Connect with us

ದಿನದ ಸುದ್ದಿ

ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು

Published

on

  • ರುದ್ರಪ್ಪ ಹನಗವಾಡಿ

ದೆಲ್ಲ ಹೊರಗಿನದಾದರೆ ನಮ್ಮ ವಿಭಾಗದಲ್ಲಿ ಸ್ವಲ್ಪ ಬದಲಾವಣೆಗಳಾಗಿದ್ದವು. ನಮ್ಮ ಜೊತೆಗಿದ್ದ ಡಾ. ಕೆ.ಎಂ. ನಾಯ್ಡು ಅವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದ ಹೊಸ ಸ್ನಾತಕೋತ್ತರ ಕೇಂದ್ರಕ್ಕೆ ಮುಖ್ಯಸ್ಥರಾಗಿ ಆಯ್ಕೆಯಾಗಿ ಹೋಗಿದ್ದರು.

ನಾನು ಎಂ.ಎ. ಓದುವಾಗ ನನಗೆ ಪ್ರಾಧ್ಯಾಪಕರಾಗಿದ್ದ ಡಾ. ಬಿ.ಎಸ್. ಶ್ರೀಕಂಠಾರಾಧ್ಯರು ಇಲಾಖೆಗೆ ಮುಖ್ಯಸ್ಥರಾಗಿ ಬಂದಿದ್ದರು. ನನ್ನ ಬಗ್ಗೆ ನಮ್ಮ ವಿಭಾಗದಲ್ಲಿ ಮತ್ತು ಮೈಸೂರಿನ ಗಂಗೋತ್ರಿ ವಿಭಾಗದಲ್ಲಿ ನಾನು ಮದುವೆಯಾಗಿರುವ ಬಗ್ಗೆ ಅಸಮಾಧಾನವಿತ್ತು. ಅದನ್ನೆಲ್ಲ ತಲೆಯಲ್ಲಿ ತುಂಬಿಕೊಂಡು ಬಂದಿದ್ದ ಬಿಎಸ್‌ಎಸ್ ಗುರುಗಳು ಕೂಡ ನನ್ನ ಬಗ್ಗೆ ಅಸಮಾಧಾನಗೊಂಡವರಂತೆ ತೋರುತ್ತಿದ್ದರು.

ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶ್ರೀಕಂಠಾರಾಧ್ಯರು ಅಧ್ಯಾಪಕರೆಲ್ಲರಿಗೂ ತೆಗೆದುಕೊಳ್ಳುವ ತರಗತಿಗಳ ವೇಳಾಪಟ್ಟಿ ತಯಾರಿಸಿಕೊಟ್ಟಿದ್ದರು. ನನಗೆ ಆಶ್ಚರ್ಯವಾಗುವಂತೆ ನನಗೆ ಯಾವುದೇ ಸಾಮಾನ್ಯ ತರಗತಿಗೆ ಪಾಠ ಮಾಡುವ ಅವಕಾಶವಿರದಂತೆ ತರಗತಿಗಳನ್ನು ಹಂಚಿಕೆ ಮಾಡಿದ್ದರು. ಐಚ್ಛಿಕವಾಗಿದ್ದ ಎರಡು ವಿಷಯಗಳಾದ ಪ್ರಾದೇಶಿಕ ಅರ್ಥಶಾಸ್ತ್ರ ಮತ್ತು ಕೃಷಿ ಅರ್ಥಶಾಸ್ತ್ರಗಳನ್ನು ಹಂಚಿಕೆ ಮಾಡಿ ಮುಗಿಸಿದ್ದರು. ನನಗೆ ವಿದ್ಯಾ ಗುರುಗಳು ಹೆಚ್ಚು ಸಲಿಗೆ ಇಲ್ಲದೆ ಇದ್ದ ಅವರೊಡನೆ ಇದು ಸರಿ ಇಲ್ಲ. ಇದನ್ನು ಸರಿಯಾಗಿ ಹಂಚಿಕೆಯಾಗಬೇಕೆಂದು ನನ್ನ ಅಸಮಾಧಾನ ತೋರಿ ಅವರ ಟೇಬಲ್ ಮೇಲೆ ತಾತ್ಸಾರದಿಂದಲೇ ಆದೇಶದ ಪ್ರತಿಯನ್ನು ಬಿಟ್ಟು ಬಂದಿದ್ದೆ. ಅತ್ಯಂತ ಮಿತಭಾಷಿ, ಸರಳ ಮತ್ತು ಆಳ ಅಧ್ಯಯನದಿಂದ ಗಳಿಸಿದ ಗಂಭೀರತೆಯಲ್ಲಿದ್ದ ಅವರಿಗೆೆ ನನ್ನ ಬಗ್ಗೆ, ನಾನು ಮದುವೆಯಾದ ಬಗ್ಗೆ ಇಲ್ಲ ಸಲ್ಲದ ಕಥೆಗಳನ್ನು ಕಟ್ಟಿ ಅವರಿಗೆ ಹೇಳಿ ನನಗೆ ಈ ರೀತಿಯ ಅನಾದರಣೆ ತೋರಿಸುವಂತೆ ನಮ್ಮವರೇ ಆಗಿದ್ದ ಕೆಲವು ಅಧ್ಯಾಪಕರು ಹೊಸಬರಾಗಿ ಬಂದಿದ್ದ ಇವರಿಗೆ ಹೇಳಿದ್ದರು.

ಆರಾಧ್ಯರೂ ಕೂಡ ಮೈಸೂರಿನ ಗಂಗೋತ್ರಿಯಲ್ಲಿ ಪಾಠ ಮಾಡುತ್ತಿದ್ದವರು, ಅಲ್ಲಿಯೇ ಪ್ರಾಧ್ಯಾಪಕರಾಗಬೇಕಾಗಿದ್ದವರನ್ನು ಬಿಆರ್‌ಪಿಗೆ ಒಬ್ಬ ಹಿರಿಯ ಪ್ರಾಧ್ಯಾಪಕರು ಬೇಕೆಂಬ ನೆಪವೊಡ್ಡಿ ಅವರನ್ನು ವರ್ಗಾವಣೆ ಮಾಡಿ ಇಲ್ಲಿಗೆ ಕಳಿಸಿದ್ದರು. ಇಲ್ಲಿಗೆ ಬರುವ ಬಗ್ಗೆ ಮನಸ್ಸಿಲ್ಲದ ಕಾರಣ ಅಸಮಾಧಾನವೂ ಅವರಲ್ಲಿ ಮನೆಮಾಡಿತ್ತು. ಬಂದಾಕ್ಷಣ ಇಲ್ಲಿನವರ ಚಾಡಿ ಮಾತು ಕೇಳಿ ನನ್ನ ಬಗ್ಗೆ ಈ ರೀತಿ ನಡೆದುಕೊಂಡಿದ್ದರು. ಆ ನಂತರ ಎಲ್ಲರೂ ಚರ್ಚಿಸಿ ಸಮಾನ ವಿಷಯಗಳ ಮತ್ತು ತರಗತಿಗಳನ್ನು ಹಂಚಿಕೆ ಮಾಡಿಕೊಂಡು ಎಂದಿನಂತೆ ತರಗತಿಗಳು ನಡೆಯಲಾರಂಭಿಸಿದವು. ಪ್ರಾರಂಭದಲ್ಲಿ ಆಗಿದ್ದ ನನ್ನ ಮತ್ತು ನನ್ನ ಗುರುಗಳಾಗಿದ್ದ ಶ್ರೀಕಂಠಾರಾಧ್ಯರ ನಡುವೆ ನಡೆದ ಸಣ್ಣ ಅಸಮಾಧಾನ ಕರಗಿ ಎಂದಿನ ಲವಲವಿಕೆಯಿಂದ ವಿಭಾಗದಲ್ಲಿ ಚಟುವಟಿಕೆಗಳು ಪ್ರಾರಂಭವಾದವು. ( ಸುದ್ದಿದಿನ.ಕಾಂ|ವಾಟ್ಸಾಪ್|9980346243)

ದಿನದ ಸುದ್ದಿ

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

Published

on

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending