ರಾಜಕೀಯ
ಹಾರು ತಿಹುದು ಏರು ತಿಹುದು ನೋಡು ಬಂಡಾಯದ ಬಾವುಟ
ಸುದ್ದಿದಿನವಿಶೇಷ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆ ಪ್ರಮುಖವಾದ ಜಿಲ್ಲೆ. ಇಲ್ಲಿನ ಜಿದ್ದಾ ಜಿದ್ದಿನ ಚುನಾವಣೆ ಈ ಬಾರಿ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿಯವರೆಗು ಜಿಲ್ಲೆಯ 8ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 116 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಲ ಪಾಳೆಯಕ್ಕೆ ತೆಂಗಿನಕಾಯಿ ಸೆಡ್ಡು ಹೊಡೆದು ನಿಂತಿತ್ತು. ಆದರೆ ಈ ಬಾರಿಯು ಕೂಡ ಬಿಜೆಪಿ ಟಿಕೇಟ್ ವಂಚಿತ ಅಭ್ಯರ್ಥಿಗಳು ಪತ್ಯೇಕವಾಗಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.ಕಳೆದ ಬಾರಿ ಕೆಜೆಪಿಯ ಹೊಡೆತ ದಿಂದ ತನ್ನ ಅಸ್ತಿತ್ವವನ್ನು ಕಳೆದಕೊಂಡ ಬಿಜೆಪಿ ಈ ಬಾರಿ ಜಿಲ್ಲೆಯಲ್ಲಿ ಕಮಲ ಅರಳಿಸಲು ಸಜ್ಜಾಗಿತ್ತು, ಆದರೆ, ಒಂದೆ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಪಟ್ಟಿ ಜೋರಾಗಿದ್ದ ಹಿನ್ನಲೆಯಲ್ಲಿ, ಟಿಕೇಟ್ ಕೈ ತಪ್ಪಿದವರು, ಬಂಡಾಯದ ಬಾವುಟವನ್ನು ಹಾರಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರ ಪ್ರಮುಖ ಕ್ಷೇತ್ರವಾಗಿದೆ. ಆದರೆ ಮಾಯಕೊಂಡ ಕ್ಷೇತ್ರದಲ್ಲಿ ಈ ಬಾರಿ ಮಾಯದಾಟ ಶುರುವಾಗಿದೆ.ಕಮಲದ ಮಾಜಿ ಶಾಸಕ ಬಸವರಾಜ್ ನಾಯ್ಕ ಕೂಡ ಶತಾಯಗತಾಯ ಬಿಜೆಪಿಯಿಂದ ನಿಲ್ಲಲು ಯತ್ನಿಸಿದರು ಆದರೆ ಕೊನೆ ಗಳಿಗೆಯಲ್ಲಿ ಪ್ರೊ.ಲಿಂಗಪ್ಪನವರ ಹೆಸರು ಅಂತಿಮವಾದ ಬಳಿಕ, ಜೆಡಿಯು ಸೇರಿ ಕಮಲಕ್ಕೆ ಬಾಣ ಬಿಟ್ಟಿದ್ದಾರೆ. ಈ ನಡೆಯು ಕೂಡ ಒಂದು ಕಡೆ ಕಮಲಕ್ಕೆ ಮುಳ್ಳಾಗುವುದರಲ್ಲಿ ಸಂಶಯವಿಲ್ಲ .ಇನ್ನು ಇದೇ ಕ್ಷೇತ್ರದ ಮತ್ತೊಬ್ಬ ಪ್ರಮುಖರಲ್ಲಿ ಎಚ್.ಆನಂದಪ್ಪ ಕೂಡ ಟಿಕೇಟ್ ಪಡೆಯಲು ಪ್ರಯತ್ನ ಮಾಡಿದರು. ಆದರೆ ಅಧಿಕೃತವಾಗಿ ಲಿಂಗಪ್ಪನವರಿಗೆ ಘೋಷಣೆ ಯಾದ ಬಳಿಕ ಆನಂದಪ್ಪ ನವರು ಬಂಡಾಯದ ಕಹಳೆ ಮೊಳಗಿಸಿದ್ದಾರೆ.ಇನ್ನು ಒಂದೇ ಕ್ಷೇತ್ರದಲ್ಲಿ , ಒಂದೇ ಪಕ್ಷದ ವಿರುದ್ಧ ಇಬ್ಬರು ಅಭ್ಯರ್ಥಿಗಳು ಬಂಡಾಯ ಸಿಡಿಸಿದ್ದಾರೆ.ಇದರಿಂದಾಗಿ ಈ ಬಾರಿ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇಬ್ಬರ ಜಗಳದಿಂದ ಮೂರನೆ ಅವರಿಗೆ ಲಾಭವಾಗುಬಂತೆ ಇಲ್ಲಿನ ಜೆಡಿಎಸ್ ಅಭ್ಯರ್ಥಿ ಗೆ ವರ ವಾಗುವುದೆ ಕಾದು ನೋಡಬೇಕಿದೆ.
ಇನ್ನು ಜಿಲ್ಲೆಯ ಪ್ರಮುಖ ಕ್ಷೇತ್ರವಾದ ಹರಪನಹಳ್ಳಿ ಯಲ್ಲು ಬಿಜೆಪಿಯ ಬಂಡಾಯದ ಹಾರಟ ಕಡಿಮೆಯಿಲ್ಲ. ಯಡಿಯೂರಪ್ಪ ಮತ್ತು ಶ್ರೀರಾಮುಲು ಆಪ್ತರಾಗಿದ್ದ ಎನ್ .ಕೊಟ್ರೇಶ್ ಬಿಜೆಪಿಯ ಅಭ್ಯರ್ಥಿ ಯಾಗುವುದು ಕಚಿತವೆಂದಿತ್ತು ಆದರೆ ಕೊನೆ ಕ್ಷಣದಲ್ಲಿ ಕರುಣಾಕರ ರೆಡ್ಡಿಗೆ ಟಿಕೇಟ್ ಘೋಷಣೆ ಮಾಡಿದರು. ಇದರಿಂದಾಗಿ ನನಗೆ ಯಡಿಯೂರಪ್ಪ, ರಾಮುಲು ಮೋಸ ಮಾಡಿದರು ಎಂದು ಕಮಲ ಬಿಟ್ಟು ತೆನೆ ಹೊತ್ತುಕೊಂಡಿದ್ದಾರೆ. ಕಡೆಯ ಕ್ಷಣದಲ್ಲಿ ಜೆಡಿಎಸ್ ಸೇರಿದ ಕೊಟ್ರೇಶ್ ಬಿಜೆಪಿಯ ವಿರುದ್ದ ನೇರವಾಗಿ ಬಂಡಾಯದ ಬಿಸಿ ಅಲೆಯನ್ನು ನಿರ್ಮಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಕೂಡ ಬಂಡಾಯದ ಹೊಗೆ ಕಾಣಿಸುತ್ತಿದೆ.
ಬಿ ಫಾರಂ ಸಿಗುವುದಕ್ಕೂ ಮುಂಚೆಯೇ ಬಿಜೆಪಿಯ ಅಭ್ಯರ್ಥಿ ಎಂದು ಯಶವಂತರಾವ್ ಜಾಧವ್ ನಾಮಪತ್ರ ಸಲ್ಲಿಸಿದ್ದರು. ಕೊನೆ ಗಳಿಗೆಯಲ್ಲಿ ಕಮಲದ ಅಧಿಕೃತ ಅಭ್ಯರ್ಥಿ ಯಾಗಿಯೇ ಘೊಷಿತಗೊಂಡರು. ಇನ್ನು ಇದೆ ಕ್ಷೇತ್ರದಿಂದಲೆ ಎಚ್. ಎಸ್. ನಾಗರಾಜು ಕೂಡ ಕಮಲ ಪಾಳಯದಲ್ಲಿ ಟಿಕೇಟ್ ಆಕಾಂಕ್ಷಿಯಾಗಿದ್ದರು ಆದರೆ ಯಶವಂತರಾವ್ ಜಾದವ್ ಗೆ ಟಿಕೇಟ್ ನೀಡಿದ ಪರಿಣಾಮ ಪ್ರತ್ಯೇಕವಾಗಿ ಕಮಲಕ್ಕೆ ಬಂಡಾಯದ ಅಭ್ಯರ್ಥಿ ಯಾಗಿ ಕಣಕ್ಕಿಳಿದ್ದಿದ್ದಾರೆ. ಒಟ್ಟಾರೆಯಾಗಿ ಜಾತಿ ಸಮೀಕರಣ ಸೇರಿದಂತೆ ನಾನಾ ಕಾರಣಗಳಿಂದಾಗಿ ಬಿಜೆಪಿಗೆ ಬಂಡಾಯದ ಕಾವು ಜೋರಾಗಿಯೆ ತಟ್ಟಲಿದೆ . ಕಳೆದ ಬಾರಿ ತನ್ನ ಗರ್ಭದಲ್ಲಿಯೇ ಹುಟ್ಟಿದ ಕೆಜೆಪಿಯಿಂದ ಗಟ್ಟಿ ತೆಂಗಿನಕಾಯಿಯಿಂದ ತನ್ನ ನೆಲೆಯನ್ನೆ ಕಳೆದುಕೊಂಡಿತು. ಈ ಬಾರಿಯ ಬಂಡಾಯದ ಅಲೆಯಿಂದ ಬಿಜೆಪಿ ಚೇತರಿಸಿಕೊಳ್ಳುವುದು ಕಷ್ಟದಂತೆ ಕಾಣಿಸುತ್ತಿದೆ…
ಇನ್ನು ಬಂಡಾಯದ ಬಾವುಟ ಕೇವಲ ಕಮಲ ಪಾಳಯದಲ್ಲು ಅಲ್ಲದೆ ಕೈ ಪಾಳಯದಲ್ಲೂ ಸದ್ದು ಮಾಡುತ್ತಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಕ್ಷೇತ್ರದಲ್ಲಿ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಂದ ವರದಿಯನ್ನು ಅನುಸರಿಸಿ ಹಾಲಿ ಶಾಸಕ ರಾಜೇಶ್ ಗೆ ಟಿಕೇಟ್ ಮಿಸ್ಸಾಗಿತ್ತು. ಅಧಿಕೃತ ವಾಗಿ ಪುಷ್ಪಾ ಲಕ್ಷಣಸ್ವಾಮಿ ಎಂಬುವರಿಗೆ ಟಿಕೇಟ್ ಘೋಷಣೆ ಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಲಾಭಿ ನಡೆಸಿದ ಎಚ್. ಪಿ. ರಾಜೇಶ್ ರವರು ಕೈ ನಾಯಕರ ಜೊತೆ ಕಸರತ್ತು ನಡೆಸಿ ಕೊನೆಗೂ ಬಿ ಫಾರಂ ತರುವಲ್ಲಿ ಯಶಸ್ವಿಯಾದರು. ಆದರೆ ಕಾಂಗ್ರೆಸ್ ನ ಜಗಳೂರು ಅಭ್ಯರ್ಥಿ ಯೆಂದೇ ಪಕ್ಷದಿಂದ ಘೋಷಣೆ ಯಾದರು ಕೂಡ ಟಿಕೇಟ್ ನೀಡಲಿಲ್ಲವೆಂಬುದಾಗಿ ನೊಂದ ಪುಷ್ಪಾ ಲಕ್ಷ್ಮಣಸ್ವಾಮಿ ಕಾಂಗ್ರೆಸ್ ವಿರುದ್ಧ ಬಂಡಾಯದ ಕೈ ಬೀಸಿದ್ದಾರೆ. ಶತಾಯಗತಾಯ ಕಾಂಗ್ರೆಸ್ ನನ್ನು ಸೋಲಿಸಲೇ ಬೇಕೆಂದು ಪಣ ತೊಟ್ಟಿದ್ದಾರೆ.
ಜಿಲ್ಲೆಯಲ್ಲಿ ಎಂದೂ ಇಲ್ಲದ ಇಂತಹ ಬಂಡಾಯದ ಅಲೆಗಳ ಮಧ್ಯೆ ಯಾರು ತಮ್ಮ ಪಟ ಹಾರಿಸುವರೋ , ಜಿಲ್ಲೆಯಲ್ಲಿ ಬದಲಾವಣೆ ತರುವರೋ ಕಾದು ನೋಡಬೇಕಿದೆ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ7 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ6 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ6 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ3 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ3 days agoಕವಿತೆ | ದೇವರ ಹೂವು
-
ದಿನದ ಸುದ್ದಿ7 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

