ದಿನದ ಸುದ್ದಿ
ಧಾರಾಕಾರ ಮಳೆ ; ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚನೆ
ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಬಹುತೇಕ ಎಲ್ಲಾ ಭಾಗಗಳಲ್ಲಿ 100 ಮಿಲಿಮೀಟರ್ಗೂ ಹೆಚ್ಚು ಮಳೆಯಾಗಿದೆ. ಈ ಸಂಬಂಧ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚಿಸಲಾಗಿದೆ. ಮುಖ್ಯಮಂತ್ರಿಗಳು ಇಂದು ಮಳೆಯಿಂದ ಹಾನಿಗೊಳಗಾದ ಕೆಲಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಘೋಷಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243