Connect with us

ದಿನದ ಸುದ್ದಿ

ಆತ್ಮಕತೆ | ಅನಾಗರಿಕ ಆಚರಣೆಯ ವಿರುದ್ಧ

Published

on

  • ರುದ್ರಪ್ಪ ಹನಗವಾಡಿ

ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ ನೋಡಿಕೊಳ್ಳುತ್ತಿದ್ದರು.

ವಿಶೇಷ ತಹಸೀಲ್ದಾರರು ಸಾಮಾನ್ಯವಾಗಿ ಯಾವ ಉದ್ದೇಶಕ್ಕೆ ನಿಯೋಜಿಸಿದ್ದರೋ ಅದನ್ನು ಬಿಟ್ಟು ಇತರೆ ಸಾಮಾನ್ಯ ವಿಷಯಗಳಲ್ಲಿ ಅವರಿಗೆ ಸಂಬಂಧಿಸಿರುವುದಿಲ್ಲ. ಹಾಗಾಗಿ ನಾನು ನನ್ನ ಕೆಲಸಗಳನ್ನು ಬಿಟ್ಟು ತಾಲ್ಲೂಕು ಕಛೇರಿ ಕೆಲಸಗಳಲ್ಲಿ ತೊಡಗಿಕೊಂಡಿರಲಿಲ್ಲ. ಆದರೆ ಇದೇ ಸಮಯದಲ್ಲಿ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಜಾತ್ರೆಯ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ವಿಶೇಷ ಸಭೆ ನಡೆಸಿ ಅಲ್ಲಿ ನಡೆಯುತ್ತಿದ್ದ ಬೆತ್ತಲೆ ಸೇವೆಯ ಆಚರಣೆಯನ್ನು ತಡೆಯಲು ಸೂಚನೆ ನೀಡಿತ್ತು.

ಬೆತ್ತಲೆಸೇವೆಯ ಈ ಅನಾಗರಿಕ ಆಚರಣೆಯ ಬಗ್ಗೆ ಪ್ರೊ. ಬಿ. ಕೃಷ್ಣಪ್ಪನವರು, ನಾನು ಸೊರಬಕ್ಕೆ ಬರುವ ಒಂದು ವರ್ಷ ಮುಂಚಿನಿAದ ಬೆತ್ತಲೆ ಸೇವೆಯ ಆಚರಣೆ ಒಂದು ಅನಾಗರಿಕ ಆಚರಣೆ ಎನ್ನುವ ಬಗ್ಗೆ ಅನೇಕ ಲೇಖನಗಳನ್ನು ಬರೆದು ಇದನ್ನು ತಡೆಗಟ್ಟಬೇಕೆಂದು ಅಂದಿನ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವ ಪತ್ರ ಬರೆದು ಈ ವಿಷಯಗಳೆಲ್ಲಾ ದಿನಪತ್ರಿಕೆ ಮತ್ತು ಆಗ ಜಾಣಜಾಣೆಯರ ಪತ್ರಿಕೆ ಎಂದು ಹೇಳಿ ತರುತ್ತಿದ್ದ ಲಂಕೇಶ್ ಪತ್ರಿಕೆಯಲ್ಲೂ ಪ್ರಕಟಗೊಂಡಿತ್ತು.

1986ರ ಜಾತ್ರೆ ಸಮಯದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ತಂಗರಾಜ್ ಅವರು ಕಂದಾಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸಭೆ ನಡೆಸಿ ಬೆತ್ತಲೆ ಹೋಗುವ ಜನರನ್ನು ಜಾಗೃತಗೊಳಿಸಿ ತಡೆಯಬೇಕೆಂದು ಜಿಲ್ಲಾಡಳಿತ ತೀರ್ಮಾನಿಸಿತ್ತು. ಕೃಷ್ಣಪ್ಪನವರ ಡಿಎಸ್‌ಎಸ್ ಸಂಘಟನೆಯ ಹೋರಾಟದ ಜೊತೆಗೆ ಶಿವಮೊಗ್ಗ-ಸಾಗರ-ಸೊರಬದಲ್ಲಿನ ಎಲ್ಲ ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘ, ಪ್ರಗತಿಪರ ಮಹಿಳಾ ಲೇಖಕಿಯರ ಸಂಘಟನೆಗಳು ಕೈಜೋಡಿಸಿದ್ದವು. ಭದ್ರಾವತಿಯಿಂದ ಪ್ರೊ. ಚಂದ್ರಶೇಖರಯ್ಯ, ಡಿಎಸ್‌ಎಸ್ ಚಂದ್ರು, ತೋರಣಗಟ್ಟಿ ಚಂದ್ರಶೇಖರ್, ಬಿದರಳ್ಳಿ ನರಸಿಂಹಮೂರ್ತಿ, ಇನ್ನೂ ಅನೇಕ ಪ್ರಗತಿಪರ ಹೋರಾಟಗಾರರು ಭಾಗವಹಿಸಿದ್ದರು.

ನಾನು ಸರ್ಕಾರದ ಭಾಗವಾಗಿ ಸಂಜೆ ಹಳ್ಳಿಗಳಿಗೆ ಕರಪತ್ರಗಳನ್ನು ಹಂಚಿ, ‘ಯಾವ ದೇವರಿಗೂ ಬೆತ್ತಲೆ ಪೂಜೆ ಸಲ್ಲಿಸುವುದು ಇಷ್ಟವಾಗದು. ಇದೆಲ್ಲ ಹಿಂದುಳಿದವರನ್ನೂ, ದಲಿತರನ್ನೂ ಶೋಷಣೆ ಮಾಡುವ ಕ್ರೂರ ಪದ್ಧತಿ, ಇವನ್ನು ನಿವಾರಣೆಮಾಡಬೇಕೆಂದು ಭಾಷಣ ಮಾಡುತ್ತಾ ತಾಲ್ಲೂಕು ಕಛೇರಿಯ ಸಿಬ್ಬಂದಿಯನ್ನು ಹಲವು ತಂಡಗಳಾಗಿ ಮಾಡಿಕೊಂಡು ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದ್ದೆವು. ಸರ್ಕಾರದ ನಿರ್ದೇಶನವಿದ್ದುದರ ಜೊತೆಗೆ ಈ ವಿಷಯಗಳು ನನಗೆ ಇಷ್ಟವಾದ ಕೆಲಸವಾಗಿದ್ದರಿಂದ ಹೆಚ್ಚಿನ ಆಸಕ್ತಿಯಿಂದ ಬೆತ್ತಲೆ ಸೇವೆ ವಿರುದ್ಧ ಪ್ರಚಾರ ಮಾಡುತ್ತಿದ್ದೆವು. ಹೀಗೆ ಎಲ್ಲಾ ಕಡೆ ಪ್ರಚಾರ ಮಾಡಿದ ಮೇಲೆ ಪ್ರೊ.ಬಿ.ಕೆ ಮತ್ತು ಶಿವಪ್ಪ ಮಾಸ್ತರು ಇನ್ನು ಕೆಲವು ಗೆಳೆಯರು ನಮ್ಮಲ್ಲಿ ಊಟ ಉಪಚಾರ ಮಾಡಿ ಹೋಗುತ್ತಿದ್ದರು. ಇದರ ಸಂಪೂರ್ಣ ಘಟನೆಯ ವಿವರವನ್ನು ಈಗಾಗಲೇ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ 2010ರಲ್ಲಿ ಪ್ರಕಟಿಸಿರುವ ‘ಬಯಲು.. ಬೆತ್ತಲೆ..ಚಂದ್ರಗುತ್ತಿ’ ಎಂಬ ಪುಸ್ತಕದಲ್ಲಿನ ಮಾಹಿತಿಯನ್ನು ಇಲ್ಲಿ ಮುಂದುವರೆಸಲಾಗಿದೆ.

ಬೆತ್ತಲೆ ಸೇವೆ ನಡೆಯುವ ಒಂದು ವಾರ ಮುಂಚಿತವಾಗಿಯೇ ಕೃಷ್ಣಪ್ಪನವರ ನೇತೃತ್ವದಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರು ಮತ್ತು ಪ್ರಗತಿಪರ ಸಂಘಟನೆಗಳೊಡನೆ ಸಂಜೆ ಹಳ್ಳಿಗಳಿಗೆ ಹೋಗಿ ಭಾಷಣಗಳ ಮುಖಾಂತರ ಬೆತ್ತಲೆ ಸೇವೆಯನ್ನು ವಿರೋಧಿಸುವ ಪ್ರಚಾರದಲ್ಲಿ ನಾನೂ ತೊಡಗಿಸಿಕೊಂಡಿದ್ದೆ. ಚಂದ್ರಗುತ್ತಿ ದೇವಸ್ಥಾನ ಸಮಿತಿಯ ಸಂಚಾಲಕರಾಗಿದ್ದ ಈಡೂರು ಪರಶುರಾಮಪ್ಪ ಮತ್ತು ಅವರ ಸ್ನೇಹಿತರು ವೈಯಕ್ತಿಕವಾಗಿ ಬೆತ್ತಲೆ ಸೇವೆಯನ್ನು ವಿರೋಧಿಸುವ ಹೋರಾಟಕ್ಕೆ ನಮ್ಮ ಬಳಿ ಸಮ್ಮತಿಸಿದ್ದರೂ ಇದನ್ನು ವಿರೋಧಿಸುವುದು ಹೇಗೆ ಎಂಬುದರ ಬಗ್ಗೆ ಅವರಲ್ಲಿ ದುಗುಡ ತುಂಬಿತ್ತು. ಆಗಿನ ಜನಪ್ರತಿನಿಧಿಗಳು ಯಾರೂ ಈ ಬಗ್ಗೆ ಚಕಾರವೆತ್ತುತ್ತಿರಲಿಲ್ಲ. ಇದೊಂದು ಅತಿ ಸೂಕ್ಷ್ಮ ವಿಚಾರವೆಂದೂ- ಏನಾದರೂ ಮಾತನಾಡಿದರೆ ಜನರಿಂದ ದೂರ ಆಗುವ ಆತಂಕ ರಾಜಕಾರಣಿಗಳ ಒಳ ಇಂಗಿತವಾಗಿತ್ತು. ಚುನಾವಣಾ ರಾಜಕೀಯದ ದೃಷ್ಟಿಯಿಂದ ಅವರಿಗೆ ಇದೆಲ್ಲ ಬೇಡದ ವಿಚಾರವಾಗಿತ್ತು.

ಈ ಹಿನ್ನೆಲೆಯಲ್ಲಿ ಬೆತ್ತಲೆಸೇವೆ ನಡೆಸುವ ಮೊದಲ ದಿನ ಸರ್ಕಾರವು ಸೂಚಿಸಿದಂತೆ ಡಿ.ಎಸ್.ಎಸ್. ಮತ್ತು ಇತರೆ ಸಂಘಟನೆಯ ಕಾರ್ಯಕರ್ತರು- ಬೆತ್ತಲೆ ಹೋಗುತ್ತಿದ್ದವರನ್ನು ತಡೆದು ಅವರಿಗಾಗಿ ಹೊಸ ಬಟ್ಟೆ ತಂದಿದ್ದ ಮಹಿಳಾ ಕಾರ್ಯಕರ್ತರು ಅವರಿಗೆ ಸುತ್ತಿ- ಕಳುಹಿಸುತ್ತಿದ್ದರು. ಅವರು ಸುತ್ತಿಕೊಂಡು ಮುಂದೆ ಹೋಗುತ್ತಿದ್ದಾಗ ಮತ್ತೆ ಬಿಚ್ಚಿಕೊಂಡು ಓಡುತ್ತಿದ್ದುದು ನಡೆಯುತ್ತಲೂ ಇತ್ತು. ಮೊದಲ ದಿನದ ಈ ಕರ‍್ಯ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯಿತು. ಸರ್ಕಾರ ಮತ್ತು ಡಿಎಸ್‌ಎಸ್ ಕರ‍್ಯಕರ್ತರು ಕೂಡ ಇದು ಸಂಪೂರ್ಣ ಯಶಸ್ವಿಯಾಯಿತೆಂದೇ ಭಾವಿಸಿದೆವು.

ಆದರೆ ಎರಡನೇ ದಿನ ಅಂದರೆ, 20-3-1986ರಂದು ಬೆಳಿಗ್ಗೆಯಿಂದಲೇ ಜನಸಾಗರ ವಿವಿಧ ಕಡೆಗಳಿಂದ ಹರಿದು ಬರುತ್ತಿತ್ತು. ನಾನು ನನ್ನ ಸಿಬ್ಬಂದಿಯೊಡನೆ ಮಾಮೂಲಿನಂತೆ ಜಾತ್ರೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಬೆತ್ತಲೆ ಸೇವೆ ಮಾಡೋ ಹೆಂಗಸಿನ ಫೋಟೋ ತೆಗೆಯುತ್ತಿದ್ದ ಇನ್ನೊಬ್ಬ ಮಹಿಳಾ ಫೋಟೋಗ್ರಾಫರ್‌ನನ್ನು ನಮ್ಮ ಎದುರಿಗೆ ಅಡ್ಡಹಾಕಿ ಅವಳು ತೆಗೆದಿದ್ದ ಫೋಟೋ ರೀಲುಗಳನ್ನು ಹೊರತೆಗೆದು ಅವಳನ್ನು ನಮ್ಮ ಎದುರಿಗೆ ಥಳಿಸಲು ಮುಂದಾಗಿ, ಅವಳನ್ನು ನಗ್ನಗೊಳಿಸಿದರು. ಆಗ ಜೋಗಿತಿಯರನ್ನು ನಾನು ತಡೆಯಲು ಹೋದಾಗ ವಾಗ್ವಾದ-ತಳ್ಳಾಟ ಪ್ರಾರಂಭವಾಯಿತು.

ಸರ್ಕಾರ ಮತ್ತು ವಿವಿಧ ಸಂಘಟನೆಗಳನ್ನು ಜೋಗತಿಯರು ಎದುರು ಹಾಕಿಕೊಳ್ಳುವುದನ್ನು ಊಹಿಸದಿದ್ದ ನಮಗೆ ಇದೆಲ್ಲ ಅನಿರೀಕ್ಷಿತ ಬೆಳವಣಿಗೆಯಾಗಿತ್ತು. ಜನರು ಅಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರನ್ನ ಹೊಡೆದರಂತೆ. ಇಲ್ಲಿ ಬಟ್ಟೆ ಬಿಚ್ಚಿದರಂತೆ, ಎಂಬ ವದಂತಿಗಳನ್ನ ಹಬ್ಬಿಸಿ ಸರ್ಕಾರದ ವ್ಯವಸ್ಥೆಯಲ್ಲಾಗಲೀ, ಡಿಎಸ್ ಎಸ್ ಮತ್ತಿತರ ಹೋರಾಟಗಾರರಾಗಲೀ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಏನೂ ತಿಳಿಯದಂತಾಗಿದ್ದರು. ನನ್ನೊಡನೆ ಇದ್ದ ಸಿಬ್ಬಂದಿ ಚದುರಿ ಹೋಗಿ ನಾನು ರಕ್ಷಣೆಗಾಗಿ ಪೋಲೀಸ್ ವ್ಯಾನಿಗೆ ಹತ್ತಿಕೊಂಡಿದ್ದೆ. ನಾವು ತಂದಿದ್ದ ಜೀಪಿಗೆ ಬೆಂಕಿ ಹಚ್ಚಿಟ್ಟು ಜೋಗತಿಯರು ಅಟ್ಟಹಾಸ ಮೆರೆದಿದ್ದರು. ನಾವು ವ್ಯಾನಿನ ಒಳಗೆ ಇದ್ದು, ಇನ್ನು ಮುಂದೆ ಏನಾಗುವುದೋ ಅನ್ನೋ ಆತಂಕದಲ್ಲಿದ್ದಾಗ ನನಗೆ ಪರಿಚಿತ ವ್ಯಕ್ತಿಯೊಬ್ಬ ಓಡಿಬಂದು ನನ್ನ ಪರಿಚಯ ಗುರುತು ಸಿಗದಂತೆ ಭಂಡಾರ ಹಾಕಿ ಅಲ್ಲಿಂದ ತನ್ನ ಮನೆಗೆ ಕರೆದುಕೊಂಡು ಹೋಗಿ ತನ್ನ ಪಂಚೆ ನೀಡಿ ಪ್ಯಾಂಟ್ ಷರಟು ತೆಗೆಸಿ ನಾನು ಯಾರೋ ಅನ್ನೋ ರೀತಿ ಮಾಡಿಕೊಂಡು ತನ್ನ ರಾಜದೂತ್ ಮೋಟಾರ್‌ಬೈಕ್‌ನಲ್ಲಿ ಸೊರಬಕ್ಕೆ ತಂದುಬಿಟ್ಟರು.

ಅಲ್ಲಿಂದ ಎಲ್ಲರಿಗೂ ಫೋನ್ ಮಾಡಿ ಆಗಿದ್ದ ಅನಾಹುತವನ್ನು ತಿಳಿಸಿದೆ. ಇದು ಸುಮಾರು ಮಧ್ಯಾಹ್ನ 3.00 ಘಂಟೆಯ ತನಕ ಜೋಗತಿಯರ ಅಟ್ಟಹಾಸಕ್ಕೆ ಗುರಿಯಾದ ಡಿ.ಎಸ್.ಎಸ್. ಮತ್ತು ಇತರೆ ಕರ‍್ಯಕರ್ತರು ತಮಗೆ ಸಿಕ್ಕ ಸಿಕ್ಕ ಕಡೆ ಚದುರಿ ಪ್ರಾಣ ಉಳಿಸಿಕೊಳ್ಳಲು ತಪ್ಪಿಸಿಕೊಂಡು ಪರಾರಿಯಾದರು. ಈ ಸಂದರ್ಭದಲ್ಲಿ ಕೃಷ್ಣಪ್ಪನವರೇನಾದರೂ ಈ ಜೋಗತಿಯರ ಕೈಗೆ ಸಿಕ್ಕಿದ್ದರೆ ಬಹುಶಃ ಅಂದೇ ಅವರ ಕೊಲೆ ಮಾಡಲು ಹೇಸುತ್ತಿರಲಿಲ್ಲ.

ಸುಮಾರು 4.00 ಘಂಟೆಯ ಸುಮಾರಿಗೆ ಹೆಚ್ಚಿನ ಪೋಲೀಸ್ ಬಂದು ಇಡೀ ಜೋಗತಿಯರ ಸಮೂಹವನ್ನು ಬೆತ್ತಲೆಯಾಗಿಯೇ ಅರೆಸ್ಟ್ ಮಾಡಿ ಸೊರಬ ಪೋಲೀಸ್ ಠಾಣೆಯಲ್ಲಿ ಕೂಡಿ ಹಾಕಿದ್ದರು. ಸುಮಾರು 5-6 ಘಂಟೆಯ ಸುಮಾರಿಗೆ ಪೋಲೀಸ್ ಬಂದು ಇವರಲ್ಲಿ ಯಾರು ನಿಮ್ಮ ಮೇಲೆ ಹಲ್ಲೆ ಮಾಡಿದರು ಗುರ್ತಿಸಿ ಎಂದು ಹೇಳಿದರು.

ಪೊಲೀಸರೊಡನೆ ಹೋಗಿ ನೋಡುತ್ತೇನೆ, ಅದೊಂದು ಭಯಂಕರ ದೃಶ್ಯ. ಪೀಚಲು ದೇಹಗಳ ಅನಾರೋಗ್ಯವೇ ಮೂರ್ತಿವೆತ್ತ- ಕುಡಿತದ ಅಮಲಿನಲ್ಲಿದ್ದ ಅವರಿಗೆ ತಾವೇನು ಮಾಡಿದ್ದೆವು ಅನ್ನುವುದೇ ಅವರಿಗೆ ಗೊತ್ತಿರಲಿಲ್ಲ. ಯಾವುದೋ ಕಾಡಿನ ಪ್ರಾಣಿಗಳಂತೆ ಪಿಳಿಪಿಳಿ ಕಣ್ಣು ಬಿಡುತ್ತಾ ಆ ರೂಮಿಗೆ ಬಂದವರನ್ನು ನೋಡುತ್ತಿದ್ದರು. ನನಗೆ `ಯಾರು ಏನು ಮಾಡಿದರು ಎನ್ನುವುದನ್ನ ಯಾರ ಮೇಲೆ ಹೇಳಲಿ’ ಎನ್ನುತ್ತಾ ಈಚೆಗೆ ಬಂದೆ. ಆದರೆ ಈ ಜೋಗತಿಯರು ಅಂತಹ ಸ್ಥಿತಿಯಲ್ಲೂ ತಮ್ಮ ಬಳಿ ಬೆಳಗಿನಿಂದ ದೋಚಿದ ಒಡವೆಗಳು ಮತ್ತು ಹಣ ಇರುವುದು ಸಣ್ಣ ಸಣ್ಣ ಚೀಲಗಳಲ್ಲಿರುವುದು ಪರಿಶೀಲಿಸಿದಾಗ ಕಂಡು ಬಂತು.

ಈ ಘಟನೆಯ ನಂತರ ಆದ ಮಾರನೇ ದಿನ ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಮುಖ ಸುದ್ದಿಯಾಗಿ ವರದಿಗಳು ಪ್ರಕಟಗೊಂಡವು. ನಾನು ಆತಂಕದಿAದ ನನ್ನ ಹೆಂಡತಿಗೆ ‘I ಚಿm Sಚಿಜಿe’ ಎಂದು ತಂತಿ ನೀಡಿದಾಗ ಅವಳು ಗಲಿಬಿಲಿಗೊಂಡು ಫೋನ್ ಮಾಡಿದಳು. ಇತ್ತ ನನ್ನ ಹಳ್ಳಿ ಹನಗವಾಡಿಯಿಂದ ಬಂದಿದ್ದ ಜೋಗತಿಯರಿಂದಲೇ ರೋಚಕವಾಗಿ ತಲುಪಿದ್ದ ಸುದ್ದಿಯಿಂದ, ವರದಿಗಳನ್ನು ಕೇಳಿಕೊಂಡ ನಮ್ಮ ಊರಿನ ಜನರು ಮತ್ತು ನಮ್ಮ ಅವ್ವ, ಅಣ್ಣ-ತಮ್ಮಂದಿರು ಮತ್ತು ಮಿತ್ರರ ದಂಡು ಸೊರಬಕ್ಕೆ ನನ್ನನ್ನು ನೋಡಲು ಬಂದಿದ್ದರು. ಅವರು ನಾನು ಮಾಮೂಲಿನಂತೆ ಇದ್ದುದನ್ನು ನೋಡಿ ನೆಮ್ಮದಿಗೊಂಡರು. ನನ್ನ ತಮ್ಮನೊಬ್ಬ ನಿನ್ನನ್ನು ಆಸ್ಪತ್ರೆಯಲ್ಲಿ ಬ್ಯಾಂಡೇಜ್ ಸಮೇತ ನೋಡುವ ಕಲ್ಪನೆಯಲ್ಲಿಯೆ ಓಡಿ ಬಂದೆವು ಎಂದಾಗ ನಾನು ಕೂದಲೆಳೆಯಲ್ಲಿ ಸಾವು ತಪ್ಪಿದ್ದನ್ನು ವಿವರಿಸಲಿಲ್ಲ.

ನಾನು ತಹಶೀಲ್ದಾರನಾಗಿ ಹೊಸದರಲ್ಲಿ ಆಗಿದ್ದ ಈ ಘಟನೆ ಇಂದಿಗೂ ನನಗೆ ಎಚ್ಚರಿಕೆಯ ಮಾರ್ಗ ಸೂಚಿಯಾಗಿದೆ. ಒಂದು ವಿಷಾದದ ಸಂಗತಿಯೆAದರೆ ನಮ್ಮ ಪೋಲೀಸರು ಇಂದಿಗೂ ಯಥಾಸ್ಥಿತಿಯ ರಕ್ಷಕರಾಗಿಯೇ ಉಳಿದಿದ್ದಾರೆ. ಅವರನ್ನು ಬದಲಾಗುತ್ತಿರುವ ಕಾಲಮಾನದ ಜೊತೆಗೆ ಬದಲಾವಣೆಯ ರೂವಾರಿಗಳಾಗುವಂತೆ ತರಬೇತಿ ನೀಡುವಲ್ಲಿ ಸರ್ಕಾರವು ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ.

ಈ ಘಟನೆಯ ನಂತರದ ಆದ ಬೆಳವಣಿಗೆಯ ಹಿನ್ನೆಲೆಯಲ್ಲಿ ಒಂದು ಮಹತ್ತರ ಬದಲಾವಣೆ ಆ ಪ್ರದೇಶದಲ್ಲಿ ಆಗಿದೆ. ಬೆತ್ತಲೆ ಸೇವೆಯನ್ನು ಸರ್ಕಾರ ನಿಷೇಧಿಸಿದೆ. ಅದರೊಟ್ಟಿಗೆ ಅನೇಕ ಸಾಮಾಜಿಕ ಅನಿಷ್ಟಗಳ ಬಗ್ಗೆ ಸಾಮಾನ್ಯ ಜನರ ಮಧ್ಯದಲ್ಲಿ ಚರ್ಚೆಗಳಾಗಿವೆ. ಕೃಷ್ಣಪ್ಪನವರ ಹೋರಾಟ ಹೊಸ ದಿಕ್ಕಿನೆಡೆಗೆ ಸಮಾಜವನ್ನು ಮುಖ ಮಾಡಿಸಿದೆ. ಇದು ಅವರ ಆತ್ಮಕ್ಕೆ ನೆಮ್ಮದಿಯನ್ನು ನೀಡಿದೆ ಎಂದರೆ ತಪ್ಪಾಗಲಾರದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending