Connect with us

ದಿನದ ಸುದ್ದಿ

ಸನಾತನಿಗಳಿಗೇಕೆ ಭೀಮ ಭಯ

Published

on

  • ಡಾ.ಕೆ.ಎ.ಓಬಳೇಶ್,ದಾವಣಗೆರೆ

ಭಾರತದ ನೆಲದಲ್ಲಿ ಸಾವಿರಾರು ವರ್ಷಗಳ ಕಾಲ ಅಸಮಾನತೆಯನ್ನು ಪಾಲಿಸಿಕೊಂಡು ಬಂದ ವೈದಿಕತೆಯ ಕಟ್ಟುಪಾಡುಗಳನ್ನು ಮೀರಿ ನಿಂತ ಹಲವಾರು ದಾರ್ಶನಿಕರು ನಮ್ಮ ನಡುವೆ ಅಜರಾಮರವಾಗಿ ಉಳಿದಿದ್ದಾರೆ.

ಇವರು ವೈಚಾರಿಕ ತಳಹದಿಯ ಮೇಲೆ ಸಮಾನತೆಯನ್ನು ಪ್ರತಿಪಾದಿಸಿ, ಮಾನವ ಮಾನವನ ನಡುವಿನ ಸಾಮಾಜಿಕ ಅಂತರದ ಕಂದಕವನ್ನು ಮೆಟ್ಟಿನಿಂತು ಜೀವಪರವಾದ ಚಿಂತನೆಗಳನ್ನು ಬಿತ್ತಿದ್ದಾರೆ. ಇಂತಹ ಮಹಾನ್ ದಾರ್ಶನಿಕರಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ಪ್ರಮುಖರಾಗಿದ್ದಾರೆ. ವೈದಿಕರು ತಮ್ಮ ಅಸ್ತಿತ್ವಕ್ಕಾಗಿ ರೂಪಿಸಿಕೊಂಡು ಬಂದ ಅಸಮಾನತೆಯ ವರ್ಣವೃಕ್ಷವನ್ನು ಬೇರು ಸಹಿತ ಕಿತ್ತು ಹಾಕಿ ಸಮಾನತೆಯನ್ನು ಹಂಚಿದ ಶ್ರೇಷ್ಟ ದಾರ್ಶನಿಕರಲ್ಲಿ ಅಂಬೇಡ್ಕರ್ ಅವರ ಪಾತ್ರ ಮಹತ್ವದ್ದು.

ಹೀಗಾಗಿ ಇವರು ಕೇವಲ ವ್ಯಕ್ತಿ ಮಾತ್ರವಲ್ಲ, ಭಾರತದ ಶೂದ್ರರ ಪಾಲಿನ ಭೀಮಬಲ. ಪ್ರಸ್ತುತದಲ್ಲಿ ಬಾಬಾಸಾಹೇಬರ ೧೩೧ನೇ ಜನ್ಮದಿನವನ್ನು ಆಚರಿಸುತ್ತಿರುವ ಸುಸಂದರ್ಭದಲ್ಲಿ ನಾವು ಅವರ ಮೂರ್ತಿ ಆರಾಧನೆಗಿಂತ ಅವರ ಸಾಮಾಜಿಕ ಕಳಕಳಿ, ತುಡಿತ-ಮಿಡಿತ, ಭಾರತಕ್ಕೆ ನೀಡಿದ ಕೊಡುಗೆ ಹಾಗೂ ಶೂದ್ರ ಸಮುದಾಯಗಳ ಮೇಲೆ ಅವರಿಗಿದ್ದ ಬದ್ಧತೆಯನ್ನು ಅರಿಯುವುದು ಸೂಕ್ತವೆಂದು ಭಾವಿಸಲಾಗಿದೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೇವಲ ಒಬ್ಬ ಸಾಮಾನ್ಯ ವ್ಯಕ್ತಿಯಾಗಿದ್ದರೆ ನಾವು ಇಂದು ಸ್ಮರಣೆ ಮಾಡುವ ಅಗತ್ಯವೇ ಇರಲಿಲ್ಲ. ಹಾಗೆಯೇ ಇವರು ಸಾರ್ವತ್ರಿಕ ನೆಲೆಯಲ್ಲಿ ಭಾರತೀಯರ ಸ್ಮರಣೆಯಲ್ಲಿಯೂ ಉಳಿಯುತ್ತಿರಲಿಲ್ಲ. ಆದರೆ ಭಾರತದ ಪ್ರತಿಯೊಬ್ಬ ಪ್ರಜೆಯು ಇಂದು ಬಾಬಾಸಾಹೇಬರನ್ನು ಸ್ಮರಣೆ ಮಾಡಿಕೊಳ್ಳಬೇಕಾದ ಅನಿವಾರ್ಯದೆ ಇದೆ ಎಂದಾದರೆ ಅದಕ್ಕೆ ಕಾರಣ ಈ ನಿಸ್ವಾರ್ಥ ವ್ಯಕ್ತಿತ್ವದ ಹಿರಿಮೆಯ ಪ್ರತೀಕವೇ ಸರಿ.

ಭಾರತೀಯರಾದ ನಾವು ಎಪ್ಪತ್ತು-ಎಂಬತ್ತು ವರ್ಷಗಳ ಹಿಂದಿನ ಭಾರತವನ್ನು ಒಂದು ಕ್ಷಣ ಕಣ್ಣು ಮುಚಿ ಸ್ಮರಿಸಿಕೊಂಡರೆ ನಮಗೆ ಬಾಬಾಸಾಹೇಬ್ ಅಂಬೇಡ್ಕರ್ ಎಂಬ ಭೀಮಶಕ್ತಿಯ ಸಾಹಸಮಯ ಹೋರಾಟದ ಬದುಕು ಅರ್ಥವಾಗುತ್ತದೆ. ಇಂದು ಹಿಂದುತ್ವದ ಹೆಸರಿನಲ್ಲಿ ಕೋಮುವಾದಿಗಳ ಕೈಗೊಂಬೆಯಾಗಿ ಕುಣಿಯುತ್ತ, ಈ ನೆಲದ ಸಾಮರಸ್ಯವನ್ನು ತಮ್ಮ ಕೈಯಾರೆ ಕೆಡಿಸುತ್ತಿರುವ ಶೂದ್ರ ಸಮುದಾಯದ ಯುವ ಸಮುದಾಯವು ಒಂದು ಕ್ಷಣ ಎಂಬತ್ತು ವರ್ಷಗಳ ಹಿಂದಿನ ತಮ್ಮ ಪೂರ್ವಜರ ಸ್ಥಿತಿಗತಿಗಳನ್ನು ಅರ್ಥ ಮಾಡಿಕೊಂಡರೆ ಬ್ರಾಹ್ಮಣ್ಯದ ತಾಳಕ್ಕೆ ಕುಣಿಯುತ್ತಿರಲಿಲ್ಲ.

ಬಾಬಾಸಾಹೇಬ್ ಅಂಬೇಡ್ಕರ್ ಅವರ ‘ಚರಿತ್ರೆ ಇಲ್ಲದ ಜನಾಂಗ ಚರಿತ್ರೆಯನ್ನು ನಿರ್ಮಿಸಲು ಸಾಧ್ಯವಿಲ್ಲ. ಚರಿತ್ರೆ ಮರೆತವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಿಲ್ಲ’ ಎಂಬ ಮಾತು ಸತ್ಯದಿಂದ ಕೂಡಿದೆ. ಇಂದು ಬ್ರಾಹ್ಮಣ್ಯದ ತಾಳಕ್ಕೆ ತಕ್ಕಂತೆ ಕುಣಿದು ‘ಹಿಂದುತ್ವ’ದ ಅಮಲೇರಿಸಿಕೊಂಡ ಶೂದ್ರ ಸಮುದಾಯಗಳಿಗೆ ತಮ್ಮ ಚರಿತ್ರೆಯ ಅರಿವಿಲ್ಲ. ಈ ಕಾರಣಕ್ಕೆ ಇವರು ಸಾವಿರಾರು ವರ್ಷಗಳಿಂದ ತಮ್ಮನ್ನು ದಾಸ್ಯಕ್ಕೆ ಒಳಪಡಿಸಿದ ಧರ್ಮದ ರಕ್ಷಣೆಗೆ ಮುಂದಾಗಿದ್ದಾರೆ.

ಬಾಬಾಸಾಹೇಬರ ಈ ಮಾತು ಶೂದ್ರರಿಗೆ ಅರ್ಥವಾಗಿ ತಮ್ಮ ವಾಸ್ತವ ಚರಿತ್ರೆಯನ್ನು ಅರಿತರೆ ಸನಾತನವಾದಿಗಳಿಗೆ ಉಳಿಗಾಲವಿಲ್ಲ. ಇಂತಹ ಸೂಕ್ಷö್ಮತೆಯನ್ನು ಅರಿತ ಸನಾತನವಾದಿಗಳು ಒಂದಿಲ್ಲೊAದು ವಿವಾದ ಸೃಷ್ಟಿಸುವ ಮೂಲಕ ಶೂದ್ರ ಸಮುದಾಯದ ಯುವಶಕ್ತಿಯನ್ನು ಮುಸ್ಲಿಮರು, ಕ್ರೈಸ್ತರ ವಿರುದ್ಧ ಎತ್ತಿಕಟ್ಟುವ ಮೂಲಕ ದೇಶದ ಶಾಂತಿಯನ್ನು ಕದಡುವ ಮೂಲಕ ತಮ್ಮ ಪಟ್ಟಾಭದ್ರ ಹಿತಾಸಕ್ತಿಗಳನ್ನು ಗಟ್ಟಿಗೊಳಿಸಿಕೊಳ್ಳುತ್ತಿದ್ದಾರೆ.

ಸನಾತನಿಗಳಿಗೇಕೆ ಭೀಮ ಭಯ

ಸಾವಿರಾರು ವರ್ಷಗಳಿಂದಲೂ ಭಾರತದ ಸೌಹಾರ್ದ ನೆಲದಲ್ಲಿ ಅಸಮಾನತೆಯ ವಿಷಬೀಜವನ್ನು ಬಿತ್ತುತ್ತಲೇ ಬಂದವರು ವೈದಿಕರು. ವೈದಿಕರು ಬಿತ್ತಿದ ಈ ವಿಷಬೀಜ ಮೊಳಕೆಯೊಡೆದು, ಸಸಿಯಾಗಿ, ಗಿಡವಾಗಿ, ಮರವಾಗಿ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ವೈದಿಕರು ಬಿತ್ತಿದ ಈ ವಿಷಬೀಜದ ಫಲವನ್ನು ಈ ನೆಲದ ಹಲವಾರು ಜೀವಪರ ದಾರ್ಶನಿಕರು ಕಿತ್ತುಹಾಕುವ ಪ್ರಯತ್ನ ಮಾಡಿದ್ದಾರೆ. ಆದರೆ ಸನಾತನವಾದಿಗಳು ಅವರ ಕಾರ್ಯವನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದು ಬುದ್ಧ ಗುರುವಿನಿಂದ ಆರಂಭಗೊಂಡು ಸಮಕಾಲೀನ ಸಂದರ್ಭದ ಅನುಭಾವಿಕ ಚಿಂತಕರವರೆಗೂ ಮುಂದುವರೆದಿದೆ. ಆದರೆ ಈ ಎಲ್ಲಾ ದಾರ್ಶನಿಕರ ಜೀವಪರವಾದ ಸಮಾನತೆಯ ತತ್ವ-ಚಿಂತನೆಗಳನ್ನು ಮೂಲಭೂತವಾದಿಗಳು ಜೀರ್ಣಿಸಿಕೊಂಡು ವೈದಿಕೀಕರಣಗೊಳಿಸಿದ್ದಾರೆ. ಆದರೆ ಬಾಬಾಸಾಹೇಬರು, ಮತ್ತವರ ತತ್ವ-ಚಿಂತನೆಗಳನ್ನು ಮಾತ್ರ ತಿಂದು ಜೀರ್ಣಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅಂಬೇಡ್ಕರ್ ಅವರು ವೈದಿಕರ ದಾಹಕ್ಕೆ ಆಹಾರವಾಗದೆ ಶೂದ್ರರ ನೋವಿಗೆ ಆಸರೆಯಾಗಿ ನಿಂತ ಹೆಬ್ಬಂಡೆಯಾದರು.

ಈ ಹೆಬ್ಬಂಡೆಯನ್ನು ಮಾತ್ರ ವೈದಿಕರು ಮಣಿಸಲು ಸಾಧ್ಯವಾಗಲೇ ಇಲ್ಲ. ಅಂಬೇಡ್ಕರ್ ಅವರು ಸಾವಿರಾರು ವರ್ಷಗಳಿಂದ ಭಾರತದ ನೆಲದಲ್ಲಿ ಅಸಮಾನತೆಯನ್ನು ಬಿತ್ತಿ ಬೆಳೆದುಕೊಂಡು ಬಂದಿದ್ದ ಬ್ರಾಹ್ಮಣ್ಯದ ಕಸದಲ್ಲಿ ಕೃಷಿ ಮಾಡಿ ಹಸನು ಮಾಡಿದರು. ಹಿಂದುತ್ವದ ಕಳೆಯ ಮಧ್ಯೆ ನೆನೆಗುದಿಗೆ ಬಿದ್ದಿದ್ದ ‘ಬುದ್ಧತ್ವ’ಕ್ಕೆ ಜೀವ ತುಂಬಿದರು. ಬುದ್ಧಗುರುವಿನ ಜೀವಪರವಾದ ಆಶಯಗಳನ್ನು ಕೇಂದ್ರವಾಗಿಟ್ಟುಕೊಂಡು ಸರ್ವರನ್ನು ಸಮಾನವಾಗಿ ಕಾಣುವಂತಹ ಸಂವಿಧಾನವನ್ನು ರಚಿಸಿ ಹಿಂದುತ್ವದಲ್ಲಿ ದಾಸ್ಯಕ್ಕೆ ಒಳಗಾಗಿದ್ದ ಶೂದ್ರರು, ಮಹಿಳೆಯರಿಗೆ ಸ್ವಾಭಿಮಾನವನ್ನು ಕಲ್ಪಿಸಿದರು.

ಪ್ರಜಾಪ್ರಭುತ್ವದ ಮಾದರಿಯನ್ನು ಸಂವಿಧಾನಿಕ ನೆಲೆಯಲ್ಲಿ ಜಾರಿಗೆ ತಂದು ಸಾವಿರಾರು ವರ್ಷಗಳ ಕಾಲ ಗುಲಾಮಗಿರಿಯಿಂದ ಬಳಲುತ್ತಿದ್ದ ಪ್ರಜೆಗಳನ್ನೇ ಪ್ರಭುಗಳಾಗಿ ರೂಪಿಸಿದರು. ಇದು ಭಾರತದ ನೆಲದಲ್ಲಿ ಅಂಬೇಡ್ಕರ್ ಎಂಬ ಮಹಾನ್ ಚೇತನದಿಂದ ಮಾತ್ರವೇ ಸಾಧ್ಯವಾಯಿತು.
ಬಾಬಾಸಾಹೇಬರು ಜೀವಪರ ಆಶಯಗಳ ಬೆನ್ನೇರಿ ರೂಪಿಸಿದ ಈ ಸಂವಿಧಾನವು ಸನಾತನವಾದಿಗಳಿಗೆ ಸಹಿಸದ ತುತ್ತಾಗಿತ್ತು. ಭೀಮರಾವ್ ಎಂಬ ಬಲವೇ ಇವರಿಗೆ ಸಿಂಹಸ್ವಪ್ನವಾಯಿತು.

ಬುದ್ಧರನ್ನು ನುಂಗಿದಂತೆ, ಬಸವಣ್ಣರನ್ನು ನುಂಗಿದAತೆ, ಸ್ವಾಮಿ ವಿವೇಕಾಂದರನ್ನು ನುಂಗಿದಂತೆ ಬಾಬಾಸಾಹೇಬರನ್ನು ನುಂಗಲು ಸಾಧ್ಯವಾಗದೆ ಇರುವುದಕ್ಕೆ ಕಾರಣ ಅವರಿಗಿದ್ದ ಶೂದ್ರ, ಅತೀಶೂದ್ರ ಹಾಗೂ ಮಹಿಳೆಯರ ಮೇಲೆ ಇದ್ದಂತಹ ಬದ್ಧತೆ. ಹಾಗೆಯೇ ಇವರು ರೂಪಿಸಿದ ಸರ್ವಸಮಾನತೆಯ ಲಿಖಿತ ಮಾದರಿಯ ಸಂವಿಧಾನ. ಅಂಬೇಡ್ಕರ್ ಅವರು ರೂಪಿಸಿದ ಈ ಸಂವಿಧಾನ ಭಾರತದ ಶೂದ್ರರು ಹಾಗೂ ಮಹಿಳೆಯರ ಪಾಲಿಗೆ ಕೇವಲ ಹೊತ್ತಿಗೆ ಮಾತ್ರವಲ್ಲ. ಸ್ವಾಭಿಮಾನದ ಪ್ರತಿರೂಪ.

ಭಾರತೀಯರೆಲ್ಲರ ಪಾಲಿನ ಶ್ರೇಷ್ಟ ಧರ್ಮಗ್ರಂಥ. ‘ಭಾರತೀಯರಾದ ನಾವು’ ಎಂಬ ಘೋಷವಾಕ್ಯದ ಮೂಲಕ ಆರಂಭವಾದ ಈ ಗ್ರಂಥವು ವೈದಿಕರ ಕಟ್ಟುಪಾಡುಗಳನ್ನು ಬುಡಮೇಲು ಮಾಡಿತು. ಸಾವಿರಾರು ವರ್ಷಗಳ ಕಾಲ ಶ್ರಮರಹಿತವಾಗಿ ಜೀವಿಸುತ್ತಿದ್ದ ಬ್ರಾಹ್ಮಣಶಾಹಿಗಳ ಬದುಕಿಗೆ ಪ್ರಬಲವಾದ ಪೆಟ್ಟು ನೀಡಿತು. ಭಾರತದ ನೆಲದಲ್ಲಿ ವೈದಿಕತೆಯ ಎಲ್ಲಾ ಕುತಂತ್ರಗಳನ್ನು ನೆಲಸಮಗೊಳಿಸಿದವರು ಭೀಮರಾವ್ ಅಂಬೇಡ್ಕರ್. ಹೀಗಾಗಿ ಸನಾತನವಾದಿಗಳಿಗೆ ಇಂದಿಗೂ ಭೀಮಭಯ ಕಾಡುತ್ತಲೇ ಇದೆ.

ಈ ಕಾರಣಕ್ಕಾಗಿಯೇ ಅವರು ಸಂವಿಧಾನವನ್ನು ಬದಲಾಯಿಸುವ ಹುನ್ನಾರಗಳನ್ನು ನಿರಂತರವಾಗಿ ರೂಪಿಸುತ್ತಿದ್ದಾರೆ. ಶೂದ್ರರನ್ನು ಬಳಸಿಕೊಂಡು ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ. ಕೋಮುವಾದಿ ನೆಲೆಯಲ್ಲಿ ರೂಪಿಸುತ್ತಿರುವ ಎಲ್ಲಾ ತಂತ್ರಗಳು ಅನ್ಯಧರ್ಮಿಯರ ಮೇಲಿನ ದ್ವೇಷದಿಂದಲ್ಲ. ಅವುಗಳೆಲ್ಲ ಭಾರತದ ಮಣ್ಣಿನ ಮಕ್ಕಳಾದ ಶೂದ್ರರು ಹಾಗೂ ಅತೀಶೂದ್ರರನ್ನು ಹತ್ತಿಕ್ಕುವಲ್ಲಿ ರೂಪಿಸಿದ ತಂತ್ರಗಳು. ಸನಾತನವಾದಿಗಳಿಗೆ ಮುಸ್ಲಿಮರ ಮೇಲೆ ದ್ವೇಷವಿಲ್ಲ.

ಚರಿತ್ರೆಯ ವಾಸ್ತವತೆಯತ್ತ ಕಣ್ಣಾಯಿಸಿದರೆ ವಿದೇಶಿ ಆಕ್ರಮಣಕಾರರಾದ ಮುಸಲ್ಮಾನರು, ಫ್ರೆಂಚರು, ಡಚ್ಚರು, ಪೋರ್ಚಗೀಸರು, ಬ್ರಿಟಿಷರನ್ನೆಲ್ಲ ಸ್ವಾಗತಿಸಿ ದೇಶಿಯ ದೊರೆಗಳ ವಿರುದ್ಧ ಎತ್ತಿಕಟ್ಟಿದವರು ಇದೇ ಸನಾತನವಾದಿಗಳು. ಭಾರತದ ಚರಿತ್ರೆಯ ಪುಟಗಳಲ್ಲಿ ಯಾವುದೇ ಒಬ್ಬ ದೇಶಿಯ ರಾಜ ಸೋಲನ್ನು ಅನುಭವಿಸಿದ್ದಾನೆ ಎಂದಾದರೆ ಅದರಲ್ಲಿ ಬ್ರಾಹ್ಮಣ್ಯದ ತಂತ್ರಗಾರಿಗೆ ಅಡಗಿಯೇ ಇರುತ್ತದೆ.

ಇಂದು ವಿದೇಶಗಳಿಗೆ ಗುಪ್ತಚರ ಮಾಹಿತಿಗಳನ್ನು ಸೋರಿಕೆ ಮಾಡುತ್ತಿರುವವರಲ್ಲಿ ಇವರದು ಮೇಲುಗೈ. ಹೀಗಾಗಿ ಇವರಿಗೆ ಮುಸಲ್ಮಾನರು ಹಾಗೂ ಇತರೆ ಅನ್ಯಧರ್ಮಿಯರ ಮೇಲೆ ದ್ವೇಷವಿಲ್ಲ. ಇವರ ಮೇಲಿನ ದ್ವೇಷಕ್ಕೆ ಕಾರಣ ಈ ನೆಲದ ಶೂದ್ರರನ್ನು ಹತ್ತಿಕ್ಕುವುದೇ ಆಗಿದೆ. ಆದರೆ ಸನಾತನವಾದಿಗಳಿಗೆ ಇರುವ ಭೀಮ ಭಯದಿಂದ ಶೂದ್ರರು ಹಾಗೂ ಅತೀಶೂದ್ರರನ್ನು ನೇರವಾಗಿ ಎದುರು ಹಾಕಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ ಕಾರಣ ಕೋಮುದ್ವೇಷವನ್ನು ಬಿತ್ತುವ ಮೂಲಕ ಶೂದ್ರರನ್ನು ಹತ್ತಿಕ್ಕುವ ಹುನ್ನಾರಗಳನ್ನು ನಿರಂತರವಾಗಿ ಮುನ್ನೆಡೆಸಿಕೊಂಡು ಬಂದಿದ್ದಾರೆ.

ಭೀಮ ಬಲ ಶೂದ್ರರಿಗೆಷ್ಟು ಗೊತ್ತು

ಯಾವುದೇ ಒಬ್ಬ ಮುಂದುವರೆದ ಜಾತಿಯ ಶೂದ್ರನನ್ನು ಅಂಬೇಡ್ಕರ್ ಯಾರು ಎಂದು ಕೇಳಿದರೆ ಅವನ ಬಾಯಿಯಿಂದ ಸಹಜವಾಗಿಯೇ ಹೊರಹೊಮ್ಮುವ ಮಾತು ಅವರೊಬ್ಬ ‘ಹೊಲೆಯ ಮಾದಿಗ’ ಸಮುದಾಯದ ನಾಯಕ ಎಂಬುದೇ ಆಗಿರುತ್ತದೆ. ಆದರೆ ಈ ಭೀಮ ಶಕ್ತಿ ನನಗೆಷ್ಟು ಸ್ವಾಭಿಮಾನ, ಸ್ವಾವಲಂಬನೆಯನ್ನು ಕಲ್ಪಿಸಿಕೊಟ್ಟಿದೆ ಎಂಬ ಅರಿವು ಶೂದ್ರರಿಗೆ ಇಲ್ಲವಾಗಿದೆ. ಇದು ಆ ವ್ಯಕ್ತಿ ಅಥವಾ ಸಮುದಾಯದ ತಪ್ಪಲ್ಲ.

ಅವರ ತಲೆಯೊಳಗೆ ಅಂಬೇಡ್ಕರ್ ಎಂಬ ಶಕ್ತಿಯ ಬಗ್ಗೆ ಮೂಲಭೂತವಾದಿಗಳು ತುಂಬಿರುವ ಹುಸಿ ಹುನ್ನಾರಗಳಿವು. ಅಂಬೇಡ್ಕರ್ ಎಂಬ ಈ ವ್ಯಕ್ತಿತ್ವ ಭಾರತದ ನೆಲದಲ್ಲಿ ಜನ್ಮತಳೆಯದೆ ಹೋಗಿದ್ದರೆ ನಾವೆಲ್ಲ ಶಿಕ್ಷಣ, ರಾಜಕೀಯ, ಅಧಿಕಾರದಿಂದ ಹೊರಗುಳಿದು ಜೀತ ಮಾಡಬೇಕಾದ ಪರಿಸ್ಥಿತಿ ಇನ್ನೂ ಜೀವಂತವಾಗಿರುತ್ತಿತ್ತು ಎಂಬುದು ಶೂದ್ರ ಸಮುದಾಯಗಳಿಗೆ ಅರ್ಥವಾಗಿಯೇ ಇಲ್ಲ.

ಶೂದ್ರರಿಗೆ ಸಾವಿರಾರು ವರ್ಷಗಳಿಂದಲೂ ನಮ್ಮ ಪೂರ್ವಜರನ್ನು ಶೋಷಣೆಗೆ ಒಳಪಡಿಸಿದ ‘ಹಿಂದುತ್ವ’ವನ್ನು ಕಾಪಾಡಿಕೊಳ್ಳಲು ಇರುವ ತವಕ, ನಮಗಾಗಿ ಹಗಲಿರುಳು ದುಡಿದು, ದಣಿದ ಅಂಬೇಡ್ಕರ್ ಎಂಬ ಮಹಾತಾಯಿಯ ಬಗ್ಗೆ ಕಿಂಚಿತ್ತೂ ಅಭಿಮಾನವಿಲ್ಲ. ಈ ದೇಶದಲ್ಲಿ ಶೇ ೩% ಇರುವ ಬ್ರಾಹ್ಮಣರು ಸಂವಿಧಾನವನ್ನು ಬದಲಾಯಿಸುವುದೇ ನಮ್ಮ ಗುರಿ ಎಂದರೆ ಅದಕ್ಕೆ ಚಪ್ಪಾಳೆ ತಟ್ಟುವವರು ಈ ಶೂದ್ರ ಹಾಗೂ ಅತೀಶೂದ್ರ ಸಮುದಾಯದ ಮೂರ್ಖರೆ ಆಗಿದ್ದಾರೆ.

ಜೈ ಶ್ರೀರಾಮ್ ಎಂದು ಗಂಟಲು ಕಿತ್ತೊಗುವಂತೆ ಕೂಗುವ ಶೂದ್ರನಿಗೆ ‘ಜೈಭೀಮ್’ ಎಂಬ ಸ್ವಾಭಿಮಾನದ ಘೋಷ ತಾಗುತ್ತಲೇ ಇಲ್ಲ. ತಾನಗಾಗಿ ದುಡಿದು ನೆಮ್ಮದಿಯ ಬದುಕನ್ನು ಕಟ್ಟಿಕೊಟ್ಟ ತಾಯಿಯನ್ನು ಮರೆತು, ಅಳಸಿದ ಅನ್ನವನ್ನು ವೈಯಾರದಿಂದ ತಿನ್ನಿಸುವ ಆಂಟಿಯನ್ನು ಹೊಗಳುವ ಮಟ್ಟಕ್ಕೆ ಶೂದ್ರ ಸಮುದಾಯ ಇಳಿದು ನಿಂತಿದೆ. ಹೀಗಾಗಿ ಅಂಬೇಡ್ಕರ್ ಎಂಬ ವಿಶ್ವಜ್ಞಾನ ಜಗತ್ತಿಗೆ ಅರಿವಾದರೂ ಭಾರತೀಯ ಶೂದ್ರರಿಗೆ ಮಾತ್ರ ಅಂಬೇಡ್ಕರ್ ಇನ್ನೂ ಅರ್ಥವಾಗಿಲ್ಲ. ಅದು ಅರ್ಥವಾಗಿದ್ದರೆ ಕೇವಲ ‘ಹೊಲೆಯ ಮಾದಿಗ’ ಎಂಬುದಾಗಿಯೇ ಮಾತ್ರ.

ದುರಂತವೆಂದರೆ ಹಲವಾರು ವೈಯಕ್ತಿಕ ಕಾರಣಗಳಿಂದಾಗಿ ಈ ಒಳಪಂಗಡಗಳು ಕೂಡ ಅಂಬೇಡ್ಕರ್ ಅವರಿಂದ ದೂರ ಸರಿದು ಪರ್ಯಾಯ ನಾಯಕನನ್ನು ಎತ್ತಿಕಟ್ಟುವ ಅಪಾಯಕಾರಿ ಸನ್ನಿವೇಶವನ್ನು ನಿರ್ಮಿಸಿಕೊಳ್ಳುತ್ತಿವೆ.

ಶೂದ್ರ ಭಾರತಕ್ಕೆ ಭೀಮ ಬಲವೇ ಅಂತಿಮ

ಭಾರತದೊಳಗೆ ಎರಡು ಬಗೆಯ ಭಾರತಗಳಿವೆ. ಒಂದು ಶೂದ್ರ ಭಾರತ. ಮತ್ತೊಂದು ಬ್ರಾಹ್ಮಣ್ಯ ಭಾರತ. ಶೂದ್ರ ಭಾರತವು ಮೂಲನಿವಾಸಿಗಳದ್ದು. ಬ್ರಾಹ್ಮಣ್ಯ ಭಾರತವು ವಲಸಿಗರದ್ದು. ಹೀಗಾಗಿ ವಲಸಿಗರು ಮೂಲನಿವಾಸಿಗಳ ಮೇಲೆ ನಿರಂತರವಾದ ಆಕ್ರಮಣವನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಮೂಲನಿವಾಸಿಗಳ ಭ್ರಾತೃತ್ವ, ಸಮಾನತೆ, ಸೋದರತ್ವ ತತ್ವಕ್ಕೆ ವಿರುದ್ಧವಾಗಿ ವಲಸಿಗರು ವರ್ಣಾಧಾರಿತ ಶ್ರೇಣೀಕೃತ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ.

ಈ ಶ್ರೇಣೀಕೃತ ಸೌಧವನ್ನು ಕೆಡವಿ ಸಮಾನತೆಯ ಸಮಾಜದ ನಿರ್ಮಾಣಕ್ಕೆ ಮುಂದಾದವರು ಬಾಬಾಸಾಹೇಬ್ ಅಂಬೇಡ್ಕರ್ ಅವರು. ಹೀಗಾಗಿ ಇಂದು ಶೂದ್ರಾತೀಶೂದ್ರ ಸಮುದಾಯಗಳು ನೆಮ್ಮದಿಯಿಂದ ಬದುಕುವುದಕ್ಕೆ ಕಾರಣ ಭೀಮಶಕ್ತಿ. ಈ ಭೀಮಶಕ್ತಿಯನ್ನು ಅರಿತು ನಡೆದರೆ ನಮ್ಮ ಮುಂದಿರುವ ಇಕ್ಕಟ್ಟು-ಬಿಕ್ಕಟ್ಟುಗಳಿಗೆ ಪರಿಹಾರವಿದೆ. ಈ ಭೀಮ ಬಲದ ಅರಿವು ಶೂದ್ರರೊಳಗೆ ಮೂಡದೇ ಹೋಗಿರುವ ಕಾರಣಕ್ಕೆ ಸನಾತನವಾದಿಗಳು ತಮ್ಮ ವಿಕೃತತೆಯನ್ನು ಮೆರೆಯುತ್ತಿದ್ದಾರೆ. ಧರ್ಮದ ಹೆಸರಿನಲ್ಲಿ ಭಾರತವನ್ನು ಛಿದ್ರಗೊಳಿಸುತ್ತಿದ್ದಾರೆ.

ದಲಿತ, ದಮನಿತ, ಮಹಿಳೆಯರ ಹಕ್ಕುಗಳ ಹರಣಕ್ಕೆ ಮುಂದಾಗಿದ್ದಾರೆ. ಈ ವಿಷಧರ್ಮವು ರಾಜಕೀಯದೊಳಗೆ ಬೆರೆತು ಇಂದು ಭಾರತವನ್ನೇ ಮಾರಾಟ ಮಾಡುವ ಹಂತಕ್ಕೆ ತೆಗೆದುಕೊಂಡು ಹೋಗಿದೆ. ಈ ಕಾರಣಕ್ಕಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಶೂದ್ರಾತೀಶೂದ್ರ ಸಮುದಾಯಗಳು ಕನಿಷ್ಠ ಜೀವನ ನಡೆಸುವುದು ಕೂಡ ಕಷ್ಟಕರವಾಗಿದೆ.

ಶೂದ್ರರು, ಅಲ್ಪಸಂಖ್ಯಾತರು ಹಾಗೂ ಎಲ್ಲಾ ಸಮುದಾಯಗಳ ಮಹಿಳೆಯರು ನೆಮ್ಮದಿಯ ಮತ್ತು ಸ್ವಾಭಿಮಾನದ ಜೀವನ ನಡೆಸಬೇಕಾದರೆ ಭೀಮ ಬಲವನ್ನು ಅರಿಯಬೇಕು. ಅದನ್ನು ಅರಿತರೆ ಮಾತ್ರವೇ ಸಾಲದು. ಭೀಮರ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಪ್ರಬುದ್ಧ ಭಾರತದ ನಿರ್ಮಾಣದತ್ತ ಸಾಗಬೇಕಾಗಿದೆ. ಇಂದು ಬಾಬಾಸಾಹೇಬರ 131ನೇ ಜನ್ಮದಿನದ ಸಂಭ್ರಮದಲ್ಲಿರುವ ನಾವುಗಳೆಲ್ಲ ನಮ್ಮ ನಮ್ಮ ಕಾರ್ಯವೈಖರಿಗಳನ್ನು ಆತ್ಮವಿಮರ್ಶೆಗೆ ಒಳಪಡಿಸಿಕೊಳ್ಳಬೇಕಿದೆ.

ಆ ಮೂಲಕ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬದುಕು, ಅವರ ತತ್ವ-ಚಿಂತನೆಗಳನ್ನು ಅರಿತು ಸ್ವಾಭಿಮಾನದ ಬದುಕಿನತ್ತ ಮುಖ ಮಾಡಬೇಕಾದ ತುರ್ತು ನಮ್ಮ ಮುಂದಿದೆ. ಹೀಗಾಗಿ ಶೂದ್ರ ಭಾರತಕ್ಕೆ ಭೀಮಬಲವೊಂದೆ ಅಂತಿಮ ಎಂಬ ಸತ್ಯ ಶೂದ್ರರ ಮನೆ ಮನಗಳನ್ನು ಪ್ರವೇಶಿಸಬೇಕಾಗಿದೆ. ಈ ನೆಲೆಯಲ್ಲಿ ಬಾಬಾಸಾಹೇಬರ ಜನ್ಮದಿನ ನಮ್ಮೆಲ್ಲರ ಅರಿವಿನ ದಿನವಾಗಲಿ. ಜೈಭೀಮ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ದಿನದ ಸುದ್ದಿ

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading

Trending