ದಿನದ ಸುದ್ದಿ
ಪ್ರಾರ್ಥನಾ ಮಂದಿರಗಳಲ್ಲಿ ಅನುಮತಿಗಿಂತ ಹೆಚ್ಚು ಡೆಸಿಬಲ್ ಮೀರಿ ಧ್ವನಿವರ್ಧಕ ಬಳಸಿದವರ ಮೇಲೆ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ : ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ
ಸುದ್ದಿದಿನ,ದಾವಣಗೆರೆ : ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು, ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರು ಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆ ಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ ಹಿತರಕ್ಷಣೆ ನಿಮ್ಮ ಕರ್ತವ್ಯವೆಂದು ತಿಳಿದು ಕಾರ್ಯನಿರ್ವಹಿಸಿ ಎಂದು ಗೃಹ ಸಚಿವರಾದ ಅರಗ ಜ್ಞಾನೇಂದ್ರ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಯಾರು ಅಸಹಾಯಕರು ಗೌರವಸ್ಥರು ಇರುತ್ತಾರೋ ಅವರ ಪರವಾಗಿ ಪೊಲೀಸ್ ಇಲಾಖೆ ಕೆಲಸ ಮಾಡಬೇಕು, ಪೊಲೀಸರೆಂದರೆ ಸಾರ್ವಜನಿಕರ ಹಿತೈಶಿಗಳೆಂಬ ಭಾವನೆ ಬರಬೇಕು, ಕಾನೂನು ಸುವ್ಯವಸ್ಥೆಯ ಬಗೆಗೆ ಕಾಳಜಿವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಬೀಟ್ ವ್ಯವಸ್ಥೆಯನ್ನು ಬಲಪಡಿಸಿ, ಬೀಟ್ ಪೊಲೀಸರಿಗೆ ಅವರ ಏರಿಯಾದ ಎಲ್ಲಾ ಮಾಹಿತಿ ಇರಬೇಕು ಕೇವಲ ಬೀಟ್ ಇದೆ ಎಂದು ಆಪ್ರದೇಶಗಳಿಗೆ ಹೋಗಿ ಬರುವುದಲ್ಲ, ಅಲ್ಲಿ ನಡೆಯುವ ಪ್ರತಿ ಚಟುವಟಿಕೆ ನಿಮ್ಮ ಅರಿವಿಗಿರಬೇಕು ಹಾಗೂ ಏನಾದರು ವಿಷಯಗಳಿದ್ದರೆ ಮೇಲಧಿಕಾರಿಗಳ ಗಮನಕ್ಕೆ ತರಬೇಕು.
ರಾಜ್ಯದ ನಗರಗಳ ಕೆಲ ಭಾಗಗಳಲ್ಲಿ ವೀದೇಶಿ ಸಂಪರ್ಕದ ವ್ಯಕ್ತಿಗಳು ಈ ದೇಶದ ಏಕತೆ ಹಾಳು ಮಾಡಲು ಸಂಚು ರೂಪಿಸುತ್ತಿರುವ ಘಟನೆಗಳು ಜರುಗುತ್ತಿವೆ, ಆದ್ದರಿಂದ ನಿಮ್ಮ ಠಾಣಾ ವ್ಯಾಪ್ತಿಯ ಸಮಗ್ರ ಚಿತ್ರಣ ನಿಮಗಿರಬೇಕು, ನಿಮ್ಮ ಏರಿಯಾಗೆ ಬಂದಿರುವ ಹೊಸ ವ್ಯಕ್ತಿಗಳು ಅವರ ಚಲನವಲನ, ಅವರ ಪೂರ್ವಾಪರಗಳ ಮಾಹಿತಿ ನಿಮ್ಮಲ್ಲಿದ್ದರೆ ಅಹಿತಕರ ಘಟನೆಗಳನ್ನು ತಪ್ಪಿಸಬಹುದು. ಕೆಲ ಏರಿಯಾಗಳಿಗೆ ಪೊಲೀಸರೇ ಹೋಗಲು ಹಿಂದು ಮುಂದು ನೋಡುತ್ತಾರೆ, ಸೂಕ್ಷ್ಮ ಪ್ರದೇಶಗಳೆಂಬ ಸಬೂಬು ಹೇಳುತ್ತಾರೆ.
ಸೂಕ್ಷ್ಮ ಪ್ರದೇಶಗಳಿಗೆ ಹೋಗಬಾರದು ಅನ್ನುವುದಕ್ಕಿಂತ ನಾವಿದ್ದೇವೆ ಅಲ್ಲಿಗೆ ಹೋಗಿ ಎಂದು ಧೈರ್ಯ ತುಂಬಬೇಕು, ಪೊಲೀಸರೇ ಹೀಗಾದರೆ ದೇಶದ ಶಾಂತಿ ಸುವ್ಯವಸ್ಥೆ ಕಾಪಾಡುವವರು ಯಾರು? ವಿಘಟನಕಾರಿ ಶಕ್ತಿಗಳ ಎಡೆಮುರಿ ಕಟ್ಟುವುದು ಪೊಲೀಸರ ಧ್ಯೇಯವಾಗಬೇಕೆಂದರು.
ಜಿಲ್ಲೆಯ ಹಲವು ಕಡೆಗಳಲ್ಲಿ ಜೂಜು, ಮಟ್ಕಾ, ಎಗ್ಗಿಲ್ಲದೆ ನಡೆಯುತ್ತಿವೆ ಎಂದು ಸಾರ್ವಜನಿಕರು ದೂರು ನೀಡಿದ್ದು ತಕ್ಷಣವೇ ಇಂತಹ ಚಟುವಟಿಕೆಗಳು ನಿಲ್ಲಬೇಕು, ಇಂತಹ ಚಟುವಟಿಕೆಗಳು ಮುಂದುವರಿದರೆ ಆ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಪ್ರಾರ್ಥನಾ ಮಂದಿರಗಳಲ್ಲಿ ಅನುಮತಿಗಿಂತ ಹೆಚ್ಚು ಡೆಸಿಬಲ್ ಹಾಗೂ ನಿಗದಿತ ಸಮಯ ಮೀರಿ ಧ್ವನಿವರ್ಧಕ ಬಳಸಿದವರ ಮೇಲೇ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ, ಉಚ್ಚನ್ಯಾಯಾಲಯದ ಆದೇಶವನ್ನು ಪಾಲಿಸುವುದು ಎಲ್ಲರ ಕರ್ತವ್ಯ, ಪೋಲೀಸ್ ಇಲಾಖೆ ನ್ಯಾಯಾಲಯದ ಆಜ್ಞೆಯನ್ನು ಕಟ್ಟುನಿಟ್ಟು ಜಾರಿಗೆ ಕಾರ್ಯನಿರ್ವಹಿಸಬೇಕೆಂದರು.
ಅನಧಿಕೃತ ಕಸಾಯಿ ಖಾನೆಗಳು ಹಾಗೂ ಅಕ್ರಮ ಗೋ ಸಾಗಾಣಿಕೆಯನ್ನು ಸರ್ಕಾರ ಸಹಿಸುವುದಿಲ್ಲ, ಎಲ್ಲೇ ಅಕ್ರಮ ಗೋ ಸಾಗಾಣಿಕೆ ಕಂಡುಬಂದರೆ ತಕ್ಷಣ ಸ್ಪಂದಿಸಿ ಗೋವುಗಳು ಕಟುಕರ ಪಾಲಾಗುವುದನ್ನು ತಪ್ಪಿಸಿ, ಅಕ್ರಮ ಗೋವು ಸಾಗಾಣಿಕೆದಾರರನ್ನ ಸಂಘಟನೆಗಳು ಹಿಡಿದು ಕೊಡುವುದಾದರೆ ನಿಮ್ಮ ಕೆಲಸವೇನು? ಸಬೂಬುಗಳನ್ನು ಹೇಳದೆ ಕೆಲಸ ಮಾಡಿ ತೋರಿಸಿ ಸರ್ಕಾರ ಈ ಕುರಿತು ಕಠಿಣ ಕಾನೂನುಗಳನ್ನು ಮಾಡಿದ್ದು, ಸರ್ಕಾರದ ಆಶಯ ಗೋವುಗಳು ಉಳಿಯಬೇಕು. ಸರ್ಕಾರದ ಆಶಯದಂತೆ ಕೆಲಸ ಮಾಡಿ ಎಂದರು.
ಅಕ್ರಮ ಮದ್ಯ ಮಾರಾಟ ನಿಲ್ಲಬೇಕು
ಗ್ರಾಮಾಂತರ ಪ್ರದೇಶಗಳಲ್ಲಿ ಮನೆ ಮನೆಯಲ್ಲಿಯೂ ಮದ್ಯ ಮಾರಾಟ ಮಾಡಲಾಗುತ್ತಿದೆಯೆಂಬ ದೂರುಗಳನ್ನು ಹಲವರು ನೀಡಿದ್ದು ಎಷ್ಟು ಕೇಸ್ ದಾಖಲಿಸಲಾಗಿದೆ? ಕಾಟಾಚಾರಕ್ಕೆ ಒಂದೆರಡು ಕೇಸ್ ದಾಖಲಿಸಿದರೆ ಸಾಲದು, ಸಂಪೂರ್ಣ ಅಕ್ರಮ ಮದ್ಯ ಮಾರಾಟ ನಿಲ್ಲಬೇಕು, ಯಾರೋ ಒಬ್ಬ ವ್ಯಕ್ತಿ ಅಕ್ರಮ ಮದ್ಯ ಮಾರಿ ಹತ್ತು ರೂಪಾಯಿ ತೆಗೆದುಕೊಂಡವನನ್ನು ಹಿಡಿಯುವುದಲ್ಲ, ಅವನಿಗೆ ಅಕ್ರಮ ಮದ್ಯ ಪೂರೈಸಿದ ಅಂಗಡಿಯವನನ್ನು ಹಿಡಿದು ಕೇಸ್ ಹಾಕಬೇಕು.
ಇಲ್ಲದಿದ್ದರೆ ಕುಡಿದು ಕುಡಿದು ಬಡವರು, ದಲಿತರು ಕೂಲಿಕಾರರು ಸಾಯ್ತಾರೆ, ಹಾಗಾಗಿ ಬಡವರ ಜೀವಕ್ಕೂ ಬೆಲೆಯಿದೆ ಎಂಬ ಅರಿವು ಇರಲಿ ಒಟ್ಟಾರೆ ಪೊಲೀಸರಂದ್ರೆ ಜನರಿಗೆ ಗೌರವ ಮರ್ಯಾದೆ ಭಯ ಇರುವಂತೆ ಕಾರ್ಯನಿರ್ವಹಿಸಿ ಎಂದರು.
ನಿಮ್ಮ ವರದಿಯಲ್ಲಿ 1602 ರೌಡಿ ಶೀಟರ್ಗಳು ಇದ್ದಾರೆಂದು ತೋರಿಸಿದ್ದೀರಿ ಒಂದು ಜಿಲ್ಲೆಯಲ್ಲಿ ಇಷ್ಟೊಂದು ರೌಡಿಗಳು ಇರಲು ಸಾಧ್ಯವೇ, ಯಾರದೇ ವಿರುದ್ದ ದುರುದ್ದೇಶಪೂರ್ವಕ ರೌಡಿ ಶೀಟರ್ ಹಾಕುವುದು ಬೇಡ ಎಂದರು.
ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಮಾಹಿತಿ ನೀಡಿ ಧ್ವನಿವರ್ಧಕ ಬಳಕೆ ಸಂಭಂಧ 331 ಅರ್ಜಿಗಳು ಬಂದಿದ್ದು 167 ಪರವಾನಗಿ ನೀಡಲಾಗಿದೆ, ಧ್ವನಿವರ್ಧಕಗಳ ಡೆಸಿಬಲ್ ಪರೀಕ್ಷಿಸಲು ಪ್ರತಿ ಠಾಣೆಯಲ್ಲಿ ಒಬ್ಬ ಸಿಬ್ಬಂದಿ ಇರುತ್ತಾರೆ, ಹಾಗೂ ನಿಗದಿತ ಅವಧಿಯೊಳಗೆ ಧ್ವನಿವರ್ಧಕಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.
ಕೆಲವರು ಒಂದು ವರ್ಷ ಹಾಗೂ ಎರಡು ವರ್ಷಗಳಿಗೆ ಅನುಮತಿ ಪಡೆದಿದ್ದಾರೆ ಎಂದರು ಹಾಗೂ ಇಲಾಖೆಯ ಪ್ರಗತಿ ಮಾಹಿತಿ ನೀಡಿದರು. ಸಭೆಯಲ್ಲಿ ಐಜಿಪಿ ತ್ಯಾಗರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ1 day ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ3 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ2 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
-
ದಿನದ ಸುದ್ದಿ3 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ