ದಿನದ ಸುದ್ದಿ

ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

Published

on

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಪರಿಶಿಷ್ಟ ಜಾತಿಗೆ 24 ಸಾವಿರ ಕೋಟಿ ರೂಪಾಯಿ, ಪಂಗಡಕ್ಕೆ 8ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. 40 ಇಲಾಖೆಗಳಿಗೆ ಮೀಸಲಿಡಲಾಗಿದೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ವಿಶೇಷ ಘಟಕ ಯೋಜನೆಯ ಹಣವನ್ನು ಇತರೆ ಯಾವುದೇ ವಿಭಾಗಕ್ಕೂ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ ಆಯವ್ಯಯದಲ್ಲಿ ಮೀಸಲಿಟ್ಟಿರುವ ಹಣವನ್ನು ವಿನಿಯೋಗಿಸಲಾಗುವುದು ಎಂದು ಡಾ.ಮಹದೇವಪ್ಪ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version