Connect with us

ದಿನದ ಸುದ್ದಿ

ಆತ್ಮಕತೆ | ಕೇಂದ್ರದಲ್ಲಿ ಮೂಡಿ ಮಡಿದವರು

Published

on

  • ರುದ್ರಪ್ಪ ಹನಗವಾಡಿ

ಮನಸ್ಸಿನಲ್ಲಿ ಉಳಿದು ಹೋದ ಆರೋಗ್ಯವಂತ ವಿದ್ಯಾರ್ಥಿಗಳ ಕಿರುಚಿತ್ರಣ

ಯಶೋದ

ಈಗ್ಗೆ ಸುಮಾರು 8 ವರ್ಷಗಳಿಂದ ಅಧ್ಯಾಪಕ ವೃತ್ತಿಯನ್ನು ಮಾಡಿಕೊಂಡು ಬರುತ್ತಿದ್ದೇನೆ. ಈ ಅವಧಿಯಲ್ಲಿ ನಾವು ಸಂಪರ್ಕಿಸಿದ ವಿದ್ಯಾರ್ಥಿಗಳು ಹಲವು ನೂರು ಸಂಖ್ಯೆಗಳಿಗೆ ಮೀರಬಹುದು. ಹಲ ಕೆಲವರು ನಮ್ಮಿಂದ ಕಲಿತವರಿದ್ದರೆ, ಮತ್ತೆ ಕೆಲವರು ಇವರದೇನು ಎಂಬ ಮಾತಿರಬಹುದು. ಹೀಗೆ ಪ್ರತಿವರ್ಷವೂ ಬಂದು ಹೋಗುವ, ಹಲವು ಹತ್ತಾರು ವಿದ್ಯಾರ್ಥಿಗಳಲ್ಲಿ ಕೆಲವು ವಿದ್ಯಾರ್ಥಿಗಳು ಅವರ ವಿಶೇಷ ಗುಣಗಳಿಗೆ, ಸಾಮರ್ಥ್ಯಕ್ಕೆ ಹೆಸರಾಗಿ ಹಲವರು ಮನಸ್ಸಲ್ಲಿ ಚಿರಸ್ಥಾಯಿಯಾಗಿ ಉಳಿಯುತ್ತಾರೆ. ಹಾಗೆ ಉಳಿದು ನಿಜ ಬದುಕಿನಲ್ಲಿ ಅಳಿದು ಹೋದ ಕೆಲವು ವಿದ್ಯಾರ್ಥಿಗಳ ನೆನಪು ಮಾಡಿಕೊಳ್ಳುವುದೇ ಈ ಲೇಖನದ ಉದ್ದೇಶ.

1981ನೇ ವರ್ಷ ನನ್ನ ಬದುಕಿನಲ್ಲಿ ಅನೇಕ ಘಟನಾವಳಿಗಳಿಂದ ಕೂಡಿದ ವರ್ಷ. ಮೇ ತಿಂಗಳಲ್ಲೊಂದು ದಿನ ನಮ್ಮ ಊರಿಗೆ ಹೋಗಿ, ಅಲ್ಲಿನ ತರಲೆಗಳನ್ನೆಲ್ಲ ತಲೆಯಲ್ಲಿ ತುಂಬಿಕೊAಡು ಅವ್ವ ಕೊಟ್ಟ ಸಣ್ಣಪುಟ್ಟ ಸಾಮಾನುಗಳನ್ನು ಕಟ್ಟಿಕೊಂಡು ಮೂರು ಮೈಲು ನಡೆದು. ಶಿವಮೊಗ್ಗದ ಬಸ್ಸು ಹಿಡಿದು ಪ್ರಾಜೆಕ್ಟ್ ತಲುಪುವ ವೇಳೆಗೆ ನನಗೆ ಸಾಕೋ ಸಾಕಾಗಿ ಹೋಗಿತ್ತು. ಹಲವು ಆತಂಕಗಳನ್ನು ಪಾರುಮಾಡಿಕೊಂಡು ನಮಗಾಗಿದ್ದ ಮಗ, ಹೆಂಡತಿಯನ್ನು ನೋಡೋ ಕಾತರದಲ್ಲಿ ದಣಿವು ಕರಗುತ್ತಿತ್ತು. ಮನೆಯೊಳಗೆ ಕಾಲಿಡುತ್ತಿದ್ದಂತೆ ಮಗನ ಆಟ-ಪಾಟ, ತನ್ನ ನೌಕರಿ ವಿಷಯ ಹೇಳುತ್ತಿದ್ದೆ.

ನನ್ನಾಕೆ `ಶಿವಮೊಗ್ಗದಲ್ಲೇನಾದರು ಕಾಫಿ ಕುಡಿದಿದ್ದೀರಾ?’ ಎಂದು ಕೇಳಿದಳು. ನನಗೆ ಅದ್ಯಾವ ದೊಡ್ಡ ಪ್ರಶ್ನೆ ಎಂದು ಉತ್ತರಿಸುವ ಗೋಜಿಗೆ ಹೋಗದೆ ಆರಾಮವಾಗಿ ಕೂರುವ ಹಂಚಿಕೆಯಲ್ಲಿದ್ದೆ. ಇಪ್ಪತ್ನಾಲ್ಕು ಗಂಟೆಗಳೂ ತಾನೊಬ್ಬಳೇ ಸಹಿಸಿಕೊಂಡು ಹಿಂಸೆಪಟ್ಟುದನ್ನು ಒಮ್ಮೆಲೆ ಕಣ್ಣೀರ ಕೋಡಿಯಲ್ಲಿ ಉಸುರಿದಳು. `ಯಶೋದÀ ಬೆಂಗಳೂರಲ್ಲಿ ತೀರಿ ಹೋದಳಂತೆ, ನಿಮಗೆ ಫೋನ್ ಮಾಡಿದ್ದರು’ ಎಂದಾಗ ನನಗೆ ಅಸಾಧ್ಯ ಸಂಕಟದೊಡನೆ ದಿಗ್ಭçಮೆಯಾಯಿತು. ಹತ್ತಿರದ ಮನೆಯವರಿಂದ ಸೈಕಲ್ ಪಡೆದು ಅವಳ ಶವ ತಂದ ಹಳ್ಳಿಯ ಕಡೆಗೆ ವೇಗವಾಗಿ ಹೊರಟೆ.

1977-78ರ ಈ ಕೇಂದ್ರದ ಪ್ರಾರಂಭದ ದಿನಗಳಲ್ಲಿ ಅಭಿನಯಿಸಲಾದ ಅನೇಕ ನಾಟಕಗಳಲ್ಲಿ ಸ್ಫೂರ್ತಿಯನ್ನು ವೈವಿಧ್ಯತೆಯನ್ನು ತಂದು ಕೊಟ್ಟ ಇವಳು ಅಭಿನಯ ಕಲೆಯಲ್ಲಿ ನಿಷ್ಣಾತಳಾಗಿದ್ದಳು. ಅರ್ಥಶಾಸ್ತçದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿ ಕರ್ನಾಟಕದ ಮುಖ್ಯ ಸಂಶೋಧನ ಕೇಂದ್ರದಲ್ಲಿ ಸಂಶೋಧನೆ ಮಾಡುತ್ತಿದ್ದ ಇವಳ ಸಾವು, ನಮ್ಮ ಕೇಂದ್ರದಿAದ ಹಾರಿಬಿಟ್ಟ ಹಕ್ಕಿಯ ರೆಕ್ಕೆ ಮುರಿದು ಬೆಂಕಿಗೆ ಬಿದ್ದಷ್ಟು ನೋವು ತಂದಿತ್ತು.

ವಿದ್ಯಾರ್ಥಿ ದೆಸೆಯಿಂದಲೂ ಉದಾತ್ತ ಗುಣಗಳನ್ನು ಬೆಳೆಸಿಕೊಂಡಿದ್ದ ಯಶೋದ ನ್ಯಾಯಕ್ಕಾಗಿ ಯಾರ ನಿಷ್ಠುರವನ್ನೂ ಲೆಕ್ಕಿಸದ, ನೇರ ಮನಸ್ಸಿನ ಸರಳ ಸುಂದರ ಹುಡುಗಿ. ನಮ್ಮ ಅನೇಕ ಹುಡುಗ-ಹುಡುಗಿಯರಲ್ಲಿ ಕಾಣಸಿಗದ, ಆರೋಗ್ಯಕರ ಮನಸ್ಸಿನ ಈ ಹುಡುಗಿಗೆ ಅನಾರೋಗ್ಯವು ಇಷ್ಟು ಬೇಗ ಸಾವು ತರುವುದೆಂದು ಯಾರು ತಾನೆ ಊಹಿಸಿದ್ದರು? ನನ್ನ ಮಗನನ್ನು ನೋಡಲು ಬರುವೆ ಎಂದು ಕಾಗದ ಬರೆದಿದ್ದು, ಇವಳು ಕೊನೆಗೆ ಮಾಂಸದ ಮುದ್ದೆಯಾಗಿ ಅವಳ ಊರಲ್ಲಿ ನೋಡಿ, ನನ್ನ ವಿದ್ಯಾರ್ಥಿನಿಯಾಗಿ ಓಡಾಡುತ್ತಿದ್ದವಳು ಇವಳೇ ಎಂದು ಯೋಚನೆಯಲ್ಲಿ ಮುಳುಗುವಂತೆ ಮಾಡಿ ಮರೆಯಾದಳು.

ಬಷೀರ್ ಅಹಮದ್

ಬಷೀರ್ ಅಹಮದ್ ಎಂಬ ವಿದ್ಯಾರ್ಥಿ ಓದು ಮುಗಿಸಿ ಹೋದ ನಂತರ, ಆತನ ಶಿಸ್ತನ್ನು ಹೋಲುವ ವಿದ್ಯಾರ್ಥಿಗಳು ನಮ್ಮ ಕೇಂದ್ರಕ್ಕೆ ಬಂದಿಲ್ಲವೆಂದೇ ಹೇಳಬೇಕು. ವಿನಯ ವಿದ್ಯಾಭ್ಯಾಸದ ಲಕ್ಷಣ ಎನ್ನುವ ರೀತಿಯಂತೆ ಈತನ ನಡವಳಿಕೆ.

ಕನ್ನಡವನ್ನು ಸರಾಗವಾಗಿ ಮಾತನಾಡಲಾರದವನಾಗಿದ್ದ ಈತ ನನ್ನನ್ನು ಹಲವು ಬಾರಿ ಕಾಡಿ ಕನ್ನಡವನ್ನು ಕಲಿತದ್ದುಂಟು. ಅವನ ಮಧುರವಾದ ಕಂಠದಿಂದ ಕನ್ನಡ ಹಾಡುಗಳನ್ನು ಹಾಡಿಸಲು ನಾನು ಕನ್ನಡ ಪದ್ಯಗಳನ್ನು ವಿವರಿಸಿ ಬರೆದುಕೊಡುತ್ತಿದ್ದೆ. ಅವನಿಗೆ ಇದ್ದ ಅಪಾರ ಶ್ರದ್ಧೆಯಿಂದಾಗಿ ಸುಲಲಿತವಾಗಿ ಕನ್ನಡ ಮಾತಾಡುವುದರ ಜೊತೆಗೆ, ಕನ್ನಡ ಹಾಡುಗಳನ್ನು ಹಾಡಿ ನಮ್ಮ ಕೇಂದ್ರದ ಮತ್ತು ನಮ್ಮ ಈ ಪರಿಸರದ ಜನರ ಹೃದಯದಲ್ಲಿ ಈಗಲೂ ಗುಂಯ್‌ಗುಡುತ್ತಿದ್ದಾನೆ.

ಕೇಂದ್ರದಿಂದ ಎಂ.ಎ., ಪಾಸು ಮಾಡಿಕೊಂಡು ಹೋದ ಮೇಲೆ ಬೆಂಗಳೂರಿನಲ್ಲಿ ಉಪಾಧ್ಯಾಯನಾಗಿ ಕೆಲಸ ಮಾಡುತ್ತಿರುವಾಗ ಮತ್ತೆ ಪ್ರಾಜೆಕ್ಟ್ಗೆ ಬಂದಿದ್ದನು. ಆತನ ಕಂಠ ಮಾಧರ‍್ಯವನ್ನು ಸವಿಯಲು, ಮನೆಗೆ ತಿಂಡಿ ತಿನ್ನಲು ಬನ್ನಿ ಎಂದು ಆಹ್ವಾನಿಸಿದೆ. ಆತ, ತಿಂಡಿ ತಿನ್ನಲು ಬೇರೊಬ್ಬ ಅಧ್ಯಾಪಕರು ಕರೆದಿದ್ದಾರೆ, ನಿಮ್ಮ ಮನೆಗೆ ಊಟಕ್ಕೇನೆ ಬರುವೆ ಸಾರ್, ಅಂದಾಗ ಸಂತೋಷದಿAದ ಕರೆದೊಯ್ದೆ. ಜೊತೆಗೆ ಮಾತುಕತೆ ಹೀಗೆ ನಡೆದಿತ್ತು. ಪುಳಿಚಾರು ಊಟ ಕಣಯ್ಯಾ ಎಂದಾಗ, ಮುಂದಿನ ಸಾರಿ ನಾನೆ ಬಂದು ಬಿರಿಯಾನಿ ಮಾಡುವೆ ಎಂದು ಹೇಳಿದ. ಬಿರಿಯಾನಿ ಮಾಡಿ ಉಣ್ಣುವ ದಿನ ಬರುವ ಮುನ್ನವೇ ಜಾಂಡೀಸ್ ಬಂದು ಬಷೀರ್ ಇನ್ನಿಲ್ಲವಾದ. ಸತ್ತ ಹಲವು ದಿನಗಳ ನಂತರ ಬಂದ ಪತ್ರದಿಂದ ಸಂಕಟವಾಯಿತು.

ಈಗ ಯಾವ ಸಭೆ ಸಮಾರಂಭಗಳಲ್ಲಿ ಯಾರು ಹಾಡು ಹೇಳಿದರೂ ಬಷೀರ್‌ನ ನೆನಪು ಬಂದು ಕಣ್ಣು ತೇವವಾಗುತ್ತದೆ. ಕಡುಬಡತನದಿಂದ ಬಂದು ಅಪಾರ ಸ್ವಾಭಿಮಾನಿಯಾಗಿ ಬೆಳೆದು ಅಧ್ಯಾಪಕರೆಲ್ಲರ ವಿಶ್ವಾಸ ಗಳಿಸಿ ನಿಗರ್ವಿಯಾಗಿದ್ದ ಬಷೀರ್ ಅಹಮದ್ ಹಲವು ಆಸೆಗಳನ್ನಿಟ್ಟುಕೊಂಡು ಹಗಲಿರುಳು ದುಡಿಯುತ್ತಿದ್ದ. ಸಾಮಾನ್ಯ ರೋಗವೊಂದು ಅವನ ಆಸೆಗಳಿಗೆ, ಅವನ ಸಾಮರ್ಥ್ಯಗಳಿಗೆ ಇತಿಶ್ರೀ ಹಾಡುವುದೆಂದು ಯಾರು ತಾನೆ ನಂಬಿದ್ದರು?

ಗೋಪಾಲಸ್ವಾಮಿ

ಈತ ನಮ್ಮ ಕೇಂದ್ರಕ್ಕೆ ಬಂದಾಗಲೇ ನನಗೆ, ಹೊಸ ಶಕ್ತಿಯುಳ್ಳ ಯುವಕನೊಬ್ಬ ಬಂದಿದ್ದಾನೆ ಎಂಬ ಆಸೆ ಹುಟ್ಟಿತ್ತು, ಗೋಪಾಲಸ್ವಾಮಿ ನೋಡಲು ಪೀಚಲು. ಇವನೆಂತಹ ಹುಡುಗ ಎಂದು ಯಾರಾದರೂ ಕಡೆಗಣಿಸಬಹುದಾಗಿದ್ದ ಈತ ಮನದೊಳಗೆ ಅಗಾಧ ಬಾಂಬನ್ನೇ ಇಟ್ಟುಕೊಂಡಿದ್ದು ಸಿಡಿಸಲಾಗುವ ಮುನ್ನವೇ ನೆನಪಾಗಿ ಹೋದನು.

ಕನ್ನಡ ಎಂ.ಎ., ಗೆ ಬಂದು ಸೇರಿದಾಗ ಸಂಘಟನೆ, ಬಂಡಾಯ ಎಂದು ಹಲವು ಹತ್ತು ರೀತಿಯ ಹೋರಾಟದಲ್ಲಿ ಹಲವು ಬಾರಿ ಪೋಲೀಸ್ ಏಟು ತಿಂದು ಈ ದೇಶದ ಜಡ್ಡುಗಟ್ಟಿದ ಸಮಾಜದ ನಿರ್ಲಜ್ಜ ಅಸಮಾನತೆಯನ್ನು ಧಿಕ್ಕರಿಸಿದ ಈತನಿಗೆ ಸ್ವಂತ ಆಸೆಗಳು ದೂರ. ಈತ ನಮ್ಮ ಕೇಂದ್ರಕ್ಕೆ ಬಂದಾಗಲೇ ನನಗೆ, ಹೊಸ ಶಕ್ತಿಯುಳ್ಳ ಯುವಕನೊಬ್ಬ ಬಂದಿದ್ದಾನೆ ಎಂಬ ಆಸೆ ಹುಟ್ಟಿತ್ತು. ಆದರೆ ಅದು ಬಹಳ ದಿನ ಉಳಿಯಲಿಲ್ಲ.

ಸಾಮಾನ್ಯ ಖಾಯಿಲೆಯೆಂದು ಮೆಗ್ಗಾನ್ ಆಸ್ಪತ್ರೆ ಸೇರಿದ. ಈತನ ಹಣಕಾಸಿನ ಸಮಸ್ಯೆಗೆ ವಿದ್ಯಾರ್ಥಿಗಳು ಅಧ್ಯಾಪಕರು ಹಣ ಸೇರಿಸಿಕೊಟ್ಟರು. ವಿದ್ಯಾರ್ಥಿ ಜೀವನದುದ್ದಕ್ಕೂ ಹೋರಾಟದ ಬದುಕಿನಲ್ಲಿ ಏಟು ತಿಂದು ಅಪರೂಪದ ವ್ಯಕ್ತಿಯ ಬದುಕು ಬೆಳಗುವ ಮುನ್ನವೇ ನಂದಿಹೋಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending