Connect with us

ದಿನದ ಸುದ್ದಿ

ವಿ.ವಿ.ಗಳಿಗೆ ಬೋಧಕರ ನೇಮಕಾತಿ ; ಕೆಇಎ ಮೂಲಕ ಪರೀಕ್ಷೆ: ಮೆರಿಟ್ ಪಟ್ಟಿಯಲ್ಲೇ ಆಯ್ಕೆ

Published

on

ಸುದ್ದಿದಿನ,ಬೆಂಗಳೂರು: ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಈ ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳನ್ನೇ 1:5ರ ಅನುಪಾತದಲ್ಲಿ ವಿಶ್ವವಿದ್ಯಾಲಯಗಳು ಸಂದರ್ಶನಕ್ಕೆ ಆಹ್ವಾನಿಸಿ, ನೇಮಕಾತಿಯನ್ನು ಮಾಡಿಕೊಳ್ಳಬಹುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಇದೊಂದು‌ ಹೊಸ ವ್ಯವಸ್ಥೆ ಆಗಿದ್ದು ನೇಮಕಾತಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಈ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.

11 ರಿಂದ ಪ್ರವೇಶ

ಪದವಿ ಕಾಲೇಜುಗಳಿಗೆ ಜುಲೈ 11ರಿಂದ 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತದೆ. ಇದೇ ಮೊದಲ ಬಾರಿಗೆ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ. ಎಲ್ಲವೂ ಆನ್ ಲೈನ್ ನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಸಿಂಗಲ್ ಲಾಗಿನ್ ನಿಂದಲೇ ಯಾವ ಕಾಲೇಜಿಗೆ ಬೇಕಾದರೂ ಅರ್ಜಿ ಹಾಕಬಹುದು. ಅರ್ಜಿ ಹಾಕಲು ಬೇರೆ ಬೇರೆ ಸಂಸ್ಥೆಗಳಿಗೆ ಓಡಾಡುವ ಅಗತ್ಯ ಇಲ್ಲ. ಪಿಯುಸಿ ನಂಬರ್ ಹಾಕಿದರೆ ಆಂಕಪಟ್ಟಿಗೆ ಸಂಬಂಧಿಸಿದ ಮಾಹಿತಿ ಸಿಗಲಿದೆ. ಉಳಿದಂತೆ, ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಇತ್ಯಾದಿಗಳು ಕೂಡ ಆಧಾರ್ ದೃಢೀಕರಣದಿಂದ ಸಿಗಲಿವೆ ಎಂದು ಸಚಿವರು ವಿವರಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರದಲ್ಲಿ ಎರಡನೇ ವರ್ಷಕ್ಕೆ ಬೇಕಾದ ಪಠ್ಯಕ್ರಮದ ಬಗ್ಗೆ ಇತ್ತೀಚೆಗೆ ಕುಲಪತಿಗಳ ಸಭೆ ನಡೆಸಲಾಗಿದೆ. ಹಾಗೆಯೇ ಮೊದಲನೇ ವರ್ಷದಲ್ಲಿ ಎನ್ ಇ ಪಿ 2020 ಅನುಷ್ಠಾನವನ್ನು ಪರಿಣಾಮಕಾರಿಯಾಗಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.

ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 100 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸಂಗ್ರಹವಾಗುವ ಶುಲ್ಕವನ್ನು ಇನ್ನು ಮುಂದೆ ಕಾಲೇಜುಗಳಲ್ಲೇ ಬಳಸಲು ಅವಕಾಶ ನೀಡಲಾಗಿದೆ. ಸ್ವಾತಂತ್ರ್ಯ ಬಂದ ಮೇಲೆ ಇದೇ ಮೊದಲು ಈ ರೀತಿಯ ತೀರ್ಮಾನ ಮಾಡಲಾಗಿದೆ. ವರ್ಷಕ್ಕೆ ಕನಿಷ್ಠ 50 ಕೋಟಿ ರೂಪಾಯಿ ಹಣ ಕಾಲೇಜುಗಳಲ್ಲೇ ಉಳಿಯಲಿದ್ದು ಅದರಿಂದ ಕಾಲೇಜುಗಳಲ್ಲಿನ ಸಣ್ಣಪುಟ್ಟ ಖರ್ಚುಗಳಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದರು.

ಈಗ ವಿ.ವಿ.ಗಳ ಮೂಲಕ ಸರ್ಕಾರಕ್ಕೆ ಭೌತಿಕ ಕಡತ ಸಲ್ಲಿಸಲು ಅವಕಾಶ ನಿರಾಕರಿಸಲಾಗಿದೆ. ಎಲ್ಲಾ ಕಡತಗಳು ಇ-ಆಫೀಸ್ ಮೂಲಕವೇ ಬರುತ್ತಿದ್ದು, 32,000 ಇ- ಕಡತಗಳು ಸೃಜನೆಗೊಂಡಿವೆ. ಜೊತೆಗೆ, 11 ಲಕ್ಷ ವಿದ್ಯಾರ್ಥಿಗಳಿಗೆ 1600 ಕೋಟಿ ರೂಪಾಯಿಗಳನ್ನು ಪೋರ್ಟಲ್ ಮೂಲಕ ಅವರವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಎಲ್ಲಾ ವಿ.ವಿ.ಗಳಲ್ಲೂ ಎಚ್.ಆರ್.ಎಂ.ಎಸ್. ಪ್ಲ್ಯಾಟ್ ಫಾರ್ಮ್ ಮೂಲಕವೇ ವೇತನ ಪಾವತಿ ಆಗುತ್ತಿದೆ ಎಂದು ಹೇಳಿದರು.

ಐಐಎಂ ಮಾದರಿಯಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಡಾ.ವಾಸುದೇವ ಅತ್ರೆ ಸಮಿತಿ ವರದಿ ಕೊಟ್ಟಿದೆ. ಇದರ ಪ್ರಕಾರ ಹೊಸ‌ ಕಾಯ್ದೆ ರಚಿಸಲು ಉದ್ದೇಶಿಸಿದ್ದು ಅದನ್ನು ಸಾರ್ವಜನಿಕರ ಅವಗಹನೆಗೆ ಉನ್ನತ ಶಿಕ್ಷಣ ಇಲಾಖೆ ವೆಬ್ ಸೈಟ್ ನಲ್ಲಿ ಹಾಕಲಾಗಿದೆ. ಸಾರ್ವಜನಿಕರು‌ ಹೊಸ ಕಾಯ್ದೆ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದು ಎಂದರು.

ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243,

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending