Connect with us

ದಿನದ ಸುದ್ದಿ

ಆತ್ಮಕತೆ | ಸರಳ ಹಾಗೂ ಒಲವಿನ ಮದುವೆಗಳ ಸಾಲುಸಾಲು

Published

on

  • ರುದ್ರಪ್ಪ ಹನಗವಾಡಿ

ನಾನು ಮದುವೆಯಾದ ಮೇಲೆ ನಮ್ಮೂರಿನಲ್ಲಿಯೇ 3-4 ಅಂತರ್ಜಾತಿ ಮದುವೆಗಳಾದವು. ಮೈಸೂರಿನಲ್ಲಿ ನಮ್ಮ ಜೊತೆಗಿದ್ದ ಪ್ರೊ. ಗೊಟ್ಟಿಗೆರೆ ಶಿವರಾಜು ಚನ್ನರಾಯ ಪಟ್ಟಣದಲ್ಲಿ ರಾಜ್ಯಶಾಸ್ತçದ ಅಧ್ಯಾಪಕನಾಗಿದ್ದ. ಅವನ ಸಹೋದ್ಯೋಗಿಗಳಾಗಿದ್ದ ನರಸಿಂಹಾಚಾರ್ ಇಂಗ್ಲಿಷ್ ಅಧ್ಯಾಪಕ ಮತ್ತು ಪ್ರೊ. ಸುಮತಿ ಎನ್. ಗೌಡ ಅಧ್ಯಾಪಕರಾಗಿದ್ದ ಅವರು ಪರಸ್ಪರ ಪ್ರೀತಿಸುತ್ತಿದ್ದರು.

ಅವರನ್ನು ನೇರ ಬಿಆರ್‌ಪಿಗೆ ಕರೆತಂದು, ಮದುವೆಯ ಬಗ್ಗೆ ಪ್ರಸ್ತಾಪ ಮಾಡಿದನು. ನಾನು ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿ ಕೃಷ್ಣಪ್ಪನವರಿಗೆ ಸುದ್ದಿ ಮುಟ್ಟಿಸಿ, ಮದುವೆಯ ಏರ್ಪಾಡು ಮಾಡಿದೆ. ಹುಡುಗಿ ಒಕ್ಕಲಿಗ ಜಾತಿ, ಹುಡುಗ ಬ್ರಾಹ್ಮಣನಾಗಿದ್ದ. ಸಹೋದ್ಯೋಗಿಗಳ ಪ್ರೀತಿಯ ಮದುವೆ ಮಾಡಿದ ಪ್ರೊ. ಜಿ.ಬಿ. ಶಿವರಾಜು ನಂತರ ದಿನಗಳಲ್ಲಿ ಗೌಡ ಜಾತಿಗೆ ಸೇರಿದ ಸಂಬಂಧಿಕರಿಂದ ಅನೇಕ ರೀತಿಯ ಕಿರುಕುಳಕ್ಕೂ ಒಳಗಾಗಬೇಕಾಯಿತು. ಆದರೆ ಈ ದಂಪತಿಗಳು ಶಿವರಾಜು ಪರ ಇರಬೇಕಾದವರು ನಂತರದ ದಿನಗಳಲ್ಲಿ ಇವರುಗಳಿಂದಲೇ ಕಿರುಕುಳ ಅನುಭವಿಸುವಂತೆ ಆದುದು ವಿಪರ್ಯಾಸವೇ ಸರಿ. ಮಾಡಿದ ಉಪಕಾರ ಸ್ಮರಣೆ ನಮ್ಮ ವ್ಯಕ್ತಿತ್ವದಲ್ಲಿ ಇರದಿದ್ದರೆ, ಮನುಷ್ಯನಿಂದ ಮತ್ತಿನ್ನೇನನ್ನು ಮಾಡಲು ಸಾಧ್ಯ?

ಈ ಸರಣಿಯಲ್ಲಿ ಇಲ್ಲಿಯೇ ಇನ್ನೊಬ್ಬನ ಕಥೆ ಹೇಳಿ ಮುಗಿಸುವೆ. ಬಳ್ಳಾರಿ ಮೂಲದ ಒಬ್ಬ ಡಾಕ್ಟರ್ ಮತ್ತು ಅವರ ಕೈಕೆಳಗೆ ಇದ್ದ ನರ್ಸ್ ಇಬ್ಬರೂ ಪ್ರೀತಿಸಿದ್ದು, ಮದುವೆಯಾಗುವ ತಯಾರಿಯಲ್ಲಿದ್ದರು. ಶಿವಮೊಗ್ಗದ ಕಡೆಯ ಗೆಳೆಯರೊಬ್ಬರ ಮೂಲಕ ನನ್ನಲ್ಲಿಗೆ ಬಂದರು. ಇಬ್ಬರೂ ಮದುವೆಗೆ ಅರ್ಹ ವಯಸ್ಸಿನವರಾಗಿದ್ದು, ಬೇರೆ ಬೇರೆ ಜಾತಿಯವರಾದ ಕಾರಣ, ಹುಡುಗಿಗೆ ನನ್ನದೇ ಮನೆ ವಿಳಾಸಕೊಟ್ಟು ಮದುವೆ ಮಾಡಿಸಿ ಕಳಿಸಿಕೊಟ್ಟೆವು. ನಾನಾಗ ಪ್ರೊಬೆಷನರಿ ತಹಸೀಲ್ದಾರ್‌ನಾಗಿ ತರೀಕೆರೆಯಲ್ಲಿದ್ದೆ. ಅಲ್ಲಿನ ಸಬ್ ರಿಜಿಸ್ಟ್ರಾರ್ ಚಳಗೇರಿ ಎನ್ನುವವರ ಜೊತೆ ಮಾತಾಡಿ ರಿಜಿಸ್ಟ್ರೇಷನ್ ಮುಗಿಸಿ ಕಳಿಸಿದೆ.

ಇದೆಲ್ಲ ಆಗಿ ಒಂದು ವಾರದಲ್ಲಿ ಹುಡುಗನ ಕಡೆಯ ನಿವೃತ್ತ ಸೇನಾ ಅಧಿಕಾರಿ ಬಂದು ಗಾಯತ್ರಿಯೊಬ್ಬಳೇ ಮನೆಯಲ್ಲಿದ್ದಾಗ ನನ್ನ ಬಗ್ಗೆ ಆಕ್ಷೇಪಿಸಿ ನಾನು ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರ ಸಂಬಂಧಿ, ನಿನ್ನ ಗಂಡನ ಕೆಲಸ ಕೂಡ ಕಳೆದುಕೊಳ್ಳುವಂತೆ ಮಾಡುತ್ತೇನೆ’ ಎಂದೆಲ್ಲ ಕೂಗಾಡಿ ಹೋಗಿದ್ದ. ನಾನು ತರೀಕೆರೆಯಿಂದ ಬಂದಾಕ್ಷಣ ಇವಳು ಆತಂಕದಿAದ `ನಾವೇನೋ ಮದುವೆಯಾಗಿದ್ದೇವೆ. ಬೇರೆಯವರ ಮದುವೆ ಮಾಡಲು ಹೋಗಿ ಯಾಕೆ ತೊಂದರೆಗೊಳಗಾಗಬೇಕೆಂದು’ ಅಲವತ್ತುಕೊಂಡಳು.

ನಾನು ಈ ರೀತಿ ಮದುವೆಗಳ ಬಗ್ಗೆ ಖಚಿತ ತಿಳುವಳಿಕೆಯುಳ್ಳವನಾಗಿದ್ದು, ಈ ಬಗ್ಗೆ ರಾಜ್ಯದಲ್ಲಿ ನಡೆದಿದ್ದ ಶಿವರಾಮ ಕಾರಂತ, ಅನಂತಮೂರ್ತಿ, ಪೂರ್ಣಚಂದ್ರ ತೇಜಸ್ವಿ, ಕೆ. ರಾಮದಾಸ್, ಕೃಷ್ಣಪ್ಪ, ಪ್ರೊ. ಎಂ. ನಂಜುಂಡಸ್ವಾಮಿ, ಪ್ರೊ. ರವಿವರ್ಮಕುಮಾರ್, ಹೀಗೆ ಮದುವೆಯಾದವರ ಬಗ್ಗೆ ಸಾಲು ಸಾಲು ಹೆಸರುಗಳನ್ನು ತಿಳಿಸಿ ಗಾಯತ್ರಿಗೆ ಸಮಾಧಾನ ಮಾಡುತ್ತಿದ್ದೆ.

ನಾವು ಮದುವೆಯಾಗಿ ಆರು ತಿಂಗಳು ಆಗಿರಲಿಲ್ಲ, ನಮ್ಮ ವಿದ್ಯಾರ್ಥಿಯೊಬ್ಬರ ಅಕ್ಕ ಪ್ಲಾರಿ ಬಿಆರ್‌ಪಿ ಹತ್ತಿರವಿರುವ ಜಂಕ್ಷನ್‌ನಿಂದ ಭದ್ರಾವತಿಗೆ ಸ್ಟೆಫೆಂಡಿಯರಿ ಗ್ರಾಜ್ಯುಯೇಟ್ ಸ್ಕೀಂನಲ್ಲಿ ತಾಲ್ಲೂಕು ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಹುಡುಗ ಸಿದ್ದಯ್ಯ ಭದ್ರಾವತಿ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಆತ ಬಿಆರ್‌ಪಿ ಹತ್ತಿರದ ಶಾಂತಿನಗರದಿಂದ ದಿನವೂ ಬಸ್‌ನಲ್ಲಿ ಓಡಾಡುತ್ತಿರುವಾಗ ಪರಿಚಯವಾಗಿ ಪ್ರೀತಿಯ ಸೆಳೆತದಲ್ಲಿದ್ದರು. ಒಂದು ದಿನ ಬೆಳಗಿನ ಜಾವ ಹುಡುಗನ ಅಣ್ಣ ಬಂದು ಅವರಿಬ್ಬರ ಪ್ರೀತಿಗೆ ತಮ್ಮ ಒಪ್ಪಿಗೆ ಇದ್ದು ಹುಡುಗಿ ಕಡೆಯವರು ಒಪ್ಪುವುದಿಲ್ಲ, ಮದುವೆ ಮಾಡಿಸಬೇಕಾಗಿ ಕೋರಿದ.

ಹುಡುಗಿಯ ತಮ್ಮ ನನ್ನ ವಿಭಾಗದಲ್ಲಿಯೇ ನೇರ ವಿದ್ಯಾರ್ಥಿಯಾಗಿದ್ದ. ಈಗಾಗಲೇ ನಮ್ಮ ವಿಭಾಗದಲ್ಲಿ ಇವರು ಬರೀ ಇಂತದೇ ಕೆಲಸ ಮಾಡುತ್ತಿರುತ್ತಾನೆಂದು ಅಪಪ್ರಚಾರ ಬೇರೆ ಮಾಡುತ್ತಿದ್ದರು. ಆದರೂ ಎಲ್ಲ ಸೇರಿಕೊಂಡು ಇಂದಿರಾ ಕೃಷ್ಣಪ್ಪನವರಿಗೆ ತಿಳಿಸಿ ಭದ್ರಾವತಿಯಲ್ಲಿ ಮದುವೆ ನಡೆಸಲಾಯಿತು. ಮದುವೆಯಾದ ನಂತರ ಹೆಣ್ಣಿನ ಕಡೆಯವರು ನನ್ನನ್ನು ಹೊಡೆಯಲು ಜಂಕ್ಷನ್ ಎಂಬಲ್ಲಿ ಕಾಯುತ್ತಿದ್ದಾರೆ, ಇಲ್ಲಿ ಕಾಯುತ್ತಿದ್ದಾರೆ ಎಂದು ಪುಕಾರು ಹಬ್ಬಿಸುತ್ತಿದ್ದರು. ಆದರೆ ದಿನಗಳೆದಂತೆ ಹುಡುಗ-ಹುಡುಗಿಯ ಮದುವೆಯನ್ನು ಈರ್ವರ ಕಡೆಯವರು ಒಪ್ಪಿ ನಂತರ ನಮ್ಮ ಕಡೆಗೆ ದೂರುವುದನ್ನು ನಿಲ್ಲಿಸಿದರು. ಈಗ ಇಬ್ಬರೂ ತಮ್ಮ ವೃತ್ತಿಯಲ್ಲಿ ಮುಂದುವರಿದು ಮಕ್ಕಳೊಂದಿಗೆ ಆರೋಗ್ಯಕರ ಜೀವನ ಸಾಗಿಸುತ್ತಿದ್ದಾರೆ.

ಹೀಗೆ ಶಿವಮೊಗ್ಗ, ಭದ್ರಾವತಿಯಲ್ಲಿ ಕೃಷ್ಣಪ್ಪನವರು ಪ್ರಾರಂಭಿಸಿದ ಒಲವಿನ ಸರಳ ಮದುವೆಗಳು ಸಾಲು ಸಾಲಾಗಿ ನಡೆಯುತ್ತಾ, ಡಿ.ಎಸ್.ಎಸ್. ಮತ್ತು ರೈತ ಸಂಘದ ಅನೇಕ ಕಾರ್ಯಕರ್ತರು ತಮ್ಮ ಕಾರ್ಯಸೂಚಿಯಲ್ಲಿ ಕಾರ್ಯಗತ ಮಾಡಬೇಕಾದ ಜವಾಬ್ದಾರಿ ಎಂಬಂತೆ ಸರಳ ಅಂತರ್‌ಜಾತಿ ಮದುವೆಗಳನ್ನು ನಡೆಸುವಂತಾಯಿತು. ಅದು ಇಂದಿಗೂ ಕರ್ನಾಟಕದಲ್ಲಿ ನಡೆದುಕೊಂಡು ಬರುತ್ತಿರುವುದು ಸಂತೋಷದ ಸಂಗತಿಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

Published

on

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending