ರಾಜಕೀಯ
ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ; ಕಾನೂನು ಕ್ರಮ : ಸಿಎಂ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸಲು ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಸಂಬಂಧಪಟ್ಟಂತೆ ಕಾನೂನು ಸಚಿವರು, ಅಡ್ವೊಕೇಟ್ ಜನರಲ್ ಮತ್ತು ಹಿರಿಯ ಕಾನೂನು ತಜ್ಞರೊಂದಿಗೆ ಸಭೆನಡೆಸಿ, ಸುಪ್ರೀಂಕೋರ್ಟ್ ತೀರ್ಪಿನ ಸಾಧಕ ಭಾದಕ ನೋಡಿಕೊಂಡು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243