ದಿನದ ಸುದ್ದಿ
ಅತ್ಮಕತೆ | ನೀರು ಸಾಬರೂ – ಎಸಿ ಮದನಗೋಪಾಲರೂ..
- ರುದ್ರಪ್ಪ ಹನಗವಾಡಿ
ಈ ಮಧ್ಯೆ ನಂಜನಗೂಡು ಪಕ್ಕದ ತಾಲ್ಲೂಕಾದ ಗುಂಡ್ಲುಪೇಟೆಯಿಂದ ರಾಜಕಾರಣಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರು ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಪ್ರಭಾವಿ ಮಂತ್ರಿಗಳಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಬೋರ್ವೆಲ್ ತೆಗೆಸಿ ಗ್ರಾಮೀಣ ಜನರಿಗೆ ಸ್ವಚ್ಛ ಕುಡಿಯುವ ನೀರು ಕೊಡುವಲ್ಲಿ ಯಶಸ್ವಿಯಾಗಿದ್ದರು. ಜನಪರ ಮಂತ್ರಿಗಳೂ ಆಗಿದ್ದರು.
ಗುಂಡ್ಲುಪೇಟೆಯಲ್ಲಿ ಭೂಸ್ವಾಧೀನ ಪ್ರಕರಣದಲ್ಲಿ ತಮ್ಮ ಸಂಬಂಧಿಕರೊಬ್ಬರ ಜಮೀನಿಗೆ ತಿರುಗಾಡಲು ದಾರಿಗಾಗಿ ಭೂಸ್ವಾಧೀನಪಡಿಸಲು ಹಿಂದಿನ ಎಸಿ ಅವರ ಅಳಿಯಂದಿರೇ ಆಗಿದ್ದ ಎಸ್.ಎ. ಸಾದಿಕ್ ಅವರು ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಯನ್ನು ರ್ಕಾರಕ್ಕೆ ಸಲ್ಲಿಸಿದ್ದರು. ಆದರೆ ಪುನಃ ಅದು ವಿಚಾರಣೆಗೆ ಬಂದಾಗ ಈ ಭೂಸ್ವಾಧೀನವು ಸಾರ್ವಜನಿಕರ ಹಿತ ಕಾಯುತ್ತಿಲ್ಲವೆಂದು ಮದನ್ ಗೋಪಾಲ್ ಅವರು ಆ ಪ್ರಸ್ತಾವನೆಯನ್ನು ರದ್ದುಗೊಳಿಸಲು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಭೂಸ್ವಾಧೀನ ಪ್ರಕರಣವನ್ನು ಮಂತ್ರಿಗಳ ಸಲಹೆ ಮೇರೆಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದು, ನಂತರ ಅದನ್ನು ಕೈಬಿಟ್ಟ ಬಗ್ಗೆ ನಜೀರ್ ಸಾಬ್ ಅವರು ಎಸಿ ಮದನ್ ಗೋಪಾಲ್ ಮೇಲೆ ಕೆಂಡಾಮಂಡಲವಾಗಿದ್ದರು. ಎಷ್ಟೇ ಅನುಭವೀ, ನಿಸ್ಪೃಹ ರಾಜಕಾರಣಿಯಾಗಿದ್ದರೂ ನಜೀರ್ ಸಾಬ್ ಅವರು ತಾವು ಹೇಳಿದ ಕೆಲಸ ಮಾಡದ ನೌಕರ ಎಸಿ ಮದನ್ ಗೋಪಾಲ್ ಮೇಲೆ ಕಂದಾಯ ಮಂತ್ರಿ ಮತ್ತು ಜಿಲ್ಲಾಧಿಕಾರಿಗಳ ಎದುರು ತಮ್ಮ ಅಸಮಾಧಾನವನ್ನು ಹೊರಹಾಕಿ ಕೂಗಾಡಿದ್ದರು.
ಇದೇ ಕಾರಣಕ್ಕಾಗಿ ಮದನ್ ಗೋಪಾಲ್ ಅವರನ್ನು ಕೆಲವೇ ದಿನಗಳಲ್ಲಿ ನಂಜನಗೂಡು ಉಪ ವಿಭಾಗದಿಂದ ಬೇರೆಡೆಗೆ ರ್ಗಾವಣೆ ಕೂಡ ಮಾಡಲಾಗಿತ್ತು. ಅವರ ವರ್ಗಾವಣೆಯನ್ನು ವಿರೋಧಿಸಿ ಸರ್ವಜನಿಕರು, ನಂಜಗೂಡು, ಗುಂಡ್ಲುಪೇಟೆಗಳಲ್ಲಿ ಯಶಸ್ವಿ ಬಂದ್ ಮಾಡಿ ಪ್ರತಿಭಟಿಸಿದ್ದರು. ಅವರ ವರ್ಗಾವಣೆ ಆಗಿ ನಂತರ ಮೂರು ತಿಂಗಳಲ್ಲಿ ಯೋಗೇಂದ್ರ ತ್ರಿಪಾಠಿ ಬಂದರು. ಈ ನಡುವೆ ನಾನು, ನಂತರ ಮಂಜುನಾಥ್ ನಾಯಕ್ ಹಾಗೂ ಶಿಕ್ಷಣರ್ಥಿ ಎಸಿಯಾಗಿದ್ದ ಕೆ. ಶಿವರಾಂ ಅವರು ಸುಮಾರು ಮೂರು ತಿಂಗಳ ಕಾಲ ಚಾರ್ಜ್ನಲ್ಲಿದ್ದೆವು. ಮದನ್ ಗೋಪಾಲ್ ಅವರು ವೈಯಕ್ತಿಕವಾಗಿ ಕಷ್ಟಪಟ್ಟು ದುಡಿಯುವ ವ್ಯಕ್ತಿಯಾಗಿದ್ದರು. ಆದರೆ ಚುನಾಯಿತ ಪ್ರತಿನಿಧಿಗಳ ಜೊತೆ ಅತಿರೇಕದ ನೇರ ನೇರ ಹಣಾಹಣಿ ಮಾಡಿಕೊಂಡು ಅವರು ಮಾಡುತ್ತಿದ್ದ ಒಳ್ಳೆಯ ಕೆಲಸಗಳು ಹಿನ್ನೆಲೆಗೆ ಸರಿಯುತ್ತಿದ್ದವು.
ಯೋಗೇಂದ್ರ ತ್ರಿಪಾಠಿಯವರು ಬರುವ ವೇಳೆಗಾಗಲೇ ನನ್ನ ನಂಜನಗೂಡು ತಾಲ್ಲೂಕ್ ಆಡಳಿತದಲ್ಲಿ ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆದಿದ್ದೆ. ಹಾಗಾಗಿ ತ್ರಿಪಾಠಿಯವರ ಜೊತೆ ಕೆಲಸ ಕಾರ್ಯಗಳು ಸಲೀಸಾಗಿ ಸಾಗುತ್ತಿದ್ದವು. ಈ ಮೊದಲು ಎಸಿ ಶಿಕ್ಷಣರ್ಥಿಯಾಗಿದ್ದ ಕೆ. ಶಿವರಾಂ ಅವರು ಅನೇಕ ಮೌಖಿಕ ಆದೇಶಗಳನ್ನು ಹೇಳಿ ಮಾಡುವಂತೆ ನನಗೆ ನಿರ್ದೇಶನ ನೀಡುತ್ತಿದ್ದರು. ನಾನು ಖುದ್ದು ಭೇಟಿ ಮಾಡಿ ಅವರು ಹೇಳಿದ ಕೆಲಸಗಳನ್ನು ಮಾಡಲಿಕ್ಕಾಗದ ಕಾರಣದ ವಿವರ ನೀಡಿದರೂ ಸಮಾಧಾನಗೊಳ್ಳದೆ, ಜನರೆದುರಿಗೆ ಎಸಿ ಮಾಡಲು ಹೇಳಿದರೂ ತಹಸೀಲ್ದಾರ್ ಮಾಡದೆ ತಮ್ಮ ವಿರುದ್ಧವಿದ್ದಾರೆಂಬ ಆಭಾವನೆ ಬರುವಂತೆ ನಡೆದುಕೊಳ್ಳುತಿದ್ದರು. ಅವರಿನ್ನೂ ಶಿಕ್ಷಣರ್ಥಿಗಳಾಗಿದ್ದರೂ ಆಗಲೇ ತನಗೆಲ್ಲ ಗೊತ್ತು ಎಂಬ ಅಹಂನಿಂದ ವರ್ತಿಸುತ್ತಿದ್ದ ಕಾರಣ ಬಹುಬೇಗ ನನ್ನ ಅವರ ನಡುವೆ ವಿಶ್ವಾಸದ ಕೊರತೆಯಾಗಿ, ಏನಾದರೂ ಮಾಡಬೇಕೆಂದರೆ ಲಿಖಿತ ಆದೇಶ ಕಳಿಸಲು ಅವರ ಮ್ಯಾನೇಜರ್ ಅವರಿಗೆ ನಾನು ದೂರವಾಣಿ ಮುಖಾಂತರ ಹೇಳುತ್ತಿದ್ದೆ. ಆ ನಂತರ ಮತ್ತೆ ಕೆಲವು ದಿನಗಳಲ್ಲಿ ಅವರನ್ನು ಬೇರೆ ತಾಲ್ಲೂಕಿಗೆ ತರಬೇತಿಗಾಗಿ ಕಳಿಸಿದ ಕಾರಣ ನನ್ನ ಮನಸ್ತಾಪ ಅಲ್ಲಿಗೆ ಮುಗಿದಿತ್ತು. ಆದರೆ ಮುಂದೆ ಅನೇಕ ಬಾರಿ ಅವರೊಡನೆ ಒಡನಾಡುವ ಸಂರ್ಭದಲ್ಲಿ ಇದ್ಯಾವುದನ್ನೂ ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಸರಳವಾಗಿ ನಡೆಸಿಕೊಂಡ ಕಾರಣದಿಂದಾಗಿ ಅವರ ಬಗ್ಗೆ ನನ್ನಲ್ಲಿದ್ದ ಕಹಿ ಕರಗಿ ಸಹಜತೆ ಮೂಡಿದೆ.
ನನ್ನ ಕಛೇರಿ ಕೆಲಸಗಳ ಜೊತೆ ಆಚರಿಸುತ್ತಿದ್ದ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಮುಖ್ಯ ಅತಿಥಿಗಳಾಗಿ ನಮ್ಮ ಮೈಸೂರಿನ ಸಮಾಜವಾದಿ ಗೆಳೆಯರ ಜೊತೆ ಚರ್ಚಿಸಿ ಡಾ. ಎಲ್. ಬಸವರಾಜ್, ಸುಜನಾ, ಕೆ.ಎಸ್. ಭಗವಾನ್, ಕೆ. ರಾಮದಾಸ್ ಅವರನ್ನು ಕರೆಸಿ ನಮ್ಮ ತಾಲ್ಲೂಕಿನಲ್ಲಿ ಭಾಷಣ ಮಾಡಿಸುತ್ತಿದ್ದೆ. ಡಿಎಸ್ಎಸ್, ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಅನೇಕ ಮಿತ್ರರು ನನ್ನ ಒಡನಾಟದಲ್ಲಿದ್ದರು.
ಈಗ ಹೆಸರಾಂತ ಸಾಹಿತಿ ಮತ್ತು ನನ್ನ ಮಿತ್ರನಾಗಿದ್ದ ಮಾದೇವನ ಊರಾದ ದೇವನೂರಿಗೂ ಹೋದಾಗ ಅವರ ಮನೆಗೂ ಹೋಗಿ ಬಂದಿದ್ದೆ. ಕೃಷ್ಣಪ್ಪ – ಇಂದಿರಾ ಅವರು ಮಕ್ಕಳಾದ ಶಾಲಿನಿ, ಸೀಮಾ ಅವರುಗಳ ಜೊತೆ ನಂಜನಗೂಡಿಗೆ ಬಂದು ಉಳಿದು ನಂಜುಂಡೇಶ್ವರ ದೇವಸ್ಥಾನದ ಹಬ್ಬದಲ್ಲಿ ಭಾಗವಹಿಸಿದ ನೆನಪು ಈಗಲೂ ಹಸಿರಾಗಿದೆ.
ಡಿಎಸ್ಎಸ್ನ ರಾಜ್ಯ ಮಟ್ಟದ ಕಲಿಕಾ ಸಮಾವೇಶವನ್ನು (study camp ) ನಂಜನಗೂಡು ತಾಲ್ಲೂಕಿನಲ್ಲಿನ ವಿದ್ಯಾಪೀಠದಲ್ಲಿ ಕೃಷ್ಣಪ್ಪನವರು ಸುಮಾರು ಒಂದು ವಾರದ ಕಾಲ ನಡೆಸಿದ್ದರು. ಆಗ ರಾಜ್ಯದ ಮೂಲೆಮೂಲೆಗಳಿಂದ ಬಂದು ಡಿಎಸ್ಎಸ್ನ ಹೋರಾಟದ ರೂಪುರೇಷೆಗಳನ್ನು ಚರ್ಚಿಸುತ್ತಿದ್ದುದನ್ನು ನಾನು ಭಾಗವಹಿಸದಿದ್ದರೂ ತಿಳಿದುಕೊಳ್ಳುತ್ತಿದ್ದೆ.
ಡಿಎಸ್ಎಸ್ನ ಅಂದಿನ ಬಹುತೇಕ ರ್ಚೆಗಳು ರ್ಕಾರದ ನಿಷ್ಕಿçಯತೆ, ದಲಿತ ಶಾಸಕರುಗಳ ಗುಲಾಮಿತನ, ದಲಿತರ ಮೇಲಿನ ದರ್ಜನ್ಯ, ದಲಿತರ ಕರ್ಯಕ್ರಮಗಳಲ್ಲಿನ ನಿಧಾನಗತಿ ಅನುಷ್ಠಾನ, ಇಂತಹವೇ ರ್ಚೆಯಾಗುತ್ತಿದ್ದವು. ಅಂತಹ ಸಂಘಟನೆಗೆ ತಹಸೀಲ್ದಾರನಾಗಿ ಭಾಗಿಯಾಗುವುದು, ಸಹಕಾರ ನೀಡುವುದು ಸರಿಯಲ್ಲವೆಂದು ನನಗೆ ನಮ್ಮ ಹಿರಿಯ ಸಿಬ್ಬಂದಿ ಹೇಳುತ್ತಿದ್ದರೂ ನಾನು ನನ್ನ ಇತರೆ ಸಾಮಾನ್ಯ ಕೆಲಸಗಳಲ್ಲಿ ಹಿಂದೆ ಬೀಳದೆ ಮತ್ತು ಇತರೆ ಸಾರ್ವಜನಿಕರಲ್ಲೂ ಯಾವುದೇ ತಗಾದೆ ಬಾರದಂತೆ ಕೆಲಸ ನಿರ್ವಹಿಸಿದ್ದರಿಂದ ಬೇರಾರೂ ಆಕ್ಷೇಪಿಸುತ್ತಿರಲಿಲ್ಲ. ಆದರೆ ಆಗ ನಂಜನಗೂಡಿನವರೇ ಆಗಿದ್ದ ಡಿಎಸ್ಎಸ್ನಲ್ಲಿ ಇದ್ದವನೊಬ್ಬ ಮಾದೇವ, ಕೃಷ್ಣಪ್ಪನವರನ್ನು ವೈಯಕ್ತಿಕವಾಗಿ ದ್ವೇಷಿಸುವ ಮನಸ್ಸಿನ ವ್ಯಕ್ತಿ. ನಮ್ಮ ಕಛೇರಿಯ ಸರ್ವೆಯರ್ ನೌಕರನನ್ನು ಸಹಾಯ ಪಡೆದು, ನಮ್ಮ ಕಛೇರಿಯ ಬಗ್ಗೆ ಕರಪತ್ರ ಹಾಕಿ `ಭ್ರಷ್ಟಾಚಾರದ ಕೂಪ ತಾಲ್ಲೂಕು ಕಛೇರಿ’ ಎಂದೆಲ್ಲ ದೂರಿದ್ದರು. ಆದರೆ ಅದಕ್ಕೆಲ್ಲ ಕುಮ್ಮಕ್ಕು ಕೊಟ್ಟವನು ನನ್ನ ಕಛೇರಿಯ ಸರ್ವೆಯರ್ ಸಂಬಂಧಿ ಡಿ.ಎಸ್.ಎಸ್.ನಲ್ಲಿಯೇ ಇದ್ದವನೊಬ್ಬ ಎಂದು ನನಗೆ ತಿಳಿದು ಬಂತು.
ಜೊತೆಗೆ ನಮ್ಮ ಕಚೇರಿಯ ರ್ವೇಯರ್ ದೈನಂದಿನ ಕೆಲಸದಲ್ಲಿ ನಿರ್ಲಕ್ಷ್ಯ ತೋರುತ್ತಿದ್ದ ಕಾರಣದಿಂದ ನಾನು ಮೊದಲೇ ಅವನನ್ನು ಅಮಾನತ್ತುಗೊಳಿಸಿದ್ದೆ. ಆ ಕಾರಣ ಅವನು ನನ್ನ ಬಗ್ಗೆ ಮೊದಲೇ ಅಸಮಾಧಾನಗೊಂಡಿದ್ದ. ನಂತರದ ದಿನಗಳಲ್ಲಿ ನಾನೇನೂ ಹೇಳದಿದ್ದರೂ ಕರಪತ್ರ ಹಾಕಿದ ಬಗ್ಗೆ ಬಂದು ತನ್ನ ನಡವಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ. ಇದಕ್ಕೆಲ್ಲ ತನ್ನ ಭಾವ ಡಿಎಸ್ಎಸ್ನಲ್ಲಿರುವವನು ಕಾರಣ ಎಂದು ಹೇಳಿ ನನಗೆ ದಂಗುಬಡಿಸಿದ್ದ. ಇಂತಹ ವಿಷಯಗಳನ್ನೆಲ್ಲ ನಿಭಾಯಿಸುವ ಅನುಭವ ನನಗೆ ಇದ್ದುದರಿಂದ ಮತ್ತೇನು ಅದು ಬೆಳೆಯಲಿಲ್ಲ.
ನಂಜನಗೂಡಿನಲ್ಲಿ ನಾನಿರುವಾಗ ಪೋಲೀಸ್ ಇಲಾಖೆಯಲ್ಲಿ ಡಿ.ವೈ.ಎಸ್.ಪಿಯಾಗಿ ಪಿ.ಹೆಚ್. ರಾಣೆ, ಇಬ್ಬರು ಇನ್ಸ್ಪೆಕ್ಟರ್ ಮತ್ತು ನಾಲ್ಕು-ಐದು ಜನ ಸಬ್ ಇನ್ಸ್ಪೆಕ್ಟರ್ಗಳು ಇದ್ದರು. ನಾವೆಲ್ಲ ಊರಿನಲ್ಲಿರುವ ಯಾವುದೇ ಪ್ರತಿಷ್ಠಿತ ಮನರಂಜನೆಯ ಕ್ಲಬ್ಗಳಿಗೆ ಹೋಗುತ್ತಿರಲಿಲ್ಲ. ಅದರ ಬದಲು, ಪೋಲೀಸ್ ಸ್ಟೇಷನ್ ಬಳಿ ಇದ್ದ ವಿಶಾಲವಾದ ಮೈದಾನದಲ್ಲಿ ಬೆಳಗಿನ ಜಾವದಲ್ಲಿ ಬ್ಯಾಟ್ಮಿಂಟನ್, ಷಟಲ್ ಕಾಕ್ ಆಟ ಪ್ರಾರಂಭಿಸಿದ್ದೆವು. ಅಲ್ಲಿಗೆ ಕಂದಾಯ ಇಲಾಖೆಯಲ್ಲಿನ ವಿಎ, RI & ಸಬ್ ಇನ್ಸ್ಸ್ಪೆಕ್ರ್ಸ್ ಮತ್ತು ನನ್ನ ಬಿ.ಎ. ತರಗತಿಯ ಕ್ಲಾಸ್ ಮೇಟ್ ಆಗಿದ್ದ ನರಸಿಂಹಸ್ವಾಮಿ ಸೇರಿ ಒಂದೆರಡು ಘಂಟೆಗಳ ಕಾಲ ಆಟದಲ್ಲಿ ಕಳೆಯುತ್ತಿದ್ದೆವು. ಆಗಲೇ ತಾಲ್ಲೂಕಿನಲ್ಲಿನ ಸಮಸ್ಯೆಗಳನ್ನು ಸಾಂಧರ್ಭಿಕವಾಗಿ ಚರ್ಚಿಸಿ, ಶಾಂತಿ ಕಾಪಾಡಲು ಬೇಕಾದ ಕ್ರಮವಾಗಿ ಕೆಲವರನ್ನು ಒಂದೆರಡು ವಾರಗಳ ಕಾಲ ಸಬ್ ಜೈಲಿಗೆ ಕಳಿಸಲು ಕೋರುತ್ತಿದ್ದರು. ಇಲ್ಲವೇ ಪ್ರತಿ ವಾರವೂ ಹಾಜರಿರಲು ನೋಟಿಸ್ ನೀಡಿ ಬಾರದಿದ್ದಾಗ ದಸ್ತಗಿರಿ ಮಾಡಿ ತರಲು ನನ್ನಿಂದ ಅದೇಶ ಪಡೆದು ಕರೆತರುತ್ತಿದ್ದರು. ನಂತರ ವಿಚಾರಣೆ ಮಾಡಿ, ಒಳ್ಳೆಯ ನಡೆವಳಿಕೆಯ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡುತ್ತಿದ್ದೆವು. ಇನ್ನು ಕೆಲವು ಭಾರಿ ಈ ಎಲ್ಲ ಅಖPಅ 107 ಪ್ರಕರಣದಲ್ಲಿದ್ದ ಆಪಾದಿತರನ್ನು, ಗ್ರಾಮ ಸಹಾಯಕರನ್ನು ಒಟ್ಟುಗೂಡಿಸಿ ನಮ್ಮ ಕಛೇರಿಯ ಆವರಣದಲ್ಲಿದ್ದ ಜಾಗದಲ್ಲಿ ಗಿಡ ನೆಡಲು ಬೇಕಾದ ಗುಂಡಿ ತೆಗೆಯಲು ತೊಡಗಿಸಿ ದಿನದ ಕೊನೆಯಲ್ಲಿ ಕೇಸು ಕರೆದು ಕೇಸನ್ನು ಮುಂದೂಡುತ್ತಿದ್ದೆನು. ಹೀಗಾಗಿ ತಾಲ್ಲೂಕಿನಲ್ಲಿ, ಜಾತಿ ಜಗಳಗಳಾಗಲೀ, ದೊಂಬಿಗಳಾಗಲೀ ಮಾಡಲು ಪುಂಡ ಪೋಕರಿಗಳಿಗೆ ಅವಕಾಶವಿರುತ್ತಿರಲಿಲ್ಲ.
ತಾಲ್ಲೂಕು ಮಟ್ಟದ ನಾಯಕರು
1986ರ ನಂತರ ಶಾಸಕರುಗಳ ಜೊತೆ ಜಿಲ್ಲಾ ಪರಿಷತ್ ಚುನಾವಣೆಗಳು ಮುಕ್ತಾಯಗೊಂಡು ತಾಲ್ಲೂಕುಮಟ್ಟದಲ್ಲಿ ಹೆಜ್ಜಿಗೆ ರಾಮಯ್ಯ, ದೇವನೂರ ಸಿದ್ದಪ್ಪ, ಬಸವರಾಜ್, ಕಳಲೆ ಸಿದ್ದ ನಾಯಕ್, ಶಶಿಕಲಾ ನಾಗರಾಜ್ ಮತ್ತು ಶಶಿಕಲಾ ಬಾಲರಾಜ್ ಜೊತೆಗೆ ನಂಜನಗೂಡು ಟೌನ್ನಲ್ಲಿ ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷರೂ ಇರುತ್ತಿದ್ದರು. ಇವರೆಲ್ಲ ಸಣ್ಣಪುಟ್ಟ ಕೆಲಸಗಳಿಗೆ ಶಿಫಾರಸ್ಸು ಮಾಡಲು ತಾಲ್ಲೂಕು ಕಛೇರಿಗೆ ಬರುತ್ತಿದ್ದರು. ಆಗುವ ಕೆಲಸ ಮಾಡುವುದರಲ್ಲಿ ವಿಳಂಬವಾಗದಂತೆ, ಆಗದಿರುವ ಕೆಲಸಗಳಿಗೂ ನನ್ನ ಮಟ್ಟದಲ್ಲೇ ಅವರಿಗೆ ವಿವರಿಸಿ ಹೇಳುತ್ತಿದ್ದೆ. ಅವರುಗಳು ಒಮ್ಮೊಮ್ಮೆ ಅದೇ ವಿಷಯಗಳನ್ನು ಶಾಸಕರುಗಳ ಹತ್ತಿರವೂ ಪ್ರಸ್ತಾಪಿಸಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು. ನನ್ನ ವಿವರಣೆ ಶಾಸಕರುಗಳಿಗೂ ಅದೇ ಆಗಿರುತ್ತಿತ್ತು. ಹಾಗಾಗಿ ಆಗುವ ಕೆಲಸಗಳಿಗೆ ಯಾವ ಶಿಫಾರಸ್ಸು ತಂದರೂ ಆಗುವುದಿಲ್ಲ ಎಂಬ ನಂಬಿಕೆ ಅವರಿಗೆಲ್ಲ ತಿಳಿದು ಬಂದಿತ್ತು.
ಗೃಹಮಂತ್ರಿಯಾಗಿದ್ದ ರಾಚಯ್ಯನವರು ಕರ್ನಾಟಕ ಕಂಡ ಹಿರಿಯ ಸಜ್ಜನ ರಾಜಕಾರಣಿ. ಅವರು ತಾಲ್ಲೂಕಿನಲ್ಲಿ ಪ್ರವಾಸ ಇರುವಾಗ, `ಇತರೆ ಇಬ್ಬರು ಶಾಸಕರುಗಳು ಯುವಕರಾಗಿದ್ದ ಕಾರಣ ಏನಾದರೂ ನಿನ್ನಿಂದ ತಪ್ಪು ಮಾಡಿಸಿ, ಮುಂದೆ ನೀನಿನ್ನು ಎಸಿ, ಡಿಸಿ ಆಗಬೇಕಾದವನು, ಎಚ್ಚರದಿಂದ ಕೆಲಸ ನರ್ವಹಿಸಬೇಕೆಂದು’ ಸಲಹೆ ನೀಡುತ್ತಿದ್ದರು. ನನಗಿಂತ ವಯಸ್ಸಿನಲ್ಲಿ, ಅನುಭವದಲ್ಲಿ ಸುಮಾರು 20 ವರ್ಷಗಳ ಅಂತರವಿದ್ದ ಅವರ ಮಾತು ನನಗೆ ನಿಜವಾದ ಕಳಕಳಿಯಿಂದ ಕೂಡಿದ ಮಾತಾಗಿತ್ತು. ಅವರಿಗೆ ಜನರಿಗೆ ಒಳ್ಳೆಯ ಆಡಳಿತ ನೀಡಿದರೆ ಸಾಕಾಗಿತ್ತು. ಮತ್ತಾವ ಒಳ ಒಪ್ಪಂದಗಳ ಮಾತು ಅವರ ಆಡಳಿತದಲ್ಲಿ ಸುಳಿಯುತ್ತಿರಲಿಲ್ಲ.
ಕಂದಾಯ ನೌಕರರ ದಿನಾಚರಣೆ
ವಿಧಾನಸಭೆ ಚುನಾವಣೆ ಆಗಿ ಮೂರು ರ್ಷವಾಗಿತ್ತು. ಜಿಲ್ಲಾ ಪರಿಷತ್ ಆಗತಾನೆ ಚುನಾವಣೆಗಳಾಗಿ ಹೊಸ ಸದಸ್ಯರುಗಳು ಆಯ್ಕೆಯಾಗಿದ್ದರು. ಮಾಮೂಲಿ ಕಂದಾಯ ಮತ್ತು ತಾಲ್ಲೂಕು ದಂಡಾಧಿಕಾರಿಯ ಕೆಲಸಗಳನ್ನು ಬಿಟ್ಟರೆ ಮತ್ತಾವ ಒತ್ತಡದ ಕೆಲಸಗಳು ಇರಲಿಲ್ಲ. ಹೀಗಿರುವಾಗ ಕಂದಾಯ ಅಧಿಕಾರಿಗಳು ರ್ಷಪರ್ತಿ ದುಡಿತದಲ್ಲೇ ಇದ್ದು, ಕಲೆ ಸಂಸ್ಕೃತಿ, ಸಂಗೀತದ ಬಗ್ಗೆ ಮುಖ ಮಾಡುವುದೇ ಇಲ್ಲ. ಈ ಬಗ್ಗೆ ನಾವ್ಯಾಕೆ ಇಡೀ ಜಿಲ್ಲೆಯ ನೌಕರರನ್ನು ಒಳಗೊಂಡಂತೆ 1-2ದಿನ ನಮ್ಮ ಕಂದಾಯ ನೌಕರರ ದಿನಾಚರಣೆ ಆಚರಿಸಬಾರದು ಎಂದು ನಮ್ಮ ಎಸಿ ತ್ರಿಪಾಠಿಯವರ ಜೊತೆ ಚರ್ಚಿಸಿ, ನಂತರ ಡಿಸಿಗೂ ಹೇಳಿದೆ.
ಎಲ್ಲ ತಹಸೀಲ್ದಾರ್ ಮಿತ್ರರೊಡನೆ ಕೂಡ ಮೌಖಿಕವಾಗಿ ಚರ್ಚಿಸಿ ಅವರ ಸಹಕಾರವನ್ನು ಕೋರಿದೆ. ಅದರಂತೆ, ವಿವಿಧ ಆಟಗಳ ಸ್ಪರ್ಧೆ, ಹಾಡುಗಾರಿಕೆ, ಕೊನೆಯ ದಿನದಲ್ಲಿ ಮಹಾಭಾರತದ ಕುರುಕ್ಷೇತ್ರದ ನಾಟಕ ಎಂದೆಲ್ಲ ತಯಾರಿಗಳು ನಡೆದವು. ಹುಣಸೂರು, ಮೈಸೂರು ಮತ್ತು ನಂಜನಗೂಡು ಉಪ ವಿಭಾಗಗಳ ಉಪ ವಿಭಾಗಾಧಿಕಾರಿಗಳು, ಎಲ್ಲಾ ತಾಲ್ಲೂಕು ತಹಸೀಲ್ದಾರರು, ವಿಎ, ಆರ್ಐ ಹಾಗೂ ಕಛೇರಿ ಸಿಬ್ಬಂದಿ ಎಲ್ಲರೂ ಎಲ್ಲ ಆಟ ಪಾಠಗಳಲ್ಲಿ ಭಾಗವಹಿಸಿದ್ದರು. ಆಟಗಳಲ್ಲಿ ಕಬಡ್ಡಿ, ಬ್ಯಾಟ್ ಮಿಂಟನ್, ಷಟಲ್ ಕಾಕ್, ವಾಲಿಬಾಲ್, ಚೆಸ್ ಹೀಗೆಲ್ಲ ಸ್ರ್ಧೆಗಳನ್ನು ನರ್ವಹಿಸಲು ಎಇಓ ಅವರನ್ನು ಸಂರ್ಕಿಸಿ ಒಬ್ಬ ಕ್ರೀಡಾ ಅಧಿಕಾರಿಯನ್ನು ಕೋರಿದ್ದೆ. ಅವರು ಎಲ್ಲಾ ಕ್ರೀಡೆಗಳನ್ನು ವ್ಯವಸ್ಥೆಗೊಳಿಸಿ, ಆಡಿಸಿ ಬಹುಮಾನಿತರ ಪಟ್ಟಿ ನೀಡಿದ್ದರು. ನಿಯಮಿತ ಅಭ್ಯಾಸಗಳು ಇಲ್ಲದ ಆಟಗಾರರೊಬ್ಬರು ಕಬ್ಬಡಿ ಆಟದಲ್ಲಿ ಬಿದ್ದು ಅವರ ಕೈ ಮುರಿದಿತ್ತು. ಸದ್ಯ ಅವರನ್ನು ನಂಜನಗೂಡಿನಲ್ಲಿಯೇ ಉಪಚರಿಸಿ ಸುಧಾರಿಸುವಂತಾಯಿತು.
ಈ ಸಮಾರಂಭಕ್ಕೆ ಮೊದಲ ದಿನ ಎಲ್ಲಾ ಸ್ಪರ್ಧೆಗಳನ್ನು ನಡೆಸಿ ಎರಡನೇ ದಿನ ಸಮಾರೋಪ ಸಮಾರಂಭ ಮತ್ತು ನಾಟಕವಿತ್ತು. ಆಗ ಮೈಸೂರು ವಿಭಾಗಕ್ಕೆ ವಿಭಾಗಾಧಿಕಾರಿಗಳಾಗಿದ್ದ ನೀಲಕಂಠರಾಜು, ಡಿಸಿ ವಿ.ಪಿ. ಬಳಿಗಾರ್, ಹುಣಸೂರು ಎಸಿಯಾಗಿದ್ದ ಶಿವಲಿಂಗಮರ್ತಿ, ಮೈಸೂರು ಎಸಿ ಈಶ್ವರ್ ನಮ್ಮ ಎಸಿ ಯೋಗೇಂದ್ರ ತ್ರಿಪಾಠಿ ಎಲ್ಲ ಸಂತೋಷದಿಂದ ಭಾಗವಹಿಸಿದ್ದರು. ನಮ್ಮಲ್ಲಿದ್ದ 80 ಜನ ಗ್ರಾಮ ಸಹಾಯಕರಿಗೆ ವಿಶೇಷವಾದ ಸಮವಸ್ತ್ರ ಹೊಲಿಸಿ ಹೊಸ ಬೂಟುಗಳನ್ನು ಕೊಡಿಸಿ, ಅವರಿಗೆ ಪೋಲೀಸ್ ಪೇದೆಗಳಂತೆ ತರಬೇತಿಯನ್ನು ನೀಡಲು ನಮಲ್ಲಿಯೇ ಇದ್ದ ಕಸಬಾ ವಿಎ – ರಾಧಾಕೃಷ್ಣನಿಗೆ ಜವಾಬ್ದಾರಿ ನೀಡಿದ್ದೆ. ರಾಧಾಕೃಷ್ಣ VA ಆಗಿದ್ದರೂ ಒಬ್ಬ DSPಯಂತೆ ಪೊಲೀಸ್ ನಡವಳಿಕೆಗಳನ್ನು ರೂಢಿಸಿಕೊಂಡಿದ್ದ. ಅವನ ಕೆಳಗೆ ತರಬೇತಿಗೊಂಡ ನಮ್ಮ ಗ್ರಾಮ ಸಹಾಯಕರು ಶಿಸ್ತಿನ ಪೊಲೀಸ್ ಪೇದೆಗಳಂತೆ ನಡೆದುಕೊಳ್ಳುತ್ತಿದ್ದರು.
ಸಮಾರಂಭ ಪ್ರಾರಂಭವಾಗುವ ಮುನ್ನ ನಮ್ಮ ಗ್ರಾಮ ಸಹಾಯಕರೆಲ್ಲ ಒಟ್ಟಿಗೆ ಸಮವಸ್ತ್ರದಲ್ಲಿದ್ದು, ಪೋಲೀಸ್ ಇಲಾಖೆ ನೀಡುವ ‘ಗಾರ್ಡ್ ಆಫ್ ಆನರ್’ನಂತೆ ಎಲ್ಲ ಅತಿಥಿಗಳಿಗೂ ಗೌರವ ವಂದನೆ ನೀಡಿದಾಗ ‘you have summoned police personnel also here’ ಎಂದು ಡಿವಿಸಿ ಉದ್ಘಾರ ತೆಗೆದರು. ‘ನೋ ಸರ್, ಇವರೆಲ್ಲ ನಮ್ಮ ತಾಲ್ಲೂಕಿನ ಗ್ರಾಮ ಸಹಾಯಕರು’ ಎಂದಾಗ ಅವರು ಅಚ್ಚರಿ ವ್ಯಕ್ತಪಡಿಸಿ, ಪ್ರಶಂಸೆ ಕೂಡ ಮಾಡಿದ್ದರು. ಇಂತಹ ಕಂದಾಯ ದಿನಾಚರಣೆಯನ್ನು ನಾನು ಆಯೋಜಿಸಲು ಮುಂದಾಗಿದ್ದಕ್ಕೆ, ನರ್ವಹಿಸಿದ್ದಕ್ಕೆ ಡಿವಿಸಿ ಮೊದಲ್ಗೊಂಡು ಎಲ್ಲರೂ ಆಗ ನನ್ನನ್ನು ಪ್ರಶಂಸಿದರು.
ಎಲ್ಲರಿಗಿಂತಲೂ ಹೆಚ್ಚಾಗಿ ನಮ್ಮ ಎಸಿ ಯಾಗಿದ್ದ ತ್ರಿಪಾಠಿ ಅವರು ತುಂಬಾ ಖುಷಿಯಲ್ಲಿದ್ದರು. ಜೊತೆಗೆ ನಮ್ಮ ತಾಲ್ಲೂಕಿನ ಎಲ್ಲಾ ಸಿಬ್ಬಂದಿ ನಾವೆಲ್ಲ ಒಂದು ಕುಟುಂಬ ಎಂಬ ಭಾವನೆ ಮತ್ತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಏನು ಬೇಕಾದರೂ ಸಾಧಿಸಬಹುದೆಂಬ ಸದ್ಭಾವನೆ ಮೂಡುವಂತಾಗಿತ್ತು. ಕೊನೆಯಲ್ಲಿ ಕಲಿತು ಪ್ರರ್ಶಿಸಿದ ನಾಟಕದ ಪ್ರಥಮ ದೃಶ್ಯದಲ್ಲಿ ನಾನು ಕೃಷ್ಣನ ಪಾತ್ರಧಾರಿಯಾಗಿ ಹಾಡೊಂದನ್ನು ಹಾಡಿ ಪ್ರಾರಂಭವಾಗುವಂತೆ ನಾಟಕದ ನರ್ದೇಶನ ಮಾಡಿದ್ದ ಮೇಷ್ಟರು ವ್ಯವಸ್ಥೆ ಮಾಡಿದ್ದರು. ನಾನು ಕೃಷ್ಣನ ಪಾತ್ರದ ಪೋಷಾಕಿನಲ್ಲಿ ಹಾಡಿ ಸಂತೋಷಪಟ್ಟಿದ್ದು ಈಗ 35 ವರ್ಷಗಳ ನಂತರವೂ ಹಸಿರಾಗಿದೆ.(ಬರಹ:ರುದ್ರಪ್ಪ ಹನಗವಾಡಿ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


