ರಾಜಕೀಯ
ಜನಪ್ರತಿನಿಧಿಗಳು ಹಳ್ಳಿಗಳ ಧ್ವನಿಯಾಗಬೇಕು : ಸಚಿವ ಕೆ.ಎಸ್.ಈಶ್ವರಪ್ಪ ಅಭಿಮತ
ಸುದ್ದಿದಿನ,ಕಲಬುರಗಿ : ಬೇಸಿಗೆ ಸಮೀಪಿಸುತ್ತಿದ್ದು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವವುಂಟಾಗದಂತೆ ನೀರಿನ ಸೌಕರ್ಯ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು, ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳು ಜನರ ಸಮಸ್ಯೆ ನೀಗಿಸುವಲ್ಲಿ ಹಳ್ಳಿಗಳ ಧನಿಯಾಗಿ ಕೆಲಸ ಮಾಡಬೇಕು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯನ್ನು ಸಸಿಗೆ ನೀರು ಎರೆಯುವ ಮೂಲಕ ಆರಂಭಿಸಿ ಮಾತನಾಡಿದ ಅವರು, ಜನಪ್ರತಿನಿಧಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಕುಡಿಯುವ ನೀರಿನ ಅಭಾವವಾಗದಂತೆ ಯಾವ್ಯಾವ ಹಳ್ಳಿಗಳಲ್ಲಿ ನೀರಿನ ಸೌಲಭ್ಯವಿಲ್ಲವೋ ಎಂದು ಪರಿಶೀಲಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ‘ಜಲ ಜೀವನ ಮಿಷನ್’ ಅಡಿ ಪ್ರತಿ ಗ್ರಾಮಗಳ ಮನೆ-ಮನೆಗೆ ಕಡ್ಡಾಯವಾಗಿ ನೀರಿನ ಸೌಲಭ್ಯ ಒದಗಿಸಬೇಕು. ಯೋಜನೆ ಸಮರ್ಪಕವಾಗಿ ಸದ್ಭಳೆಕೆಯಾಗಬೇಕು. ಅಲ್ಲದೇ, ಮಾರ್ಚ್ ಮಾಹೆ ಮುಗಿಯುವಷ್ಟರಲ್ಲಿ ಯೋಜನಾ ವಿಸ್ತøತ ವರದಿ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಸಾಸಿ ಅವರಿಗೆ ಸೂಚಿಸಿದರು.
‘ಜಲ ಜೀವನ ಮಿಷನ್’ ಕುರಿತು ಈವರೆಗಿನ ಯೋಜನಾ ವಿಸ್ತøತ ವರದಿ ಬಗ್ಗೆ ಸಭೆಗೆ ಅಂಕಿ-ಅಂಶಗಳನ್ನು ನೀಡಿದ ದಿಲೀಷ್ ಸಾಸಿ ಅವರು, 16.02.2021ರವರೆಗೆ ಒಟ್ಟು 380 ಡಿಪಿಆರ್ ವರದಿ, 378 ಸಿದ್ದಪಡಿಸಲಾಗಿದೆ ಹಾಗೂ 350 ಡಿಪಿಆರ್ ಅಂತಿಮ ವರದಿಯಾಗಿವೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಈಶ್ವರಪ್ಪ ಅವರು, ಮುಂಬರುವ ಮಾರ್ಚ್ ಕೊನೆವಾರದಲ್ಲಿ ಯೋಜನ ವಿಸ್ತøತ ವರದಿ ಪೂರ್ಣಗೊಳಿಸುವಂತೆ ತಿಳಿಸಿದರು.
ಗ್ರಾಮೀಣ ಭಾಗದ ಯಾವ್ಯಾವ ಶಾಲೆ, ಅಂಗನವಾಡಿಗಳಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮುಂತಾದ ಮೂಲ ಸೌಕರ್ಯಗಳ ಸಮಸ್ಯೆಗಳಿವೆ ಎಂಬುವುದರ ಕುರಿತು ಪಟ್ಟಿ ಮಾಡಿ ಮಾಹಿತಿ ಸಂಗ್ರಹಿಸುವುದರ ಜತೆಗೆ ಸಮಸ್ಯೆ ನಿವಾರಿಸಬೇಕು. ಕೆಲ ಶಾಲೆಗಳಲ್ಲಿ ಶೌಚಾಲಯಗಳಿದ್ದರೆ, ನೀರಿನ ಸೌಲಭ್ಯವಿರಲ್ಲ, ನೀರಿನ ಸೌಲಭ್ಯವಿದ್ದರೆ ಶೌಚಾಲಯಗಳಿರಲ್ಲ. ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆ ತಲೆದೋರದಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು. ನಿರ್ಲಕ್ಷ್ಯವಹಿಸಿದರೆ ಅಂತವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದರು.
ಗ್ರಾಮೀಣ ಭಾಗದ ಹಲವೆಡೆ ನೀರಿನ ಮೂಲಗಳು ಇಲ್ಲದÀ ಕಡೆ ನೀರಿನ ಪೈಪ್ಲೈನ್ ಅಳವಡಿಸಿ, ಅನಗತ್ಯ ದುಂದುವೆಚ್ಚ ಮಾಡಿರುವ ಬಗ್ಗೆ ದೂರು ಬಂದಿರುವುದಾಗಿ ಉಲ್ಲೇಖಿಸಿದ ಸಚಿವರು, ಈ ಕುರಿತು ಒಂದು ಪಟ್ಟಿ ತಯಾರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆಯ 2021ನೇ ವರ್ಷದ ಕ್ಯಾಲೆಂಡರನ್ನು ಬಿಡುಗಡೆ ಮಾಡಲಾಯಿತು. ಇದಕ್ಕೂ ಮೊದಲು ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪ್ರತಿಜ್ಞಾವಿಧಿ ಭೋದಿಸಲಾಯಿತು.
ಕಲ್ಯಾಣಿಗಳ ಪಟ್ಟಿ ತಯಾರಿಸಲು ಸೂಚನೆ: ನರೇಗಾ ಉದ್ಯೋಗ ಖಾತರಿ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಕಲಬುರಗಿ ಜಿಲ್ಲೆಯಲ್ಲೇ ಅತೀ ಹೆಚ್ಚು ಜಾಬ್ ಕಾರ್ಡ್ಗಳನ್ನು ವಿತರಿಸಲಾಗಿದೆ ಎಂದರು. ಹಲವು ದೇಗುಲಗಳ ಬಳಿ ಪುರಾತನ ಕಲ್ಯಾಣಿಗಳು ಮುಚ್ಚಿ ಹೋಗಿರುತ್ತವೆ. ಈವರೆಗೆ ಈ ಯೋಜನೆ ಮೂಲಕ ಎಷ್ಟು ಕಲ್ಯಾಣಿಗಳನ್ನು ಪುನಃಶ್ಚೇತನಗೊಳಿಸಲಾಗಿದೆ ಎಂಬ ಪಟ್ಟಿಯನ್ನು ತಯಾರಿಸುವಂತೆ. ಮುಚ್ಚಿ ಹೋಗಿರುವ ಕಲ್ಯಾಣಿಗಳನ್ನು ಪುನಃಶ್ಚೇತನಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಸಭೆಯಲ್ಲಿ ಶಾಸಕ ಹಾಗೂ ಕಲ್ಯಾಣ ಕಾರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ ರೇವೂರ, ಶಾಸಕ ಹಾಗೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮಡು, ಸುಭಾಷ ಆರ್ ಗುತ್ತೇದಾರ, ಡಾ.ಅವಿನಾಶ ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತ ಅನಿರುದ್ಧ ಶ್ರವಣ್ ಪಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಯರಾಮ, ಮುಖ್ಯ ಅಭಿಯಂತರಾದ ಹೊಳಿಯಾಚಿ ಪರಸಪ್ಪ ಬಸಪ್ಪ, ಮಹಮ್ಮದ್ ಅಜೀಜುದ್ದೀನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’
ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.
ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.
ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ1 day agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ1 day agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ2 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ2 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ34 minutes agoಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

