ದಿನದ ಸುದ್ದಿ
ರುದ್ರಪ್ಪ ಹನಗವಾಡಿ ಅವರಿಗೆ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ

ಸುದ್ದಿದಿನಡೆಸ್ಕ್:ನಗರದ ರುದ್ರಪ್ಪ ಹನಗವಾಡಿ ಅವರಿಗೆ 2023ನೇ ಸಾಲಿನ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಲಭಿಸಿದೆ.
ಡಾ.ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ನೀಡಲಾಗುವ 2023, 2024 ಮತ್ತು 2025 ನೇ ಸಾಲಿನ
ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 15 ಸಾಧಕರಿಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಿರು ಪರಿಚಯ
ಕೆ.ಎ.ಎಸ್ ಅಧಿಕಾರಿ ನಿವೃತ್ತಿ ಹೊಂದಿರುವ ರುದ್ರಪ್ಪ ಹನಗವಾಡಿ ಅವರು ದಾವಣಗೆರೆ ಜಿಲ್ಲೆಯ, ಹರಿಹರ ತಾಲೂಕಿನ ಹನಗವಾಡಿ ಗ್ರಾಮ 1951ರಲ್ಲಿ ಜನಿಸಿದರು.1974 ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಅರ್ಥಶಾಸ್ತ್ರ), ಸ್ನಾತಕೋತ್ತರ ಪದವಿ ಪಡೆದರು. ನಂತರ 1974 – 1983ರ ವರೆಗೆ ಬಿ.ಆರ್.ಪಿ. ಕೇಂದ್ರದ ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದರು. ಕರ್ನಾಟಕ ಆಡಳಿತ ಸೇವೆ 1983 – 2011, ತಹಸೀಲ್ದಾರ್, ಸಹಾಯಕ ಆಯುಕ್ತರು, ಜಿಲ್ಲಾಧಿಕಾರಿಗಳಾಗಿ ಕಾರ್ಯ ನಿರ್ವಹಣೆ ಮಾಡಿದರು.ಮೈಸೂರು, ಟಿ.ನರಸೀಪುರ, ನಂಜನಗೂಡು, ಚಾಮರಾಜನಗರ, ಸೊರಬ, ರಾಮನಗರ, ತರೀಕೆರೆ, ಬೆಂಗಳೂರು ಇತ್ಯಾದಿ ಜಿಲ್ಲೆಗಳಲ್ಲಿ ಸೇವೆಸಲ್ಲಿಸಿದರು. 2011 ರಲ್ಲಿ ಕರ್ನಾಟಕ ಆಡಳಿತ ಸೇವೆಯಿಂದ ನಿವೃತ್ತಿಹೊಂದಿದರು.ನಂತರ ಹನಗವಾಡಿ ಗ್ರಾಮದಲ್ಲಿನ ಜಮೀನಿನಲ್ಲಿ ರೈತನಾಗಿ ಕಾಯಕದಲ್ಲಿ ತೊಡಗಿದ್ದಾರೆ.
ತಮ್ಮನ್ನು ಸಾಹಿತ್ಯ, ಕಲೆ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಣೆ, ಓದುವುದು, ಬರೆಯುವುದು, ಕವನ, ಲೇಖನ, ಜೀವನ ಚಿತ್ರಣ, ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ, ಹಾಡುಗಾರಿಕೆ, ಜಾನಪದ, ಭಾವಗೀತೆ, ಕವನ ವಾಚನ ಪವೃತಿಯಲ್ಲಿ ತೊಡಗಿಸಿಕೊಂಡಿದ್ದಾರೆ.
ಸೇವಾ ಕ್ಷೇತ್ರ
ಟ್ರಸ್ಟಿ, ಐಎಸಿಐಡಿ ಟ್ರಸ್ಟ್ (ರಿ), ಬೆಂಗಳೂರು,ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ನ ಟ್ರಸ್ಟಿ, ಮಾನವ ಮಂಟಪ ಟ್ರಸ್ಟ್ ಟ್ರಸ್ಟಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ರಾಜ್ಯ ಸಮಿತಿ ಸದಸ್ಯ, ಆಜೀವ ಸದಸ್ಯ, ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ, ಸದಸ್ಯ, ಹಿಮೋಪೋಲಿಯಾ ಸೊಸೈಟಿ ಆಫ್ ಇಂಡಿಯಾ, ಯು. ಭೂಪತಿ ಸ್ಮಾರಕ ಟ್ರಸ್ಟ್ನ ಸಲಹಾ ಸಮಿತಿ ಸದಸ್ಯ, ರಾಜ್ಯ ಸಂಚಾಲಕರು, ಕರ್ನಾಟಕ ದಲಿತ ಕಲಾಮಂಡಳಿ, ಬೆಂಗಳೂರು
ಹೋರಾಟಗಳು
ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಯೋಜಿಸುವ ಹೋರಾಟ, ಸಭೆ, ಸಮಾರಂಭಗಳಲ್ಲಿ ಭಾಗಿ, ಚಂದ್ರಗುತ್ತಿ ಬೆತ್ತಲೆ ಸೇವೆ ಮತ್ತು ಮೂಢನಂಬಿಕೆಗಳ ವಿರುದ್ಧದ ಹಾಗೂ ಜನಪರ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.
ಸಾಹಿತ್ಯ – ರಚಿಸಿದ ಕೃತಿಗಳು
ಸೆಳೆತ : ಕವನ ಸಂಕಲನ – 2010,ಊರು ಬಳಗ – ಕವನಸಂಕಲನ 2013,ಎಲೆ ಮುಗುಳ ಬೆಳಕು : 2021, ಋಣದ ಗಣಿ : ಆತ್ಮ ಚರಿತ್ರೆ 2021, ಕರ್ನಾಟಕ ವಿವಿಧ ಪತ್ರಿಕೆಗಳಲ್ಲಿ 50ಕ್ಕೂ ಹೆಚ್ಚು ಲೇಖನಗಳು ಪ್ರಕಟಗೊಂಡಿವೆ.
ಸುದ್ದಿದಿನ ಕನ್ನಡ ವೆಬ್ ಪೋರ್ಟಲ್ ನಲ್ಲಿ ಇವರ ಆತ್ಮಕತೆಯಾದ ‘ಋಣದ ಗಣಿ’ ಆಯ್ದ ಭಾಗಗಳು ಪ್ರಕಟಗೊಂಡಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಿವರ
ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಫಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.
ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟು ನಂತರದ ದಿನಗಳಲ್ಲಿ ಲಾಭಾಂಶವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಒಟ್ಟು ಸಾರ್ವಜನಿಕರಿಂದ 31.50,000/- ರೂಗಳನ್ನು ಕಟ್ಟಿಸಿಕೊಂಡು 61.62.800/- ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು ರೂ.37,33,500ಗಳನ್ನು 6 ತಿಂಗಳ ಲಾಭಾಂಶದ ಹಣವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಮೋಸ ಮಾಡಿರುತ್ತಾರೆ ಎಂದು ಹರೀಶ.ಕೆ ತಂದೆ ಉಮೇಶಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.
ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ರವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
