ದಿನದ ಸುದ್ದಿ
ರೂ.10172 ಕೋಟಿ ಜಿಎಸ್ಟಿ ದಾಖಲೆ ಸಂಗ್ರಹ ಕೇಂದ್ರ ಜಿ.ಎಸ್.ಟಿ : ಬೆಳಗಾವಿ ವಿಭಾಗದಲ್ಲಿ ಜಿ.ಎಸ್.ಟಿ ಆದಾಯ ದಾಖಲೆ ಸಂಗ್ರಹ..!
ಸುದ್ದಿದಿನ,ಬಳ್ಳಾರಿ : ಕೇಂದ್ರ ಜಿಎಸ್ಟಿ ಆಯುಕ್ತಾಲಯದ ಬೆಳಗಾವಿ ವಿಭಾಗದಲ್ಲಿ 2021-22ರ ಆರ್ಥಿಕ ವರ್ಷದಲ್ಲಿ ರೂ.10172 ಕೋಟಿಗಳ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ದಾಖಲೆಯ ಸಂಗ್ರಹವನ್ನು ಸಾಧಿಸಿದೆ. ಇಂತಹ ಜಿಎಸ್ಟಿ ಸಂಗ್ರಹವು, ದೃಢವಾದ ಆರ್ಥಿಕ ಬೆಳವಣಿಗೆಯ ಸಂಕೇತವಾಗಿದೆ ಮತ್ತು ದೇಶವು ಸಾಂಕ್ರಾಮಿಕದ ನೆರಳಿನಿಂದ ದೂರ ಸರಿದಿದೆ ಎಂಬುದರ ಸೂಚಕವಾಗಿದೆ ಎಂದು ಬೆಳಗಾವಿ ಕೇಂದ್ರ ಜಿಎಸ್ಟಿ ಆಯುಕ್ತಾಲಯದ ಆಯುಕ್ತರಾದ ಬಸವರಾಜ ನಲೆಗಾವೆ ಅವರು ತಿಳಿಸಿದ್ದಾರೆ.
ಬೆಳಗಾವಿ ಆಯುಕ್ತಾಲಯ ವ್ಯಾಪ್ತಿಯು ದೊಡ್ಡದಾಗಿದ್ದು, ಇದು ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಹನ್ನೆರಡು ಜಿಲ್ಲೆಗಳಲ್ಲಿ ವ್ಯಾಪಿಸಿದೆ. ದಾಖಲೆಯ ಸಂಗ್ರಹವು ಈ ಜಿಲ್ಲೆಗಳಲ್ಲಿ ರೋಮಾಂಚಕ ಮತ್ತು ದೃಢವಾದ ಆರ್ಥಿಕ ಚಟುವಟಿಕೆಯ ಸೂಚನೆಯಾಗಿದೆ. ಇದು ಈ ಪ್ರದೇಶದ ಜನಸಂಖ್ಯೆಯಲ್ಲಿ ಅಂತರ್ಗತವಾಗಿರುವ ಉದ್ಯಮಶೀಲ ಸ್ವಭಾವವನ್ನು ಎತ್ತಿ ತೋರಿಸುತ್ತದೆ.
ಈ ಜಿಲ್ಲೆಗಳಲ್ಲಿ ಒಟ್ಟು 2,30,566 ತೆರಿಗೆದಾರರು ಜಿಎಸ್ಟಿ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ ಮತ್ತು ಇವುಗಳನ್ನು ರಾಜ್ಯ ಅಥವಾ ಕೇಂದ್ರ ಜಿಎಸ್ಟಿ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ. ಕೇಂದ್ರ ಜಿಎಸ್ಟಿ ಆಡಳಿತದ ಅಡಿಯಲ್ಲಿ ನೋಂದಾಯಿಸಲಾದ ತೆರಿಗೆದಾರರಿಂದ, ಬೆಳಗಾವಿ ಕೇಂದ್ರ ಜಿಎಸ್ಟಿ ರಚನೆಯಿಂದ ರೂ.10,172 ಕೋಟಿಗಳನ್ನು ಸಂಗ್ರಹಿಸಲಾಗಿದೆ. 2019-20ನೇ ಸಾಲಿನ ಆಯುಕ್ತಾಲಯದ ಆದಾಯ ರೂ.7,677 ಕೋಟಿ, 2020-21ಕ್ಕೆ ರೂ.7,124 ಕೋಟಿ ಮತ್ತು 2021-22ನೇ ಸಾಲಿಗೆ ರೂ.10,172 ಕೋಟಿಯಷ್ಟಿದ್ದು, ಇದು ಹಿಂದಿನ ವರ್ಷಗಳ ಸಂಗ್ರಹಕ್ಕಿಂತ ಶೇ.43ರಷ್ಟು ಹೆಚ್ಚಳವಿದೆ.
ಉಕ್ಕು, ಸಿಮೆಂಟ್, ಗಣಿಗಾರಿಕೆ, ಸಕ್ಕರೆಯ ಪ್ರಮುಖ ಕೈಗಾರಿಕೆಗಳಾದ ಜೆಎಸ್ಡಬ್ಲ್ಯೂ ಸ್ಟೀಲ್, ಕೆಸೋರಾಮ್ ಇಂಡಸ್ಟ್ರೀಸ್, ಓರಿಯಂಟ್ ಸಿಮೆಂಟ್, ಎನ್ಎಂಡಿಸಿ ಇತ್ಯಾದಿಗಳು, ಈ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಲ್ಲದೆ ಅಪಾರ ಸಂಖ್ಯೆಯ ವರ್ತಕರು ಕೂಡ ದಾಖಲೆಯ ಜಿಎಸ್ಟಿ ಸಂಗ್ರಹಕ್ಕೆ ಕೊಡುಗೆ ನೀಡಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ, ಬೆಳಗಾವಿ ಜಿಎಸ್ಟಿ ಆಯುಕ್ತಾಲಯ ತೆರಿಗೆದಾರರ ಅನುಸರಣೆಗೆ ಅನುಕೂಲವಾಗುವಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ. ಆಯುಕ್ತರು ವ್ಯಾಪಾರ ಸಂಸ್ಥೆಗಳ ಸದಸ್ಯರೊಂದಿಗೆ ವ್ಯಾಪಕ ಸಂವಾದ ನಡೆಸಿದರು. ಅವರ ಸಮಸ್ಯೆಗಳನ್ನು ಆಲಿಸಿದರು ಮತ್ತು ಅವುಗಳನ್ನು ಪರಿಹರಿಸಲು ನಿರ್ದೇಶನಗಳನ್ನು ನೀಡಿದರು.
ಕಾರ್ಯನಿರತ ಬಂಡವಾಳದ ಸಕಾಲಿಕ ಲಭ್ಯತೆಯನ್ನು ಅನುಸರಿಸುವ ಮೂಲಕ ವ್ಯಾಪಾರ ಮತ್ತು ಉದ್ಯಮವನ್ನು ಸುಗಮಗೊಳಿಸಲು, ಅರ್ಹವಾದ ಜಿಎಸ್ಟಿ ಮರುಪಾವತಿಗಳ ಸಕಾಲಿಕ ಮಂಜೂರಾತಿಯನ್ನು ಖಾತ್ರಿಪಡಿಸಲಾಗಿದೆ ಮತ್ತು ಅದನ್ನು ಆಯುಕ್ತರು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ರಾಷ್ಟ್ರದ ‘ಆಜಾದಿ ಕಾ ಅಮೃತ್ ಮಹೋತ್ಸ’ವದ ಅಂಗವಾಗಿ,ವ್ಯಾಪಾರ ಮತ್ತು ಉದ್ಯಮಕ್ಕೆ ಸಹಾಯ ಮಾಡಲು ತೆರಿಗೆದಾರರ ಸೌಲಭ್ಯ ಕೇಂದ್ರವನ್ನು (ಖಿಚಿxಠಿಚಿಥಿeಡಿ ಈಚಿಛಿiಟiಣಚಿಣioಟಿ ಅeಟಿಣಡಿe) ಬೆಳಗಾವಿಯಲ್ಲಿ ರಚಿಸಲಾಗಿದೆ.
ಆಯುಕ್ತಾಲಯ ಕೂಡ, ತೆರಿಗೆ ವಂಚಕರ ವಿರುದ್ಧ ಉತ್ತಮವಾಗಿ ಕಾರ್ಯನಿರ್ವಹಿಸಿದೆ. 2021 ರಸೆಪ್ಟೆಂಬರ್ನಲ್ಲಿ ಇ-ವೇ ಬಿಲ್ ಇಲ್ಲದೆ ಸಾಗಿಸುತ್ತಿದ್ದ ಕಾರಣ ಏಳು ಕೋಟಿ ರೂಪಾಯಿ ಮೌಲ್ಯದ ಅಡಿಕೆಯ ಬೃಹತ್ ಸರಕುಗಳನ್ನು ಜಪ್ತಿ ಮಾಡಲಾಗಿದೆ.
ಶೀಘ್ರನಾಶವಾಗುವಂತಹ ಈ ಅಡಿಕೆಯ ಸರಕನ್ನು, ಯಶಸ್ವಿಯಾಗಿ ಹರಾಜು ಮಾಡಿ, ಜಿಎಸ್ಟಿ ಮೊತ್ತವನ್ನು ವಸೂಲಿ ಮಾಡಲಾಗಿದೆ. ಬೇಹುಗಾರಿಕೆ ಅಧಿಕಾರಿಗಳು ಕೂಡ, ರೂ.ಮೂರುಕೋಟಿ ನಗದು ಮತ್ತು ರೂ.503 ಕೋಟಿ ಹೂಡುವಳಿ ತೆರಿಗೆ ಜಮೆ ಯಲ್ಲಿ, ಈ ಹಣಕಾಸು ವರ್ಷದಲ್ಲಿ 101ಸಂಖ್ಯೆಯ ಅಪರಾಧ ಪ್ರಕರಣಗಳನ್ನು ದಾಖಲೆಮಾಡುವ ಮೂಲಕ/ಪತ್ತೆ ಮಾಡಲಾಗಿ ಜಿಎಸ್ಟಿ ವಸೂಲಿಮಾಡಿದ್ದಾರೆ.
ಬೇಹುಗಾರಿಕೆ ತಂಡದಿಂದಲೂ.549 ಕೋಟಿ(ಖs.549 ಅಡಿoಡಿes) ಬೇಹುಗಾರಿಕೆ ಮತ್ತು ಮರುಪಡೆಯುವಿಕೆ ಪ್ರಕ್ರಿಯೆಯು ನಡೆಯುತ್ತಿದೆ. ತೆರಿಗೆ ವಂಚಕರ ವಿರುದ್ಧ ಕ್ರಮಕೈಗೊಳ್ಳಲು ಜಿಎಸ್ಟಿ ಕಾನೂನಿನಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಎರಡೂ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ.
2021-22 ಆರ್ಥಿಕ ವರ್ಷವನ್ನು ಪೂರ್ಣಗೊಳಿಸಿದ ನಂತರ ತಡವಾದ ಶುಲ್ಕವನ್ನು ತಪ್ಪಿಸಲು ಸಮಯಕ್ಕೆ ಸರಿಯಾಗಿ, ಜಿಎಸ್ಟಿ ರಿಟನ್ರ್ಸ್ ಸಲ್ಲಿಸುವಂತೆ ಬೆಳಗಾವಿ ಕೇಂದ್ರ ಜಿಎಸ್ಟಿ ಆಯುಕ್ತಾಲಯದ ಆಯುಕ್ತರಾದ ಬಸವರಾಜ ನಲೆಗಾವೆ ವ್ಯಾಪಾರವೃಂದವನ್ನು ವಿನಂತಿಸಿದ್ದಾರೆ.
ಅವರು ದಾವೆಗಳನ್ನು ತಪ್ಪಿಸಲು ಅರ್ಹವಾದ ಹೂಡುವಳಿತೆರಿಗೆಜಮೆ ಅನ್ನು ಮಾತ್ರ ಪಡೆದುಕೊಳ್ಳಲು ತೆರಿಗೆದಾರರಿಗೆ ವಿನಂತಿಸಿದ್ದಾರೆ. ಕೃತಕ ಬುದ್ಧಿಮತ್ತೆ ಪ್ರೇರಿತ ದತ್ತಾಂಶ ಗಣಿಗಾರಿಕೆ ಕಾರ್ಯವಿಧಾನವು ಹೆಚ್ಚು ವಿಕಸನಗೊಂಡಿದೆ ಮತ್ತು ಇದು ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸುಸ್ತಿದಾರರ ವಿರುದ್ಧ ಕ್ರಮವನ್ನು ತೀವ್ರಗೊಳಿಸುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಈ ಕಾರ್ಯವಿಧಾನವು ಪ್ರಾಮಾಣಿಕ ತೆರಿಗೆ ಪಾವತಿದಾರರ ಪ್ರಯತ್ನಗಳನ್ನು ಅಂಗೀಕರಿಸುತ್ತದೆ. ಜಿಎಸ್ಟಿ ಸುಸ್ತಿದಾರರನ್ನು ಪತ್ತೆ ಮಾಡಲು, ಕೇಂದ್ರ ಮತ್ತು ರಾಜ್ಯ ಜಿಎಸ್ಟಿ ಅಧಿಕಾರಿಗಳ ನಡುವೆ ಹೆಚ್ಚಿನ ಸಂವಹನ ಮತ್ತು ಸಮನ್ವಯವಿದೆ ಎಂಬ ಅಂಶವನ್ನು ಅವರು ಎತ್ತಿ ತೋರಿಸಿದ್ದಾರೆ.
ಸಣ್ಣ ಮತ್ತು ಮಧ್ಯಮ ಉದ್ಯಮಗಳು, ಸಂಯೋಜನೆ (COMPOSITION Scheme) ಅಥವಾ ತ್ರೈಮಾಸಿಕ ರಿಟರ್ನ್ ಫೈಲಿಂಗ್ ಮತ್ತು ತೆರಿಗೆಗಳ ಮಾಸಿಕ ಪಾವತಿ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳುವುದನ್ನು ಅವರು ಉತ್ತೇಜಿಸಿದರು. ಅವರು ಯಾವುದೇ ಜಿಎಸ್ಟಿ ವಂಚನೆಯನ್ನು PREV@gov.in ಗೆ ವರದಿ ಮಾಡಲು ಸಾರ್ವಜನಿಕರಿಗೆ ವಿನಂತಿಸಿದ್ದಾರೆ.
ವ್ಯಾಪಾರ ಮತ್ತು ಉದ್ಯಮವನ್ನು ಮೀಸಲಾದ ವ್ಯಾಪಾರ ಸೌಲಭ್ಯ ಕೇಂದ್ರ ಅಥವಾ ಜಿಎಸ್ಟಿಸೇವಾ ಕೇಂದ್ರ ಅಥವಾ TECH@gov.in ನಲ್ಲಿ ಸಂಪರ್ಕಿಸಲು ಅಥವಾ ನೇರವಾಗಿ ಟೆಲಿಗ್ರಾಮ್ https://t.me/belagavicgst ಮೂಲಕ ಅಧಿಕಾರಿಗಳೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ಅವರು, ದೇಶಭಕ್ತಿ ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ಪ್ರತಿಯೊಬ್ಬರೂ ತಮ್ಮ ಮೂಲಭೂತ ಕರ್ತವ್ಯಗಳನ್ನು ಅರಿತು, ತಮ್ಮ ಸಾಮರ್ಥ್ಯ, ಆಸಕ್ತಿ ಹಾಗೂ ಅಭಿರುಚಿಗೆ ತಕ್ಕಂತೆ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದರಲ್ಲಿ ಅಡಗಿದೆ ಎಂದು ಕರೆ ನೀಡಿದರು. ಪ್ರಾಮಾಣಿಕ ಪರಿಶ್ರಮ ಮತ್ತು ಜವಾಬ್ದಾರಿಯುತ ನಾಗರಿಕತ್ವವೇ ಬಲಿಷ್ಠ ಭಾರತದ ನಿರ್ಮಾಣಕ್ಕೆ ಅಡಿಪಾಯ ಎಂದರು.
ವಿದ್ಯಾರ್ಥಿಗಳ ಮನೋಜ್ಞ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಪ್ರದರ್ಶನಗಳು ಹಾಗೂ ಶಿಸ್ತುಬದ್ಧ ಮೆರವಣಿಗೆಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು. ಕೊಡಿಪಾಳ್ಯ ಮತ್ತು ಕೆಂಗೇರಿಯಲ್ಲಿ 445 ಮೀಟರ್ ಇರುವ ವಿಶೇಷ ಧ್ವಜದೊಂದಿಗೆ ವಿದ್ಯಾರ್ಥಿಗಳ ಮೆರವಣಿಗೆ ಗಮನ ಸೆಳೆಯಿತು. ಶತಪ್ರತಿಶತ ಫಲಿತಾಂಶ ಸಾಧಿಸಿದ ಬೋಧಕ ಸಿಬ್ಬಂದಿಯನ್ನು ಮತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನೇರ ಪ್ರಸಾರವೂ ನಡೆಯಿತು. 2,500 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವಿಶೇಷ ಮಧ್ಯಾಹ್ನದ ಊಟ ಮತ್ತು ಸಿಹಿತಿಂಡಿ ವ್ಯವಸ್ಥೆ ಮಾಡಲಾಗಿದ್ದು, ಒಗ್ಗಟ್ಟು ಮತ್ತು ದೇಶಪ್ರೇಮದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.
ಈ ಸಂದರ್ಭದಲ್ಲಿ ವಿವಿಐಎಸ್ ನ ಅಕಾಡೆಮಿಕ್ ಅಡ್ವೈಸರ್ ಡಾ. ರಾಜೇಶ್ವರಿ ದತ್ತಾತ್ರಿ, ವಿವಿ ವಿದ್ಯಾಸಂಸ್ಥೆಯ ಡೀನ್ ಶ್ರೀ ಕಿಶೋರ್ ಕಟ್ಟ, ಪ್ರಾಂಶುಪಾಲೆ ಶ್ರೀಮತಿ ಲಕ್ಷ್ಮಿ ಟಿ.ಎನ್, ಕೆಪಿಸಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ. ಐ. ಚೆನ್ನಾರೆಡ್ಡಿ, ಸಿಬಿಎಸ್ಇ ಪ್ರಾಂಶುಪಾಲರಾದ ಪ್ರೊ. ಪ್ರಹ್ಲಾದ, ಉಪಪ್ರಾಂಶುಪಾಲರಾದ ಶ್ರೀ ಮದನ್ ರಾಜ್, ಪ್ರಾಂಶುಪಾಲರಾದ ಡಾ. ಸುರೇಶ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.
ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ2 days agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ2 days agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ದಿನದ ಸುದ್ದಿ1 day agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

