Connect with us

ದಿನದ ಸುದ್ದಿ

ಪ್ರಾರ್ಥನಾ ಮಂದಿರಗಳಲ್ಲಿ ಅನುಮತಿಗಿಂತ ಹೆಚ್ಚು ಡೆಸಿಬಲ್ ಮೀರಿ ಧ್ವನಿವರ್ಧಕ ಬಳಸಿದವರ ಮೇಲೆ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ : ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ

Published

on

ಸುದ್ದಿದಿನ,ದಾವಣಗೆರೆ : ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು, ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರು ಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆ ಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ ಹಿತರಕ್ಷಣೆ ನಿಮ್ಮ ಕರ್ತವ್ಯವೆಂದು ತಿಳಿದು ಕಾರ್ಯನಿರ್ವಹಿಸಿ ಎಂದು ಗೃಹ ಸಚಿವರಾದ ಅರಗ ಜ್ಞಾನೇಂದ್ರ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಯಾರು ಅಸಹಾಯಕರು ಗೌರವಸ್ಥರು ಇರುತ್ತಾರೋ ಅವರ ಪರವಾಗಿ ಪೊಲೀಸ್ ಇಲಾಖೆ ಕೆಲಸ ಮಾಡಬೇಕು, ಪೊಲೀಸರೆಂದರೆ ಸಾರ್ವಜನಿಕರ ಹಿತೈಶಿಗಳೆಂಬ ಭಾವನೆ ಬರಬೇಕು, ಕಾನೂನು ಸುವ್ಯವಸ್ಥೆಯ ಬಗೆಗೆ ಕಾಳಜಿವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಬೀಟ್ ವ್ಯವಸ್ಥೆಯನ್ನು ಬಲಪಡಿಸಿ, ಬೀಟ್ ಪೊಲೀಸರಿಗೆ ಅವರ ಏರಿಯಾದ ಎಲ್ಲಾ ಮಾಹಿತಿ ಇರಬೇಕು ಕೇವಲ ಬೀಟ್ ಇದೆ ಎಂದು ಆಪ್ರದೇಶಗಳಿಗೆ ಹೋಗಿ ಬರುವುದಲ್ಲ, ಅಲ್ಲಿ ನಡೆಯುವ ಪ್ರತಿ ಚಟುವಟಿಕೆ ನಿಮ್ಮ ಅರಿವಿಗಿರಬೇಕು ಹಾಗೂ ಏನಾದರು ವಿಷಯಗಳಿದ್ದರೆ ಮೇಲಧಿಕಾರಿಗಳ ಗಮನಕ್ಕೆ ತರಬೇಕು.

ರಾಜ್ಯದ ನಗರಗಳ ಕೆಲ ಭಾಗಗಳಲ್ಲಿ ವೀದೇಶಿ ಸಂಪರ್ಕದ ವ್ಯಕ್ತಿಗಳು ಈ ದೇಶದ ಏಕತೆ ಹಾಳು ಮಾಡಲು ಸಂಚು ರೂಪಿಸುತ್ತಿರುವ ಘಟನೆಗಳು ಜರುಗುತ್ತಿವೆ, ಆದ್ದರಿಂದ ನಿಮ್ಮ ಠಾಣಾ ವ್ಯಾಪ್ತಿಯ ಸಮಗ್ರ ಚಿತ್ರಣ ನಿಮಗಿರಬೇಕು, ನಿಮ್ಮ ಏರಿಯಾಗೆ ಬಂದಿರುವ ಹೊಸ ವ್ಯಕ್ತಿಗಳು ಅವರ ಚಲನವಲನ, ಅವರ ಪೂರ್ವಾಪರಗಳ ಮಾಹಿತಿ ನಿಮ್ಮಲ್ಲಿದ್ದರೆ ಅಹಿತಕರ ಘಟನೆಗಳನ್ನು ತಪ್ಪಿಸಬಹುದು. ಕೆಲ ಏರಿಯಾಗಳಿಗೆ ಪೊಲೀಸರೇ ಹೋಗಲು ಹಿಂದು ಮುಂದು ನೋಡುತ್ತಾರೆ, ಸೂಕ್ಷ್ಮ ಪ್ರದೇಶಗಳೆಂಬ ಸಬೂಬು ಹೇಳುತ್ತಾರೆ.

ಸೂಕ್ಷ್ಮ ಪ್ರದೇಶಗಳಿಗೆ ಹೋಗಬಾರದು ಅನ್ನುವುದಕ್ಕಿಂತ ನಾವಿದ್ದೇವೆ ಅಲ್ಲಿಗೆ ಹೋಗಿ ಎಂದು ಧೈರ್ಯ ತುಂಬಬೇಕು, ಪೊಲೀಸರೇ ಹೀಗಾದರೆ ದೇಶದ ಶಾಂತಿ ಸುವ್ಯವಸ್ಥೆ ಕಾಪಾಡುವವರು ಯಾರು? ವಿಘಟನಕಾರಿ ಶಕ್ತಿಗಳ ಎಡೆಮುರಿ ಕಟ್ಟುವುದು ಪೊಲೀಸರ ಧ್ಯೇಯವಾಗಬೇಕೆಂದರು.
ಜಿಲ್ಲೆಯ ಹಲವು ಕಡೆಗಳಲ್ಲಿ ಜೂಜು, ಮಟ್ಕಾ, ಎಗ್ಗಿಲ್ಲದೆ ನಡೆಯುತ್ತಿವೆ ಎಂದು ಸಾರ್ವಜನಿಕರು ದೂರು ನೀಡಿದ್ದು ತಕ್ಷಣವೇ ಇಂತಹ ಚಟುವಟಿಕೆಗಳು ನಿಲ್ಲಬೇಕು, ಇಂತಹ ಚಟುವಟಿಕೆಗಳು ಮುಂದುವರಿದರೆ ಆ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಪ್ರಾರ್ಥನಾ ಮಂದಿರಗಳಲ್ಲಿ ಅನುಮತಿಗಿಂತ ಹೆಚ್ಚು ಡೆಸಿಬಲ್ ಹಾಗೂ ನಿಗದಿತ ಸಮಯ ಮೀರಿ ಧ್ವನಿವರ್ಧಕ ಬಳಸಿದವರ ಮೇಲೇ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ, ಉಚ್ಚನ್ಯಾಯಾಲಯದ ಆದೇಶವನ್ನು ಪಾಲಿಸುವುದು ಎಲ್ಲರ ಕರ್ತವ್ಯ, ಪೋಲೀಸ್ ಇಲಾಖೆ ನ್ಯಾಯಾಲಯದ ಆಜ್ಞೆಯನ್ನು ಕಟ್ಟುನಿಟ್ಟು ಜಾರಿಗೆ ಕಾರ್ಯನಿರ್ವಹಿಸಬೇಕೆಂದರು.

ಅನಧಿಕೃತ ಕಸಾಯಿ ಖಾನೆಗಳು ಹಾಗೂ ಅಕ್ರಮ ಗೋ ಸಾಗಾಣಿಕೆಯನ್ನು ಸರ್ಕಾರ ಸಹಿಸುವುದಿಲ್ಲ, ಎಲ್ಲೇ ಅಕ್ರಮ ಗೋ ಸಾಗಾಣಿಕೆ ಕಂಡುಬಂದರೆ ತಕ್ಷಣ ಸ್ಪಂದಿಸಿ ಗೋವುಗಳು ಕಟುಕರ ಪಾಲಾಗುವುದನ್ನು ತಪ್ಪಿಸಿ, ಅಕ್ರಮ ಗೋವು ಸಾಗಾಣಿಕೆದಾರರನ್ನ ಸಂಘಟನೆಗಳು ಹಿಡಿದು ಕೊಡುವುದಾದರೆ ನಿಮ್ಮ ಕೆಲಸವೇನು? ಸಬೂಬುಗಳನ್ನು ಹೇಳದೆ ಕೆಲಸ ಮಾಡಿ ತೋರಿಸಿ ಸರ್ಕಾರ ಈ ಕುರಿತು ಕಠಿಣ ಕಾನೂನುಗಳನ್ನು ಮಾಡಿದ್ದು, ಸರ್ಕಾರದ ಆಶಯ ಗೋವುಗಳು ಉಳಿಯಬೇಕು. ಸರ್ಕಾರದ ಆಶಯದಂತೆ ಕೆಲಸ ಮಾಡಿ ಎಂದರು.

ಅಕ್ರಮ ಮದ್ಯ ಮಾರಾಟ ನಿಲ್ಲಬೇಕು

ಗ್ರಾಮಾಂತರ ಪ್ರದೇಶಗಳಲ್ಲಿ ಮನೆ ಮನೆಯಲ್ಲಿಯೂ ಮದ್ಯ ಮಾರಾಟ ಮಾಡಲಾಗುತ್ತಿದೆಯೆಂಬ ದೂರುಗಳನ್ನು ಹಲವರು ನೀಡಿದ್ದು ಎಷ್ಟು ಕೇಸ್ ದಾಖಲಿಸಲಾಗಿದೆ? ಕಾಟಾಚಾರಕ್ಕೆ ಒಂದೆರಡು ಕೇಸ್ ದಾಖಲಿಸಿದರೆ ಸಾಲದು, ಸಂಪೂರ್ಣ ಅಕ್ರಮ ಮದ್ಯ ಮಾರಾಟ ನಿಲ್ಲಬೇಕು, ಯಾರೋ ಒಬ್ಬ ವ್ಯಕ್ತಿ ಅಕ್ರಮ ಮದ್ಯ ಮಾರಿ ಹತ್ತು ರೂಪಾಯಿ ತೆಗೆದುಕೊಂಡವನನ್ನು ಹಿಡಿಯುವುದಲ್ಲ, ಅವನಿಗೆ ಅಕ್ರಮ ಮದ್ಯ ಪೂರೈಸಿದ ಅಂಗಡಿಯವನನ್ನು ಹಿಡಿದು ಕೇಸ್ ಹಾಕಬೇಕು.

ಇಲ್ಲದಿದ್ದರೆ ಕುಡಿದು ಕುಡಿದು ಬಡವರು, ದಲಿತರು ಕೂಲಿಕಾರರು ಸಾಯ್ತಾರೆ, ಹಾಗಾಗಿ ಬಡವರ ಜೀವಕ್ಕೂ ಬೆಲೆಯಿದೆ ಎಂಬ ಅರಿವು ಇರಲಿ ಒಟ್ಟಾರೆ ಪೊಲೀಸರಂದ್ರೆ ಜನರಿಗೆ ಗೌರವ ಮರ್ಯಾದೆ ಭಯ ಇರುವಂತೆ ಕಾರ್ಯನಿರ್ವಹಿಸಿ ಎಂದರು.

ನಿಮ್ಮ ವರದಿಯಲ್ಲಿ 1602 ರೌಡಿ ಶೀಟರ್ಗಳು ಇದ್ದಾರೆಂದು ತೋರಿಸಿದ್ದೀರಿ ಒಂದು ಜಿಲ್ಲೆಯಲ್ಲಿ ಇಷ್ಟೊಂದು ರೌಡಿಗಳು ಇರಲು ಸಾಧ್ಯವೇ, ಯಾರದೇ ವಿರುದ್ದ ದುರುದ್ದೇಶಪೂರ್ವಕ ರೌಡಿ ಶೀಟರ್ ಹಾಕುವುದು ಬೇಡ ಎಂದರು.

ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಮಾಹಿತಿ ನೀಡಿ ಧ್ವನಿವರ್ಧಕ ಬಳಕೆ ಸಂಭಂಧ 331 ಅರ್ಜಿಗಳು ಬಂದಿದ್ದು 167 ಪರವಾನಗಿ ನೀಡಲಾಗಿದೆ, ಧ್ವನಿವರ್ಧಕಗಳ ಡೆಸಿಬಲ್ ಪರೀಕ್ಷಿಸಲು ಪ್ರತಿ ಠಾಣೆಯಲ್ಲಿ ಒಬ್ಬ ಸಿಬ್ಬಂದಿ ಇರುತ್ತಾರೆ, ಹಾಗೂ ನಿಗದಿತ ಅವಧಿಯೊಳಗೆ ಧ್ವನಿವರ್ಧಕಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.

ಕೆಲವರು ಒಂದು ವರ್ಷ ಹಾಗೂ ಎರಡು ವರ್ಷಗಳಿಗೆ ಅನುಮತಿ ಪಡೆದಿದ್ದಾರೆ ಎಂದರು ಹಾಗೂ ಇಲಾಖೆಯ ಪ್ರಗತಿ ಮಾಹಿತಿ ನೀಡಿದರು. ಸಭೆಯಲ್ಲಿ ಐಜಿಪಿ ತ್ಯಾಗರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending