ದಿನದ ಸುದ್ದಿ
ರುದ್ರಪ್ಪ ಹನಗವಾಡಿ ಅವರಿಗೆ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ
ಸುದ್ದಿದಿನಡೆಸ್ಕ್:ನಗರದ ರುದ್ರಪ್ಪ ಹನಗವಾಡಿ ಅವರಿಗೆ 2023ನೇ ಸಾಲಿನ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಲಭಿಸಿದೆ.
ಡಾ.ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ನೀಡಲಾಗುವ 2023, 2024 ಮತ್ತು 2025 ನೇ ಸಾಲಿನ
ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 15 ಸಾಧಕರಿಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಿರು ಪರಿಚಯ
ಕೆ.ಎ.ಎಸ್ ಅಧಿಕಾರಿ ನಿವೃತ್ತಿ ಹೊಂದಿರುವ ರುದ್ರಪ್ಪ ಹನಗವಾಡಿ ಅವರು ದಾವಣಗೆರೆ ಜಿಲ್ಲೆಯ, ಹರಿಹರ ತಾಲೂಕಿನ ಹನಗವಾಡಿ ಗ್ರಾಮ 1951ರಲ್ಲಿ ಜನಿಸಿದರು.1974 ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಅರ್ಥಶಾಸ್ತ್ರ), ಸ್ನಾತಕೋತ್ತರ ಪದವಿ ಪಡೆದರು. ನಂತರ 1974 – 1983ರ ವರೆಗೆ ಬಿ.ಆರ್.ಪಿ. ಕೇಂದ್ರದ ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದರು. ಕರ್ನಾಟಕ ಆಡಳಿತ ಸೇವೆ 1983 – 2011, ತಹಸೀಲ್ದಾರ್, ಸಹಾಯಕ ಆಯುಕ್ತರು, ಜಿಲ್ಲಾಧಿಕಾರಿಗಳಾಗಿ ಕಾರ್ಯ ನಿರ್ವಹಣೆ ಮಾಡಿದರು.ಮೈಸೂರು, ಟಿ.ನರಸೀಪುರ, ನಂಜನಗೂಡು, ಚಾಮರಾಜನಗರ, ಸೊರಬ, ರಾಮನಗರ, ತರೀಕೆರೆ, ಬೆಂಗಳೂರು ಇತ್ಯಾದಿ ಜಿಲ್ಲೆಗಳಲ್ಲಿ ಸೇವೆಸಲ್ಲಿಸಿದರು. 2011 ರಲ್ಲಿ ಕರ್ನಾಟಕ ಆಡಳಿತ ಸೇವೆಯಿಂದ ನಿವೃತ್ತಿಹೊಂದಿದರು.ನಂತರ ಹನಗವಾಡಿ ಗ್ರಾಮದಲ್ಲಿನ ಜಮೀನಿನಲ್ಲಿ ರೈತನಾಗಿ ಕಾಯಕದಲ್ಲಿ ತೊಡಗಿದ್ದಾರೆ.
ತಮ್ಮನ್ನು ಸಾಹಿತ್ಯ, ಕಲೆ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಣೆ, ಓದುವುದು, ಬರೆಯುವುದು, ಕವನ, ಲೇಖನ, ಜೀವನ ಚಿತ್ರಣ, ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ, ಹಾಡುಗಾರಿಕೆ, ಜಾನಪದ, ಭಾವಗೀತೆ, ಕವನ ವಾಚನ ಪವೃತಿಯಲ್ಲಿ ತೊಡಗಿಸಿಕೊಂಡಿದ್ದಾರೆ.
ಸೇವಾ ಕ್ಷೇತ್ರ
ಟ್ರಸ್ಟಿ, ಐಎಸಿಐಡಿ ಟ್ರಸ್ಟ್ (ರಿ), ಬೆಂಗಳೂರು,ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ನ ಟ್ರಸ್ಟಿ, ಮಾನವ ಮಂಟಪ ಟ್ರಸ್ಟ್ ಟ್ರಸ್ಟಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ರಾಜ್ಯ ಸಮಿತಿ ಸದಸ್ಯ, ಆಜೀವ ಸದಸ್ಯ, ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ, ಸದಸ್ಯ, ಹಿಮೋಪೋಲಿಯಾ ಸೊಸೈಟಿ ಆಫ್ ಇಂಡಿಯಾ, ಯು. ಭೂಪತಿ ಸ್ಮಾರಕ ಟ್ರಸ್ಟ್ನ ಸಲಹಾ ಸಮಿತಿ ಸದಸ್ಯ, ರಾಜ್ಯ ಸಂಚಾಲಕರು, ಕರ್ನಾಟಕ ದಲಿತ ಕಲಾಮಂಡಳಿ, ಬೆಂಗಳೂರು
ಹೋರಾಟಗಳು
ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಯೋಜಿಸುವ ಹೋರಾಟ, ಸಭೆ, ಸಮಾರಂಭಗಳಲ್ಲಿ ಭಾಗಿ, ಚಂದ್ರಗುತ್ತಿ ಬೆತ್ತಲೆ ಸೇವೆ ಮತ್ತು ಮೂಢನಂಬಿಕೆಗಳ ವಿರುದ್ಧದ ಹಾಗೂ ಜನಪರ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.
ಸಾಹಿತ್ಯ – ರಚಿಸಿದ ಕೃತಿಗಳು
ಸೆಳೆತ : ಕವನ ಸಂಕಲನ – 2010,ಊರು ಬಳಗ – ಕವನಸಂಕಲನ 2013,ಎಲೆ ಮುಗುಳ ಬೆಳಕು : 2021, ಋಣದ ಗಣಿ : ಆತ್ಮ ಚರಿತ್ರೆ 2021, ಕರ್ನಾಟಕ ವಿವಿಧ ಪತ್ರಿಕೆಗಳಲ್ಲಿ 50ಕ್ಕೂ ಹೆಚ್ಚು ಲೇಖನಗಳು ಪ್ರಕಟಗೊಂಡಿವೆ.
ಸುದ್ದಿದಿನ ಕನ್ನಡ ವೆಬ್ ಪೋರ್ಟಲ್ ನಲ್ಲಿ ಇವರ ಆತ್ಮಕತೆಯಾದ ‘ಋಣದ ಗಣಿ’ ಆಯ್ದ ಭಾಗಗಳು ಪ್ರಕಟಗೊಂಡಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243