ರಾಜಕೀಯ
ಹಾರು ತಿಹುದು ಏರು ತಿಹುದು ನೋಡು ಬಂಡಾಯದ ಬಾವುಟ
ಸುದ್ದಿದಿನವಿಶೇಷ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆ ಪ್ರಮುಖವಾದ ಜಿಲ್ಲೆ. ಇಲ್ಲಿನ ಜಿದ್ದಾ ಜಿದ್ದಿನ ಚುನಾವಣೆ ಈ ಬಾರಿ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿಯವರೆಗು ಜಿಲ್ಲೆಯ 8ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 116 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಲ ಪಾಳೆಯಕ್ಕೆ ತೆಂಗಿನಕಾಯಿ ಸೆಡ್ಡು ಹೊಡೆದು ನಿಂತಿತ್ತು. ಆದರೆ ಈ ಬಾರಿಯು ಕೂಡ ಬಿಜೆಪಿ ಟಿಕೇಟ್ ವಂಚಿತ ಅಭ್ಯರ್ಥಿಗಳು ಪತ್ಯೇಕವಾಗಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.ಕಳೆದ ಬಾರಿ ಕೆಜೆಪಿಯ ಹೊಡೆತ ದಿಂದ ತನ್ನ ಅಸ್ತಿತ್ವವನ್ನು ಕಳೆದಕೊಂಡ ಬಿಜೆಪಿ ಈ ಬಾರಿ ಜಿಲ್ಲೆಯಲ್ಲಿ ಕಮಲ ಅರಳಿಸಲು ಸಜ್ಜಾಗಿತ್ತು, ಆದರೆ, ಒಂದೆ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಪಟ್ಟಿ ಜೋರಾಗಿದ್ದ ಹಿನ್ನಲೆಯಲ್ಲಿ, ಟಿಕೇಟ್ ಕೈ ತಪ್ಪಿದವರು, ಬಂಡಾಯದ ಬಾವುಟವನ್ನು ಹಾರಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರ ಪ್ರಮುಖ ಕ್ಷೇತ್ರವಾಗಿದೆ. ಆದರೆ ಮಾಯಕೊಂಡ ಕ್ಷೇತ್ರದಲ್ಲಿ ಈ ಬಾರಿ ಮಾಯದಾಟ ಶುರುವಾಗಿದೆ.ಕಮಲದ ಮಾಜಿ ಶಾಸಕ ಬಸವರಾಜ್ ನಾಯ್ಕ ಕೂಡ ಶತಾಯಗತಾಯ ಬಿಜೆಪಿಯಿಂದ ನಿಲ್ಲಲು ಯತ್ನಿಸಿದರು ಆದರೆ ಕೊನೆ ಗಳಿಗೆಯಲ್ಲಿ ಪ್ರೊ.ಲಿಂಗಪ್ಪನವರ ಹೆಸರು ಅಂತಿಮವಾದ ಬಳಿಕ, ಜೆಡಿಯು ಸೇರಿ ಕಮಲಕ್ಕೆ ಬಾಣ ಬಿಟ್ಟಿದ್ದಾರೆ. ಈ ನಡೆಯು ಕೂಡ ಒಂದು ಕಡೆ ಕಮಲಕ್ಕೆ ಮುಳ್ಳಾಗುವುದರಲ್ಲಿ ಸಂಶಯವಿಲ್ಲ .ಇನ್ನು ಇದೇ ಕ್ಷೇತ್ರದ ಮತ್ತೊಬ್ಬ ಪ್ರಮುಖರಲ್ಲಿ ಎಚ್.ಆನಂದಪ್ಪ ಕೂಡ ಟಿಕೇಟ್ ಪಡೆಯಲು ಪ್ರಯತ್ನ ಮಾಡಿದರು. ಆದರೆ ಅಧಿಕೃತವಾಗಿ ಲಿಂಗಪ್ಪನವರಿಗೆ ಘೋಷಣೆ ಯಾದ ಬಳಿಕ ಆನಂದಪ್ಪ ನವರು ಬಂಡಾಯದ ಕಹಳೆ ಮೊಳಗಿಸಿದ್ದಾರೆ.ಇನ್ನು ಒಂದೇ ಕ್ಷೇತ್ರದಲ್ಲಿ , ಒಂದೇ ಪಕ್ಷದ ವಿರುದ್ಧ ಇಬ್ಬರು ಅಭ್ಯರ್ಥಿಗಳು ಬಂಡಾಯ ಸಿಡಿಸಿದ್ದಾರೆ.ಇದರಿಂದಾಗಿ ಈ ಬಾರಿ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇಬ್ಬರ ಜಗಳದಿಂದ ಮೂರನೆ ಅವರಿಗೆ ಲಾಭವಾಗುಬಂತೆ ಇಲ್ಲಿನ ಜೆಡಿಎಸ್ ಅಭ್ಯರ್ಥಿ ಗೆ ವರ ವಾಗುವುದೆ ಕಾದು ನೋಡಬೇಕಿದೆ.
ಇನ್ನು ಜಿಲ್ಲೆಯ ಪ್ರಮುಖ ಕ್ಷೇತ್ರವಾದ ಹರಪನಹಳ್ಳಿ ಯಲ್ಲು ಬಿಜೆಪಿಯ ಬಂಡಾಯದ ಹಾರಟ ಕಡಿಮೆಯಿಲ್ಲ. ಯಡಿಯೂರಪ್ಪ ಮತ್ತು ಶ್ರೀರಾಮುಲು ಆಪ್ತರಾಗಿದ್ದ ಎನ್ .ಕೊಟ್ರೇಶ್ ಬಿಜೆಪಿಯ ಅಭ್ಯರ್ಥಿ ಯಾಗುವುದು ಕಚಿತವೆಂದಿತ್ತು ಆದರೆ ಕೊನೆ ಕ್ಷಣದಲ್ಲಿ ಕರುಣಾಕರ ರೆಡ್ಡಿಗೆ ಟಿಕೇಟ್ ಘೋಷಣೆ ಮಾಡಿದರು. ಇದರಿಂದಾಗಿ ನನಗೆ ಯಡಿಯೂರಪ್ಪ, ರಾಮುಲು ಮೋಸ ಮಾಡಿದರು ಎಂದು ಕಮಲ ಬಿಟ್ಟು ತೆನೆ ಹೊತ್ತುಕೊಂಡಿದ್ದಾರೆ. ಕಡೆಯ ಕ್ಷಣದಲ್ಲಿ ಜೆಡಿಎಸ್ ಸೇರಿದ ಕೊಟ್ರೇಶ್ ಬಿಜೆಪಿಯ ವಿರುದ್ದ ನೇರವಾಗಿ ಬಂಡಾಯದ ಬಿಸಿ ಅಲೆಯನ್ನು ನಿರ್ಮಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಕೂಡ ಬಂಡಾಯದ ಹೊಗೆ ಕಾಣಿಸುತ್ತಿದೆ.
ಬಿ ಫಾರಂ ಸಿಗುವುದಕ್ಕೂ ಮುಂಚೆಯೇ ಬಿಜೆಪಿಯ ಅಭ್ಯರ್ಥಿ ಎಂದು ಯಶವಂತರಾವ್ ಜಾಧವ್ ನಾಮಪತ್ರ ಸಲ್ಲಿಸಿದ್ದರು. ಕೊನೆ ಗಳಿಗೆಯಲ್ಲಿ ಕಮಲದ ಅಧಿಕೃತ ಅಭ್ಯರ್ಥಿ ಯಾಗಿಯೇ ಘೊಷಿತಗೊಂಡರು. ಇನ್ನು ಇದೆ ಕ್ಷೇತ್ರದಿಂದಲೆ ಎಚ್. ಎಸ್. ನಾಗರಾಜು ಕೂಡ ಕಮಲ ಪಾಳಯದಲ್ಲಿ ಟಿಕೇಟ್ ಆಕಾಂಕ್ಷಿಯಾಗಿದ್ದರು ಆದರೆ ಯಶವಂತರಾವ್ ಜಾದವ್ ಗೆ ಟಿಕೇಟ್ ನೀಡಿದ ಪರಿಣಾಮ ಪ್ರತ್ಯೇಕವಾಗಿ ಕಮಲಕ್ಕೆ ಬಂಡಾಯದ ಅಭ್ಯರ್ಥಿ ಯಾಗಿ ಕಣಕ್ಕಿಳಿದ್ದಿದ್ದಾರೆ. ಒಟ್ಟಾರೆಯಾಗಿ ಜಾತಿ ಸಮೀಕರಣ ಸೇರಿದಂತೆ ನಾನಾ ಕಾರಣಗಳಿಂದಾಗಿ ಬಿಜೆಪಿಗೆ ಬಂಡಾಯದ ಕಾವು ಜೋರಾಗಿಯೆ ತಟ್ಟಲಿದೆ . ಕಳೆದ ಬಾರಿ ತನ್ನ ಗರ್ಭದಲ್ಲಿಯೇ ಹುಟ್ಟಿದ ಕೆಜೆಪಿಯಿಂದ ಗಟ್ಟಿ ತೆಂಗಿನಕಾಯಿಯಿಂದ ತನ್ನ ನೆಲೆಯನ್ನೆ ಕಳೆದುಕೊಂಡಿತು. ಈ ಬಾರಿಯ ಬಂಡಾಯದ ಅಲೆಯಿಂದ ಬಿಜೆಪಿ ಚೇತರಿಸಿಕೊಳ್ಳುವುದು ಕಷ್ಟದಂತೆ ಕಾಣಿಸುತ್ತಿದೆ…
ಇನ್ನು ಬಂಡಾಯದ ಬಾವುಟ ಕೇವಲ ಕಮಲ ಪಾಳಯದಲ್ಲು ಅಲ್ಲದೆ ಕೈ ಪಾಳಯದಲ್ಲೂ ಸದ್ದು ಮಾಡುತ್ತಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಕ್ಷೇತ್ರದಲ್ಲಿ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಂದ ವರದಿಯನ್ನು ಅನುಸರಿಸಿ ಹಾಲಿ ಶಾಸಕ ರಾಜೇಶ್ ಗೆ ಟಿಕೇಟ್ ಮಿಸ್ಸಾಗಿತ್ತು. ಅಧಿಕೃತ ವಾಗಿ ಪುಷ್ಪಾ ಲಕ್ಷಣಸ್ವಾಮಿ ಎಂಬುವರಿಗೆ ಟಿಕೇಟ್ ಘೋಷಣೆ ಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಲಾಭಿ ನಡೆಸಿದ ಎಚ್. ಪಿ. ರಾಜೇಶ್ ರವರು ಕೈ ನಾಯಕರ ಜೊತೆ ಕಸರತ್ತು ನಡೆಸಿ ಕೊನೆಗೂ ಬಿ ಫಾರಂ ತರುವಲ್ಲಿ ಯಶಸ್ವಿಯಾದರು. ಆದರೆ ಕಾಂಗ್ರೆಸ್ ನ ಜಗಳೂರು ಅಭ್ಯರ್ಥಿ ಯೆಂದೇ ಪಕ್ಷದಿಂದ ಘೋಷಣೆ ಯಾದರು ಕೂಡ ಟಿಕೇಟ್ ನೀಡಲಿಲ್ಲವೆಂಬುದಾಗಿ ನೊಂದ ಪುಷ್ಪಾ ಲಕ್ಷ್ಮಣಸ್ವಾಮಿ ಕಾಂಗ್ರೆಸ್ ವಿರುದ್ಧ ಬಂಡಾಯದ ಕೈ ಬೀಸಿದ್ದಾರೆ. ಶತಾಯಗತಾಯ ಕಾಂಗ್ರೆಸ್ ನನ್ನು ಸೋಲಿಸಲೇ ಬೇಕೆಂದು ಪಣ ತೊಟ್ಟಿದ್ದಾರೆ.
ಜಿಲ್ಲೆಯಲ್ಲಿ ಎಂದೂ ಇಲ್ಲದ ಇಂತಹ ಬಂಡಾಯದ ಅಲೆಗಳ ಮಧ್ಯೆ ಯಾರು ತಮ್ಮ ಪಟ ಹಾರಿಸುವರೋ , ಜಿಲ್ಲೆಯಲ್ಲಿ ಬದಲಾವಣೆ ತರುವರೋ ಕಾದು ನೋಡಬೇಕಿದೆ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401


ದಿನದ ಸುದ್ದಿ
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್

ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ ಮನೆಗೆಲಸದಲ್ಲಿ ತೊಡಗಿರುವ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಅಧಿನಿಯಮಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಸದನದಲ್ಲಿ ಈ ಅಧಿಸೂಚನೆಗಳನ್ನು ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆಗಳನ್ನಾಗಿ ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶನಿವಾರ ನಗರದ ದೊಡ್ಡಬೂದಿಹಾಳ್ ರಸ್ತೆಯ ತಾಜ್ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಈಗಾಗಲೇ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಗಿಗ್ ಕಾರ್ಮಿಕರನ್ನು ನೋಂದಾಯಿಸಿ, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ‘ಕರ್ನಾಟಕ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ಅಧಿನಿಯಮ-2025’ ಜಾರಿ ಮಾಡಲಾಗುವುದು. ರಾಜ್ಯದಲ್ಲಿ ವರ್ಷಕ್ಕೆ ಸುಮಾರು 4 ಕೋಟಿ ಸಿನಿಮಾ ಟಿಕೆಟ್ಗಳು ಮಾರಾಟವಾಗುತ್ತವೆ.
ಈ ಟಿಕೆಟ್ಗಳ ಮೇಲೆ ಸೆಸ್ ವಿಧಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆಸಲಾಗುತ್ತಿದೆ. ಇದಕ್ಕಾಗಿ ‘ಕರ್ನಾಟಕ ಸಿನಿಮಾ ಮತ್ತು ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024’ ಅನ್ನು ರಚಿಸಲಾಗಿದೆ. ಇದರೊಂದಿಗೆ ಮನೆಗೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ‘ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ-2025’ ರಚಿಸಲಾಗಿದೆ. ಈ ಎಲ್ಲಾ ಅಧಿನಿಯಮಗಳ ನಿಯಾವಳಿಗಳನ್ನು ರೂಪಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಅಧಿನಿಯಮಗಳನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಗೆ 5 ವರ್ಷದಲ್ಲಿ 3 ಲಕ್ಷ ಕೋಟಿ ಖರ್ಚು
ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 56 ರಿಂದ 60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿದೆ. ಈ ಮೊತ್ತ 5 ವರ್ಷಗಳಲ್ಲಿ 3 ಲಕ್ಷ ಕೋಟಿ ರೂ. ತಲುಪಬಹುದು. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟೊಂದು ಮೊತ್ತದ ಹಣವನ್ನು ನೇರವಾಗಿ ಜನರ ಕಲ್ಯಾಣಕ್ಕಾಗಿ ವ್ಯಯಿಸುತ್ತಿಲ್ಲ. ರಾಜ್ಯದಲ್ಲಿ 30 ರಿಂದ 40 ಲಕ್ಷ ಅಸಂಘಟಿತ ಕಾರ್ಮಿಕರು ಇದ್ದು, ಕಾರ್ಮಿಕ ಇಲಾಖೆ 91 ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಿದೆ. ಅಸಂಘಟಿತ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇದಕ್ಕಾಗಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ ಜಾರಿ ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 25,45,607 ಕಾರ್ಮಿಕರು, ದಾವಣಗೆರೆ ಜಿಲ್ಲೆಯಲ್ಲಿ 89,493 ಕಾರ್ಮಿಕರು ನೊಂದಣಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿಸಿದ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೂಲಕ, ಚಾಲಕರು, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್, ನಗದು, ಡಿಪೋ ಗುಮಾಸ್ತರು ಸೇರಿದಂತೆ, ಮೋಟಾರು ಕ್ಷೇತ್ರದಲ್ಲಿ ದುಡಿಯತ್ತಿರುವ ಎಲ್ಲಾ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದರು.
ಖಾಸಗಿ ವಲಯದ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶಿತ ದೃಷ್ಠಿಯಿಂದ ‘ಆಶಾದೀಪ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಯಡಿ ಉದ್ಯೋಗದಾತ ಮಾಲಿಕರು ಪಾವತಿಸಿದ ಇ.ಎಸ್.ಐ ಮತ್ತು ಇ.ಪಿ.ಎಫ್ ವಂತಿಕೆ ಮರುಪಾವತಿ, ತರಬೇತಿ ನೇಮಿಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಶಿಷ್ಯವೇತನ ಮರುಪಾವತಿ, ಹೊಸ ನೇಮಕಾತಿಗೊಂಡವರಿಗೆ ಪಾವತಿಸಿದ ವೇತನದ ಎರಡು ವರ್ಷಗಳ ಅವಧಿಗೆ ಪ್ರತಿ ಉದ್ಯೋಗಿಯ ಮಾಸಿಕ ತಲಾ 6000 ರೂ. ವೇತನವನ್ನು ಉದ್ಯೋಗದಾತರಿಗೆ ಮರುಪಾವತಿ ಮಾಡಲಾಗುವುದು ಎಂದು ಸಚಿವ ಸಂತೋಷ ಎಸ್. ಲಾಡ್ ತಿಳಿಸಿದರು.
ಸರ್ಕಾರದಿಂದ ಖಾಸಗಿ ಕಂಪನಿಗಳು ನೀಡುವ ಇ.ಪಿ.ಎಫ್ಗಳನ್ನು ಪ್ರತ್ಯೇಕವಾಗಿ ಬ್ಯಾಂಕ್ ಖಾತೆಗಳನ್ನು ತೆರದು ನಿರ್ವಹಣೆ ಮಾಡುವಂತೆ ನಿಯಮ ರೂಪಿಸಲಾಗಿದೆ. ಉದ್ಯೋಗಿ, ಕಂಪನಿ ತೊರೆದ ಸಂದರ್ಭದಲ್ಲಿ ಈ ಹಣ ನೇರವಾಗಿ ಉದ್ಯೋಗಿಯ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರಿಂದ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಜಿಲ್ಲೆಯಲ್ಲಿ ಅರ್ಹ ಅಸಂಘಟಿತ ಕಾರ್ಮಿಕರನ್ನು ಗುರತಿಸಿ ಸ್ಮಾರ್ಟ್ಕಾರ್ಡ್ ವಿತರಿಸಲಾಗುತ್ತಿದೆ. ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರಿಗೆ ಯೋಜನೆ ಮತ್ತು ಸೌಲಭ್ಯಗಳನ್ನು ಸಮಪರ್ಕವಾಗಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಬಡವರ, ಕಾರ್ಮಿಕ ವರ್ಗದವರ ಕಷ್ಟಗಳ ಬಗ್ಗೆ ಅರಿತಿರುವ ಸಚಿವ ಸಂತೋಷ್ ಲಾಡ್ ಅವರು, ಅನೇಕ ಜನಕಲ್ಯಾಣ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾರ್ಮಿಕ ಇಲಾಖೆ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುತ್ತಿದ್ದಾರೆ. ಈ ಹಿಂದೆ ಕಾರ್ಮಿಕ ಇಲಾಖೆಯಲ್ಲಿ ಮಾತ್ರ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಆದರೆ ಸಚಿವ ಲಾಡ್ ಅವರಿಂದ ಪ್ರಸ್ತುತ ಮೇ 01ರಂದು ಎಲ್ಲಾ ಇಲಾಖೆ ಹಾಗೂ ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತದೆ ಎಂದರು.
ವಿವಿಧ ಸೌಲಭ್ಯಗಳ ವಿತರಣೆ
ಕಾರ್ಯಕ್ರಮದಲ್ಲಿ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಅವಲಂಬಿತ ಮಹಿಳೆ ಜಗಳೂರಿನ ಗೌರಮ್ಮನವರಿಗೆ ರೂ.5 ಲಕ್ಷ ಪರಿಹಾರ ಧನ, ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ವಾಹನ ಚಾಲಕರ ಮಕ್ಕಳಿಗೆ ರೂ.10,000 ಶೈಕ್ಷಣಿಕ ಧನಸಹಾಯದ ಚೆಕ್ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಯಿತು.
ಕಾರ್ಮಿಕ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಬೋಧಿಸಿದರು. ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ ಸ್ವಾಗತಿಸಿದರು. ಜಂಟಿ ಕಾರ್ಮಿಕ ಆಯುಕ್ತ ಡಾ. ಎಸ್.ಬಿ. ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಚೇತನ್ ಹಾಗೂ ಸಂಡಿಗರ ಕಲಾತಂಡ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಹೊನ್ನಾಳಿ ಶಾಸಕ ಡಿ.ಜಿ.ಶಾಂತನೌಡ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿ.ಪಂ.ಸಿಇಓ ಗಿತ್ತೆ ಮಾಧವ ವಿಠಲ ರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮುಂದಿನ ಮೂರು ತಿಂಗಳಲ್ಲಿ 10 ಸಾವಿರ ನಿವೇಶನ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 2 ಸಾವಿರದ 500 ಮನೆಗಳು ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಕೂಡ ಅರ್ಹ ಫಲಾನುಭವಿಗಳಿಗೆ ಹಂಚಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ

ಸುದ್ದಿದಿನ,ದಾವಣಗೆರೆ:ಇದೇ 12 ರಂದು ಮಧ್ಯಾಹ್ನ 3 ಗಂಟೆಗೆ ನಗರದ ದೊಡ್ಡಬೂದಿಹಾಳ್ ರಸ್ತೆಯಲ್ಲಿರುವ ತಾಜ್ ಪ್ಯಾಲೇಸ್ನಲ್ಲಿ ದಾವಣಗೆರೆ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಕಾರ್ಮಿಕ ಸಚಿವರಾದ ಸಂತೋಷ್.ಎಸ್.ಲಾಡ್ ಉದ್ಘಾಟಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಘನುಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಧ ಶಾಮನೂರು.ಟಿ.ಬಸವರಾಜ್, ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್
-
ಅಂಕಣ3 days ago
ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)
-
ದಿನದ ಸುದ್ದಿ5 days ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ4 days ago
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ
-
ದಿನದ ಸುದ್ದಿ6 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ5 days ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ6 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ