ದಿನದ ಸುದ್ದಿ
800 ಕೋಟಿ ರೂ. ಆಸ್ತಿ ಎಲ್ಲಿ: ಅಮರಪಲ್ಲಿ ಗ್ರೂಪ್ ಮುಖ್ಯಸ್ಥನಿಗೆ ಸುಪ್ರೀಂ ತರಾಟೆ
ಸುದ್ದಿದಿನ ಡೆಸ್ಕ್: 2014ರ ಚುನಾವಣೆಯಲ್ಲಿ ನಿಮ್ಮ ಆಸ್ತಿ 847 ಕೋಟಿ ರೂ. ಇದೆ ಎಂದು ಚುನಾವಣಾ ಆಯೋಗಕ್ಕೆ ಲೆಕ್ಕ ಕೊಟ್ಟಿದ್ದೀರಿ ಹಾಗಿದ್ದರೆ ಈಗ ನಿಮ್ಮ ಬಳಿ 67 ಕೋಟಿ ರೂ. ಆಸ್ತಿ ಇದೆ ಎಂದು ಹೇಳುತ್ತಿದ್ದೀರಿ ಮಿಕ್ಕ 800 ಕೋಟಿ ರೂ. ಎಲ್ಲಿ ಹೋಯ್ತು?
ಮನೆ ಕೊಳ್ಳುವ ಆಸೆ ಹೊತ್ತಿದ್ದ ನೂರಾರು ಜನರಿಂದ ಹಣ ವಸೂಲಿ ಮಾಡಿರುವ ಹಾಗೂ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ಕೊಟ್ಟ ಆರೋಪದಲ್ಲಿ ಸಿಲುಕಿರುವ ಅಮರಪಲ್ಲಿ ಗ್ರೂಪ್ ಮುಖ್ಯಸ್ಥ ಅನಿಲ್ ಶರ್ಮಾಗೆ ಸುಪ್ರೀಂ ಕೋರ್ಟ್ ಕೇಳಿದ ಪ್ರಶ್ನೆ ಹೀಗಿದೆ.
ನೀವು ಕೊಟ್ಟ ಲೆಕ್ಕಕ್ಕೂ ಈಗಲೂ 800 ಕೋಟಿ ರೂ. ವ್ಯತ್ಯಾಸ ಬರುತ್ತಿದೆ. ಆ ಹಣ ಎಲ್ಲಿ ಹೋಯ್ತು? ಎಂದು ನ್ಯಾಯಮೂರ್ತಿಗಳು ಶರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡರು.
ನಾನು ಶೇರ್ ಮೇಲೆ ಹಣ ಹಾಕಿದ್ದೆ ಅದರಿಂದ ಹಣ ಸಂಪಾದಿಸಿದೆ ಎಂದು ಶರ್ಮಾ ಕೊಟ್ಟ ಲೆಕ್ಕದಿಂದ ಖುದ್ದುಹೋದ ನ್ಯಾಯಮೂರ್ತಿಗಳು. ನಿಮ್ಮ ಶೇರ್ಗಳ ಮುಖಬೆಲೆ 700 ಕೋಟಿ ರೂ. ಇದೆ ಈ ಹಣದಿಂದ 7ಸಾವಿರ ಕೋಟಿ ರೂ. ಹೇಗೆ ಸಂಪಾದಿಸಿದಿರಿ? ಕಂಪನಿಗಳು ಈ ಪರಿಯ ಹಣವನ್ನು ಶೇರ್ ಮೇಲೆ ಕೊಡುವುದಿಲ್ಲ. ನ್ಯಾಯಾಲಯದ ದಿಕ್ಕು ತಪ್ಪಿಸುತ್ತಿದ್ದೀರಾ? ಹುಶಾರ್ ಎಂದು ಕೋರ್ಟ್ ವಾರ್ನಿಂಗ್ ಕೊಟ್ಟಿದೆ.
ನೀವು ಹೇಳುತ್ತಿರುವ ಮಾಹಿತಿ ಸರಿ ಇದೆ ಎಂದಾದರೆ ಮನೆ ಕೊಳ್ಳಲು ಬಯಸಿದ್ದ ಸಾವಿರಾರು ಮಂದಿಯಿಂದ ಸಂಗ್ರಹಿಸಿದ್ದ 2ಸಾವಿರ ಕೋಟಿ ರೂ. ಎಲ್ಲಿ ಹೋಯ್ತು ಲೆಕ್ಕ ಕೊಡಿ ಎಂದು ಕೋರ್ಟ್ ಪ್ರಶ್ನಿಸಿತು.
ತಮ್ಮ ಆಸ್ತಿಯ ಲೆಕ್ಕ ಕೊಡಲು ಶರ್ಮಾ ಅವರಿಗೆ 4 ದಿನಗಳ ಸಮಯಾವಕಾಶ ಕೊಟ್ಟಿದ್ದು, ಅಷ್ಟರಲ್ಲಿ ನಿಜ ಆಸ್ತಿ ಎಷ್ಟೆಂಬುದನ್ನು ಶರ್ಮಾ ಕೋರ್ಟ್ ಮುಂದೆ ಹಾಜರುಪಡಿಸಬೇಕಿದೆ.

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


