ದಿನದ ಸುದ್ದಿ
ಆತ್ಮಕತೆ | ಮಗು : ಆತಂಕದ ಕ್ಷಣಗಳು
- ರುದ್ರಪ್ಪ ಹನಗವಾಡಿ
ಮದುವೆಯಾಗಿ 1-2 ವರ್ಷ ಮಕ್ಕಳ ಕನಸು ಬೇಡ ಎಂದು ಯೋಚಿಸಿದ್ದರೂ ಅದೇನು ಸಫಲವಾಗದೆ ನನ್ನ ಮಗ ಶಿಶಿರ ಆಗಮಿಸಿದ್ದ.
ಭದ್ರಾವತಿಯಲ್ಲಿ ಇಂದಿರಾ ಅವರ ಮನೆಗೆ ಹೋಗಿ ಅಲ್ಲಿಂದ ಲೇಡಿ ಡಾಕ್ಟರ್ ಬಳಿ ಹೋಗಿ ತಪಾಸಣೆ ಮಾಡಿಸಿದೆವು. ನಮ್ಮಿಬ್ಬರ ರಕ್ತದ ಗುಂಪು ಆರ್ಹೆಚ್ ಪಾಸಿಟಿವ್ ನೆಗೆಟಿವ್ಗಳಾಗಿದ್ದು ನೀವು ರ್ಭಿಣಿ ಆಗಲು ಸಾಧ್ಯವಿಲ್ಲ. ಇದೆಲ್ಲ ಹೇಗಾಯಿತೆಂಬ ಅಭಿಪ್ರಾಯ ತಿಳಿಸಿ, ನಮಗೆ ದಿಗಿಲು ಬೀಳುವಂತೆ ವಿವರಿಸಿದ್ದಳು. ನಮಗಾರಿಗೂ ಬೇರೆ ಡಾಕ್ಟರ್ ಪರಿಚಯವಿಲ್ಲದೆ ಇರುವಾಗ ಡಾ. ಹೆಚ್. ಶಿವರಾಂ ಅವರು ಮೆಗ್ಗಾನ್ ಹಾಸ್ಪಿಟಲ್ನಲ್ಲಿ ಜನರಲ್ ಫಿಜಿಸಿಯನ್ ಆಗಿ ಇರುವುದು ತಿಳಿಯಿತು.
ಶಿವರಾಂ ಡಾಕ್ಟರ್ ನಮಗೆ ಮೈಸೂರಿನಲ್ಲಿರುವಾಗ ಎಸ್ವೈಎಸ್ ರ್ಯಕ್ರಮಗಳ ಹುಡುಗರ ಆರೋಗ್ಯ ಸಮಸ್ಯೆ ಬಂದಾಗ ಉಪಚರಿಸುತ್ತಿದ್ದರು. ಡಾ. ಶಿವರಾಂ ಅವರು ಹಾಸನ ಜಿಲ್ಲೆಯ ಸಕಲೇಶಪುರದ ಹಾನಬಾಳ್ ಗ್ರಾಮದವರು. ಶಿವರಾಂ ಅವರಿಗೆ ರ್ಣಚಂದ್ರ ತೇಜಸ್ವಿ, ಕಡಿದಾಳ್ ಶಾಮಣ್ಣ, ಸುಂದರೇಶ್, ರವರ್ಮಕುಮಾರ್ ಇವರೆಲ್ಲ ಪರಿಚಯವಿದ್ದವರು. ಮತ್ತು ನನಗೆ ಮೈಸೂರಿನಲ್ಲಿ ಓದುವಾಗಲೇ ಪರಿಚಯವಾಗಿದ್ದರು. ನಾನು ಮೈಸೂರು ಮಹಾರಾಜಾ ಕಾಲೇಜಿನಿಂದ ಬಿಆರ್ಪಿಗೆ ಬಂದದ್ದು, ನಂತರ ಮದುವೆಯಾದದ್ದು ಈಗ ನನ್ನ ಹೆಂಡತಿ ಗರ್ಭಿಣಿ ಆಗಿರುವ ಸುದ್ದಿ ತಿಳಿದು ಸಂತೋಷಗೊಂಡರು. ನಂತರ ಗಾಯತ್ರಿ ಭದ್ರಾವತಿಯ ಲೇಡಿ ಡಾಕ್ಟರ್ ಹೇಳಿದ ವಿಚಾರ ತಿಳಿಸಿದೆ.
ಅವರು ತಪಾಸಣೆ ನಡೆಸಿ ಇದೆಲ್ಲ ಏನೂ ಇಲ್ಲ ಇಡೀ ಏಶಿಯಾ ಖಂಡದಲ್ಲಿ ಶೇ 15ರಷ್ಟು ಜನರು ಆರ್ಹೆಚ್ ಪಾಸಿಟಿವ್ ನೆಗಟಿವ್ ಸಮಸ್ಯೆ ಇರುವವರು, ಅದಕ್ಕಾಗಿ ನೀವು ಚಿಂತಿಸಬೇಕಾಗಿಲ್ಲ ಎಂದು ಹೇಳಿ ಆಗ ಗೈನಾಕಾಲಜಿಸ್ಟ್ ಆಗಿದ್ದ ಡಾ. ಮುರುಗೇಂದ್ರಪ್ಪ ಅವರಿಗೆ ರೆಫರ್ ಮಾಡಿ ತಪಾಸಣೆ ನಡೆಸಿದ ನಂತರ ಕೆಲವು ಸಲಹೆ ನೀಡಿದರು. ಕೆಲವು ದಿನ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ ಮೇರೆಗೆ ನಾವಿಬ್ಬರೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಇರಬೇಕಾಗಿ ಬಂತು. ಈ ಸಮಯದಲ್ಲಿ ಗಾಯತ್ರಿಗೆ ಹಾಲು ಮೆತ್ತನೆ ಅನ್ನ ಬಿಟ್ಟರೆ ಬೇರೇನೂ ಪಥ್ಯ ಹೇಳಿರಲಿಲ್ಲ. ನಾವು ಅದಕ್ಕಾಗಿ ಒಂದು ಸ್ಟವ್ ತಂದು ಅನ್ನ ಮತ್ತು ಹಾಲನ್ನು ನಮಗೆ ನೀಡಿದ ರೂಂನಲ್ಲಿಯೇ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೆವು. ನನಗೆ ಇಂದಿರಾ ಮತ್ತವರ ಸ್ನೇಹಿತರಾದ ಸಾಕಮ್ಮ ಹಾಗೂ ಎಂ.ಬಿ. ನಟರಾಜ್ ಅವರ ಪತ್ನಿ ಲಕ್ಷ್ಮಿ ಇವರುಗಳ ಮನೆಯಿಂದ ಚೆನ್ನಾಗಿರುವ ಊಟ ಬರುತ್ತಿತ್ತು. ಜೊತೆಗೆ ಶಿವರಾಂ ಅವರ ನಿವಾಸ ಕೂಡ ಆಸ್ಪತ್ರೆ ಹತ್ತಿರವಿತ್ತು. ನನಗೆ ಅವರ ಮನೆಗೆ ಹೋಗಿ ಊಟ ಮಾಡಿಕೊಂಡು ಬರಲು ಶಿವರಾಂ ಡಾಕ್ಟರ್ ಹೇಳುತ್ತಿದ್ದರು.
ಶಿವರಾಂ ಅವರ ಶ್ರೀಮತಿ ಆಶಾ, ಅತ್ತೆ ಶಾರದಮ್ಮ ಮತ್ತವರ ತಾಯಿ ತಂದೆ ಕೂಡ ಮನೆಯಲ್ಲೇ ಇದ್ದರು. ಅವರಿಗೆ ಇಬ್ಬರು ಮುದ್ದಾದ ಹೆಣ್ಣು ಮಕ್ಕಳು ಇದ್ದರು. ಶಿವರಾಂ ಅವರ ಮಾವ ಸ್ವಾತಂತ್ರ್ಯ ಹೋರಾಟಗಾರರು. ರೈತ ಸಂಘದಲ್ಲಿ ಸಕ್ರಿಯ ನಾಯಕರಾಗಿದ್ದರು. ಈ ಎಲ್ಲರ ಪರಿಚಯದಿಂದಾಗಿ ನನಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯತ್ರಿಯ ಆರೋಗ್ಯ ತಪಾಸಣೆ ಸಮಯದಲ್ಲಿ ಇದ್ದ ಆತಂಕ ದೂರವಾಗಿತ್ತು. ಪ್ರಭು ಜೊತೆಗೆ, ದಿವಾಕರ ಹೆಗ್ಗಡೆ ಆಗ ತಾನೆ ತನ್ನ ಪುಸ್ತಕದ ಅಂಗಡಿ ತೆರೆದುಕೊಂಡಿದ್ದರು. ಜೊತೆಗೆ ಲಂಕೇಶ್ ಪತ್ರಿಕೆಯ ವರದಿಗಾರನೂ ಆಗಿ ಶಿವಮೊಗ್ಗದಲ್ಲಿದ್ದರು. ನಾನು ಬಿಆರ್ಪಿಯಿಂದ ಊರಿಗೆ ಬರುವಾಗಲೆಲ್ಲ ನನ್ನ ಲಗ್ಗೇಜನ್ನು ಹೆಗ್ಗಡೆ ಬುಕ್ ಸ್ಟಾಲ್ನಲ್ಲಿಟ್ಟು ಪ್ರಭು ಜೊತೆ ಮಾತಾಡಿಕೊಂಡು ರಾತ್ರಿ ಬಿಆರ್ಪಿಗೆ ಹೋಗುತ್ತಿದ್ದೆ. ಹಾಗಾಗಿ ಶಿವಮೊಗ್ಗದಲ್ಲಿದ್ದ ಪ್ರಭು, ಮಂಜಪ್ಪ, ದಿವಾಕರ, ಹೆಗ್ಗಡೆ, ಡಾ. ಶಿವರಾಂ, ಎಂ.ಬಿ. ನಟರಾಜ್ ಇವರೆಲ್ಲರ ಒಡನಾಟದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯತ್ರಿ ವಿಶ್ರಾಂತಿಯಲ್ಲಿದ್ದಾಗ, ನನಗಿದ್ದ ಗೆಳೆಯರ ಸಹಾಯದಿಂದ ನಾವು ನಾವೇ ನಿಭಾಯಿಸಿಕೊಂಡೆವು. ಇಂತಹ ಸರ್ಭಗಳಲ್ಲಿ ಹೆಣ್ಣು ಮಕ್ಕಳಿಗೆ ಏಕಾಂಗಿತನ ಮತ್ತು ತೌರ ಮನೆ ಕಾಡುತ್ತದೆ. ಆದರೆ ಎರಡೂ ಕಡೆಯಿಂದ ನಮಗೆ ಸಾನ್ನಿಧ್ಯದ ಅನುಕೂಲ ಪಡೆಯುವ ಅವಕಾಶವಾಗಲಿಲ್ಲ. ಇದ್ದ ಸ್ನೇಹ ಬಳಗವೇ ಈ ಎಲ್ಲ ಕೊರತೆಯನ್ನು ನಮಗೆ ಪೂರೈಸಿತ್ತು.
ಆ ನಂತರ ಪ್ರತಿ ತಿಂಗಳೂ ತಪಾಸಣೆ ಮತ್ತು ಶುಶ್ರೂಷೆಯ ನಂತರ 3-4 ದಿನ ಮುಂಚಿತವಾಗಿ ಹೆರಿಗೆಗೆ ಬರಬೇಕೆಂದು ಸೂಚಿಸಿದ್ದರು. ಅದರಂತೆ ಹೋಗಿ ಆಸ್ಪತ್ರೆ ಸೇರಿದ್ದೆವು. ನಾವು ಆಸ್ಪತ್ರೆಯಲ್ಲಿ ಇದ್ದಾಗ ಡಾ. ಶಿವರಾಂ ಅವರು ನಮ್ಮಿಬ್ಬರನ್ನು ಸಂಜೆ ಊಟಕ್ಕೆ ಮನೆಗೆ ಆಹ್ವಾನಿಸಿದ್ದರು. ಅವರದು ತುಂಬಿದ ಮನೆಯಾಗಿತ್ತು. ಬಸುರಿ ಹೆಂಗಸೆAದು ಡಾ. ಶಿವರಾಂ ಅವರ ಹೆಂಡತಿ ಆಶಾ ಮತ್ತು ಅವರ ತಾಯಿ ಶಾರದಮ್ಮನವರು ವಿಶೇಷ ಅಡುಗೆ ಮಾಡಿ ಅಕ್ಕರೆಯಿಂದ ಆದರಿಸುತ್ತಿದ್ದರು. ಅಂದು ಸಂಜೆ ಅವಳಿನ್ನೂ ರ್ತಿ ಊಟ ಮುಗಿಸುವ ಮುಂಚೆಯೇ ಹೆರಿಗೆ ನೋವು ಕಾಣಸಿಕೊಂಡಿತು. ತಕ್ಷಣ ಆಸ್ಪತ್ರೆಗೆ ಡಾ. ಶಿವರಾಂ ಅವರು ದಾಖಲು ಮಾಡಿಸಿದರು. ಇಡೀ ರಾತ್ರಿ ಹೆರಿಗೆ ರ್ಡ್ ಒಳಗೆ ಇದ್ದ ಗಾಯತ್ರಿಗೆ ಮಾರನೆ ದಿನ ಮಧ್ಯಾಹ್ನವಾದರೂ ಹೆರಿಗೆ ಆಗಿರಲಿಲ್ಲ. ನಾನು ಹೊರಗಡೆ ಇದ್ದ ಬೆಂಚ್ ಮೇಲೆ ಕೂತು ಕಾಯುತ್ತಿದ್ದೆ. ಪ್ರಭು ಫ್ರೆಂಡ್ ಶಶಿ ಮೂಲಕ ಭದ್ರಾವತಿಗೆ ಹೋಗಿ ಇಂದಿರಾ ಅವರನ್ನು ಕರೆದುಕೊಂಡು ಬರಲು ಕಳಿಸಿದ್ದೆ. ಅವರು ಆಫೀಸಿಗೆ ರಜೆ ಹಾಕಿ ಬರುವ ಸಮಯಕ್ಕಾಗಲೇ ಗಾಯತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ದಿನಾಂಕ 11-03-81ಸಂಜೆ 4ಗಂಟೆ ಸುಮಾರಿಗೆ ಗಂಡು ಮಗು ಜನನವಾಗಿತ್ತು. ಡಾ. ಶಿವರಾಂ ಮನೆಯ ಇಬ್ಬರು ಮಕ್ಕಳು ಸೇರಿದಂತೆ ಎಲ್ಲರೂ ಬಂದು ನೋಡಿ ಸಂತಸಪಟ್ಟರು. ಮಗುವಿನ ಬೆಳವಣಿಗೆ ಹೆಚ್ಚಾಗಿದ್ದ ಕಾರಣ ಈoಡಿಛಿeಠಿs ಮುಖಾಂತರ ಮಗುವನ್ನು ಹೊರತೆಗೆಯಬೇಕಾಯಿತು ಎಂದು ಡಾಕ್ಟರ್ ಹೇಳಿದರು. ಭದ್ರಾವತಿಯಿಂದ ಬಂದ ಇಂದಿರಾ ಕೂಡಲೆ ರ್ಣ ಜವಾಬ್ದಾರಿ ತೆಗೆದುಕೊಂಡು, ಅಲ್ಲಿಂದ ಅವರ ಮನೆಗೆ ಕರೆದುಕೊಂಡು ಹೋಗಿ ಒಂದು ತಿಂಗಳ ಕಾಲ ಬಾಣಂತನ ಮಾಡಿ ಬಿ.ಆರ್.ಪಿಗೆ ನಾವು ಬರುವವರೆಗೆ ಮಗು ಬಾಣಂತಿಯನ್ನು ನೋಡಿಕೊಂಡದ್ದು ಮರೆಯಲಾಗದ ಘಟನೆಯಾಗಿ ಉಳಿದಿದೆ.
ಭದ್ರಾವತಿಗೆ ಮಗು ಬಾಣಂತಿ ಕೃಷ್ಣಪ್ಪನವರ ಮನೆಗೆ ಹೋಗಿ ಉಳಿದಿದ್ದೆವು. ಮಗುವಿನ ಬಾಣಂತನ ಆರೈಕೆಯನ್ನು ಮಾಡಲು ಶಿವಮೊಗ್ಗ ಮುನೀರ್ ಅವರ ತಾಯಿ ಬಚ್ಚಿಮ್ಮ ಅವರು ರ್ಕಾರಿ ಆಸ್ಟತ್ರೆಯಲ್ಲಿ ರ್ಸ ಆಗಿದ್ದವರು. ಅವರು ಬೆಳಿಗ್ಗೆ ಮತ್ತು ಸಂಜೆ ಬಂದು ಸಹಾಯ ಮಾಡುತ್ತಿದ್ದರು. ಇಂದಿರಾ ಬೆಳಿಗ್ಗೆ ಬಾಣಂತಿಗೆ ಮತ್ತು ಮತ್ತೆಲ್ಲರಿಗೂ ಅಡುಗೆ ಮಾಡಿಟ್ಟು ಆಫೀಸಿಗೆ ಹೋಗುತ್ತಿದ್ದರು. ಗಾಯತ್ರಿ ಮೌಖಿಕವಾಗಿ ಅವಳೇನು ಹೇಳದಿದ್ದರೂ ಭಾವನಾತ್ಮಕವಾಗಿ ಅವಳಿಗೆ ಬಹಳ ಕಷ್ಟದ ದಿನಗಳಾಗಿದ್ದವು. ಅವನ್ನೆಲ್ಲ ಮಗುವಿನ ಮುಖ ನೋಡಿಕೊಂಡು ಬಚ್ಚಿಮ್ಮನ ಶುಶ್ರೂಷೆಯಲ್ಲಿ ಕಾಲ ಹಾಕುತ್ತಿದ್ದಳು. ನಾನು ಕೂಡ ಮಗುವಿಗೆ ಎಣ್ಣೆ ಹಚ್ಚಿ ಬಿಸಿನೀರ ಸ್ನಾನ ಮಾಡಿಸುವುದನ್ನು ಬಚ್ಚಿಮ್ಮನಿಂದ ವಿಶೇಷವಾಗಿ ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೆ. ಒಂದು ತಿಂಗಳ ನಂತರ ಬಿಆರ್ಪಿಯ ಮನೆಗೆ ಬಂದಿದ್ದೆವು. ಈ ನಡುವೆ ಮಾಧ್ಯಮಿಕ ತರಗತಿಯಲ್ಲಿ ಓದುತ್ತಿದ್ದ ನನ್ನ ತಂಗಿಯನ್ನು ಕರೆತಂದು ಬಿಆರ್ಪಿಯಲ್ಲಿ ಶಾಲೆಗೆ ಸೇರಿಸಿದ್ದೆ. ನಾವು ಬಿಆರ್ಪಿಗೆ ಬಂದ ಮೇಲೆ ಊರಿನಿಂದ ಅವ್ವ ಕೂಡ ಬಂದು ಸ್ವಲ್ಪ ದಿನ ಬಾಣಂತನ ಮಾಡುವ ಶಾಸ್ತ್ರ ಮಾಡಿದ್ದಳು.
ಆ ನಂತರ ಮೂರು ತಿಂಗಳಲ್ಲಿ ಮಗುವಿಗೆ ನಾಮಕರಣ ಮಾಡುವ ಸಣ್ಣ ಸಮಾರಂಭವನ್ನು ರ್ಪಡಿಸಿದ್ದೆವು. ಆಗ ಇಂದಿರಾ – ಕೃಷ್ಣಪ್ಪನವರು ಸೇರಿದಂತೆ ಬಿಆರ್ಪಿಯಲ್ಲಿನ ಕೇಶವರ್ತಿ, ಪ್ರಭು, ಗ್ರಂಥಪಾಲಕರಾಗಿದ್ದ ರಾಮಕೃಷ್ಣಗೌಡ ಇನ್ನೂ ಅನೇಕರು ಭಾಗವಹಿಸಿ ಶಿಶಿರ ಎಂದು ಹೆಸರಿಟ್ಟು ಸಂಭ್ರಮ ಪಟ್ಟೆವು. ಮಗುವಿಗೆ 3 ತಿಂಗಳು ಮುಗಿದ ನಂತರ ನಮ್ಮ ಮನೆ ಹತ್ತಿರದಲ್ಲೇ ಇದ್ದ ಅರವಿಂದ ಆಶ್ರಮದವರು ನಡೆಸುತ್ತಿದ್ದ ಪ್ರಾಥಮಿಕ ಶಾಲೆಗೆ ಗಾಯತ್ರಿ ಟೀಚರ್ ಆಗಿ ಸೇರಿಕೊಂಡಳು. ಶಿಶಿರನನ್ನು ಬೆಳಿಗ್ಗೆ ಸ್ನಾನ ಮಾಡಿಸಿ ತಿಂಡಿ ತಿನಿಸಿದ್ದು ಬಿಟ್ಟರೆ ಅವನನ್ನು ನಮ್ಮ ಇಡೀ ಬೀದಿಯಲ್ಲಿರುವವರು ಎತ್ತಿಕೊಂಡು ಹೋಗಿ ಊಟ ನಿದ್ದೆ ಮಾಡಿಸಿಕೊಂಡು ಸಂಜೆಗೆ ಮನೆಗೆ ತಂದು ಬಿಡುತ್ತಿದ್ದರು. ಅವನ ಆಗಮನದಿಂದ ನಮಗಿದ್ದ ಪ್ರತ್ಯೇಕತೆ ಕಳೆದು ಎಲ್ಲರೂ ನಮ್ಮನ್ನು `ಬುಡ್ಲ್ಲಿ’ ಅಪ್ಪ ಅಮ್ಮ ಎಂದು ಮಕ್ಕಳು, ದೊಡ್ಡವರು ಹೊರಗಡೆ ಹೋದಾಗ ಗುರುತಿಸಿ ಮಾತಾಡುವಂತಾಗಿತ್ತು. ನಮಗಿಂತಲೂ `ಬುಡ್ಲಿ’ಗೆ ಹೆಚ್ಚು ಪರಿಚಯದ ಹುಡುಗರ ದಂಡು ಸೃಷ್ಟಿಯಾಗಿತ್ತು. ಇನ್ನು ಇವಳು ಟೀಚರ್ ಕೆಲಸದಿಂದ ನನ್ನ ರ್ಥಿಕ ಸಂಕಷ್ಟಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾದವು. ನಾನು ಮಾಡಿಕೊಂಡಿದ್ದ 15 ಸಾವಿರ ಸಾಲಕ್ಕೂ ನನಗೆ ವಿಶ್ವವಿದ್ಯಾಲಯದಿಂದ ಬರಬೇಕಾಗಿದ್ದ ಅರರ್ಸ್ ಬಂದು ನನ್ನ ಎಲ್ಲ ಸಾಲವನ್ನು ತೀರಿಸಿ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು.
ನಾನು ಕೆಪಿಎಸ್ಸಿ ಪರೀಕ್ಷೆ ತೆಗೆದುಕೊಂಡದ್ದು ಮೊದಲೇ ಹೇಳಿದ್ದೇನೆ. ಅದರ ಪರೀಕ್ಷೆ ಬರೆಯಲು ಮೈಸೂರನ್ನು ಕೇಂದ್ರವಾಗಿ ಆಯ್ಕೆ ಮಾಡಿಕೊಂಡಿದ್ದ ಕಾರಣ 1981ರಲ್ಲೇ ಮೈಸೂರಿಗೆ ಹೋಗಿ ಸುಮಾರು 15 ದಿನಗಳ ರಜೆ ಹಾಕಿ ಪರೀಕ್ಷೆ ಬರೆದೆ. ಆ ಸಮಯದಲ್ಲಿ ರೊಟ್ಟಿ, ಚಟ್ನಿ ಪುಡಿ, ಪುಳಿಯೋಗರೆ ವಾರಕ್ಕೂ ಹೆಚ್ಚು ಆಗುವಷ್ಟನ್ನು ಮಾಡಿಕೊಂಡು ಗಂಗೋತ್ರಿಯಲ್ಲಿರುವ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ನಾವು ಮೂವರೂ ಉಳಿಯುತ್ತಿದ್ದೆವು. ನಾನು ಪರೀಕ್ಷೆಗೆ ಹೋದಾಗ ಗಾಯತ್ರಿ ಶಿಶಿರ ಇಬ್ಬರೇ ಅಲ್ಲಿರುವ ಗಿಡಮರಗಳನ್ನು ನೋಡುತ್ತಾ ಇರುತ್ತಿದ್ದರು.
ಈ ಸಮಯದಲ್ಲಿ ದೇವಯ್ಯ ಹರವೆ ಮೈಸೂರಿನಲ್ಲಿ ಮಾನಸ ಗಂಗೋತ್ರಿಯಲ್ಲಿ ಕನ್ನಡ ಅಧ್ಯಾಪಕನಾಗಿದ್ದು, ಡಿ.ಎಸ್.ಎಸ್. ಸ್ಥಾಪಕ ಸದಸ್ಯರುಗಳ ಜೊತೆ ಗಟ್ಟಿ ದನಿಯಾಗಿದ್ದರು. ನಾನು ಇರುವ ಸುದ್ದಿ ತಿಳಿದು ನಮ್ಮ ಗೆಸ್ಟ್ಹೌಸ್ಗೆ ಬಂದು ಪುಳಿಯೋಗರೆ ತಿಂದು `ಗಾಯತ್ರಮ್ಮ, ಎಲ್ಲಾ ಪುಳಿಯೋಗರೆ ನನಗೆ ಕೊಡಿ ರುದ್ರಣ್ಣನಿಗೆ ನಾನು ಬಿಸಿ ಮಾಂಸದೂಟ ಮಾಡಿಸುವೆ’ ಎಂದು ಹೇಳಿ ನಮ್ಮೆಲ್ಲರನ್ನು ತನ್ನ ಮನೆಗೂ ಕರೆದುಕೊಂಡು ಹೋಗಿದ್ದ. ದೇವಯ್ಯ ಹರವೆ ಮತ್ತು ಪುಷ್ಪ ನಮಗೆ ಆಗ ಪರಿಚಯವಾಗಿ ನಂತರದ ದಿನಗಳಲ್ಲಿ ಅವರ ಮನೆಗೆ ಪುಳಿಯೋಗರೆಯೊಡನೆ ಆಗಾಗ ಹೋಗಿ ಬರುತ್ತಿದ್ದೆವು.
ಬುಡ್ಲಿಯನ್ನು ನೋಡುವ ನೆಪದಲ್ಲಿ ವಿಶಾಖಪಟ್ಟಣದಲ್ಲಿದ್ದ ಗಾಯತ್ರಿಯ ದೊಡ್ಡ ಅಕ್ಕ ಶಕುಂತಲಾರ್ತಿ ಮತ್ತು ಅವರ ಹಿರಿಯ ಮಗಳಾದ ಮೀನಾ ಬಿಆರ್ಪಿಗೆ ಬಂದು ಒಂದು ದಿನ ಉಳಿದು ನಂತರ ನರಸಿಂಹರಾಜಪುರಕ್ಕೆ ಹೋಗಿದ್ದರು. ಆಗ ಅವರಿಂದ ಗಾಯತ್ರಿ ತಂದೆ ತಾಯಿ ಇಬ್ಬರಿಗೂ ನಾವಿಬ್ಬರು ಮತ್ತು `ಬುಡ್ಲಿ’ ಆರಾಮವಾಗಿ ಇರುವುದಾಗಿಯೂ ಮತ್ತು ಅವರಿವರು ತೇಲಿ ಬಿಡುತ್ತಿದ್ದ ಸುಳ್ಳಿನ ಸುದ್ದಿಗಳಲ್ಲಿ ಸತ್ಯಾಂಶವಿಲ್ಲವೆAದು ತಿಳಿಸಿ, ಅವರಿಗೆ ನಮ್ಮ ಮದುವೆಯ ಘಟನೆಯ ನಂತರ ಸ್ವಲ್ಪಮಟ್ಟಿನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು.
ಕೃಷ್ಣಪ್ಪನವರು ಎಸ್ವೈಎಸ್ ಸಂಘಟನೆಯಲ್ಲಿ 1970ರ ದಶಕದ ಪ್ರಾರಂಭದಿAದ ಇದ್ದರೂ, ಕ್ರಮೇಣ ದಲಿತರ ಸಮಸ್ಯೆಗಳಿಗೆ ಪ್ರತ್ಯೇಕ ಸಂಘಟನೆಯ ಅವಶ್ಯಕತೆ ಕಂಡುಕೊAಡು ಭದ್ರಾವತಿಯಲ್ಲಿ ರಾಜ್ಯ ಮಟ್ಟದ ಜಾತಿ ವಿನಾಶ ಸಮ್ಮೇಳನ ಆಯೋಜಿಸಿದ್ದರು. ಭದ್ರಾವತಿಯಲ್ಲಿ ಆಗಿನ ಕೃಷ್ಣಪ್ಪನವರ ತಂಡದಲ್ಲಿ, ಎನ್. ಗಿರಿಯಪ್ಪ, ಟಿ. ರಾಜಣ್ಣ, ಹಾಲಯ್ಯ, ನರಸಿಂಹಯ್ಯ, ಚನ್ನಕೇಶವ, ಗಂಗಣ್ಣ, ಶಿವಲಿಂಗ, ಚಂದ್ರನ್, ಅತ್ತಿಗುಂದ ಕರಿಯಪ್ಪ, ಮಹಾಲಿಂಗರ್ತಿ ಜಿ., ಎಂಪಿಎಂನ ಕೃಷ್ಣರ್ತಿ ಇವರೆಲ್ಲ ಆಪ್ತ ವಲಯದಲ್ಲಿದ್ದು ಏನೇ ಹೋರಾಟದ ಕರೆ ಕೊಟ್ಟಾಗ ಬಂದು ಸೇರುತ್ತಿದ್ದರು.
ಇತರ ಮಿತ್ರ ಪಡೆ ಭದ್ರಾವತಿಯಲ್ಲಿ ದೊಡ್ಡದಿತ್ತು. ವಕೀಲ ನಾಗೇಂದ್ರರಾವ್, ಪ್ರೊ. ಚಂದ್ರಶೇಖರಯ್ಯ, ಬಿ. ರಾಜಣ್ಣ, ಶಿವಮೊಗ್ಗದ ಮುನೀರ್, ಸಾಸ್ವೆಹಳ್ಳಿ ಹಾಲಪ್ಪ, ಎಂ.ಎಲ್. ನಾಗಭೂಷಣ, ವೈ.ಎನ್. ಆಚಾರ್, ಶಿವಪ್ರಸಾದ್ (ವಿಐಎಸ್ಎಲ್), ಚಂದ್ರಪ್ರಸಾದ್ ತ್ಯಾಗಿ, ನಿಸಾರ್ ಅಹಮದ್, ರಾಚಪ್ಪ ಹೆಚ್, ವಾಗೀಶ್, ರಾಘವೇಂದ್ರ ರಾವ್ (ದಲಿತರ ಪರ ವಕೀಲರಾಗಿ ಮೊಕದ್ದಮೆಗಳನ್ನು ನಡೆಸುತ್ತಿದ್ದರು) ಇದ್ದರು. ಮಾದೇವ, ಸಿದ್ದಲಿಂಗಯ್ಯ, ವೆಂಕಟಸ್ವಾಮಿ, ಮುನಿವೆಂಕಟಪ್ಪ, ನಾರಾಯಣಸ್ವಾಮಿ, ದಿವಾಕರ ಹೆಗ್ಗಡೆ, ಎಂ.ಬಿ. ನಟರಾಜ್, ಸತ್ಯನಾರಾಯಣರಾವ್ ಅಣತಿ, ಚನ್ನಣ್ಣ ವಾಲೀಕಾರ, ದೇವಯ್ಯ ಹರವೆ ಇನ್ನು ಅನೇಕರು ರಾಜ್ಯದಾದ್ಯಂತ ಚೆದುರಿದ್ದ ಕೃಷ್ಣಪ್ಪನವರ ಹೋರಾಟದ ಸಂಗಾತಿಗಳಾಗಿದ್ದರು.
ಇವರೆಲ್ಲರ ಸಮಾಗಮವೆಂಬಂತೆ ಬಿಆರ್ಪಿಯಲ್ಲಿರುವ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಎರಡು ದಿನಗಳ ದಲಿತ ಸರ್ಷ ಸಮಿತಿಯ ತರಬೇತಿ ಶಿಬಿರವನ್ನು ಆಯೋಜಿಸಿದ್ದರು. ಆಗ ಬಂದ ಸಂಘಟಕರಿಗೆ ಊಟ ವಸತಿ ಮತ್ತು ಬಸ್ ರ್ಜ್ ಹೊಂದಿಸುವಲ್ಲಿ ಕೃಷ್ಣಪ್ಪನವರು ಪಡುತ್ತಿದ್ದ ಪಾಡನ್ನು ಬೇರೆ ಯಾವ ದಲಿತ ಸಂಘಟಕರು ಅನುಭವಿಸಿಲ್ಲ. ನಾನು ಮತ್ತು ನಮ್ಮಲ್ಲಿನ ಪ್ರಗತಿಪರ ಅಧ್ಯಾಪಕರು, ಸಹೋದ್ಯೋಗಿಗಳು ಸೇರಿ ಸ್ವಲ್ಪ ಹಣ ಸಂಗ್ರಹಿಸಿಕೊಟ್ಟಿದ್ದೆವು. ಅಲ್ಲಲ್ಲೆ ಪ್ರಗತಿಪರವಾಗಿ ಬರೆದುಕೊಂಡು ಹೋರಾಟಗಳನ್ನು ಮಾಡುತ್ತಿದ್ದ ದಲಿತರು ಅಂಬೇಡ್ಕರ್ ಸಿದ್ಧಾಂತದ ಗಟ್ಟಿ ನೆಲೆಯಲ್ಲಿ ಆತ್ಮೀಯ ಸಂಬಂಧಿಕರಂತೆ ಕೃಷ್ಣಪ್ಪನವರ ಸುತ್ತ ಒಟ್ಟುಗೂಡಿ ಇಂತಹ ಸಮಾವೇಶಗಳಲ್ಲಿ ಭಾಗವಹಿಸಿ ರ್ಚಿಸುತ್ತಿದ್ದರು.
ಬುಡ್ಲಿ ಬಂದ ನಂತರ, ಟೀಚರ್ ಕೆಲಸ ಸೇರಿದ ಗಾಯತ್ರಿ ಮನೆಯ ಹಿಂದೆ ಮುಂದೆ ಇದ್ದ ಜಾಗದಲ್ಲಿ ತರಕಾರಿ ಜೊತೆಗೆ ಇದ್ದ ಮಾವಿನ ಮರ ಮತ್ತು ದೊಡ್ಡ ನುಗ್ಗೆಮರ, ಸೀತಾಫಲದ ಮರಗಳನ್ನು ಸಂರಕ್ಷಿಸಿಕೊಂಡು ಸಾಕಷ್ಟು ಫಲ ಪಡೆಯುತ್ತಿದ್ದೆವು. ಬಂದ ಸಂಬಳದಲ್ಲಿ ಹತ್ತಿರದಲ್ಲಿದ್ದ ಲಕ್ಕವಳ್ಳಿಯಲ್ಲಿ ನಡೆಯುವ ಸಂತೆಗೆ ಹೋಗಿ ಅಗತ್ಯ ವಸ್ತುಗಳನ್ನು ವಾರಕ್ಕೊಮ್ಮೆ ಕೊಂಡು ಬರುತ್ತಿದ್ದೆವು. ಬಂದ ಎಲ್ಲ ಸಂಬಳದಲ್ಲಿ ದುಂದಾಗಿ ರ್ಚು ಮಾಡುತ್ತಾ ಉಳಿತಾಯ ಮತ್ತು ಅಚ್ಚುಕಟ್ಟುತನವಿಲ್ಲದೆ ಸ್ವಚ್ಛಂದವಾಗಿದ್ದ ನನಗೆ ಮದುವೆ ನಂತರ ಮಗು ಶಿಶಿರ ಬಂದು ಸಂಸಾರ ಜೀವನದ ಹೊಸ ಜೀವನಾನುಭವವನ್ನು ನೀಡಿತೆಂದೇ ಹೇಳಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ2 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ2 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್


