ರಾಜಕೀಯ
ಹಾರು ತಿಹುದು ಏರು ತಿಹುದು ನೋಡು ಬಂಡಾಯದ ಬಾವುಟ
ಸುದ್ದಿದಿನವಿಶೇಷ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆ ಪ್ರಮುಖವಾದ ಜಿಲ್ಲೆ. ಇಲ್ಲಿನ ಜಿದ್ದಾ ಜಿದ್ದಿನ ಚುನಾವಣೆ ಈ ಬಾರಿ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿಯವರೆಗು ಜಿಲ್ಲೆಯ 8ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 116 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಲ ಪಾಳೆಯಕ್ಕೆ ತೆಂಗಿನಕಾಯಿ ಸೆಡ್ಡು ಹೊಡೆದು ನಿಂತಿತ್ತು. ಆದರೆ ಈ ಬಾರಿಯು ಕೂಡ ಬಿಜೆಪಿ ಟಿಕೇಟ್ ವಂಚಿತ ಅಭ್ಯರ್ಥಿಗಳು ಪತ್ಯೇಕವಾಗಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.ಕಳೆದ ಬಾರಿ ಕೆಜೆಪಿಯ ಹೊಡೆತ ದಿಂದ ತನ್ನ ಅಸ್ತಿತ್ವವನ್ನು ಕಳೆದಕೊಂಡ ಬಿಜೆಪಿ ಈ ಬಾರಿ ಜಿಲ್ಲೆಯಲ್ಲಿ ಕಮಲ ಅರಳಿಸಲು ಸಜ್ಜಾಗಿತ್ತು, ಆದರೆ, ಒಂದೆ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಪಟ್ಟಿ ಜೋರಾಗಿದ್ದ ಹಿನ್ನಲೆಯಲ್ಲಿ, ಟಿಕೇಟ್ ಕೈ ತಪ್ಪಿದವರು, ಬಂಡಾಯದ ಬಾವುಟವನ್ನು ಹಾರಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರ ಪ್ರಮುಖ ಕ್ಷೇತ್ರವಾಗಿದೆ. ಆದರೆ ಮಾಯಕೊಂಡ ಕ್ಷೇತ್ರದಲ್ಲಿ ಈ ಬಾರಿ ಮಾಯದಾಟ ಶುರುವಾಗಿದೆ.ಕಮಲದ ಮಾಜಿ ಶಾಸಕ ಬಸವರಾಜ್ ನಾಯ್ಕ ಕೂಡ ಶತಾಯಗತಾಯ ಬಿಜೆಪಿಯಿಂದ ನಿಲ್ಲಲು ಯತ್ನಿಸಿದರು ಆದರೆ ಕೊನೆ ಗಳಿಗೆಯಲ್ಲಿ ಪ್ರೊ.ಲಿಂಗಪ್ಪನವರ ಹೆಸರು ಅಂತಿಮವಾದ ಬಳಿಕ, ಜೆಡಿಯು ಸೇರಿ ಕಮಲಕ್ಕೆ ಬಾಣ ಬಿಟ್ಟಿದ್ದಾರೆ. ಈ ನಡೆಯು ಕೂಡ ಒಂದು ಕಡೆ ಕಮಲಕ್ಕೆ ಮುಳ್ಳಾಗುವುದರಲ್ಲಿ ಸಂಶಯವಿಲ್ಲ .ಇನ್ನು ಇದೇ ಕ್ಷೇತ್ರದ ಮತ್ತೊಬ್ಬ ಪ್ರಮುಖರಲ್ಲಿ ಎಚ್.ಆನಂದಪ್ಪ ಕೂಡ ಟಿಕೇಟ್ ಪಡೆಯಲು ಪ್ರಯತ್ನ ಮಾಡಿದರು. ಆದರೆ ಅಧಿಕೃತವಾಗಿ ಲಿಂಗಪ್ಪನವರಿಗೆ ಘೋಷಣೆ ಯಾದ ಬಳಿಕ ಆನಂದಪ್ಪ ನವರು ಬಂಡಾಯದ ಕಹಳೆ ಮೊಳಗಿಸಿದ್ದಾರೆ.ಇನ್ನು ಒಂದೇ ಕ್ಷೇತ್ರದಲ್ಲಿ , ಒಂದೇ ಪಕ್ಷದ ವಿರುದ್ಧ ಇಬ್ಬರು ಅಭ್ಯರ್ಥಿಗಳು ಬಂಡಾಯ ಸಿಡಿಸಿದ್ದಾರೆ.ಇದರಿಂದಾಗಿ ಈ ಬಾರಿ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇಬ್ಬರ ಜಗಳದಿಂದ ಮೂರನೆ ಅವರಿಗೆ ಲಾಭವಾಗುಬಂತೆ ಇಲ್ಲಿನ ಜೆಡಿಎಸ್ ಅಭ್ಯರ್ಥಿ ಗೆ ವರ ವಾಗುವುದೆ ಕಾದು ನೋಡಬೇಕಿದೆ.
ಇನ್ನು ಜಿಲ್ಲೆಯ ಪ್ರಮುಖ ಕ್ಷೇತ್ರವಾದ ಹರಪನಹಳ್ಳಿ ಯಲ್ಲು ಬಿಜೆಪಿಯ ಬಂಡಾಯದ ಹಾರಟ ಕಡಿಮೆಯಿಲ್ಲ. ಯಡಿಯೂರಪ್ಪ ಮತ್ತು ಶ್ರೀರಾಮುಲು ಆಪ್ತರಾಗಿದ್ದ ಎನ್ .ಕೊಟ್ರೇಶ್ ಬಿಜೆಪಿಯ ಅಭ್ಯರ್ಥಿ ಯಾಗುವುದು ಕಚಿತವೆಂದಿತ್ತು ಆದರೆ ಕೊನೆ ಕ್ಷಣದಲ್ಲಿ ಕರುಣಾಕರ ರೆಡ್ಡಿಗೆ ಟಿಕೇಟ್ ಘೋಷಣೆ ಮಾಡಿದರು. ಇದರಿಂದಾಗಿ ನನಗೆ ಯಡಿಯೂರಪ್ಪ, ರಾಮುಲು ಮೋಸ ಮಾಡಿದರು ಎಂದು ಕಮಲ ಬಿಟ್ಟು ತೆನೆ ಹೊತ್ತುಕೊಂಡಿದ್ದಾರೆ. ಕಡೆಯ ಕ್ಷಣದಲ್ಲಿ ಜೆಡಿಎಸ್ ಸೇರಿದ ಕೊಟ್ರೇಶ್ ಬಿಜೆಪಿಯ ವಿರುದ್ದ ನೇರವಾಗಿ ಬಂಡಾಯದ ಬಿಸಿ ಅಲೆಯನ್ನು ನಿರ್ಮಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಕೂಡ ಬಂಡಾಯದ ಹೊಗೆ ಕಾಣಿಸುತ್ತಿದೆ.
ಬಿ ಫಾರಂ ಸಿಗುವುದಕ್ಕೂ ಮುಂಚೆಯೇ ಬಿಜೆಪಿಯ ಅಭ್ಯರ್ಥಿ ಎಂದು ಯಶವಂತರಾವ್ ಜಾಧವ್ ನಾಮಪತ್ರ ಸಲ್ಲಿಸಿದ್ದರು. ಕೊನೆ ಗಳಿಗೆಯಲ್ಲಿ ಕಮಲದ ಅಧಿಕೃತ ಅಭ್ಯರ್ಥಿ ಯಾಗಿಯೇ ಘೊಷಿತಗೊಂಡರು. ಇನ್ನು ಇದೆ ಕ್ಷೇತ್ರದಿಂದಲೆ ಎಚ್. ಎಸ್. ನಾಗರಾಜು ಕೂಡ ಕಮಲ ಪಾಳಯದಲ್ಲಿ ಟಿಕೇಟ್ ಆಕಾಂಕ್ಷಿಯಾಗಿದ್ದರು ಆದರೆ ಯಶವಂತರಾವ್ ಜಾದವ್ ಗೆ ಟಿಕೇಟ್ ನೀಡಿದ ಪರಿಣಾಮ ಪ್ರತ್ಯೇಕವಾಗಿ ಕಮಲಕ್ಕೆ ಬಂಡಾಯದ ಅಭ್ಯರ್ಥಿ ಯಾಗಿ ಕಣಕ್ಕಿಳಿದ್ದಿದ್ದಾರೆ. ಒಟ್ಟಾರೆಯಾಗಿ ಜಾತಿ ಸಮೀಕರಣ ಸೇರಿದಂತೆ ನಾನಾ ಕಾರಣಗಳಿಂದಾಗಿ ಬಿಜೆಪಿಗೆ ಬಂಡಾಯದ ಕಾವು ಜೋರಾಗಿಯೆ ತಟ್ಟಲಿದೆ . ಕಳೆದ ಬಾರಿ ತನ್ನ ಗರ್ಭದಲ್ಲಿಯೇ ಹುಟ್ಟಿದ ಕೆಜೆಪಿಯಿಂದ ಗಟ್ಟಿ ತೆಂಗಿನಕಾಯಿಯಿಂದ ತನ್ನ ನೆಲೆಯನ್ನೆ ಕಳೆದುಕೊಂಡಿತು. ಈ ಬಾರಿಯ ಬಂಡಾಯದ ಅಲೆಯಿಂದ ಬಿಜೆಪಿ ಚೇತರಿಸಿಕೊಳ್ಳುವುದು ಕಷ್ಟದಂತೆ ಕಾಣಿಸುತ್ತಿದೆ…
ಇನ್ನು ಬಂಡಾಯದ ಬಾವುಟ ಕೇವಲ ಕಮಲ ಪಾಳಯದಲ್ಲು ಅಲ್ಲದೆ ಕೈ ಪಾಳಯದಲ್ಲೂ ಸದ್ದು ಮಾಡುತ್ತಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಕ್ಷೇತ್ರದಲ್ಲಿ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಂದ ವರದಿಯನ್ನು ಅನುಸರಿಸಿ ಹಾಲಿ ಶಾಸಕ ರಾಜೇಶ್ ಗೆ ಟಿಕೇಟ್ ಮಿಸ್ಸಾಗಿತ್ತು. ಅಧಿಕೃತ ವಾಗಿ ಪುಷ್ಪಾ ಲಕ್ಷಣಸ್ವಾಮಿ ಎಂಬುವರಿಗೆ ಟಿಕೇಟ್ ಘೋಷಣೆ ಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಲಾಭಿ ನಡೆಸಿದ ಎಚ್. ಪಿ. ರಾಜೇಶ್ ರವರು ಕೈ ನಾಯಕರ ಜೊತೆ ಕಸರತ್ತು ನಡೆಸಿ ಕೊನೆಗೂ ಬಿ ಫಾರಂ ತರುವಲ್ಲಿ ಯಶಸ್ವಿಯಾದರು. ಆದರೆ ಕಾಂಗ್ರೆಸ್ ನ ಜಗಳೂರು ಅಭ್ಯರ್ಥಿ ಯೆಂದೇ ಪಕ್ಷದಿಂದ ಘೋಷಣೆ ಯಾದರು ಕೂಡ ಟಿಕೇಟ್ ನೀಡಲಿಲ್ಲವೆಂಬುದಾಗಿ ನೊಂದ ಪುಷ್ಪಾ ಲಕ್ಷ್ಮಣಸ್ವಾಮಿ ಕಾಂಗ್ರೆಸ್ ವಿರುದ್ಧ ಬಂಡಾಯದ ಕೈ ಬೀಸಿದ್ದಾರೆ. ಶತಾಯಗತಾಯ ಕಾಂಗ್ರೆಸ್ ನನ್ನು ಸೋಲಿಸಲೇ ಬೇಕೆಂದು ಪಣ ತೊಟ್ಟಿದ್ದಾರೆ.
ಜಿಲ್ಲೆಯಲ್ಲಿ ಎಂದೂ ಇಲ್ಲದ ಇಂತಹ ಬಂಡಾಯದ ಅಲೆಗಳ ಮಧ್ಯೆ ಯಾರು ತಮ್ಮ ಪಟ ಹಾರಿಸುವರೋ , ಜಿಲ್ಲೆಯಲ್ಲಿ ಬದಲಾವಣೆ ತರುವರೋ ಕಾದು ನೋಡಬೇಕಿದೆ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ದಿನದ ಸುದ್ದಿ
ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ಅವರು, ದೇಶಭಕ್ತಿ ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ಪ್ರತಿಯೊಬ್ಬರೂ ತಮ್ಮ ಮೂಲಭೂತ ಕರ್ತವ್ಯಗಳನ್ನು ಅರಿತು, ತಮ್ಮ ಸಾಮರ್ಥ್ಯ, ಆಸಕ್ತಿ ಹಾಗೂ ಅಭಿರುಚಿಗೆ ತಕ್ಕಂತೆ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದರಲ್ಲಿ ಅಡಗಿದೆ ಎಂದು ಕರೆ ನೀಡಿದರು. ಪ್ರಾಮಾಣಿಕ ಪರಿಶ್ರಮ ಮತ್ತು ಜವಾಬ್ದಾರಿಯುತ ನಾಗರಿಕತ್ವವೇ ಬಲಿಷ್ಠ ಭಾರತದ ನಿರ್ಮಾಣಕ್ಕೆ ಅಡಿಪಾಯ ಎಂದರು.
ವಿದ್ಯಾರ್ಥಿಗಳ ಮನೋಜ್ಞ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಪ್ರದರ್ಶನಗಳು ಹಾಗೂ ಶಿಸ್ತುಬದ್ಧ ಮೆರವಣಿಗೆಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು. ಕೊಡಿಪಾಳ್ಯ ಮತ್ತು ಕೆಂಗೇರಿಯಲ್ಲಿ 445 ಮೀಟರ್ ಇರುವ ವಿಶೇಷ ಧ್ವಜದೊಂದಿಗೆ ವಿದ್ಯಾರ್ಥಿಗಳ ಮೆರವಣಿಗೆ ಗಮನ ಸೆಳೆಯಿತು. ಶತಪ್ರತಿಶತ ಫಲಿತಾಂಶ ಸಾಧಿಸಿದ ಬೋಧಕ ಸಿಬ್ಬಂದಿಯನ್ನು ಮತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನೇರ ಪ್ರಸಾರವೂ ನಡೆಯಿತು. 2,500 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವಿಶೇಷ ಮಧ್ಯಾಹ್ನದ ಊಟ ಮತ್ತು ಸಿಹಿತಿಂಡಿ ವ್ಯವಸ್ಥೆ ಮಾಡಲಾಗಿದ್ದು, ಒಗ್ಗಟ್ಟು ಮತ್ತು ದೇಶಪ್ರೇಮದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.
ಈ ಸಂದರ್ಭದಲ್ಲಿ ವಿವಿಐಎಸ್ ನ ಅಕಾಡೆಮಿಕ್ ಅಡ್ವೈಸರ್ ಡಾ. ರಾಜೇಶ್ವರಿ ದತ್ತಾತ್ರಿ, ವಿವಿ ವಿದ್ಯಾಸಂಸ್ಥೆಯ ಡೀನ್ ಶ್ರೀ ಕಿಶೋರ್ ಕಟ್ಟ, ಪ್ರಾಂಶುಪಾಲೆ ಶ್ರೀಮತಿ ಲಕ್ಷ್ಮಿ ಟಿ.ಎನ್, ಕೆಪಿಸಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ. ಐ. ಚೆನ್ನಾರೆಡ್ಡಿ, ಸಿಬಿಎಸ್ಇ ಪ್ರಾಂಶುಪಾಲರಾದ ಪ್ರೊ. ಪ್ರಹ್ಲಾದ, ಉಪಪ್ರಾಂಶುಪಾಲರಾದ ಶ್ರೀ ಮದನ್ ರಾಜ್, ಪ್ರಾಂಶುಪಾಲರಾದ ಡಾ. ಸುರೇಶ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.
ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ2 days agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ2 days agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ದಿನದ ಸುದ್ದಿ22 hours agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

