Connect with us

ದಿನದ ಸುದ್ದಿ

ಆತ್ಮಕತೆ | ಅನಾಗರಿಕ ಆಚರಣೆಯ ವಿರುದ್ಧ

Published

on

  • ರುದ್ರಪ್ಪ ಹನಗವಾಡಿ

ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ ನೋಡಿಕೊಳ್ಳುತ್ತಿದ್ದರು.

ವಿಶೇಷ ತಹಸೀಲ್ದಾರರು ಸಾಮಾನ್ಯವಾಗಿ ಯಾವ ಉದ್ದೇಶಕ್ಕೆ ನಿಯೋಜಿಸಿದ್ದರೋ ಅದನ್ನು ಬಿಟ್ಟು ಇತರೆ ಸಾಮಾನ್ಯ ವಿಷಯಗಳಲ್ಲಿ ಅವರಿಗೆ ಸಂಬಂಧಿಸಿರುವುದಿಲ್ಲ. ಹಾಗಾಗಿ ನಾನು ನನ್ನ ಕೆಲಸಗಳನ್ನು ಬಿಟ್ಟು ತಾಲ್ಲೂಕು ಕಛೇರಿ ಕೆಲಸಗಳಲ್ಲಿ ತೊಡಗಿಕೊಂಡಿರಲಿಲ್ಲ. ಆದರೆ ಇದೇ ಸಮಯದಲ್ಲಿ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಜಾತ್ರೆಯ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ವಿಶೇಷ ಸಭೆ ನಡೆಸಿ ಅಲ್ಲಿ ನಡೆಯುತ್ತಿದ್ದ ಬೆತ್ತಲೆ ಸೇವೆಯ ಆಚರಣೆಯನ್ನು ತಡೆಯಲು ಸೂಚನೆ ನೀಡಿತ್ತು.

ಬೆತ್ತಲೆಸೇವೆಯ ಈ ಅನಾಗರಿಕ ಆಚರಣೆಯ ಬಗ್ಗೆ ಪ್ರೊ. ಬಿ. ಕೃಷ್ಣಪ್ಪನವರು, ನಾನು ಸೊರಬಕ್ಕೆ ಬರುವ ಒಂದು ವರ್ಷ ಮುಂಚಿನಿAದ ಬೆತ್ತಲೆ ಸೇವೆಯ ಆಚರಣೆ ಒಂದು ಅನಾಗರಿಕ ಆಚರಣೆ ಎನ್ನುವ ಬಗ್ಗೆ ಅನೇಕ ಲೇಖನಗಳನ್ನು ಬರೆದು ಇದನ್ನು ತಡೆಗಟ್ಟಬೇಕೆಂದು ಅಂದಿನ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವ ಪತ್ರ ಬರೆದು ಈ ವಿಷಯಗಳೆಲ್ಲಾ ದಿನಪತ್ರಿಕೆ ಮತ್ತು ಆಗ ಜಾಣಜಾಣೆಯರ ಪತ್ರಿಕೆ ಎಂದು ಹೇಳಿ ತರುತ್ತಿದ್ದ ಲಂಕೇಶ್ ಪತ್ರಿಕೆಯಲ್ಲೂ ಪ್ರಕಟಗೊಂಡಿತ್ತು.

1986ರ ಜಾತ್ರೆ ಸಮಯದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ತಂಗರಾಜ್ ಅವರು ಕಂದಾಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸಭೆ ನಡೆಸಿ ಬೆತ್ತಲೆ ಹೋಗುವ ಜನರನ್ನು ಜಾಗೃತಗೊಳಿಸಿ ತಡೆಯಬೇಕೆಂದು ಜಿಲ್ಲಾಡಳಿತ ತೀರ್ಮಾನಿಸಿತ್ತು. ಕೃಷ್ಣಪ್ಪನವರ ಡಿಎಸ್‌ಎಸ್ ಸಂಘಟನೆಯ ಹೋರಾಟದ ಜೊತೆಗೆ ಶಿವಮೊಗ್ಗ-ಸಾಗರ-ಸೊರಬದಲ್ಲಿನ ಎಲ್ಲ ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘ, ಪ್ರಗತಿಪರ ಮಹಿಳಾ ಲೇಖಕಿಯರ ಸಂಘಟನೆಗಳು ಕೈಜೋಡಿಸಿದ್ದವು. ಭದ್ರಾವತಿಯಿಂದ ಪ್ರೊ. ಚಂದ್ರಶೇಖರಯ್ಯ, ಡಿಎಸ್‌ಎಸ್ ಚಂದ್ರು, ತೋರಣಗಟ್ಟಿ ಚಂದ್ರಶೇಖರ್, ಬಿದರಳ್ಳಿ ನರಸಿಂಹಮೂರ್ತಿ, ಇನ್ನೂ ಅನೇಕ ಪ್ರಗತಿಪರ ಹೋರಾಟಗಾರರು ಭಾಗವಹಿಸಿದ್ದರು.

ನಾನು ಸರ್ಕಾರದ ಭಾಗವಾಗಿ ಸಂಜೆ ಹಳ್ಳಿಗಳಿಗೆ ಕರಪತ್ರಗಳನ್ನು ಹಂಚಿ, ‘ಯಾವ ದೇವರಿಗೂ ಬೆತ್ತಲೆ ಪೂಜೆ ಸಲ್ಲಿಸುವುದು ಇಷ್ಟವಾಗದು. ಇದೆಲ್ಲ ಹಿಂದುಳಿದವರನ್ನೂ, ದಲಿತರನ್ನೂ ಶೋಷಣೆ ಮಾಡುವ ಕ್ರೂರ ಪದ್ಧತಿ, ಇವನ್ನು ನಿವಾರಣೆಮಾಡಬೇಕೆಂದು ಭಾಷಣ ಮಾಡುತ್ತಾ ತಾಲ್ಲೂಕು ಕಛೇರಿಯ ಸಿಬ್ಬಂದಿಯನ್ನು ಹಲವು ತಂಡಗಳಾಗಿ ಮಾಡಿಕೊಂಡು ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದ್ದೆವು. ಸರ್ಕಾರದ ನಿರ್ದೇಶನವಿದ್ದುದರ ಜೊತೆಗೆ ಈ ವಿಷಯಗಳು ನನಗೆ ಇಷ್ಟವಾದ ಕೆಲಸವಾಗಿದ್ದರಿಂದ ಹೆಚ್ಚಿನ ಆಸಕ್ತಿಯಿಂದ ಬೆತ್ತಲೆ ಸೇವೆ ವಿರುದ್ಧ ಪ್ರಚಾರ ಮಾಡುತ್ತಿದ್ದೆವು. ಹೀಗೆ ಎಲ್ಲಾ ಕಡೆ ಪ್ರಚಾರ ಮಾಡಿದ ಮೇಲೆ ಪ್ರೊ.ಬಿ.ಕೆ ಮತ್ತು ಶಿವಪ್ಪ ಮಾಸ್ತರು ಇನ್ನು ಕೆಲವು ಗೆಳೆಯರು ನಮ್ಮಲ್ಲಿ ಊಟ ಉಪಚಾರ ಮಾಡಿ ಹೋಗುತ್ತಿದ್ದರು. ಇದರ ಸಂಪೂರ್ಣ ಘಟನೆಯ ವಿವರವನ್ನು ಈಗಾಗಲೇ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ 2010ರಲ್ಲಿ ಪ್ರಕಟಿಸಿರುವ ‘ಬಯಲು.. ಬೆತ್ತಲೆ..ಚಂದ್ರಗುತ್ತಿ’ ಎಂಬ ಪುಸ್ತಕದಲ್ಲಿನ ಮಾಹಿತಿಯನ್ನು ಇಲ್ಲಿ ಮುಂದುವರೆಸಲಾಗಿದೆ.

ಬೆತ್ತಲೆ ಸೇವೆ ನಡೆಯುವ ಒಂದು ವಾರ ಮುಂಚಿತವಾಗಿಯೇ ಕೃಷ್ಣಪ್ಪನವರ ನೇತೃತ್ವದಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರು ಮತ್ತು ಪ್ರಗತಿಪರ ಸಂಘಟನೆಗಳೊಡನೆ ಸಂಜೆ ಹಳ್ಳಿಗಳಿಗೆ ಹೋಗಿ ಭಾಷಣಗಳ ಮುಖಾಂತರ ಬೆತ್ತಲೆ ಸೇವೆಯನ್ನು ವಿರೋಧಿಸುವ ಪ್ರಚಾರದಲ್ಲಿ ನಾನೂ ತೊಡಗಿಸಿಕೊಂಡಿದ್ದೆ. ಚಂದ್ರಗುತ್ತಿ ದೇವಸ್ಥಾನ ಸಮಿತಿಯ ಸಂಚಾಲಕರಾಗಿದ್ದ ಈಡೂರು ಪರಶುರಾಮಪ್ಪ ಮತ್ತು ಅವರ ಸ್ನೇಹಿತರು ವೈಯಕ್ತಿಕವಾಗಿ ಬೆತ್ತಲೆ ಸೇವೆಯನ್ನು ವಿರೋಧಿಸುವ ಹೋರಾಟಕ್ಕೆ ನಮ್ಮ ಬಳಿ ಸಮ್ಮತಿಸಿದ್ದರೂ ಇದನ್ನು ವಿರೋಧಿಸುವುದು ಹೇಗೆ ಎಂಬುದರ ಬಗ್ಗೆ ಅವರಲ್ಲಿ ದುಗುಡ ತುಂಬಿತ್ತು. ಆಗಿನ ಜನಪ್ರತಿನಿಧಿಗಳು ಯಾರೂ ಈ ಬಗ್ಗೆ ಚಕಾರವೆತ್ತುತ್ತಿರಲಿಲ್ಲ. ಇದೊಂದು ಅತಿ ಸೂಕ್ಷ್ಮ ವಿಚಾರವೆಂದೂ- ಏನಾದರೂ ಮಾತನಾಡಿದರೆ ಜನರಿಂದ ದೂರ ಆಗುವ ಆತಂಕ ರಾಜಕಾರಣಿಗಳ ಒಳ ಇಂಗಿತವಾಗಿತ್ತು. ಚುನಾವಣಾ ರಾಜಕೀಯದ ದೃಷ್ಟಿಯಿಂದ ಅವರಿಗೆ ಇದೆಲ್ಲ ಬೇಡದ ವಿಚಾರವಾಗಿತ್ತು.

ಈ ಹಿನ್ನೆಲೆಯಲ್ಲಿ ಬೆತ್ತಲೆಸೇವೆ ನಡೆಸುವ ಮೊದಲ ದಿನ ಸರ್ಕಾರವು ಸೂಚಿಸಿದಂತೆ ಡಿ.ಎಸ್.ಎಸ್. ಮತ್ತು ಇತರೆ ಸಂಘಟನೆಯ ಕಾರ್ಯಕರ್ತರು- ಬೆತ್ತಲೆ ಹೋಗುತ್ತಿದ್ದವರನ್ನು ತಡೆದು ಅವರಿಗಾಗಿ ಹೊಸ ಬಟ್ಟೆ ತಂದಿದ್ದ ಮಹಿಳಾ ಕಾರ್ಯಕರ್ತರು ಅವರಿಗೆ ಸುತ್ತಿ- ಕಳುಹಿಸುತ್ತಿದ್ದರು. ಅವರು ಸುತ್ತಿಕೊಂಡು ಮುಂದೆ ಹೋಗುತ್ತಿದ್ದಾಗ ಮತ್ತೆ ಬಿಚ್ಚಿಕೊಂಡು ಓಡುತ್ತಿದ್ದುದು ನಡೆಯುತ್ತಲೂ ಇತ್ತು. ಮೊದಲ ದಿನದ ಈ ಕರ‍್ಯ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯಿತು. ಸರ್ಕಾರ ಮತ್ತು ಡಿಎಸ್‌ಎಸ್ ಕರ‍್ಯಕರ್ತರು ಕೂಡ ಇದು ಸಂಪೂರ್ಣ ಯಶಸ್ವಿಯಾಯಿತೆಂದೇ ಭಾವಿಸಿದೆವು.

ಆದರೆ ಎರಡನೇ ದಿನ ಅಂದರೆ, 20-3-1986ರಂದು ಬೆಳಿಗ್ಗೆಯಿಂದಲೇ ಜನಸಾಗರ ವಿವಿಧ ಕಡೆಗಳಿಂದ ಹರಿದು ಬರುತ್ತಿತ್ತು. ನಾನು ನನ್ನ ಸಿಬ್ಬಂದಿಯೊಡನೆ ಮಾಮೂಲಿನಂತೆ ಜಾತ್ರೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಬೆತ್ತಲೆ ಸೇವೆ ಮಾಡೋ ಹೆಂಗಸಿನ ಫೋಟೋ ತೆಗೆಯುತ್ತಿದ್ದ ಇನ್ನೊಬ್ಬ ಮಹಿಳಾ ಫೋಟೋಗ್ರಾಫರ್‌ನನ್ನು ನಮ್ಮ ಎದುರಿಗೆ ಅಡ್ಡಹಾಕಿ ಅವಳು ತೆಗೆದಿದ್ದ ಫೋಟೋ ರೀಲುಗಳನ್ನು ಹೊರತೆಗೆದು ಅವಳನ್ನು ನಮ್ಮ ಎದುರಿಗೆ ಥಳಿಸಲು ಮುಂದಾಗಿ, ಅವಳನ್ನು ನಗ್ನಗೊಳಿಸಿದರು. ಆಗ ಜೋಗಿತಿಯರನ್ನು ನಾನು ತಡೆಯಲು ಹೋದಾಗ ವಾಗ್ವಾದ-ತಳ್ಳಾಟ ಪ್ರಾರಂಭವಾಯಿತು.

ಸರ್ಕಾರ ಮತ್ತು ವಿವಿಧ ಸಂಘಟನೆಗಳನ್ನು ಜೋಗತಿಯರು ಎದುರು ಹಾಕಿಕೊಳ್ಳುವುದನ್ನು ಊಹಿಸದಿದ್ದ ನಮಗೆ ಇದೆಲ್ಲ ಅನಿರೀಕ್ಷಿತ ಬೆಳವಣಿಗೆಯಾಗಿತ್ತು. ಜನರು ಅಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರನ್ನ ಹೊಡೆದರಂತೆ. ಇಲ್ಲಿ ಬಟ್ಟೆ ಬಿಚ್ಚಿದರಂತೆ, ಎಂಬ ವದಂತಿಗಳನ್ನ ಹಬ್ಬಿಸಿ ಸರ್ಕಾರದ ವ್ಯವಸ್ಥೆಯಲ್ಲಾಗಲೀ, ಡಿಎಸ್ ಎಸ್ ಮತ್ತಿತರ ಹೋರಾಟಗಾರರಾಗಲೀ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಏನೂ ತಿಳಿಯದಂತಾಗಿದ್ದರು. ನನ್ನೊಡನೆ ಇದ್ದ ಸಿಬ್ಬಂದಿ ಚದುರಿ ಹೋಗಿ ನಾನು ರಕ್ಷಣೆಗಾಗಿ ಪೋಲೀಸ್ ವ್ಯಾನಿಗೆ ಹತ್ತಿಕೊಂಡಿದ್ದೆ. ನಾವು ತಂದಿದ್ದ ಜೀಪಿಗೆ ಬೆಂಕಿ ಹಚ್ಚಿಟ್ಟು ಜೋಗತಿಯರು ಅಟ್ಟಹಾಸ ಮೆರೆದಿದ್ದರು. ನಾವು ವ್ಯಾನಿನ ಒಳಗೆ ಇದ್ದು, ಇನ್ನು ಮುಂದೆ ಏನಾಗುವುದೋ ಅನ್ನೋ ಆತಂಕದಲ್ಲಿದ್ದಾಗ ನನಗೆ ಪರಿಚಿತ ವ್ಯಕ್ತಿಯೊಬ್ಬ ಓಡಿಬಂದು ನನ್ನ ಪರಿಚಯ ಗುರುತು ಸಿಗದಂತೆ ಭಂಡಾರ ಹಾಕಿ ಅಲ್ಲಿಂದ ತನ್ನ ಮನೆಗೆ ಕರೆದುಕೊಂಡು ಹೋಗಿ ತನ್ನ ಪಂಚೆ ನೀಡಿ ಪ್ಯಾಂಟ್ ಷರಟು ತೆಗೆಸಿ ನಾನು ಯಾರೋ ಅನ್ನೋ ರೀತಿ ಮಾಡಿಕೊಂಡು ತನ್ನ ರಾಜದೂತ್ ಮೋಟಾರ್‌ಬೈಕ್‌ನಲ್ಲಿ ಸೊರಬಕ್ಕೆ ತಂದುಬಿಟ್ಟರು.

ಅಲ್ಲಿಂದ ಎಲ್ಲರಿಗೂ ಫೋನ್ ಮಾಡಿ ಆಗಿದ್ದ ಅನಾಹುತವನ್ನು ತಿಳಿಸಿದೆ. ಇದು ಸುಮಾರು ಮಧ್ಯಾಹ್ನ 3.00 ಘಂಟೆಯ ತನಕ ಜೋಗತಿಯರ ಅಟ್ಟಹಾಸಕ್ಕೆ ಗುರಿಯಾದ ಡಿ.ಎಸ್.ಎಸ್. ಮತ್ತು ಇತರೆ ಕರ‍್ಯಕರ್ತರು ತಮಗೆ ಸಿಕ್ಕ ಸಿಕ್ಕ ಕಡೆ ಚದುರಿ ಪ್ರಾಣ ಉಳಿಸಿಕೊಳ್ಳಲು ತಪ್ಪಿಸಿಕೊಂಡು ಪರಾರಿಯಾದರು. ಈ ಸಂದರ್ಭದಲ್ಲಿ ಕೃಷ್ಣಪ್ಪನವರೇನಾದರೂ ಈ ಜೋಗತಿಯರ ಕೈಗೆ ಸಿಕ್ಕಿದ್ದರೆ ಬಹುಶಃ ಅಂದೇ ಅವರ ಕೊಲೆ ಮಾಡಲು ಹೇಸುತ್ತಿರಲಿಲ್ಲ.

ಸುಮಾರು 4.00 ಘಂಟೆಯ ಸುಮಾರಿಗೆ ಹೆಚ್ಚಿನ ಪೋಲೀಸ್ ಬಂದು ಇಡೀ ಜೋಗತಿಯರ ಸಮೂಹವನ್ನು ಬೆತ್ತಲೆಯಾಗಿಯೇ ಅರೆಸ್ಟ್ ಮಾಡಿ ಸೊರಬ ಪೋಲೀಸ್ ಠಾಣೆಯಲ್ಲಿ ಕೂಡಿ ಹಾಕಿದ್ದರು. ಸುಮಾರು 5-6 ಘಂಟೆಯ ಸುಮಾರಿಗೆ ಪೋಲೀಸ್ ಬಂದು ಇವರಲ್ಲಿ ಯಾರು ನಿಮ್ಮ ಮೇಲೆ ಹಲ್ಲೆ ಮಾಡಿದರು ಗುರ್ತಿಸಿ ಎಂದು ಹೇಳಿದರು.

ಪೊಲೀಸರೊಡನೆ ಹೋಗಿ ನೋಡುತ್ತೇನೆ, ಅದೊಂದು ಭಯಂಕರ ದೃಶ್ಯ. ಪೀಚಲು ದೇಹಗಳ ಅನಾರೋಗ್ಯವೇ ಮೂರ್ತಿವೆತ್ತ- ಕುಡಿತದ ಅಮಲಿನಲ್ಲಿದ್ದ ಅವರಿಗೆ ತಾವೇನು ಮಾಡಿದ್ದೆವು ಅನ್ನುವುದೇ ಅವರಿಗೆ ಗೊತ್ತಿರಲಿಲ್ಲ. ಯಾವುದೋ ಕಾಡಿನ ಪ್ರಾಣಿಗಳಂತೆ ಪಿಳಿಪಿಳಿ ಕಣ್ಣು ಬಿಡುತ್ತಾ ಆ ರೂಮಿಗೆ ಬಂದವರನ್ನು ನೋಡುತ್ತಿದ್ದರು. ನನಗೆ `ಯಾರು ಏನು ಮಾಡಿದರು ಎನ್ನುವುದನ್ನ ಯಾರ ಮೇಲೆ ಹೇಳಲಿ’ ಎನ್ನುತ್ತಾ ಈಚೆಗೆ ಬಂದೆ. ಆದರೆ ಈ ಜೋಗತಿಯರು ಅಂತಹ ಸ್ಥಿತಿಯಲ್ಲೂ ತಮ್ಮ ಬಳಿ ಬೆಳಗಿನಿಂದ ದೋಚಿದ ಒಡವೆಗಳು ಮತ್ತು ಹಣ ಇರುವುದು ಸಣ್ಣ ಸಣ್ಣ ಚೀಲಗಳಲ್ಲಿರುವುದು ಪರಿಶೀಲಿಸಿದಾಗ ಕಂಡು ಬಂತು.

ಈ ಘಟನೆಯ ನಂತರ ಆದ ಮಾರನೇ ದಿನ ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಮುಖ ಸುದ್ದಿಯಾಗಿ ವರದಿಗಳು ಪ್ರಕಟಗೊಂಡವು. ನಾನು ಆತಂಕದಿAದ ನನ್ನ ಹೆಂಡತಿಗೆ ‘I ಚಿm Sಚಿಜಿe’ ಎಂದು ತಂತಿ ನೀಡಿದಾಗ ಅವಳು ಗಲಿಬಿಲಿಗೊಂಡು ಫೋನ್ ಮಾಡಿದಳು. ಇತ್ತ ನನ್ನ ಹಳ್ಳಿ ಹನಗವಾಡಿಯಿಂದ ಬಂದಿದ್ದ ಜೋಗತಿಯರಿಂದಲೇ ರೋಚಕವಾಗಿ ತಲುಪಿದ್ದ ಸುದ್ದಿಯಿಂದ, ವರದಿಗಳನ್ನು ಕೇಳಿಕೊಂಡ ನಮ್ಮ ಊರಿನ ಜನರು ಮತ್ತು ನಮ್ಮ ಅವ್ವ, ಅಣ್ಣ-ತಮ್ಮಂದಿರು ಮತ್ತು ಮಿತ್ರರ ದಂಡು ಸೊರಬಕ್ಕೆ ನನ್ನನ್ನು ನೋಡಲು ಬಂದಿದ್ದರು. ಅವರು ನಾನು ಮಾಮೂಲಿನಂತೆ ಇದ್ದುದನ್ನು ನೋಡಿ ನೆಮ್ಮದಿಗೊಂಡರು. ನನ್ನ ತಮ್ಮನೊಬ್ಬ ನಿನ್ನನ್ನು ಆಸ್ಪತ್ರೆಯಲ್ಲಿ ಬ್ಯಾಂಡೇಜ್ ಸಮೇತ ನೋಡುವ ಕಲ್ಪನೆಯಲ್ಲಿಯೆ ಓಡಿ ಬಂದೆವು ಎಂದಾಗ ನಾನು ಕೂದಲೆಳೆಯಲ್ಲಿ ಸಾವು ತಪ್ಪಿದ್ದನ್ನು ವಿವರಿಸಲಿಲ್ಲ.

ನಾನು ತಹಶೀಲ್ದಾರನಾಗಿ ಹೊಸದರಲ್ಲಿ ಆಗಿದ್ದ ಈ ಘಟನೆ ಇಂದಿಗೂ ನನಗೆ ಎಚ್ಚರಿಕೆಯ ಮಾರ್ಗ ಸೂಚಿಯಾಗಿದೆ. ಒಂದು ವಿಷಾದದ ಸಂಗತಿಯೆAದರೆ ನಮ್ಮ ಪೋಲೀಸರು ಇಂದಿಗೂ ಯಥಾಸ್ಥಿತಿಯ ರಕ್ಷಕರಾಗಿಯೇ ಉಳಿದಿದ್ದಾರೆ. ಅವರನ್ನು ಬದಲಾಗುತ್ತಿರುವ ಕಾಲಮಾನದ ಜೊತೆಗೆ ಬದಲಾವಣೆಯ ರೂವಾರಿಗಳಾಗುವಂತೆ ತರಬೇತಿ ನೀಡುವಲ್ಲಿ ಸರ್ಕಾರವು ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ.

ಈ ಘಟನೆಯ ನಂತರದ ಆದ ಬೆಳವಣಿಗೆಯ ಹಿನ್ನೆಲೆಯಲ್ಲಿ ಒಂದು ಮಹತ್ತರ ಬದಲಾವಣೆ ಆ ಪ್ರದೇಶದಲ್ಲಿ ಆಗಿದೆ. ಬೆತ್ತಲೆ ಸೇವೆಯನ್ನು ಸರ್ಕಾರ ನಿಷೇಧಿಸಿದೆ. ಅದರೊಟ್ಟಿಗೆ ಅನೇಕ ಸಾಮಾಜಿಕ ಅನಿಷ್ಟಗಳ ಬಗ್ಗೆ ಸಾಮಾನ್ಯ ಜನರ ಮಧ್ಯದಲ್ಲಿ ಚರ್ಚೆಗಳಾಗಿವೆ. ಕೃಷ್ಣಪ್ಪನವರ ಹೋರಾಟ ಹೊಸ ದಿಕ್ಕಿನೆಡೆಗೆ ಸಮಾಜವನ್ನು ಮುಖ ಮಾಡಿಸಿದೆ. ಇದು ಅವರ ಆತ್ಮಕ್ಕೆ ನೆಮ್ಮದಿಯನ್ನು ನೀಡಿದೆ ಎಂದರೆ ತಪ್ಪಾಗಲಾರದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ ಕೇಶವಮೂರ್ತಿ ಬಡಾವಣೆ ಹಾಗೂ ನಾಗನೂರು ಗ್ರಾಮಗಳ ಕೂಡು ರಸ್ತೆಗಳ ಅಂದಾಜು 500 ಲಕ್ಷ ಮೊತ್ತದ ಕಳಪೆ ಕಾಮಗಾರಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ಕರ್ತವ್ಯ ಲೋಪ ಎಸಗಿದ ಶ್ರೀ ಶಿವಮೂರ್ತಿ, ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ದಾವಣಗೆರೆ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ ಕೇಶವಮೂರ್ತಿ ಬಡಾವಣೆ ಹಾಗೂ ನಾಗನೂರು ಗ್ರಾಮಗಳ ಕೂಡು ರಸ್ತೆಗಳ ಕಾಮಗಾರಿಯನ್ನು ಅಂದಾಜು 500 ಲಕ್ಷ ಮೊತ್ತದಲ್ಲಿ ಕೈಗೊಳ್ಳಲಾಗಿದ್ದು, ಸದರಿ ಕಾಮಗಾರಿ ನಡೆದು ಒಂದು ವರ್ಷದ ಒಳಗಾಗಿ ರಸ್ತೆಯು ಹಾಳಾಗಿರುತ್ತದೆ. ಹೀಗಾಗಿ ಸದರಿ ಕಾಮಗಾರಿಗೆ ಸಂಬAಧಿಸಿದ ದಾಖಲೆಗಳನ್ನು ಮಾಹಿತಿಹಕ್ಕು ಅಡಿಯಲ್ಲಿ ಪಡೆದು ಪರಿಶೀಲನೆ ಮಾಡಿದಾಗ, ಅಂತಿಮ ಬಿಲ್ಲನ್ನು ಮಂಜೂರು ಮಾಡುವ ಪೂರ್ವದಲ್ಲಿಯೇ ಸದರಿ ಕಾಮಗಾರಿಯು ಹದಗೆಟ್ಟಿರುವ ಮಾಹಿತಿ ಪಡೆದು, ಮಾಹಿತಿಹಕ್ಕು ಅಡಿಯಲ್ಲಿ ಸಂಬಂಧಿಸಿದ ಕಡತಗಳನ್ನು ಪಡೆದು ಪರಿಶೀಲನೆ ಮಾಡಿದಾಗ ಕಳಪೆ ಕಾಮಗಾರಿ ನಡೆದಿರುವುದು ಕಂಡು ಬಂದ ಕಾರಣ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ದಾವಣಗೆರೆ ಇವರು ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ದಾವಣಗೆರೆ ಇವರಿಗೆ ನಮ್ಮ ದೂರು ಅರ್ಜಿಯನ್ನು ವರ್ಗಾಹಿಸಿ, ‘ಸದರಿ ವಿಷಯದ ಕುರಿತು ಸ್ಥಳ ಪರಿಶೀಲನೆ ನಡೆಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಮನವಿದಾರರಿಗೆ ಹಿಂಬರಹ ನೀಡುವಂತೆ’ ತಿಳಿಸಿರುತ್ತಾರೆ. ಆದರೆ 3 ತಿಂಗಳು ಕಳೆದರೂ ಕಾರ್ಯಪಾಲಕ ಅಭಿಯಂತರರಾದ ಶ್ರೀ ಶಿವಮೂರ್ತಿ ಇವರು ಯಾವುದೇ ತನಿಖೆ ನಡೆಸದೆ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ‍್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿದ್ದು ನಿಗಧಿತ ಅವಧಿಯಲ್ಲಿ ಹಕ್ಕು, ಆಕ್ಷೇಣೆಗಳಿದ್ದಲ್ಲಿ ಸಲ್ಲಿಸಲು ರ‍್ಕಾರದ ಕರ‍್ಯರ‍್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಡಾ; ಶಮ್ಲಾ ಇಕ್ಬಾಲ್ ತಿಳಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು. ಜನವರಿ 3 ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ, ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಆಕ್ಷೇಪಣೆ ಮತ್ತು ಹಕ್ಕುಗಳನ್ನು ಸಲ್ಲಿಸಲು ಜನವರಿ 24 ರವರೆಗೆ ಅವಕಾಶವಿದೆ. ಜನವರಿ 11 ರಂದು ನಡೆದ ವಿಶೇಷ ಅಭಿಯಾನದಲ್ಲಿ 85 ರ‍್ಜಿಗಳು ಸ್ವೀಕೃತವಾಗಿದ್ದು, ಮುಂದಿನ ಅಭಿಯಾನವು ಜನವರಿ 18 ರಂದು ನಡೆಯಲಿದೆ. ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ಮತಗಟ್ಟೆಗಳ ಪುನರ್ ವಿಂಗಡಣೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಹಿಂದೆ 217 ಮತಗಟ್ಟೆಗಳಿದ್ದವು. ನಿಯಮದಂತೆ 1200 ಕ್ಕಿಂತ ಹೆಚ್ಚು ಮತದಾರರಿರುವ ಕಡೆ ಹೊಸ ಮತಗಟ್ಟೆಗಳನ್ನು ಸೃಜಿಸಿ, ಪ್ರಸ್ತುತ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 24 ಮತಗಟ್ಟೆಗಳ ಸ್ಥಳ ಬದಲಾವಣೆ ಮಾಡಲಾಗಿದ್ದು, ಮೂಲಭೂತ ಸೌರ‍್ಯಗಳಾದ ರ‍್ಯಾಂಪ್ ಮುಂತಾದವುಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದರು.

ರಾಜಕೀಯ ಪಕ್ಷಗಳಿಗೆ ಎರಡು ಪ್ರಮುಖ ಮನವಿಗಳನ್ನು ಮಾಡಿ ಬಿಎಲ್ಎ ಪ್ರತಿಯೊಂದು ಮತಗಟ್ಟೆ ಮಟ್ಟದಲ್ಲಿ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್ಗಳನ್ನು ನೇಮಕ ಮಾಡಿ ಪಟ್ಟಿಯನ್ನು ನೀಡಬೇಕು. ಇದರಿಂದ ಮೃತ ಮತದಾರರ ಹೆಸರು ಕೈಬಿಡುವುದು ಮತ್ತು ವಿಳಾಸ ಬದಲಾವಣೆ ಕರ‍್ಯ ಸುಲಭವಾಗುತ್ತದೆ. ಹೆಸರು ಸರ‍್ಪಡೆಗೆ ಯುವ ಮತದಾರರು ಹಾಗೂ ಕೈಬಿಟ್ಟು ಹೋದ ರ‍್ಹ ಮತದಾರರ ಹೆಸರನ್ನು ಸೇರಿಸಲು ಸಹಕರಿಸಬೇಕು ಎಂದರು.

ಕ್ಷೇತ್ರದ ಮತದಾರರ ವಿವರ

ಕರಡು ಪಟ್ಟಿಯಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2,31,158 ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರು 1,13,555 ಹಾಗೂ ಮಹಿಳಾ ಮತದಾರರು 1,17,603 ಇದ್ದು, ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಲಿಂಗ ಅನುಪಾತ

ಕ್ಷೇತ್ರದ ಮತದಾರರ ಪಟ್ಟಿಯಲ್ಲಿನ ಲಿಂಗ ಅನುಪಾತವು 1036 ಆಗಿದ್ದು, ಇದು ಜಿಲ್ಲೆಯ ಜನಗಣತಿ ಅನುಪಾತಕ್ಕಿಂತ 972 ಮತ್ತು ರಾಜ್ಯದ ಸರಾಸರಿಗಿಂತಲೂ ಹೆಚ್ಚಿದೆ. ಮತದಾರರ ಜನಸಂಖ್ಯೆ ಅನುಪಾತ ಶೇ. 83.62 ರಷ್ಟಿದೆ. ಯುವ ಮತದಾರರಾದ 18-19 ವಯೋಮಾನದವರು ಕ್ಷೇತ್ರದಲ್ಲಿ ಒಟ್ಟು 1,692 ಮತದಾರರಿದ್ದು ಇದರಲ್ಲಿ 905 ಪುರುಷ, 787 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ವಿಕಲಚೇತನ ಮತದಾರರು ಒಟ್ಟು 2,544 ಮತದಾರರಿದ್ದು, ಇದರಲ್ಲಿ 1,397 ಪುರುಷರು ಮತ್ತು 1,147 ಮಹಿಳೆಯರಿದ್ದಾರೆ.

ವಿವಿಧ ವಯೋಮಾನದ ಮತದಾರರ ಅಂಕಿ-ಅಂಶಗಳು

ಯುವ ಮತದಾರರು, 18-19 ರ‍್ಷ ವಯೋಮಾನದ ಒಟ್ಟು 1,692 ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 905 ಪುರುಷರು ಮತ್ತು 787 ಮಹಿಳಾ ಮತದಾರರಿದ್ದಾರೆ.

20-29 ರ‍್ಷ: ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರಿರುವ ವಿಭಾಗಗಳಲ್ಲಿ ಇದೂ ಒಂದು. ಒಟ್ಟು 43,616 ಮತದಾರರಿದ್ದು, ಇದರಲ್ಲಿ 21,601 ಪುರುಷರು, 22,002 ಮಹಿಳೆಯರು ಮತ್ತು 13 ತೃತೀಯ ಲಿಂಗಿ ಮತದಾರರಿದ್ದಾರೆ.
30-39 ರ‍್ಷ: ಈ ವಯೋಮಾನದಲ್ಲಿ ಒಟ್ಟು 55,814 ಮತದಾರರಿದ್ದಾರೆ. ಇದರಲ್ಲಿ 26,450 ಪುರುಷರು, 29,349 ಮಹಿಳೆಯರು ಮತ್ತು 15 ತೃತೀಯ ಲಿಂಗಿ ಮತದಾರರಿದ್ದಾರೆ.
ಮಧ್ಯವಯಸ್ಕರು: 40-49 ರ‍್ಷ: ಒಟ್ಟು 55,400 ಮತದಾರರಿದ್ದು, ಇದರಲ್ಲಿ 27,507 ಪುರುಷರು, 27,885 ಮಹಿಳೆಯರು ಮತ್ತು 8 ತೃತೀಯ ಲಿಂಗಿಗಳು ಸೇರಿದ್ದಾರೆ.
50-59 ರ‍್ಷ: ಈ ವಿಭಾಗದಲ್ಲಿ ಒಟ್ಟು 37,167 ಮತದಾರರಿದ್ದಾರೆ 18,917 ಪುರುಷರು, 18,245 ಮಹಿಳೆಯರು ಮತ್ತು 5 ತೃತೀಯ ಲಿಂಗಿಗಳು.

ಹಿರಿಯ ನಾಗರಿಕರು

60-69 ರ‍್ಷ: ಒಟ್ಟು 21,314 ಮತದಾರರಿದ್ದಾರೆ 10,484 ಪುರುಷರು, 10,826 ಮಹಿಳೆಯರು ಮತ್ತು 4 ತೃತೀಯ ಲಿಂಗಿಗಳು. 70-79 ರ‍್ಷ: ಈ ವಯೋಮಾನದ ಒಟ್ಟು 10,870 ಮತದಾರರಿದ್ದಾರೆ. ಇದರಲ್ಲಿ 5,310 ಪುರುಷರು ಮತ್ತು 5,560 ಮಹಿಳಾ ಮತದಾರರಿದ್ದಾರೆ.

80 ರ‍್ಷ ಮೇಲ್ಪಟ್ಟವರು

ಕ್ಷೇತ್ರದಲ್ಲಿ ಒಟ್ಟು 4,734 ಹಿರಿಯ ಮತದಾರರಿದ್ದಾರೆ 2,149 ಪುರುಷರು ಮತ್ತು 2,585 ಮಹಿಳೆಯರು ಇದ್ದಾರೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನರ‍್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending