ಸಿನಿ ಸುದ್ದಿ
ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡಿದ ರಶ್ಮಿಕಾ ಮಂದಣ್ಣ
![](https://suddidina.com/wp-content/uploads/2018/07/Rashmikamandanna-suddidina23.jpg)
ಸುದ್ದಿದಿನ ಡೆಸ್ಕ್| ಹೊಸ ತನವನ್ನು ಹುಟ್ಟುಹಾಕಿರುವ ಉದಯಾ ಟೀವಿಯಲ್ಲಿ ಪ್ರಸಾರವಾಗುತ್ತಿರುವ ಸದಾ ನಿಮ್ಮೊಂದಿಗೆ ಕಾರ್ಯಕ್ರಮದಲ್ಲಿ ಈವಾರ ನಟಿ ರಶ್ಮಿಕಾ ಮಂದಣ್ಣ ಅವರು ಪಾಲ್ಗೊಂಡಿದ್ದಾರೆ. ಇದೇ ಭಾನುವಾರ ರಾತ್ರಿ 9ಗಂಟೆಗೆ ಕಾರ್ಯಕ್ರಮ ಪ್ರಸಾರವಾಗಲಿದೆ.
ರಶ್ಮಿಕಾ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಪಲ್ಲವಿಯವರಿಗೆ ತಮ್ಮ ಕೈಲಾದ ಸಹಾಯ ಮಾಡೋದಕ್ಕೆ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡಿದ್ದಾರೆ. ಇವರನ್ನು ಕಾರ್ಯಕ್ರಮದ ಉದ್ದೇಶ ತಿಳಿಸಿ ಕರೆದ ತಕ್ಷಣ ಮನಸ್ಪೂರ್ತಿಯಾಗಿ ಬಂದು ಭಾಗವಹಿಸಿದರು. ಲಕ್ಷ್ಮೀ ಅಮ್ಮ ಯಾವ ರೀತಿ ಸಹಾಯ ಮಾಡಬಹುದು ಇವರಿಗೆ ಅಂತ ಕೇಳಿದಾಗ ರಶ್ಮಿಕಾ ಅವರು ಪಲ್ಲವಿಯ ತಂದೆ ಯಾವ ಕೆಲಸ ಮಾಡುತ್ತಿದ್ದರು ಅಂತ ಕೇಳಿ ತಿಳ್ಕೊಂಡು ತಾವು ಅದೇ ಕೆಲಸ ಮಾಡುವುದಾಗಿ ಹೇಳಿದ್ರು.
ಇವರು ರಾಜಾಜಿನಗರದಲ್ಲಿರುವ ಪೆಟ್ರೊಲ್ ಬಂಕ್ ಒಂದಕ್ಕೆ ಭೇಟಿ ಕೊಟ್ಟು ಆ ಪೆಟ್ರೋಲ್ ಬಂಕ್ ಮಾಲೀಕರ ಹತ್ತಿರ ಹೋಗಿ ನಾನು ನಿಮ್ಮ ಪೆಟ್ರೋಲ್ ಬಂಕ್ ಅಲ್ಲಿ ಒಂದು ದಿನ ಕೆಲಸ ಮಾಡುತ್ತೇನೆ. ಒಂದು ದಿನದ
ಸಂಬಳವನ್ನ ನನಗೆ ಕೊಡಿ. ಅದರಿಂದ ಪಲ್ಲವಿಗೆ ಸಹಾಯವಾಗುತ್ತದೆ ಎಂದು ಹೇಳಿ ಕೆಲಸ ಮಾಡಲು ಶುರು ಮಾಡಿದರು. ಇವರು ಮೊದಲನೇ ಸಲ ಪೆಟ್ರೋಲ್ ಹಾಕ್ತೀದ್ರೂ ಕೂಡ ಯಾವುದೇ ಗಡಿಬಿಡಿ ಇಲ್ಲದೇ
ತುಂಬ ಲವಲವಿಕೆ ಇಂದ ಕೆಲಸ ಮಾಡಿದ್ರು.. ಅಲ್ಲಿಗೆ ಪೆಟ್ರೋಲ್ ಹಾಕಿಸಲು ಬಂದ ಅಭಿಮಾನಿಗಳ ಕೋರಿಕೆಯನ್ನ ಈಡೇರಿಸಿದರು.
ಪಲ್ಲವಿಗೋಸ್ಕರ ಆ ಒಂದು ದಿನ ಪೆಟ್ರೋಲ್ ಬಂಕ್ ಅಲ್ಲಿ ಕೆಲಸ ಮಾಡಿ
ದುಡಿದ ಹಣವನ್ನು ಪಲ್ಲವಿ ಕುಟುಂಬಕ್ಕೆ ನೀಡಿ ಸಹಾಯ ಮಾಡಿದ್ದಾರೆ. ಪಲ್ಲವಿಯವರಿಗೆ ಎಷ್ಟು ದುಡ್ಡಿನ ಅವಶ್ಯಕತೆ ಇತ್ತು ರಶ್ಮಿಕಾ ಅವರು ಎಷ್ಟು ಸಂಪಾದನೆ ಮಾಡಿಕೊಟ್ಟ್ರು ಅನ್ನೊದನ್ನ ಎಪಿಸೋಡ್ ಪ್ರಸಾರವಾದಾಗಲೇ ನೋಡಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಸಾಗರ | ಇಂದು ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಪುಸ್ತಕಗಳ ಬಿಡುಗಡೆ
![](https://suddidina.com/wp-content/uploads/2024/06/guccha_suddidina.jpg)
ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ.
ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಎಂ.ವಿ ಮಾಡಲಿದ್ದು, ಅಧ್ಯಕ್ಷತೆಯನ್ನುನಿವೃತ್ತ ಪ್ರಾಂಶುಪಾಲರಾದ ಅ.ರಾ.ಲಂಬೋದರ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ‘ಆರು ಲಘು ನಾಟಕಗಳು’ ಕುರಿತು ನಿವೃತ್ತ ಪ್ರಾಂಶುಪಾಲರು ಡಾ. ಜಯಪ್ರಕಾಶ್ ಮಾವಿನಕುಳಿ ಹಾಗೂ ‘ಗುಚ್ಛ’ ಕುರಿತು ಸಹಕಾರ ಸಂಘಗಳ ನಿವೃತ್ತ ಉಪ ನಿಬಂಧಕರು ಜಯಪ್ರಕಾಶ್ ತಲವಾಟ ಅವರು ಮಾತನಾಡಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
![](https://suddidina.com/wp-content/uploads/2024/06/Sarod_Maestro_Rajeev_Taranath_suddidina.jpg)
ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೇಷ್ಠ ಭಾರತೀಯ ಶಾಸ್ತ್ರೀಯ ಸಂಗೀತಗಾರ ಆಗಿರುವ ಅವರು ಸರೋದ್ ವಾದಕರೂ ಆಗಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
![](https://suddidina.com/wp-content/uploads/2024/06/Darshan_suddidina_Kannada_actor.jpg)
ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಡಿಸಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.
ಮೈಸೂರಿನ ದರ್ಶನ್ ಒಡೆತನದ ಫಾರ್ಮ್ ಹೌಸ್ನಲ್ಲಿ ೧೦ ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ತಿಳಿಸಿವೆ. ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರಿನ ಸುಮನಹಳ್ಳಿ ಬಳಿಯ ವೃಷಭಾವತಿ ನಾಲೆಯಲ್ಲಿ ಅಪಾರ್ಟ್ಮೆಂಟ್ ಕಟ್ಟಡದ ಮುಂಭಾಗದಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿತ್ತು. ದರ್ಶನ್ ಚಿತ್ರದುರ್ಗ ಅಭಿಮಾನಿಗಳ ಸಂಘದ ಅಧ್ಯಕ್ಷರಿಗೆ ಕರೆ ಮಾಡಿ ರೇಣುಕಾಸ್ವಾಮಿ ಎಲ್ಲಿದ್ದಾರೆ ಎಂಬುದನ್ನು ಪತ್ತೆಮಾಡಿ ಬೆಂಗಳೂರಿಗೆ ಕರೆತರುವಂತೆ ಹೇಳಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
-
ದಿನದ ಸುದ್ದಿ7 days ago
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಮಸ್ಕಿ | ಬಿಜೆಪಿ ಕಚೇರಿಯಲ್ಲಿ ಆತ್ಮಾವಲೋಕನ ಸಭೆ
-
ದಿನದ ಸುದ್ದಿ6 days ago
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
-
ಅಂತರಂಗ5 days ago
ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ
-
ದಿನದ ಸುದ್ದಿ6 days ago
ಭಾರೀ ಮಳೆ ; ಡ್ಯಾಂಗಳಿಗೆ ಹರಿದು ಬಂದ ನೀರೆಷ್ಟು..? ಇಲ್ಲಿದೆ ಸಂಪೂರ್ಣ ಮಾಹಿತಿ
-
ದಿನದ ಸುದ್ದಿ5 days ago
ನಕಲಿ ವೈದ್ಯರ ಹಾವಳಿಗೆ ಬ್ರೇಕ್ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮ
-
ದಿನದ ಸುದ್ದಿ7 days ago
SC – ST | ಕುರಿ,ಮೇಕೆ ಹಾಗೂ ಕೋಳಿ ಸಾಕಾಣಿಕೆ ತರಬೇತಿ