ದಿನದ ಸುದ್ದಿ
ಅತ್ಮಕತೆ | ನೀರು ಸಾಬರೂ – ಎಸಿ ಮದನಗೋಪಾಲರೂ..
- ರುದ್ರಪ್ಪ ಹನಗವಾಡಿ
ಈ ಮಧ್ಯೆ ನಂಜನಗೂಡು ಪಕ್ಕದ ತಾಲ್ಲೂಕಾದ ಗುಂಡ್ಲುಪೇಟೆಯಿಂದ ರಾಜಕಾರಣಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರು ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಪ್ರಭಾವಿ ಮಂತ್ರಿಗಳಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಬೋರ್ವೆಲ್ ತೆಗೆಸಿ ಗ್ರಾಮೀಣ ಜನರಿಗೆ ಸ್ವಚ್ಛ ಕುಡಿಯುವ ನೀರು ಕೊಡುವಲ್ಲಿ ಯಶಸ್ವಿಯಾಗಿದ್ದರು. ಜನಪರ ಮಂತ್ರಿಗಳೂ ಆಗಿದ್ದರು.
ಗುಂಡ್ಲುಪೇಟೆಯಲ್ಲಿ ಭೂಸ್ವಾಧೀನ ಪ್ರಕರಣದಲ್ಲಿ ತಮ್ಮ ಸಂಬಂಧಿಕರೊಬ್ಬರ ಜಮೀನಿಗೆ ತಿರುಗಾಡಲು ದಾರಿಗಾಗಿ ಭೂಸ್ವಾಧೀನಪಡಿಸಲು ಹಿಂದಿನ ಎಸಿ ಅವರ ಅಳಿಯಂದಿರೇ ಆಗಿದ್ದ ಎಸ್.ಎ. ಸಾದಿಕ್ ಅವರು ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಯನ್ನು ರ್ಕಾರಕ್ಕೆ ಸಲ್ಲಿಸಿದ್ದರು. ಆದರೆ ಪುನಃ ಅದು ವಿಚಾರಣೆಗೆ ಬಂದಾಗ ಈ ಭೂಸ್ವಾಧೀನವು ಸಾರ್ವಜನಿಕರ ಹಿತ ಕಾಯುತ್ತಿಲ್ಲವೆಂದು ಮದನ್ ಗೋಪಾಲ್ ಅವರು ಆ ಪ್ರಸ್ತಾವನೆಯನ್ನು ರದ್ದುಗೊಳಿಸಲು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಭೂಸ್ವಾಧೀನ ಪ್ರಕರಣವನ್ನು ಮಂತ್ರಿಗಳ ಸಲಹೆ ಮೇರೆಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದು, ನಂತರ ಅದನ್ನು ಕೈಬಿಟ್ಟ ಬಗ್ಗೆ ನಜೀರ್ ಸಾಬ್ ಅವರು ಎಸಿ ಮದನ್ ಗೋಪಾಲ್ ಮೇಲೆ ಕೆಂಡಾಮಂಡಲವಾಗಿದ್ದರು. ಎಷ್ಟೇ ಅನುಭವೀ, ನಿಸ್ಪೃಹ ರಾಜಕಾರಣಿಯಾಗಿದ್ದರೂ ನಜೀರ್ ಸಾಬ್ ಅವರು ತಾವು ಹೇಳಿದ ಕೆಲಸ ಮಾಡದ ನೌಕರ ಎಸಿ ಮದನ್ ಗೋಪಾಲ್ ಮೇಲೆ ಕಂದಾಯ ಮಂತ್ರಿ ಮತ್ತು ಜಿಲ್ಲಾಧಿಕಾರಿಗಳ ಎದುರು ತಮ್ಮ ಅಸಮಾಧಾನವನ್ನು ಹೊರಹಾಕಿ ಕೂಗಾಡಿದ್ದರು.
ಇದೇ ಕಾರಣಕ್ಕಾಗಿ ಮದನ್ ಗೋಪಾಲ್ ಅವರನ್ನು ಕೆಲವೇ ದಿನಗಳಲ್ಲಿ ನಂಜನಗೂಡು ಉಪ ವಿಭಾಗದಿಂದ ಬೇರೆಡೆಗೆ ರ್ಗಾವಣೆ ಕೂಡ ಮಾಡಲಾಗಿತ್ತು. ಅವರ ವರ್ಗಾವಣೆಯನ್ನು ವಿರೋಧಿಸಿ ಸರ್ವಜನಿಕರು, ನಂಜಗೂಡು, ಗುಂಡ್ಲುಪೇಟೆಗಳಲ್ಲಿ ಯಶಸ್ವಿ ಬಂದ್ ಮಾಡಿ ಪ್ರತಿಭಟಿಸಿದ್ದರು. ಅವರ ವರ್ಗಾವಣೆ ಆಗಿ ನಂತರ ಮೂರು ತಿಂಗಳಲ್ಲಿ ಯೋಗೇಂದ್ರ ತ್ರಿಪಾಠಿ ಬಂದರು. ಈ ನಡುವೆ ನಾನು, ನಂತರ ಮಂಜುನಾಥ್ ನಾಯಕ್ ಹಾಗೂ ಶಿಕ್ಷಣರ್ಥಿ ಎಸಿಯಾಗಿದ್ದ ಕೆ. ಶಿವರಾಂ ಅವರು ಸುಮಾರು ಮೂರು ತಿಂಗಳ ಕಾಲ ಚಾರ್ಜ್ನಲ್ಲಿದ್ದೆವು. ಮದನ್ ಗೋಪಾಲ್ ಅವರು ವೈಯಕ್ತಿಕವಾಗಿ ಕಷ್ಟಪಟ್ಟು ದುಡಿಯುವ ವ್ಯಕ್ತಿಯಾಗಿದ್ದರು. ಆದರೆ ಚುನಾಯಿತ ಪ್ರತಿನಿಧಿಗಳ ಜೊತೆ ಅತಿರೇಕದ ನೇರ ನೇರ ಹಣಾಹಣಿ ಮಾಡಿಕೊಂಡು ಅವರು ಮಾಡುತ್ತಿದ್ದ ಒಳ್ಳೆಯ ಕೆಲಸಗಳು ಹಿನ್ನೆಲೆಗೆ ಸರಿಯುತ್ತಿದ್ದವು.
ಯೋಗೇಂದ್ರ ತ್ರಿಪಾಠಿಯವರು ಬರುವ ವೇಳೆಗಾಗಲೇ ನನ್ನ ನಂಜನಗೂಡು ತಾಲ್ಲೂಕ್ ಆಡಳಿತದಲ್ಲಿ ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆದಿದ್ದೆ. ಹಾಗಾಗಿ ತ್ರಿಪಾಠಿಯವರ ಜೊತೆ ಕೆಲಸ ಕಾರ್ಯಗಳು ಸಲೀಸಾಗಿ ಸಾಗುತ್ತಿದ್ದವು. ಈ ಮೊದಲು ಎಸಿ ಶಿಕ್ಷಣರ್ಥಿಯಾಗಿದ್ದ ಕೆ. ಶಿವರಾಂ ಅವರು ಅನೇಕ ಮೌಖಿಕ ಆದೇಶಗಳನ್ನು ಹೇಳಿ ಮಾಡುವಂತೆ ನನಗೆ ನಿರ್ದೇಶನ ನೀಡುತ್ತಿದ್ದರು. ನಾನು ಖುದ್ದು ಭೇಟಿ ಮಾಡಿ ಅವರು ಹೇಳಿದ ಕೆಲಸಗಳನ್ನು ಮಾಡಲಿಕ್ಕಾಗದ ಕಾರಣದ ವಿವರ ನೀಡಿದರೂ ಸಮಾಧಾನಗೊಳ್ಳದೆ, ಜನರೆದುರಿಗೆ ಎಸಿ ಮಾಡಲು ಹೇಳಿದರೂ ತಹಸೀಲ್ದಾರ್ ಮಾಡದೆ ತಮ್ಮ ವಿರುದ್ಧವಿದ್ದಾರೆಂಬ ಆಭಾವನೆ ಬರುವಂತೆ ನಡೆದುಕೊಳ್ಳುತಿದ್ದರು. ಅವರಿನ್ನೂ ಶಿಕ್ಷಣರ್ಥಿಗಳಾಗಿದ್ದರೂ ಆಗಲೇ ತನಗೆಲ್ಲ ಗೊತ್ತು ಎಂಬ ಅಹಂನಿಂದ ವರ್ತಿಸುತ್ತಿದ್ದ ಕಾರಣ ಬಹುಬೇಗ ನನ್ನ ಅವರ ನಡುವೆ ವಿಶ್ವಾಸದ ಕೊರತೆಯಾಗಿ, ಏನಾದರೂ ಮಾಡಬೇಕೆಂದರೆ ಲಿಖಿತ ಆದೇಶ ಕಳಿಸಲು ಅವರ ಮ್ಯಾನೇಜರ್ ಅವರಿಗೆ ನಾನು ದೂರವಾಣಿ ಮುಖಾಂತರ ಹೇಳುತ್ತಿದ್ದೆ. ಆ ನಂತರ ಮತ್ತೆ ಕೆಲವು ದಿನಗಳಲ್ಲಿ ಅವರನ್ನು ಬೇರೆ ತಾಲ್ಲೂಕಿಗೆ ತರಬೇತಿಗಾಗಿ ಕಳಿಸಿದ ಕಾರಣ ನನ್ನ ಮನಸ್ತಾಪ ಅಲ್ಲಿಗೆ ಮುಗಿದಿತ್ತು. ಆದರೆ ಮುಂದೆ ಅನೇಕ ಬಾರಿ ಅವರೊಡನೆ ಒಡನಾಡುವ ಸಂರ್ಭದಲ್ಲಿ ಇದ್ಯಾವುದನ್ನೂ ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಸರಳವಾಗಿ ನಡೆಸಿಕೊಂಡ ಕಾರಣದಿಂದಾಗಿ ಅವರ ಬಗ್ಗೆ ನನ್ನಲ್ಲಿದ್ದ ಕಹಿ ಕರಗಿ ಸಹಜತೆ ಮೂಡಿದೆ.
ನನ್ನ ಕಛೇರಿ ಕೆಲಸಗಳ ಜೊತೆ ಆಚರಿಸುತ್ತಿದ್ದ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಮುಖ್ಯ ಅತಿಥಿಗಳಾಗಿ ನಮ್ಮ ಮೈಸೂರಿನ ಸಮಾಜವಾದಿ ಗೆಳೆಯರ ಜೊತೆ ಚರ್ಚಿಸಿ ಡಾ. ಎಲ್. ಬಸವರಾಜ್, ಸುಜನಾ, ಕೆ.ಎಸ್. ಭಗವಾನ್, ಕೆ. ರಾಮದಾಸ್ ಅವರನ್ನು ಕರೆಸಿ ನಮ್ಮ ತಾಲ್ಲೂಕಿನಲ್ಲಿ ಭಾಷಣ ಮಾಡಿಸುತ್ತಿದ್ದೆ. ಡಿಎಸ್ಎಸ್, ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಅನೇಕ ಮಿತ್ರರು ನನ್ನ ಒಡನಾಟದಲ್ಲಿದ್ದರು.
ಈಗ ಹೆಸರಾಂತ ಸಾಹಿತಿ ಮತ್ತು ನನ್ನ ಮಿತ್ರನಾಗಿದ್ದ ಮಾದೇವನ ಊರಾದ ದೇವನೂರಿಗೂ ಹೋದಾಗ ಅವರ ಮನೆಗೂ ಹೋಗಿ ಬಂದಿದ್ದೆ. ಕೃಷ್ಣಪ್ಪ – ಇಂದಿರಾ ಅವರು ಮಕ್ಕಳಾದ ಶಾಲಿನಿ, ಸೀಮಾ ಅವರುಗಳ ಜೊತೆ ನಂಜನಗೂಡಿಗೆ ಬಂದು ಉಳಿದು ನಂಜುಂಡೇಶ್ವರ ದೇವಸ್ಥಾನದ ಹಬ್ಬದಲ್ಲಿ ಭಾಗವಹಿಸಿದ ನೆನಪು ಈಗಲೂ ಹಸಿರಾಗಿದೆ.
ಡಿಎಸ್ಎಸ್ನ ರಾಜ್ಯ ಮಟ್ಟದ ಕಲಿಕಾ ಸಮಾವೇಶವನ್ನು (study camp ) ನಂಜನಗೂಡು ತಾಲ್ಲೂಕಿನಲ್ಲಿನ ವಿದ್ಯಾಪೀಠದಲ್ಲಿ ಕೃಷ್ಣಪ್ಪನವರು ಸುಮಾರು ಒಂದು ವಾರದ ಕಾಲ ನಡೆಸಿದ್ದರು. ಆಗ ರಾಜ್ಯದ ಮೂಲೆಮೂಲೆಗಳಿಂದ ಬಂದು ಡಿಎಸ್ಎಸ್ನ ಹೋರಾಟದ ರೂಪುರೇಷೆಗಳನ್ನು ಚರ್ಚಿಸುತ್ತಿದ್ದುದನ್ನು ನಾನು ಭಾಗವಹಿಸದಿದ್ದರೂ ತಿಳಿದುಕೊಳ್ಳುತ್ತಿದ್ದೆ.
ಡಿಎಸ್ಎಸ್ನ ಅಂದಿನ ಬಹುತೇಕ ರ್ಚೆಗಳು ರ್ಕಾರದ ನಿಷ್ಕಿçಯತೆ, ದಲಿತ ಶಾಸಕರುಗಳ ಗುಲಾಮಿತನ, ದಲಿತರ ಮೇಲಿನ ದರ್ಜನ್ಯ, ದಲಿತರ ಕರ್ಯಕ್ರಮಗಳಲ್ಲಿನ ನಿಧಾನಗತಿ ಅನುಷ್ಠಾನ, ಇಂತಹವೇ ರ್ಚೆಯಾಗುತ್ತಿದ್ದವು. ಅಂತಹ ಸಂಘಟನೆಗೆ ತಹಸೀಲ್ದಾರನಾಗಿ ಭಾಗಿಯಾಗುವುದು, ಸಹಕಾರ ನೀಡುವುದು ಸರಿಯಲ್ಲವೆಂದು ನನಗೆ ನಮ್ಮ ಹಿರಿಯ ಸಿಬ್ಬಂದಿ ಹೇಳುತ್ತಿದ್ದರೂ ನಾನು ನನ್ನ ಇತರೆ ಸಾಮಾನ್ಯ ಕೆಲಸಗಳಲ್ಲಿ ಹಿಂದೆ ಬೀಳದೆ ಮತ್ತು ಇತರೆ ಸಾರ್ವಜನಿಕರಲ್ಲೂ ಯಾವುದೇ ತಗಾದೆ ಬಾರದಂತೆ ಕೆಲಸ ನಿರ್ವಹಿಸಿದ್ದರಿಂದ ಬೇರಾರೂ ಆಕ್ಷೇಪಿಸುತ್ತಿರಲಿಲ್ಲ. ಆದರೆ ಆಗ ನಂಜನಗೂಡಿನವರೇ ಆಗಿದ್ದ ಡಿಎಸ್ಎಸ್ನಲ್ಲಿ ಇದ್ದವನೊಬ್ಬ ಮಾದೇವ, ಕೃಷ್ಣಪ್ಪನವರನ್ನು ವೈಯಕ್ತಿಕವಾಗಿ ದ್ವೇಷಿಸುವ ಮನಸ್ಸಿನ ವ್ಯಕ್ತಿ. ನಮ್ಮ ಕಛೇರಿಯ ಸರ್ವೆಯರ್ ನೌಕರನನ್ನು ಸಹಾಯ ಪಡೆದು, ನಮ್ಮ ಕಛೇರಿಯ ಬಗ್ಗೆ ಕರಪತ್ರ ಹಾಕಿ `ಭ್ರಷ್ಟಾಚಾರದ ಕೂಪ ತಾಲ್ಲೂಕು ಕಛೇರಿ’ ಎಂದೆಲ್ಲ ದೂರಿದ್ದರು. ಆದರೆ ಅದಕ್ಕೆಲ್ಲ ಕುಮ್ಮಕ್ಕು ಕೊಟ್ಟವನು ನನ್ನ ಕಛೇರಿಯ ಸರ್ವೆಯರ್ ಸಂಬಂಧಿ ಡಿ.ಎಸ್.ಎಸ್.ನಲ್ಲಿಯೇ ಇದ್ದವನೊಬ್ಬ ಎಂದು ನನಗೆ ತಿಳಿದು ಬಂತು.
ಜೊತೆಗೆ ನಮ್ಮ ಕಚೇರಿಯ ರ್ವೇಯರ್ ದೈನಂದಿನ ಕೆಲಸದಲ್ಲಿ ನಿರ್ಲಕ್ಷ್ಯ ತೋರುತ್ತಿದ್ದ ಕಾರಣದಿಂದ ನಾನು ಮೊದಲೇ ಅವನನ್ನು ಅಮಾನತ್ತುಗೊಳಿಸಿದ್ದೆ. ಆ ಕಾರಣ ಅವನು ನನ್ನ ಬಗ್ಗೆ ಮೊದಲೇ ಅಸಮಾಧಾನಗೊಂಡಿದ್ದ. ನಂತರದ ದಿನಗಳಲ್ಲಿ ನಾನೇನೂ ಹೇಳದಿದ್ದರೂ ಕರಪತ್ರ ಹಾಕಿದ ಬಗ್ಗೆ ಬಂದು ತನ್ನ ನಡವಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ. ಇದಕ್ಕೆಲ್ಲ ತನ್ನ ಭಾವ ಡಿಎಸ್ಎಸ್ನಲ್ಲಿರುವವನು ಕಾರಣ ಎಂದು ಹೇಳಿ ನನಗೆ ದಂಗುಬಡಿಸಿದ್ದ. ಇಂತಹ ವಿಷಯಗಳನ್ನೆಲ್ಲ ನಿಭಾಯಿಸುವ ಅನುಭವ ನನಗೆ ಇದ್ದುದರಿಂದ ಮತ್ತೇನು ಅದು ಬೆಳೆಯಲಿಲ್ಲ.
ನಂಜನಗೂಡಿನಲ್ಲಿ ನಾನಿರುವಾಗ ಪೋಲೀಸ್ ಇಲಾಖೆಯಲ್ಲಿ ಡಿ.ವೈ.ಎಸ್.ಪಿಯಾಗಿ ಪಿ.ಹೆಚ್. ರಾಣೆ, ಇಬ್ಬರು ಇನ್ಸ್ಪೆಕ್ಟರ್ ಮತ್ತು ನಾಲ್ಕು-ಐದು ಜನ ಸಬ್ ಇನ್ಸ್ಪೆಕ್ಟರ್ಗಳು ಇದ್ದರು. ನಾವೆಲ್ಲ ಊರಿನಲ್ಲಿರುವ ಯಾವುದೇ ಪ್ರತಿಷ್ಠಿತ ಮನರಂಜನೆಯ ಕ್ಲಬ್ಗಳಿಗೆ ಹೋಗುತ್ತಿರಲಿಲ್ಲ. ಅದರ ಬದಲು, ಪೋಲೀಸ್ ಸ್ಟೇಷನ್ ಬಳಿ ಇದ್ದ ವಿಶಾಲವಾದ ಮೈದಾನದಲ್ಲಿ ಬೆಳಗಿನ ಜಾವದಲ್ಲಿ ಬ್ಯಾಟ್ಮಿಂಟನ್, ಷಟಲ್ ಕಾಕ್ ಆಟ ಪ್ರಾರಂಭಿಸಿದ್ದೆವು. ಅಲ್ಲಿಗೆ ಕಂದಾಯ ಇಲಾಖೆಯಲ್ಲಿನ ವಿಎ, RI & ಸಬ್ ಇನ್ಸ್ಸ್ಪೆಕ್ರ್ಸ್ ಮತ್ತು ನನ್ನ ಬಿ.ಎ. ತರಗತಿಯ ಕ್ಲಾಸ್ ಮೇಟ್ ಆಗಿದ್ದ ನರಸಿಂಹಸ್ವಾಮಿ ಸೇರಿ ಒಂದೆರಡು ಘಂಟೆಗಳ ಕಾಲ ಆಟದಲ್ಲಿ ಕಳೆಯುತ್ತಿದ್ದೆವು. ಆಗಲೇ ತಾಲ್ಲೂಕಿನಲ್ಲಿನ ಸಮಸ್ಯೆಗಳನ್ನು ಸಾಂಧರ್ಭಿಕವಾಗಿ ಚರ್ಚಿಸಿ, ಶಾಂತಿ ಕಾಪಾಡಲು ಬೇಕಾದ ಕ್ರಮವಾಗಿ ಕೆಲವರನ್ನು ಒಂದೆರಡು ವಾರಗಳ ಕಾಲ ಸಬ್ ಜೈಲಿಗೆ ಕಳಿಸಲು ಕೋರುತ್ತಿದ್ದರು. ಇಲ್ಲವೇ ಪ್ರತಿ ವಾರವೂ ಹಾಜರಿರಲು ನೋಟಿಸ್ ನೀಡಿ ಬಾರದಿದ್ದಾಗ ದಸ್ತಗಿರಿ ಮಾಡಿ ತರಲು ನನ್ನಿಂದ ಅದೇಶ ಪಡೆದು ಕರೆತರುತ್ತಿದ್ದರು. ನಂತರ ವಿಚಾರಣೆ ಮಾಡಿ, ಒಳ್ಳೆಯ ನಡೆವಳಿಕೆಯ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡುತ್ತಿದ್ದೆವು. ಇನ್ನು ಕೆಲವು ಭಾರಿ ಈ ಎಲ್ಲ ಅಖPಅ 107 ಪ್ರಕರಣದಲ್ಲಿದ್ದ ಆಪಾದಿತರನ್ನು, ಗ್ರಾಮ ಸಹಾಯಕರನ್ನು ಒಟ್ಟುಗೂಡಿಸಿ ನಮ್ಮ ಕಛೇರಿಯ ಆವರಣದಲ್ಲಿದ್ದ ಜಾಗದಲ್ಲಿ ಗಿಡ ನೆಡಲು ಬೇಕಾದ ಗುಂಡಿ ತೆಗೆಯಲು ತೊಡಗಿಸಿ ದಿನದ ಕೊನೆಯಲ್ಲಿ ಕೇಸು ಕರೆದು ಕೇಸನ್ನು ಮುಂದೂಡುತ್ತಿದ್ದೆನು. ಹೀಗಾಗಿ ತಾಲ್ಲೂಕಿನಲ್ಲಿ, ಜಾತಿ ಜಗಳಗಳಾಗಲೀ, ದೊಂಬಿಗಳಾಗಲೀ ಮಾಡಲು ಪುಂಡ ಪೋಕರಿಗಳಿಗೆ ಅವಕಾಶವಿರುತ್ತಿರಲಿಲ್ಲ.
ತಾಲ್ಲೂಕು ಮಟ್ಟದ ನಾಯಕರು
1986ರ ನಂತರ ಶಾಸಕರುಗಳ ಜೊತೆ ಜಿಲ್ಲಾ ಪರಿಷತ್ ಚುನಾವಣೆಗಳು ಮುಕ್ತಾಯಗೊಂಡು ತಾಲ್ಲೂಕುಮಟ್ಟದಲ್ಲಿ ಹೆಜ್ಜಿಗೆ ರಾಮಯ್ಯ, ದೇವನೂರ ಸಿದ್ದಪ್ಪ, ಬಸವರಾಜ್, ಕಳಲೆ ಸಿದ್ದ ನಾಯಕ್, ಶಶಿಕಲಾ ನಾಗರಾಜ್ ಮತ್ತು ಶಶಿಕಲಾ ಬಾಲರಾಜ್ ಜೊತೆಗೆ ನಂಜನಗೂಡು ಟೌನ್ನಲ್ಲಿ ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷರೂ ಇರುತ್ತಿದ್ದರು. ಇವರೆಲ್ಲ ಸಣ್ಣಪುಟ್ಟ ಕೆಲಸಗಳಿಗೆ ಶಿಫಾರಸ್ಸು ಮಾಡಲು ತಾಲ್ಲೂಕು ಕಛೇರಿಗೆ ಬರುತ್ತಿದ್ದರು. ಆಗುವ ಕೆಲಸ ಮಾಡುವುದರಲ್ಲಿ ವಿಳಂಬವಾಗದಂತೆ, ಆಗದಿರುವ ಕೆಲಸಗಳಿಗೂ ನನ್ನ ಮಟ್ಟದಲ್ಲೇ ಅವರಿಗೆ ವಿವರಿಸಿ ಹೇಳುತ್ತಿದ್ದೆ. ಅವರುಗಳು ಒಮ್ಮೊಮ್ಮೆ ಅದೇ ವಿಷಯಗಳನ್ನು ಶಾಸಕರುಗಳ ಹತ್ತಿರವೂ ಪ್ರಸ್ತಾಪಿಸಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು. ನನ್ನ ವಿವರಣೆ ಶಾಸಕರುಗಳಿಗೂ ಅದೇ ಆಗಿರುತ್ತಿತ್ತು. ಹಾಗಾಗಿ ಆಗುವ ಕೆಲಸಗಳಿಗೆ ಯಾವ ಶಿಫಾರಸ್ಸು ತಂದರೂ ಆಗುವುದಿಲ್ಲ ಎಂಬ ನಂಬಿಕೆ ಅವರಿಗೆಲ್ಲ ತಿಳಿದು ಬಂದಿತ್ತು.
ಗೃಹಮಂತ್ರಿಯಾಗಿದ್ದ ರಾಚಯ್ಯನವರು ಕರ್ನಾಟಕ ಕಂಡ ಹಿರಿಯ ಸಜ್ಜನ ರಾಜಕಾರಣಿ. ಅವರು ತಾಲ್ಲೂಕಿನಲ್ಲಿ ಪ್ರವಾಸ ಇರುವಾಗ, `ಇತರೆ ಇಬ್ಬರು ಶಾಸಕರುಗಳು ಯುವಕರಾಗಿದ್ದ ಕಾರಣ ಏನಾದರೂ ನಿನ್ನಿಂದ ತಪ್ಪು ಮಾಡಿಸಿ, ಮುಂದೆ ನೀನಿನ್ನು ಎಸಿ, ಡಿಸಿ ಆಗಬೇಕಾದವನು, ಎಚ್ಚರದಿಂದ ಕೆಲಸ ನರ್ವಹಿಸಬೇಕೆಂದು’ ಸಲಹೆ ನೀಡುತ್ತಿದ್ದರು. ನನಗಿಂತ ವಯಸ್ಸಿನಲ್ಲಿ, ಅನುಭವದಲ್ಲಿ ಸುಮಾರು 20 ವರ್ಷಗಳ ಅಂತರವಿದ್ದ ಅವರ ಮಾತು ನನಗೆ ನಿಜವಾದ ಕಳಕಳಿಯಿಂದ ಕೂಡಿದ ಮಾತಾಗಿತ್ತು. ಅವರಿಗೆ ಜನರಿಗೆ ಒಳ್ಳೆಯ ಆಡಳಿತ ನೀಡಿದರೆ ಸಾಕಾಗಿತ್ತು. ಮತ್ತಾವ ಒಳ ಒಪ್ಪಂದಗಳ ಮಾತು ಅವರ ಆಡಳಿತದಲ್ಲಿ ಸುಳಿಯುತ್ತಿರಲಿಲ್ಲ.
ಕಂದಾಯ ನೌಕರರ ದಿನಾಚರಣೆ
ವಿಧಾನಸಭೆ ಚುನಾವಣೆ ಆಗಿ ಮೂರು ರ್ಷವಾಗಿತ್ತು. ಜಿಲ್ಲಾ ಪರಿಷತ್ ಆಗತಾನೆ ಚುನಾವಣೆಗಳಾಗಿ ಹೊಸ ಸದಸ್ಯರುಗಳು ಆಯ್ಕೆಯಾಗಿದ್ದರು. ಮಾಮೂಲಿ ಕಂದಾಯ ಮತ್ತು ತಾಲ್ಲೂಕು ದಂಡಾಧಿಕಾರಿಯ ಕೆಲಸಗಳನ್ನು ಬಿಟ್ಟರೆ ಮತ್ತಾವ ಒತ್ತಡದ ಕೆಲಸಗಳು ಇರಲಿಲ್ಲ. ಹೀಗಿರುವಾಗ ಕಂದಾಯ ಅಧಿಕಾರಿಗಳು ರ್ಷಪರ್ತಿ ದುಡಿತದಲ್ಲೇ ಇದ್ದು, ಕಲೆ ಸಂಸ್ಕೃತಿ, ಸಂಗೀತದ ಬಗ್ಗೆ ಮುಖ ಮಾಡುವುದೇ ಇಲ್ಲ. ಈ ಬಗ್ಗೆ ನಾವ್ಯಾಕೆ ಇಡೀ ಜಿಲ್ಲೆಯ ನೌಕರರನ್ನು ಒಳಗೊಂಡಂತೆ 1-2ದಿನ ನಮ್ಮ ಕಂದಾಯ ನೌಕರರ ದಿನಾಚರಣೆ ಆಚರಿಸಬಾರದು ಎಂದು ನಮ್ಮ ಎಸಿ ತ್ರಿಪಾಠಿಯವರ ಜೊತೆ ಚರ್ಚಿಸಿ, ನಂತರ ಡಿಸಿಗೂ ಹೇಳಿದೆ.
ಎಲ್ಲ ತಹಸೀಲ್ದಾರ್ ಮಿತ್ರರೊಡನೆ ಕೂಡ ಮೌಖಿಕವಾಗಿ ಚರ್ಚಿಸಿ ಅವರ ಸಹಕಾರವನ್ನು ಕೋರಿದೆ. ಅದರಂತೆ, ವಿವಿಧ ಆಟಗಳ ಸ್ಪರ್ಧೆ, ಹಾಡುಗಾರಿಕೆ, ಕೊನೆಯ ದಿನದಲ್ಲಿ ಮಹಾಭಾರತದ ಕುರುಕ್ಷೇತ್ರದ ನಾಟಕ ಎಂದೆಲ್ಲ ತಯಾರಿಗಳು ನಡೆದವು. ಹುಣಸೂರು, ಮೈಸೂರು ಮತ್ತು ನಂಜನಗೂಡು ಉಪ ವಿಭಾಗಗಳ ಉಪ ವಿಭಾಗಾಧಿಕಾರಿಗಳು, ಎಲ್ಲಾ ತಾಲ್ಲೂಕು ತಹಸೀಲ್ದಾರರು, ವಿಎ, ಆರ್ಐ ಹಾಗೂ ಕಛೇರಿ ಸಿಬ್ಬಂದಿ ಎಲ್ಲರೂ ಎಲ್ಲ ಆಟ ಪಾಠಗಳಲ್ಲಿ ಭಾಗವಹಿಸಿದ್ದರು. ಆಟಗಳಲ್ಲಿ ಕಬಡ್ಡಿ, ಬ್ಯಾಟ್ ಮಿಂಟನ್, ಷಟಲ್ ಕಾಕ್, ವಾಲಿಬಾಲ್, ಚೆಸ್ ಹೀಗೆಲ್ಲ ಸ್ರ್ಧೆಗಳನ್ನು ನರ್ವಹಿಸಲು ಎಇಓ ಅವರನ್ನು ಸಂರ್ಕಿಸಿ ಒಬ್ಬ ಕ್ರೀಡಾ ಅಧಿಕಾರಿಯನ್ನು ಕೋರಿದ್ದೆ. ಅವರು ಎಲ್ಲಾ ಕ್ರೀಡೆಗಳನ್ನು ವ್ಯವಸ್ಥೆಗೊಳಿಸಿ, ಆಡಿಸಿ ಬಹುಮಾನಿತರ ಪಟ್ಟಿ ನೀಡಿದ್ದರು. ನಿಯಮಿತ ಅಭ್ಯಾಸಗಳು ಇಲ್ಲದ ಆಟಗಾರರೊಬ್ಬರು ಕಬ್ಬಡಿ ಆಟದಲ್ಲಿ ಬಿದ್ದು ಅವರ ಕೈ ಮುರಿದಿತ್ತು. ಸದ್ಯ ಅವರನ್ನು ನಂಜನಗೂಡಿನಲ್ಲಿಯೇ ಉಪಚರಿಸಿ ಸುಧಾರಿಸುವಂತಾಯಿತು.
ಈ ಸಮಾರಂಭಕ್ಕೆ ಮೊದಲ ದಿನ ಎಲ್ಲಾ ಸ್ಪರ್ಧೆಗಳನ್ನು ನಡೆಸಿ ಎರಡನೇ ದಿನ ಸಮಾರೋಪ ಸಮಾರಂಭ ಮತ್ತು ನಾಟಕವಿತ್ತು. ಆಗ ಮೈಸೂರು ವಿಭಾಗಕ್ಕೆ ವಿಭಾಗಾಧಿಕಾರಿಗಳಾಗಿದ್ದ ನೀಲಕಂಠರಾಜು, ಡಿಸಿ ವಿ.ಪಿ. ಬಳಿಗಾರ್, ಹುಣಸೂರು ಎಸಿಯಾಗಿದ್ದ ಶಿವಲಿಂಗಮರ್ತಿ, ಮೈಸೂರು ಎಸಿ ಈಶ್ವರ್ ನಮ್ಮ ಎಸಿ ಯೋಗೇಂದ್ರ ತ್ರಿಪಾಠಿ ಎಲ್ಲ ಸಂತೋಷದಿಂದ ಭಾಗವಹಿಸಿದ್ದರು. ನಮ್ಮಲ್ಲಿದ್ದ 80 ಜನ ಗ್ರಾಮ ಸಹಾಯಕರಿಗೆ ವಿಶೇಷವಾದ ಸಮವಸ್ತ್ರ ಹೊಲಿಸಿ ಹೊಸ ಬೂಟುಗಳನ್ನು ಕೊಡಿಸಿ, ಅವರಿಗೆ ಪೋಲೀಸ್ ಪೇದೆಗಳಂತೆ ತರಬೇತಿಯನ್ನು ನೀಡಲು ನಮಲ್ಲಿಯೇ ಇದ್ದ ಕಸಬಾ ವಿಎ – ರಾಧಾಕೃಷ್ಣನಿಗೆ ಜವಾಬ್ದಾರಿ ನೀಡಿದ್ದೆ. ರಾಧಾಕೃಷ್ಣ VA ಆಗಿದ್ದರೂ ಒಬ್ಬ DSPಯಂತೆ ಪೊಲೀಸ್ ನಡವಳಿಕೆಗಳನ್ನು ರೂಢಿಸಿಕೊಂಡಿದ್ದ. ಅವನ ಕೆಳಗೆ ತರಬೇತಿಗೊಂಡ ನಮ್ಮ ಗ್ರಾಮ ಸಹಾಯಕರು ಶಿಸ್ತಿನ ಪೊಲೀಸ್ ಪೇದೆಗಳಂತೆ ನಡೆದುಕೊಳ್ಳುತ್ತಿದ್ದರು.
ಸಮಾರಂಭ ಪ್ರಾರಂಭವಾಗುವ ಮುನ್ನ ನಮ್ಮ ಗ್ರಾಮ ಸಹಾಯಕರೆಲ್ಲ ಒಟ್ಟಿಗೆ ಸಮವಸ್ತ್ರದಲ್ಲಿದ್ದು, ಪೋಲೀಸ್ ಇಲಾಖೆ ನೀಡುವ ‘ಗಾರ್ಡ್ ಆಫ್ ಆನರ್’ನಂತೆ ಎಲ್ಲ ಅತಿಥಿಗಳಿಗೂ ಗೌರವ ವಂದನೆ ನೀಡಿದಾಗ ‘you have summoned police personnel also here’ ಎಂದು ಡಿವಿಸಿ ಉದ್ಘಾರ ತೆಗೆದರು. ‘ನೋ ಸರ್, ಇವರೆಲ್ಲ ನಮ್ಮ ತಾಲ್ಲೂಕಿನ ಗ್ರಾಮ ಸಹಾಯಕರು’ ಎಂದಾಗ ಅವರು ಅಚ್ಚರಿ ವ್ಯಕ್ತಪಡಿಸಿ, ಪ್ರಶಂಸೆ ಕೂಡ ಮಾಡಿದ್ದರು. ಇಂತಹ ಕಂದಾಯ ದಿನಾಚರಣೆಯನ್ನು ನಾನು ಆಯೋಜಿಸಲು ಮುಂದಾಗಿದ್ದಕ್ಕೆ, ನರ್ವಹಿಸಿದ್ದಕ್ಕೆ ಡಿವಿಸಿ ಮೊದಲ್ಗೊಂಡು ಎಲ್ಲರೂ ಆಗ ನನ್ನನ್ನು ಪ್ರಶಂಸಿದರು.
ಎಲ್ಲರಿಗಿಂತಲೂ ಹೆಚ್ಚಾಗಿ ನಮ್ಮ ಎಸಿ ಯಾಗಿದ್ದ ತ್ರಿಪಾಠಿ ಅವರು ತುಂಬಾ ಖುಷಿಯಲ್ಲಿದ್ದರು. ಜೊತೆಗೆ ನಮ್ಮ ತಾಲ್ಲೂಕಿನ ಎಲ್ಲಾ ಸಿಬ್ಬಂದಿ ನಾವೆಲ್ಲ ಒಂದು ಕುಟುಂಬ ಎಂಬ ಭಾವನೆ ಮತ್ತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಏನು ಬೇಕಾದರೂ ಸಾಧಿಸಬಹುದೆಂಬ ಸದ್ಭಾವನೆ ಮೂಡುವಂತಾಗಿತ್ತು. ಕೊನೆಯಲ್ಲಿ ಕಲಿತು ಪ್ರರ್ಶಿಸಿದ ನಾಟಕದ ಪ್ರಥಮ ದೃಶ್ಯದಲ್ಲಿ ನಾನು ಕೃಷ್ಣನ ಪಾತ್ರಧಾರಿಯಾಗಿ ಹಾಡೊಂದನ್ನು ಹಾಡಿ ಪ್ರಾರಂಭವಾಗುವಂತೆ ನಾಟಕದ ನರ್ದೇಶನ ಮಾಡಿದ್ದ ಮೇಷ್ಟರು ವ್ಯವಸ್ಥೆ ಮಾಡಿದ್ದರು. ನಾನು ಕೃಷ್ಣನ ಪಾತ್ರದ ಪೋಷಾಕಿನಲ್ಲಿ ಹಾಡಿ ಸಂತೋಷಪಟ್ಟಿದ್ದು ಈಗ 35 ವರ್ಷಗಳ ನಂತರವೂ ಹಸಿರಾಗಿದೆ.(ಬರಹ:ರುದ್ರಪ್ಪ ಹನಗವಾಡಿ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ6 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ7 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ19 hours agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

