಲಿನ‌ ಜೆಡಿಎಸ್ ಅಭ್ಯರ್ಥಿ ಗೆ ವರ ವಾಗುವುದೆ ಕಾದು ನೋಡಬೇಕಿದೆ.

ಇನ್ನು ಜಿಲ್ಲೆಯ ಪ್ರಮುಖ ಕ್ಷೇತ್ರವಾದ ಹರಪನಹಳ್ಳಿ ಯಲ್ಲು ಬಿಜೆಪಿಯ ಬಂಡಾಯದ ಹಾರಟ ಕಡಿಮೆಯಿಲ್ಲ. ಯಡಿಯೂರಪ್ಪ ಮತ್ತು ಶ್ರೀರಾಮುಲು ಆಪ್ತರಾಗಿದ್ದ ಎನ್ .ಕೊಟ್ರೇಶ್ ಬಿಜೆಪಿಯ ಅಭ್ಯರ್ಥಿ ಯಾಗುವುದು ಕಚಿತವೆಂದಿತ್ತು ಆದರೆ ಕೊನೆ ಕ್ಷಣದಲ್ಲಿ ಕರುಣಾಕರ ರೆಡ್ಡಿಗೆ ಟಿಕೇಟ್ ಘೋಷಣೆ ಮಾಡಿದರು. ಇದರಿಂದಾಗಿ ನನಗೆ ಯಡಿಯೂರಪ್ಪ, ರಾಮುಲು ಮೋಸ ಮಾಡಿದರು ಎಂದು ಕಮಲ ಬಿಟ್ಟು ತೆನೆ ಹೊತ್ತುಕೊಂಡಿದ್ದಾರೆ. ಕಡೆಯ ಕ್ಷಣದಲ್ಲಿ ಜೆಡಿಎಸ್ ಸೇರಿದ ಕೊಟ್ರೇಶ್ ಬಿಜೆಪಿಯ ವಿರುದ್ದ ನೇರವಾಗಿ ಬಂಡಾಯದ ಬಿಸಿ ಅಲೆಯನ್ನು ನಿರ್ಮಿಸಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಕೂಡ ಬಂಡಾಯದ ಹೊಗೆ ಕಾಣಿಸುತ್ತಿದೆ.
ಬಿ ಫಾರಂ ಸಿಗುವುದಕ್ಕೂ ಮುಂಚೆಯೇ ಬಿಜೆಪಿಯ ಅಭ್ಯರ್ಥಿ ಎಂದು ಯಶವಂತರಾವ್ ಜಾಧವ್ ನಾಮಪತ್ರ ಸಲ್ಲಿಸಿದ್ದರು. ಕೊನೆ ಗಳಿಗೆಯಲ್ಲಿ ಕಮಲದ ಅಧಿಕೃತ ಅಭ್ಯರ್ಥಿ ಯಾಗಿಯೇ ಘೊಷಿತಗೊಂಡರು. ಇನ್ನು ಇದೆ ಕ್ಷೇತ್ರದಿಂದಲೆ ಎಚ್. ಎಸ್. ನಾಗರಾಜು ಕೂಡ ಕಮಲ ಪಾಳಯದಲ್ಲಿ ಟಿಕೇಟ್ ಆಕಾಂಕ್ಷಿಯಾಗಿದ್ದರು ಆದರೆ ಯಶವಂತರಾವ್ ಜಾದವ್ ಗೆ ಟಿಕೇಟ್ ನೀಡಿದ ಪರಿಣಾಮ ಪ್ರತ್ಯೇಕವಾಗಿ ಕಮಲಕ್ಕೆ ಬಂಡಾಯದ ಅಭ್ಯರ್ಥಿ ಯಾಗಿ ಕಣಕ್ಕಿಳಿದ್ದಿದ್ದಾರೆ. ಒಟ್ಟಾರೆಯಾಗಿ ಜಾತಿ ಸಮೀಕರಣ ಸೇರಿದಂತೆ ನಾನಾ ಕಾರಣಗಳಿಂದಾಗಿ ಬಿಜೆಪಿಗೆ ಬಂಡಾಯದ ಕಾವು ಜೋರಾಗಿಯೆ ತಟ್ಟಲಿದೆ‌ . ಕಳೆದ ಬಾರಿ ತನ್ನ ಗರ್ಭದಲ್ಲಿಯೇ ಹುಟ್ಟಿದ ಕೆಜೆಪಿಯಿಂದ ಗಟ್ಟಿ ತೆಂಗಿನಕಾಯಿಯಿಂದ ತನ್ನ ನೆಲೆಯನ್ನೆ ಕಳೆದುಕೊಂಡಿತು. ಈ ಬಾರಿಯ ಬಂಡಾಯದ ಅಲೆಯಿಂದ ಬಿಜೆಪಿ ಚೇತರಿಸಿಕೊಳ್ಳುವುದು ಕಷ್ಟದಂತೆ ಕಾಣಿಸುತ್ತಿದೆ…

ಇನ್ನು ಬಂಡಾಯದ ಬಾವುಟ ಕೇವಲ ಕಮಲ ಪಾಳಯದಲ್ಲು ಅಲ್ಲದೆ ಕೈ ಪಾಳಯದಲ್ಲೂ ಸದ್ದು ಮಾಡುತ್ತಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಕ್ಷೇತ್ರದಲ್ಲಿ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಂದ ವರದಿಯನ್ನು ಅನುಸರಿಸಿ ಹಾಲಿ ಶಾಸಕ ರಾಜೇಶ್ ಗೆ ಟಿಕೇಟ್ ಮಿಸ್ಸಾಗಿತ್ತು. ಅಧಿಕೃತ ವಾಗಿ ಪುಷ್ಪಾ ಲಕ್ಷಣಸ್ವಾಮಿ ಎಂಬುವರಿಗೆ ಟಿಕೇಟ್ ಘೋಷಣೆ ಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಲಾಭಿ ನಡೆಸಿದ ಎಚ್. ಪಿ. ರಾಜೇಶ್ ರವರು ಕೈ ನಾಯಕರ ಜೊತೆ ಕಸರತ್ತು ನಡೆಸಿ ಕೊನೆಗೂ ಬಿ ಫಾರಂ ತರುವಲ್ಲಿ ಯಶಸ್ವಿಯಾದರು. ಆದರೆ ಕಾಂಗ್ರೆಸ್ ನ ಜಗಳೂರು ಅಭ್ಯರ್ಥಿ ಯೆಂದೇ ಪಕ್ಷದಿಂದ‌ ಘೋಷಣೆ ಯಾದರು ಕೂಡ ಟಿಕೇಟ್ ನೀಡಲಿಲ್ಲವೆಂಬುದಾಗಿ ನೊಂದ ಪುಷ್ಪಾ ಲಕ್ಷ್ಮಣಸ್ವಾಮಿ ಕಾಂಗ್ರೆಸ್ ವಿರುದ್ಧ ಬಂಡಾಯದ ಕೈ ಬೀಸಿದ್ದಾರೆ. ಶತಾಯಗತಾಯ ಕಾಂಗ್ರೆಸ್ ನನ್ನು ಸೋಲಿಸಲೇ ಬೇಕೆಂದು ಪಣ ತೊಟ್ಟಿದ್ದಾರೆ.

ಜಿಲ್ಲೆಯಲ್ಲಿ ಎಂದೂ ಇಲ್ಲದ ಇಂತಹ ಬಂಡಾಯದ ಅಲೆಗಳ ಮಧ್ಯೆ ಯಾರು ತಮ್ಮ ಪಟ ಹಾರಿಸುವರೋ , ಜಿಲ್ಲೆಯಲ್ಲಿ ಬದಲಾವಣೆ ತರುವರೋ ಕಾದು ನೋಡಬೇಕಿದೆ‌‌.

ವಿದ್ಯಾರ್ಥಿಮಿತ್ರಕಿರಣ್    ಪತ್ರಕರ್ತ,ಮಾಗಡಿ

 

 

 

 

 

ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ದಿನದ ಸುದ್ದಿ

ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

Published

on

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

Published

on

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.

ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.

ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

Published

on

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.

ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.

ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ17 hours ago

ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕ : ಸಚಿವ ಎಸ್. ಮಧು ಬಂಗಾರಪ್ಪ

ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆಯ...

ದಿನದ ಸುದ್ದಿ1 week ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ1 week ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ2 weeks ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ2 weeks ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ2 weeks ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ2 weeks ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ2 weeks ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ2 weeks ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ2 weeks ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

Trending