ದಿನದ ಸುದ್ದಿ
ಆತ್ಮಕತೆ | ವಿಶ್ವವಿದ್ಯಾಲಯದ ವಿರುದ್ಧ ನಡೆಸಿದ ಎರಡು ಧರಣಿಗಳು
- ರುದ್ರಪ್ಪ ಹನಗವಾಡಿ
ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿ, ಕುವೆಂಪು ಅವರ ಮಾನಸಪುತ್ರರೆಂದೇ ಖ್ಯಾತರಾಗಿದ್ದ ಕನ್ನಡದ ಗದ್ಯ ಬರಹಗಾರ ಪ್ರೊ. ದೇ.ಜ.ಗೌ. ಅವರು ಎರಡು ಅವಧಿಗೆ ಉಪಕುಲಪತಿಗಳಾಗಿದ್ದರು. ಅವರ ಆಡಳಿತಾವಧಿಯಲ್ಲಿಯೇ ಹಲವು ಹೊಸ ಇಲಾಖೆ ಮತ್ತು ಗಂಗೋತ್ರಿಯಲ್ಲಿನ ಅನೇಕ ಹೊಸ ಕಟ್ಟಡಗಳು ಮತ್ತು ಇತರೆ ಮೂಲಭೂತ ಸೌಲಭ್ಯಗಳನ್ನು ಮಾಡಿಸಿದ್ದರು. ಹೀಗಿರುವಾಗ ನಾವು ಫೈನಲ್ ಎಂ.ಎ.ನಲ್ಲಿರುವಾಗ ಪ್ರಥಮ ಎಂ.ಎ., ಎಂ.ಎಸ್ಸಿ., ಎಂ.ಕಾಂ., ಗಳಲ್ಲಿ ಸೇರಿಸಿಕೊಳ್ಳುವಾಗ ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂಬ ಕೂಗು ಬಂದ ಕಾರಣ ಸಮಾಜವಾದಿ ಯುವಜನ ಸಭಾ ವತಿಯಿಂದ ಪ್ರತಿಭಟಿಸಲು ತೀರ್ಮಾನಿಸಲಾಯಿತು.
ಮೊದಲನೆಯದಾಗಿ ವಿಶ್ವವಿದ್ಯಾಲಯದ ಪಿ.ಜಿ. ಗಳಲ್ಲಿ ಪ್ರವೇಶಾವಕಾಶಗಳು, ವಿದ್ಯಾರ್ಥಿಗಳು ಆಯಾ ವಿಷಯಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅವಕಾಶವನ್ನು ಪಡೆಯುತ್ತಿದ್ದರು. ನಾನು 1972-73ನೇ ಸಾಲಿನಲ್ಲಿ ಸೇರಿದಾಗಲೂ ಹಲವು ವಿಷಯಗಳಲ್ಲಿ ಪ್ರವೇಶಾವಕಾಶದ ಕೊನೆಯ ಹಂತದಲ್ಲಿ ಮಂತ್ರಿ ಮಹೋದಯರೋ ಇಲ್ಲ ವಿಶ್ವವಿದ್ಯಾಲಯದಲ್ಲಿನ ಪ್ರೊಫೆಸರ್ಗಳ ಶಿಫಾರಸ್ಸಿನಿಂದ ಒಂದೋ ಎರಡೋ ಕಡಿಮೆ ಅಂಕ ಪಡೆದವರಿಗೂ ಸೀಟು ಕೊಡುತ್ತಿದ್ದರು. ಇವೆಲ್ಲ ಬಹಳ ದಿನಗಳ ನಂತರ ತಿಳಿಯುತ್ತಿದ್ದವು. ಆದರೆ 1973-74 ಆರಂಭಿಕ ಪ್ರವೇಶದಲ್ಲಿ ಅನೇಕ ವಿದ್ಯಾರ್ಥಿಗಳು ಕಡಿಮೆ ಅಂಕ ಪಡೆದಿದ್ದರೂ ಹಲವಾರು ವ್ಯಕ್ತಿಗಳ ಶಿಫಾರಸ್ಸಿನ ಹಿನ್ನೆಲೆಯಲ್ಲಿ 8-10 ವಿದ್ಯಾರ್ಥಿಗಳು ಹಲವಾರು ಸ್ನಾತಕೋತ್ತರ ಶಾಖೆಗಳಲ್ಲಿ ಸೇರ್ಪಡೆಯಾಗಿದ್ದರು.
ಅವುಗಳ ವಿರುದ್ಧ ಸಮಾಜವಾದಿ ಯುವಜನ ಸಭಾದ ವಿದ್ಯಾರ್ಥಿಗಳು ದೇವನೂರು ಮಹಾದೇವನ ನೇತೃತ್ವದಲ್ಲಿ ಕ್ರಾರ್ಡ್ ಹಾಲ್ ಎದುರು ಧರಣಿ ಕೂತಿದ್ದೆವು. ಸಣ್ಣದೊಂದು ಪೆಂಡಾಲ್ ಹಾಕಿಕೊಂಡು ವಿಶ್ವವಿದ್ಯಾಲಯದ ಅತ್ಯುನ್ನತ ಕಲಿಕಾ ಕೇಂದ್ರಗಳಲ್ಲಿ ಕ್ರಮಬದ್ಧವಲ್ಲದ ಪ್ರವೇಶಗಳನ್ನು ರದ್ದುಪಡಿಸಲು ಆಗ್ರಹಿಸಿ ಧರಣಿ ನಡೆಯುತ್ತಿತ್ತು. ಈ ಧರಣಿ ಪ್ರಾರಂಭವಾಗುತ್ತಿದ್ದಂತೆ ಎಲ್ಲೆಲ್ಲಿ ಎಷ್ಟೆಷ್ಟು ವಿದ್ಯಾರ್ಥಿಗಳನ್ನು ಶಿಫಾರಸ್ಸಿನ ಮೇರೆಗೆ ಪ್ರವೇಶ ಪಡೆದಿದ್ದಾರೆ ಎನ್ನುವ ಚರ್ಚೆ ಬಂದು ರಾಜ್ಯಶಾಸ್ತç ವಿಭಾಗದಲ್ಲಿ ಅತ್ಯಂತ ಹೆಚ್ಚು ಅನಧಿಕೃತ ಪ್ರವೇಶ ಆಗಿದ್ದವೆಂದು ತಿಳಿದು ಬಂದಿತ್ತು.
ಉಳಿದ ವಿಭಾಗಗಳಲ್ಲಿ ಒಂದು ಎರಡು ಹೀಗೆ ಇದ್ದರೆ, ಕೆ.ಬಿ.ವೈ. ತೋಟಪ್ಪನವರು ಮುಖ್ಯಸ್ಥರಾಗಿದ್ದ ರಾಜ್ಯಶಾಸ್ತç ವಿಭಾಗದಲ್ಲಿ ಅದು ಹೆಚ್ಚಾಗಿತ್ತು. ಹೀಗೆ ಧರಣಿ ಮಾಡುತ್ತಿದ್ದ ನಮ್ಮಲ್ಲಿಗೆ ಮಹೇಶ ರಾಜ್ಯಶಾಸ್ತç ವಿಭಾಗಕ್ಕೆ ಶಿಫಾರಸ್ಸಿನಲ್ಲೇ ಪ್ರವೇಶ ಪಡೆದವನು, ನಮಗೆಲ್ಲ ಇಡ್ಲಿ ಚಟ್ನಿ ಕಟ್ಟಿಸಿಕೊಂಡು ಬಂದು ಕೊಟ್ಟನು. ಅವನ ವಿರುದ್ಧವೇ ನಾವು ಧರಣಿ ಕೂತಿದ್ದರೂ, ಯಾವ ಭಾವಾವೇಶವೂ ಇಲ್ಲದೆ, ಅವನನ್ನು ನೋಡಿ ನಮಗೆ ಅತ್ಯಾಶ್ಚರ್ಯವಾಗಿತ್ತು. ಎಲ್ಲ ಅನಧಿಕೃತ ಪ್ರವೇಶಾರ್ಥಿಗಳನ್ನು ತೆಗೆದು ಹಾಕಿದರೆ ನನಗೇನು ಬೇಸರವಿಲ್ಲ. ನಮ್ಮಪ್ಪನಿಗೆ ಸ್ವಲ್ಪ ಬೇಜಾರಾಗಬಹುದೆಂದು ಹೇಳಿದ್ದು ಈಗ ನೆನಪಾಗುತ್ತಿದೆ. ನಮ್ಮ ಧರಣಿಯಿಂದಾಗಿ ಈಗಾಗಲೇ ಆಗಿರುವ ಪ್ರವೇಶಾರ್ಥಿಗಳನ್ನು ತೆಗೆದು ಹಾಕಲಿಲ್ಲ. ಮುಂದಿನ ವರ್ಷಗಳಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿ ಪ್ರೊಫೆಸರ್ಗಳು ಪ್ರವೇಶಗಳಿಗೆ ಅರ್ಹವಾದ ವಿದ್ಯಾರ್ಥಿಗಳ ಅರ್ಜಿಗಳನ್ನು ಕುಲಪತಿಗಳ ಅನುಮೋದನೆ ಪಡೆದು, ನಂತರ ಪ್ರವೇಶಾರ್ಥಿಗಳಿಗೆ ಪ್ರವೇಶ ನೀಡುವ ಪರಿಪಾಲನೆ ಜಾರಿಗೆ ಬಂದಿದ್ದೊಂದು ಎಸ್.ವೈ.ಎಸ್. ಸಂಘಟನೆಯ ಸಾಧನೆ.
ಜೊತೆಗೆ ನಾನೂ ಕೂಡ, ಕಳೆದ ವರ್ಷವಷ್ಟೇ ಪಾರ್ವತಕ್ಕನವರ ಶಿಫಾರಸ್ಸಿನಿಂದ ಮೂರನೇ ಲಿಸ್ಟ್ನಲ್ಲಿ ಸೀಟು ಪಡೆದುಕೊಂಡಿದ್ದು, ಆ ಬಗ್ಗೆ ನನ್ನೊಳಗೆ ಅಪರಾಧಿ ಭಾವ ಇದ್ದೇ ಇತ್ತು. ಆಗ ಇದೊಂದು ದೊಡ್ಡ ಮಟ್ಟದ ಅನ್ಯಾಯವೆಂದು ಯಾರೂ ಪರಿಗಣಿಸದೆ ಮುಚ್ಚಿ ಹೋಯಿತು. ಈಗ ಅಂತಹ ಶಿಫಾರಸ್ಸಿನವರ ಸಂಖ್ಯೆಯೇ ಜಾಸ್ತಿಯಾಗಿ, ಅದರ ವಿರುದ್ಧ ಹೋರಾಟ ರೂಪಿಸುವಂತೆ ಆಗಿದ್ದು, ನಾನೂ ಕೂಡ ಭಾಗವಹಿಸಿದ್ದು ಆ ಕಾಲಘಟ್ಟದ ಎಚ್ಚರಿಕೆಯಲ್ಲಿದ್ದ ಸಂಘಟನೆಯ ಶಕ್ತಿಯಾಗಿತ್ತು.
ನಮ್ಮ ಧರಣಿಯ ವಿವರ ಮತ್ತು ಅನಧಿಕೃತ ಪ್ರವೇಶಾರ್ಥಿಗಳು ಅರ್ಥಶಾಸ್ತ್ರ ವಿಭಾಗದಲ್ಲೂ ಆಗಿರುವ ಬಗ್ಗೆ ಬಂಡಾಯ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವುಗಳ ಪ್ರತಿಗಳನ್ನು ನಾನು ಸ್ವತಃ ಕ್ಲಾಸಿನಲ್ಲಿ ಹಂಚಿದ್ದೆ. ಆದರೆ ನಮ್ಮ ವಿಭಾಗದ ಮುಖ್ಯಸ್ಥರಾದ ಜಿ.ಟಿ. ಹುಚ್ಚಪ್ಪನವರು ಯಾವುದೇ ವಿಚಾರಣೆ ನಡೆಸದೆ ಸುಮ್ಮನಾಗಿದ್ದರು. ಅವರು, ಆಗ ತೋರಿದ ದೊಡ್ಡತನ ಮರೆಯಲಾಗಿಲ್ಲ. ಅವರು ಮನಸ್ಸು ಮಾಡಿದ್ದರೆ ನನಗೆ ಶೈಕ್ಷಣಿಕವಾಗಿ ತೊಂದರೆ ಕೊಡಬಹುದಾಗಿತ್ತು. ಆದರೆ ಹಿರಿಯರಾಗಿದ್ದ ಪ್ರೊ. ಜಿ.ಟಿ. ಹುಚ್ಚಪ್ಪ ಅವರು ದೊಡ್ಡತನದಿಂದಲೇ ನಡೆದುಕೊಂಡಿದ್ದರು. ಗಂಗೋತ್ರಿ ತುಂಬಾ ಎಲ್ಲ ವಿಭಾಗಗಳ ಹೊರಗೆ ಅನಧಿಕೃತ ಪ್ರವೇಶಾರ್ಥಿಗಳ ಕುರಿತು ಘೋಷವಾಕ್ಯಗಳನ್ನು ಬರೆದಿದ್ದೆವು. ವಿಜ್ಞಾನ ಮತ್ತು ರಾಜ್ಯಶಾಸ್ತç ವಿಭಾಗದಲ್ಲಿ ಆಗಿದ್ದ ಪ್ರವೇಶಾರ್ಥಿಗಳ ವಿವರಗಳನ್ನು ಬಾಟನಿ ವಿಭಾಗದಲ್ಲಿ ರೀಡರ್ ಆಗಿದ್ದ ಪ್ರೊ. ರಾಮಲಿಂಗಮ್ ಅವರೊಡನೆ ಇತರೆ ಅಧ್ಯಾಪಕರುಗಳು ಕೂಡ ನಮಗೆ ವಿವರ ನೀಡುತ್ತಿದ್ದರು. ಎಲ್ಲಾ ವಿಭಾಗಗಳ ಮತ್ತು ಕನ್ನಡ ಅಧ್ಯಯನ ಸಂಸ್ಥೆಯ ಗೋಡೆಯ ಮೇಲೂ ಕೂಡ ಬರೆದಿದ್ದೆವು. ಮಾರನೆ ದಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿದ್ದ ಪ್ರೊ. ಹಾ.ಮಾ. ನಾಯಕ್ ಅವರು ಬಂದು ನೋಡಿ ಇದೆಲ್ಲಾ `ತಮ್ಮ ವಿದ್ಯಾರ್ಥಿ ಮಹಾದೇವನದೇ ಕೈವಾಡವೆಂದು ರೇಗಾಡಿದರೆಂತಲೂ, ಆತನಿಗೆ ತಕ್ಕ ಶಾಸ್ತಿ ಮಾಡುವುದಾಗಿ ಹೇಳಿದರೆಂದು’ ಆಲನಹಳ್ಳಿ ಕೃಷ್ಣ ಬಂದು ನನ್ನ ಬಳಿ ಹೇಳಿದರು.
ನಾನು ಮಹಾದೇವ ಬಂದಾಕ್ಷಣ ಅವನ ಕನ್ನಡ ವಿಭಾಗದಲ್ಲಿ ಆದ ಬೆಳವಣಿಗೆಯನ್ನು ತಿಳಿಸಿದೆ ಅದಕ್ಕವನು `ನಾವೆಲ್ಲ ಮಾಡುತ್ತಿರುವ ಹೋರಾಟದಲ್ಲಿ ನಿಮ್ಮಂತವರ ಬೆಂಬಲ ತಾತ್ವಿಕವಾಗಿ ಇರುವುದೆಂದು ಭಾವಿಸಿದ್ದೆವು, ಆದರೆ ನೀವು ಆಲನಹಳ್ಳಿ ಕೃಷ್ಣ ಅವರ ಬಳಿ ಆಡಿದ ಮಾತು ಕೇಳಿ ನನಗೆ ಜಿಗುಪ್ಸೆ ಮೂಡಿ ನಿಮ್ಮಂತಹವರ ಕೆಳಗೆ ವಿದ್ಯಾಭ್ಯಾಸ ಮುಂದುವರಿಸಲು ನಾಚಿಕೆಯಾಗುತ್ತದೆ’ ಎಂದು ಪತ್ರ ಬರೆದು ಹಾ.ಮಾ. ನಾಯಕ್ ಮತ್ತು ಪ್ರಜಾವಾಣಿ ಪತ್ರಿಕೆಗೂ ಕಳಿಸಿಕೊಟ್ಟುಬಿಟ್ಟ. ಇದಕ್ಕೆಲ್ಲ ಕಾರಣರಾದ ಆಲನಹಳ್ಳಿ ಅವರಿಗೆ ಪೀಕಲಾಟವಾಯಿತು. ಪೋಸ್ಟ್ ಹಾಕಿದ ಪತ್ರ ಹಾ.ಮಾ.ನಾ.ಗೆ ಮತ್ತು ಪ್ರಜಾವಾಣಿಗೆ ತಲುಪಿದರೂ ಪ್ರಕಟಿಸದಂತೆ ಪ್ರಜಾವಾಣಿಗೆ ಫೋನ್ ಮಾಡಲು ಪ್ರಯತ್ನಿಸಿದರು. ಆದರೆ ಹಾ.ಮಾ.ನಾ.ಗೆ ಬರೆದ ಪತ್ರ ತಲುಪಿ ಮಾದೇವನನ್ನು ಕರೆದು ಮಾತಾಡಿಸಿ, ಹಾ.ಮಾ.ನಾ. ನಾವುಗಳು ಮಾಡುತ್ತಿರುವ ಹೋರಾಟದ ಬಗ್ಗೆ ತಮ್ಮದೇನೂ ಅಭ್ಯಂತರವಿಲ್ಲವೆAದು ಹೇಳಿ ಕಳಿಸಿದರೆಂದು ನಂತರ ತಿಳಿಯಿತು. ಹಾಗಾಗಿ ಮಾದೇವ ಎಂ.ಎ. ಪೂರ್ತಿ ಮುಗಿಸುವ ತನಕ ಮತ್ತೇನು ತೊಂದರೆಯಾಗಲಿಲ್ಲ.
ನಮ್ಮ ಸೀನಿಯರ್ ಆಗಿದ್ದ ಬಸವಣ್ಯಪ್ಪ ಆಗಲೇ ಎಂ.ಎ. ಮುಗಿಸಿ ಪರ್ವತಕ್ಕನ ಸೋಷಿಯಾಲಜಿ ವಿಭಾಗದಲ್ಲಿ ಸಹಾಯಕ ನಿರ್ದೇಶಕನ ಕೆಲಸ ಮಾಡುತ್ತಿದ್ದ. ನಾನು ನನ್ನ ಎಸ್ವೈಎಸ್ ಚಟುವಟಿಕೆಗಳ ಬಗ್ಗೆ ಪತ್ರಿಕೆಗಳಲ್ಲಿ ವಿಶ್ವವಿದ್ಯಾಲಯದ ವಿಷಯ ಮುದ್ರಿಸಿ ತರಗತಿಯಲ್ಲಿ ಹಂಚಿದ ಬಗ್ಗೆ ತಿಳಿದು, ನನಗೆ ಎಚ್ಚರಿಕೆ ನೀಡಿ ನಿನಗೆ ಎಂ.ಎ.ನಲ್ಲಿ ಥರ್ಡ್ ಕ್ಲಾಸ್ ನೀಡಿ ಎಲ್ಲೂ ನಿನಗೆ ಕೆಲಸವಿದಲ್ಲದಂತೆ ಮಾಡುತ್ತಾರೆಂದು ತಿಳಿಸಿ ಆತಂಕ ವ್ಯಕ್ತಪಡಿಸಿದ್ದ. ಆದರೆ ಅಂತಹದ್ದೇನೂ ನಡೆಯದೆ ಫಲಿತಾಂಶ ಬಂದಾಗ ನಾನು ಎಂ.ಎ. ಸೆಕೆಂಡ್ ಕ್ಲಾಸ್ನಲ್ಲಿ ಪಾಸಾಗಿ ಹೊರಬಂದಿದ್ದೆ. ಅದಕ್ಕೆಲ್ಲ ಅಂದಿನ ಮುಖ್ಯಸ್ಥರಾಗಿದ್ದ ಪ್ರೊ. ಜಿ.ಟಿ. ಹುಚ್ಚಪ್ಪನವರ ವಿಶಾಲ ಹೃದಯದ ನಡವಳಿಕೆಯೇ ಕಾರಣವಾಗಿತ್ತು.
ಇನ್ನೊಂದು ಪ್ರಕರಣ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಸೋದರ ಸಂಬಂಧಿಯಾದ ಡಿ. ವಿಜಯರಾಜೇ ಅರಸ್ (ಡಿ.ವಿ. ಅರಸ್) ಅವರು ನೂತನ ರಿಜಿಸ್ಟಾçರ್ ಆಗಿ ಇದ್ದರು. ಅವರು ಬಿ.ಎ. (ಆರ್ಸ್) ಮಾಡಿ ಹಲವು ದೇಶಗಳನ್ನು ಸುತ್ತಿ ಬಂದ ಅನುಭವೀ ಆಡಳಿತಗಾರರಾಗಿದ್ದರು. ಅವರ ಆಡಳಿತ ಮತ್ತು ವೈಯಕ್ತಿಕ ಆಸಕ್ತಿಗೆ ತಕ್ಕಂತೆ ತಮ್ಮ ಛೇಂಬರ್ಗೆ ರೆಡ್ ಕಾರ್ಪೆಟ್ ಹಾಕಿಸಿಕೊಂಡದ್ದೊಂದು ದೊಡ್ಡ ಸುದ್ದಿಯಾಗಿತ್ತು. ಅದರ ವಿರುದ್ಧ ಎಸ್.ವೈ.ಎಸ್. ಧರಣಿ ಮಾಡಿ ಎಲ್ಲ ವಿದ್ಯಾರ್ಥಿಗಳಲ್ಲೂ ಚರ್ಚಿಸುವಂತೆ ಮತ್ತೆ ಪತ್ರಿಕೆಗಳಲ್ಲಿ ಬಂದು, ರಿಜಿಸ್ಟಾçರ್ ಅವರ ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕೆಂದು ಧರಣಿ ಮಾಡಿದ್ದೆವು. ಈಗ ಯೋಚಿಸಿದರೆ ಆಗ ನಾವು ಮಾಡುತ್ತಿದ್ದ ಸಣ್ಣ ಸಣ್ಣ ಭ್ರಷ್ಟಾಚಾರ ಸ್ವಜನ ಪಕ್ಷಪಾತಗಳಿಗೆ ಪ್ರತಿಕ್ರಿಯಿಸುತ್ತಿದ್ದ ವಿದ್ಯಾರ್ಥಿ ಸಮೂಹ ಈಗ ಇಂತಹ ಯಾವುದೇ ಸ್ಪಂದನವನ್ನು ಕಾಣದೆ ಎಲ್ಲರೂ ತಮ್ಮ ತಮ್ಮ ಜಾತಿ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿ ಸಮಾಜದ ಸಮಷ್ಟಿ ಬೆಳವಣಿಗೆಯ ಬಗ್ಗೆ ನಿರುತ್ಸಾಹ ಎದ್ದು ಕಾಣುತ್ತದೆ. ವಿಶ್ವವಿದ್ಯಾಲಯಗಳಲ್ಲಿ ವರ್ಷಗಟ್ಟಲೆ ಅಧ್ಯಾಪಕರಿಲ್ಲದೆ ಇದ್ದರೂ,ಆ ಬಗ್ಗೆ ದಿವ್ಯ ನಿರ್ಲಕ್ಷ್ಯ ದಿಂದ ಇರುವ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳಲ್ಲಿ ಸಂಘಟಿತ ಹೋರಾಟಗಳು ಇಲ್ಲವಾಗಿವೆ.
ಈ ಮೇಲಿನ ಎರಡು ಧರಣಿಗಳು ಎಲ್ಲಾ ವಿದ್ಯಾರ್ಥಿ ದೆಸೆಯ ಸಮಾಜವಾದಿ ಯುವಜನ ಸಭಾದ ಸಂಘಟನೆಯ ಮುಖಾಂತರ ನಡೆದವುಗಳು. ವಿದ್ಯಾರ್ಥಿಗಳಾಗಿ ನಾವು ವಿಶ್ವವಿದ್ಯಾಲಯದಲ್ಲಿನ ಸಮಸ್ಯೆಗಳಿಗೆ ಏನೂ ಮಾಡಲಾರೆವು ಎಂದು ಕೈಚೆಲ್ಲಿ ಕೂರದೆ ಸಂಘಟಿತ ಪ್ರತಿಭಟನೆ ಮಾಡಿದಾಗ ಆಗುವ ಬದಲಾವಣೆಯನ್ನು ಕೂಡ ಕಣ್ಣೆದುರಿಗೆ ತೋರಿಸುವಂತಾಗಿದ್ದವು. ಮುಂದಿನ ದಿನಗಳಲ್ಲಿ ಅಧಿಕಾರಸ್ಥರಿಗೆ ಸರಿಯಾದ ಮಾರ್ಗದಲ್ಲಿ ನಡೆಯಲು ದಿಕ್ಸೂಚಿಯಾಗಿ ನಿಂತವು ಎಂಬುದರಲ್ಲಿ ಎರಡು ಮಾತಿಲ್ಲ.
ಓ ನನ್ನ ಮೈಸೂರೆ !
ನಮ್ಮೂರ ಹಾಲಿವಾಣದ ಮುಳ್ಳುಗಳು
ಓಡಾಡೋ ದಾರಿಯ ಕೊರಕಲುಗಳು
ಒಪ್ಪಾರೆ ನೆರಕೆಯ ಹೋಟೆಲುಗಳ ಕಿಲುಬು ಕಪ್ಪುಗಳು
ಒಟ್ಟಾರೆ ಒಂದೆರಡಲ್ಲ ಹೀಗೆ ನೂರಾರು ಸಿಕ್ಕುಗಳ
ಮಡಿ ಮೈಲಿಗೆ ದಾಟಿ…
ನೇರ ಹರಿಯೋ ರೈಲುಹತ್ತಿ ಮೈಸೂರು ತಲುಪಿದ್ದು
ಮಹಾರಾಜರೇ ಕಟ್ಟಿದ ಕಾಲೇಜು ಮೆಟ್ಟಿದ್ದು
ಅರಮನೆ, ಚಾಮುಂಡಿ ಬೆಟ್ಟ
ಎತ್ತೆತ್ತಲೋ ಕೊಂಡೊಯ್ಯುವ ರಸ್ತೆಗಳು
ಹೌಹಾರುವ ನೋಟಗಳು
ಎಲ್ಲ ಹೊತ್ತೊಗೆದಿತ್ತು ನನ್ನ
ಜನ್ಮ ಜನ್ಮಾಂತರದ ಹೊರೆಯ
ಕಣ್ಣಿಗಂಟಿದಾ ಪೊರೆಯ…
ದಿವ್ಯ ದೇಗುಲದಾ ಒಳಗೆ
ಬೆಳಕ ತೋರೋ ಪಂಡಿತರು
ಕಾಸಿ ಕಾಸಿ ಹಣಿಯೋ ಕುಲುಮೆಗಳು
ಬೆಳ್ಳಿ ಬಂಗಾರದ ಭಂಡಾರಗಳು
ಉAಡು ಉಡಲು ಇತ್ತ
ರಾಜನ ಹೆಸರಿನ ತಂಗುದಾಣ
ಅದುವೇ ಪಂಚಾಮೃತ…
ಇದ್ದವರೆಲ್ಲ, ಇಲ್ಲಿ ನನ್ನಂತವರಲ್ಲ
ಆಗಲೇ ಸಿಗರೇಟು ಹಚ್ಚಿ
ಕಥೆ ಬರೆಯೋ ಮಾದೇವ
ಟರ್ಲಿನ್ ಷರ್ಟನಲ್ಲಿ ಬಂಗಾರದ ಚೈನು ಹಾಕಿ
ವಿಶಾಲ ಹೃದಯ ತೋರೋ ರೆಡ್ಡಿ
ತಾಯಿಗಡುಸಿನ ತಾವು ತೋರೋ ಮಹೇಶ
ಅವಸರದಲ್ಲೂ ಉಡದಂತೆ ಹಿಡಿದು ಒಪ್ಪಿಸೋ ಅರ್ಕೇಶ
ಅಕ್ಷರಗಳನಾಡಿಸಿ ಮಣಿಸೋ ಭಕ್ತ
ಸಮತಟ್ಟಲಿ ಹರಿಯೋ ಹೊಳೆಯಂತೆ ಗೊಟ್ಟಿಗೆರೆ ಶಿವರಾಜ
ವಾರವೆಲ್ಲ ಉಣದಿದ್ದರೂ ಬಣ್ಣಗೆಡದ ರಾಕೆ…
ಇಂತವರೆಲ್ಲರ ಕೂಡಿ ಹಾಕಿ ಮಾತಾಡೋ
ನಂಜುAಡಸ್ವಾಮಿ, ವಕೀಲ ಟಿ.ಎನ್.ಎನ್., ದಾನಿ ಪಿ. ಮಲ್ಲೇಶ್
ಅನಂತರಂಗಾಚಾರ್, ರಾಮದಾಸ್
ನೆಲಮೂಲದ ನೆರವು ತೋರೋ
ನೆಲಮನೆಯ ದೇವೇಗೌಡ
ಆಂದೋಲನದಾಳಕ್ಕೂ ಮುಳುಗಿನಿಂತ
ರಾಜಶೇಖರ ಕೋಟಿ
ಅರೆಜೀವಗೊಂಡವರ
ಹೊರೆಹೊತ್ತು ಬರುವಾ ಕೃಷ್ಣಪ್ಪ
ರಿಪೇರಿಯಲ್ಲೇ ಓಡೋ ಜೀಪಲ್ಲಿ ತೇಜಸ್ವಿ
ಕ್ರಾಂತಿಕವನಗಳ ಕಟ್ಟು ಹೊತ್ತ
ಸಂಕ್ರಮಣದ ಚಂಪಾ
ಸ್ಫೋಟಕ ಸುದ್ಧಿಯ ಪ್ರೊ. ರಾಮಲಿಂಗ
ಯುವಕರ ಕಣ್ಣಲ್ಲಿ ಮಿಂಚು ಹರಿಸೋ
ಅನಂತಮೂರ್ತಿ, ಲಂಕೇಶ, ರಾಮಮೂರ್ತಿ
ವಿಚಾರವಾದಿಗಳ ರಥಕತೆಯ
ರ್ಮಲಿಂಗಂ, ಕೊವೂರ್, ಪೆರಿಯಾರ್
ಹೆಚ್. ನರಸಿಂಹಯ್ಯ, ಕುವೆಂಪು, ಬಸವಲಿಂಗಪ್ಪ…
ಬದುಕು ಬರಹಗಳೇ
ರಸವಾಗಿ ಕೊಸರಾಗಿ ಮೈವೆತ್ತ
ಎಲ್. ಬಸವರಾಜು, ಸುಜನಾ
ಹೀಗೆ ಹರಿಯುತ್ತದೆ
ನನ್ನರಿವಿನಾ ಹರವು…
ಬೆರಗಾಗಿ – ಬೆಳಕಾಗಿ
ಕೆನೆಮೊಸರ ಕಡೆದಂತೆ
ಸೊಗಸಾಗಿ ಬೆಳೆದಿದೆ
ಇಂದಿಗೂ ತಲೆದಿಂಬಾಗಿ
ತಲೆ ಎತ್ತಿ ತಿರುಗಾಡುವ
ಅಂಬಾಗಿ…
ಮುಂದುವರಿಯುವುದು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243



