Connect with us

ದಿನದ ಸುದ್ದಿ

ದಾವಣಗೆರೆ | ಹನ್ನೊಂದನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಿ.ಎಸ್. ಸುಶಿಲಾದೇವಿ ಆರ್ ರಾವ್ ಆಯ್ಕೆ : ನಿಯೋಗದಿಂದ ಗೌರವ ಪೂರ್ವಕ ಆಮಂತ್ರಣ

Published

on

ಸುದ್ದಿದಿನ ,ದಾವಣಗೆರೆ : 11 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಮಾರ್ಚ್ 26 ಮತ್ತು 27 ರಂದು ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ಜಿ.ಎಸ್. ಸುಶಿಲಾದೇವಿ ಆರ್ ರಾವ್ ಅವರೊಗೆ ಗೌರವಪೂರ್ವಕವಾಗಿ ಆಮಂತ್ರಣ ನೀಡಲಾಯಿತು.

ಸೋಮವಾರ ಜಿಲ್ಲಾಧ್ಯಕ್ಷ ಬಿ ವಾಮದೇವಪ್ಪ ನವರ ನೇತೃತ್ವದಲ್ಲಿ ಜಿಲ್ಲಾ ಕಸಾಪ ಪದಾಧಿಕಾರಿಗಳು ಹಾಗೂ ಎಲೆಬೇತೂರು ಗ್ರಾಮದ ಮುಖಂಡರು,ನಾಗರಿಕ ಬಂಧುಗಳ ನಿಯೋಗ ಅವರ ಮನೆಗೆ ತೆರಳಿ ಸಮ್ಮೇಳನದ ಸರ್ವಾಧ್ಯಕ್ಷತೆ ಅಲಂಕರಿಸಿ ಸಮ್ಮೇಳನವನ್ನು ಯಶಸ್ವಿಯಾಗಿ ನೆರವೇರಿಸಿಕೊಡಲು ಜಿಲ್ಲಾ ಕಸಾಪ ದ ಪರವಾಗಿ ಕೇಳಿಕೊಂಡು ಗೌರವಪೂರ್ವಕವಾಗಿ ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ನವರು ಮಾತನಾಡಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಬಗ್ಗೆ ಕಾರ್ಯಕಾರಿ ಸಮಿತಿಯಲ್ಲಿ ಈ ಬಾರಿ ಮಹಿಳೆಯರಿಗೆ ಸರ್ವಾಧ್ಯಕ್ಷತೆ ಸ್ಥಾನ ವಹಿಸಿಕೊಡಬೇಕೆಂದು ವಿಷಯ ಪ್ರಸ್ತಾಪಿಸಲಾಯಿತು. ತಕ್ಷಣ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯ ರೆಲ್ಲರೂ ಅತ್ಯಂತ ಸಂತೋಷದಿಂದ ಸರ್ವಾನುಮತದಿಂದ ತಮ್ಮ ಹೆಸರನ್ನು ಸೂಚಿಸಿದ್ದು ಅತ್ಯಂತ ಸಂತೋಷಕರ ಎಂದರು.

ಸರ್ವಾಧ್ಯಕ್ಷರ ಕನ್ನಡದ ಅನುಪಮ ಸೇವೆಯನ್ನು ಶ್ಲಾಘಿಸುತ್ತಾ ದಾವಣಗೆರೆ ತಾಲೂಕಿನವರಾದ ತಾವುಗಳು ತಾಲೂಕಿಗೆ ಹೆಮ್ಮೆ ತರುವಂತಹ ಸೊಸೆಯಾಗಿದ್ದೀರಿ. ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ತಮ್ಮಿಂದ ಸುಮಾರು 10 ಕಾದಂಬರಿಗಳು, 50 ಬಿಡಿ ಲೇಖನಗಳು, ಕಥೆಗಳು, ನಾಟಕಗಳು ಹೊರಬಂದಿರುವುದು ತಮ್ಮ ಸಾಹಿತ್ಯ ಕೃಷಿಗೆ ಹಿಡಿದ ಕೈಗನ್ನಡಿ ಗಳಾಗಿವೆ. ತಮ್ಮ ನಾಟಕಗಳು ಬಾನುಲಿಯಲ್ಲಿ ಬಿತ್ತರಗೊಂಡಿರುವುದು ನಿಜಕ್ಕೂ ಸಂತೋಷಕರ ಎಂದು ತಿಳಿಸಿದರು.

ನಿಮ್ಮ ಆಯ್ಕೆ ಅತ್ಯಂತ ಸಮರ್ಥನೀಯ ಹಾಗೂ ಪ್ರಸ್ತುತ ದಿನಮಾನಗಳಲ್ಲಿ ಮಹಿಳಾ ಲೋಕಕ್ಕೊಂದು ಗೌರವದ ಸಂಕೇತವಾಗಿದೆ ಎಂದು ತಿಳಿಸಿದರು.

ಎಲೆಬೇತೂರು ಗ್ರಾಮದಲ್ಲಿ ಸಮ್ಮೇಳನದ ಆಯೋಜನೆಗೆ ಸೂಕ್ತ ಸ್ಪಂದನೆ ದೊರಕಿದ್ದು, ಈಗಾಗಲೇ ಅಲ್ಲಿನ ಮುಖಂಡರು, ನಾಗರಿಕ ಬಂಧುಗಳು, ಸುತ್ತಮುತ್ತಲ ಗ್ರಾಮಸ್ಥರು ತಕ್ಷಣ ಸಮ್ಮೇಳನದ ಬಗ್ಗೆ ಅತ್ಯಂತ ಉತ್ಸಾಹದಿಂದ ಕಾರ್ಯಪ್ರವೃತ್ತರಾಗಿರುವುದು ಕನ್ನಡ ನಾಡು-ನುಡಿಯ ಬಗ್ಗೆ ಅವರಲ್ಲಿರುವ ಪ್ರೇಮವನ್ನು ತೋರಿಸುತ್ತದೆ.

ಎಲೆಬೇತೂರು ಗ್ರಾಮದ ಮುಖ್ಯಸ್ಥರು, ಜಿಲ್ಲಾ ಕಸಾಪ ನಿಯೋಗ ಸಿರಿಗೆರೆಗೆ ತೆರಳಿ ಪರಮಪೂಜ್ಯ ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ರನ್ನು ಸಮ್ಮೇಳನದ ಉದ್ಘಾಟನೆಗೆ ಆಮಂತ್ರಿಸಿದ್ದು, ಪರಮಪೂಜ್ಯರು ಸಂತೋಷದಿಂದ ಆಗಮಿಸಲು ಒಪ್ಪಿಗೆ ಸೂಚಿಸುತ್ತಾರೆ ಎಂದು ಜಿಲ್ಲಾಧ್ಯಕ್ಷ ಬಿ ವಾಮದೇವಪ್ಪ ನವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಕಸಾಪ ಜಿಲ್ಲಾಧ್ಯಕ್ಷ ಎ.ಆರ್.ಉಜ್ಜಿನಪ್ಪ, ನಿಕಟಪೂರ್ವ ಅಧ್ಯಕ್ಷ ಡಾ.ಹೆಚ್.ಎಸ್.ಮಂಜುನಾಥ್ ಕುರ್ಕಿ ಮಾತನಾಡಿ ಶ್ರೀಮತಿ ಜಿ.ಎಸ್ ಸುಶಿಲಾದೇವಿ ಆರ್ ರಾವ್ ರವರ ಆಯ್ಕೆ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಬಿ.ದಿಳ್ಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ,, ಕೋಶಾಧ್ಯಕ್ಷರಾದ ಕೆ. ರಾಘವೇಂದ್ರ ನಾಯರಿ, ದಾವಣಗೆರೆ ತಾಲೂಕು ಕಸಾಪ ಅಧ್ಯಕ್ಷರಾದ ಶ್ರೀಮತಿ ಎ.ಜಿ.ಸುಮತಿ ಜಯಪ್ಪ, ಜಿಲ್ಲಾ ಪದಾಧಿಕಾರಿಗಳಾದ ಬಿ.ಎಂ ಬೈರೇಶ್ವರ, ಶ್ರೀಮತಿ ಸತ್ಯಭಾಮ, ಶ್ರೀಮತಿ ರುದ್ರಾಕ್ಷಿ ಬಾಯಿ, ಶ್ರೀಮತಿ ಎಸ್.ಎಂ.ಮಲ್ಲಮ್ಮ, ಹಾಗೂ ತಾಲೂಕು ಪದಾಧಿಕಾರಿಗಳಾದ ಪರಮೇಶ್ವರಪ್ಪ ದಾಗಿನಕಟ್ಟೆ, ಶಿವಕುಮಾರ್ ಆರ್. ಉಪಸ್ಥಿತರಿದ್ದರು.

ಜೊತೆಗೆ ಎಲೆಬೇತೂರು ಗ್ರಾಮದ ಹೆಚ್. ಬಸವರಾಜಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ಸಿ. ಸುಮಾ ಬಿ.ವಿರುಪಾಕ್ಷಪ್ಪ, ಮಂಗಳಾ ಷಡಕ್ಷರಪ್ಪ, ಹಂಚಿನಮನೆ ಗಂಗಪ್ಪ, ಎಂ ಷಡಾಕ್ಷರಪ್ಪ ಬೇತೂರು, ಟಿ ಅಂಬಣ್ಣ ಕ್ಷೇತ್ರಶಿಕ್ಷಣಾಧಿಕಾರಿಗಳು ದಾವಣಗೆರೆ ಉತ್ತರ ವಲಯ ಇವರುಗಳು ಉಪಸ್ಥಿತರಿದ್ದು ಸರ್ವಾಧ್ಯಕ್ಷರಾದ ಜಿಎಸ್ ಸುಶಿಲಾದೇವಿ ಆರ್ ರಾವ್ ರವರಿಗೆ ಅತ್ಯಂತ ಸಂತೋಷದಿಂದ ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಾಪಕ ಸಿ.ಜಿ. ಜಗದೀಶ್ ಕೂಲಂಬಿ, ಡಾ. ಆನಂದ ಋಗ್ವೇದಿ, ಶ್ರೀಮತಿ ಎಚ್ಆರ್ ವಿನುತಾ, ಚಿರಂಜೀವಿ, ಅನಿಕೇತ್ ಅಶುತೋಷ್ ರವರುಗಳು ಭಾಗಿಗಳಾಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending